Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:29 - ಕನ್ನಡ ಸಮಕಾಲಿಕ ಅನುವಾದ

29 ಏಕೆಂದರೆ, ಯಾರಾದರು ಕ್ರಿಸ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿದರೆ, ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಏಕೆಂದರೆ, ಅದು ಪ್ರಭುವಿನ ಶರೀರವೆಂದು ಪರಿಗ್ರಹಿಸದೆ, ಭುಜಿಸಿ ಪಾನಮಾಡುವಾತನು ನ್ಯಾಯತೀರ್ಪನ್ನು ತನ್ನ ಮೇಲೆ ಬರಮಾಡಿಕೊಳ್ಳುವುದಕ್ಕಾಗಿಯೇ ತಿನ್ನುತ್ತಾನೆ, ಕುಡಿಯುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳಗಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯಾವನಾದರೂ ಪ್ರಭುವಿನ ದೇಹವೆಂದು ಗುರುತಿಸದೆ ರೊಟ್ಟಿಯನ್ನು ತಿಂದರೆ ಮತ್ತು ದ್ರಾಕ್ಷಾರಸವನ್ನು ಕುಡಿದರೆ ಅವನು ತಿಂದದ್ದಕ್ಕೂ ಕುಡಿದದ್ದಕ್ಕೂ ದೋಷಿಯೆಂಬ ತೀರ್ಪಿಗೆ ಒಳಗಾಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಕಶ್ಯಾಕ್ ಮಟ್ಲ್ಯಾರ್, ಜೊ ಕೊನ್ ಆಂಗ್ ಕಾಯ್ ಮನುನ್ ಕಳ್ವುನ್ ಘೆಯ್ ನಸ್ತಾನಾ ಖಾತಾ ಅನಿ ಫಿತಾ, ತೊ ಅಪ್ನಾಚ್ಯಾ ವರ್ತಿಚ್ ಝಡ್ತಿ ಹಾನುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:29
11 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ, ಯಾರಾದರೂ ಅಯೋಗ್ಯವಾಗಿ ಕರ್ತದೇವರ ರೊಟ್ಟಿಯನ್ನು ತಿಂದರೆ, ಇಲ್ಲವೆ ಅವರ ಪಾತ್ರೆಯಲ್ಲಿ ಪಾನ ಮಾಡಿದರೆ, ಅಂಥವರು ಕರ್ತದೇವರ ದೇಹಕ್ಕೂ, ರಕ್ತಕ್ಕೂ ದ್ರೋಹ ಮಾಡಿದವರಾಗಿರುವರು.


ಇದರಿಂದ ನಿಮ್ಮಲ್ಲಿ ಬಹುಮಂದಿ ಬಲಹೀನರೂ, ರೋಗಿಗಳೂ ಆಗಿದ್ದಾರೆ, ಕೆಲವರು ನಿದ್ರೆ ಹೋಗಿದ್ದಾರೆ.


ನನ್ನ ಪ್ರಿಯರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವುದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.


ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ಹೊಂದಿದವರಿಗೆ ಸೇರಿದ್ದಾಗಿದೆ.


ಸ್ತೋತ್ರಮಾಡಿ ಮುರಿದು, “ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.


ಆದ್ದರಿಂದ ಅಧಿಕಾರಕ್ಕೆ ಎದುರು ಬೀಳುವವನು ದೇವರ ನೇಮಕವನ್ನು ಎದುರಿಸುವವನಾಗಿರುತ್ತಾನೆ. ಹಾಗೆ ಎದುರಿಸುವವರು ತೀರ್ಪಿಗೆ ಗುರಿಯಾಗುವರು.


ಅರಸನ ಆಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸುವುದಿಲ್ಲ, ಜ್ಞಾನಿಯ ಹೃದಯವು ಸರಿಯಾದ ಕಾಲ ಕ್ರಮವನ್ನು ತಿಳಿದುಕೊಳ್ಳುತ್ತದೆ.


ಮುಖ್ಯವಾಗಿ ನನ್ನ ಪ್ರಿಯರೇ, ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ನಾವುದರ ಮೇಲಾಗಲಿ ಆಣೆ ಇಡಬೇಡಿರಿ. ಹೌದೆಂದು ಹೇಳಬೇಕಾದರೆ “ಹೌದು” ಎನ್ನಿರಿ. ಇಲ್ಲವಾದರೆ “ಇಲ್ಲ” ಎನ್ನಿರಿ. ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.


ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು, ಆದರೆ ನೀವು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎನ್ನುತ್ತೀರಿ.


ಆದರೆ ಪ್ರತಿಯೊಬ್ಬರೂ ತಮ್ಮನ್ನು ಪರೀಕ್ಷಿಸಿಕೊಂಡವರಾಗಿ, ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾತ್ರೆಯಲ್ಲಿ ಕುಡಿಯಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು