Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 11:32 - ಕನ್ನಡ ಸಮಕಾಲಿಕ ಅನುವಾದ

32 ನಾವು ಲೋಕದವರ ಸಂಗಡ ದಂಡನೆಗೆ ಗುರಿಯಾಗಬಾರದೆಂದು, ದೇವರು ನಮ್ಮನ್ನು ಈಗ ಈ ರೀತಿಯಾಗಿ ಶಿಸ್ತಿನ ನ್ಯಾಯವಿಚಾರಣೆಗೆ ಒಳಪಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಆದರೆ ನಾವು ಕರ್ತನ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು - ಇವರಿಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ಶಿಕ್ಷಿಸುತ್ತಾನೆ. ಆದಕಾರಣ ನನ್ನ ಸಹೋದರರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ಖರೆ ಜಾಗಾಚ್ಯಾ ವಾಂಗ್ಡಾ ಅಮ್ಕಾ ಝಡ್ತಿ ಹೊತಲೆ ನಕ್ಕೊ ಮನುನ್ ಧನಿಯಾನುಚ್ ಅಮ್ಕಾ ಝಡ್ತಿ ಕರುನ್ ಶಿಕ್ಷಾ ಲಾವುನ್ ಹೊಲ್ಲಿ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 11:32
22 ತಿಳಿವುಗಳ ಹೋಲಿಕೆ  

ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು.


ಏಕೆಂದರೆ ಯೆಹೋವ ದೇವರು ನನ್ನನ್ನು ಕಠಿಣವಾಗಿ ಶಿಕ್ಷಿಸಿದರು; ಆದರೆ ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ.


ಇದಲ್ಲದೆ ಒಬ್ಬನು ತನ್ನ ಮಗನನ್ನು ಶಿಸ್ತುಪಡಿಸುವ ಪ್ರಕಾರ ನಿಮ್ಮ ದೇವರಾದ ಯೆಹೋವ ದೇವರು ನಿಮ್ಮನ್ನು ಶಿಸ್ತಿನಿಂದ ನಡೆಸುತ್ತಾ ಬಂದರೆಂದು ನಿಮ್ಮ ಹೃದಯದಲ್ಲಿ ತಿಳಿದುಕೊಳ್ಳಿರಿ.


ಇದರಿಂದ ನಿಮ್ಮಲ್ಲಿ ಬಹುಮಂದಿ ಬಲಹೀನರೂ, ರೋಗಿಗಳೂ ಆಗಿದ್ದಾರೆ, ಕೆಲವರು ನಿದ್ರೆ ಹೋಗಿದ್ದಾರೆ.


ಆದ್ದರಿಂದ ಅವರಿಗೆ ಹೀಗೆ ಹೇಳು, ‘ಇದು ಅವರ ದೇವರಾದ ಯೆಹೋವ ದೇವರಿಗೆ ವಿಧೇಯನಾಗದ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸದಂಥ ಜನಾಂಗವಾಗಿದೆ. ಸತ್ಯವು ನಾಶವಾಯಿತು. ಇದು ಅವರ ಬಾಯಿಂದ ತೆಗೆದುಹಾಕಲಾಗಿದೆ.


ನಾವು ದೇವರ ಮಕ್ಕಳೆಂದೂ ಲೋಕವೆಲ್ಲವು ಕೆಡುಕನ ನಿಯಂತ್ರಣದಲ್ಲಿ ಇದೆ ಎಂದೂ ನಮಗೆ ಗೊತ್ತಿದೆ.


ನಿಯಮವು ಏನೇ ಹೇಳುವುದಾದರೂ ಅದು ನಿಯಮಕ್ಕೆ ಒಳಪಟ್ಟಿರುವವರಿಗೇ ಅನ್ವಯವಾಗುವುದೆಂದು ನಾವು ಬಲ್ಲೆವು. ಹೀಗೆ ಎಲ್ಲರ ಬಾಯಿ ಮುಚ್ಚಿಹೋಗುವುದು ಮತ್ತು ಲೋಕವೆಲ್ಲಾ ದೇವರ ತೀರ್ಪಿಗೆ ಒಳಗಾಗಿರುವುದು.


ಅವಳು ಯಾರಿಗೂ ವಿಧೇಯಳಾಗಲಿಲ್ಲ; ಶಿಕ್ಷೆಯನ್ನು ತೆಗೆದುಕೊಳ್ಳಲಿಲ್ಲ; ಯೆಹೋವ ದೇವರಲ್ಲಿ ಭರವಸೆ ಇಡಲಿಲ್ಲ; ತನ್ನ ದೇವರ ಸಮೀಪಕ್ಕೆ ಬರಲಿಲ್ಲ.


ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಏಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ? ತಲೆಯೆಲ್ಲಾ ಗಾಯವಾಗಿದೆ, ಹೃದಯವೆಲ್ಲಾ ಬಾಧಿತವಾಗಿದೆ.


ನಾನು ಆತನ ತಂದೆಯಾಗಿರುವೆನು. ಆತನು ನನಗೆ ಮಗನಾಗಿರುವನು. ಅವನು ಕೆಟ್ಟದ್ದನ್ನು ಮಾಡಿದರೆ, ನಾನು ಅವನನ್ನು ಮನುಷ್ಯರಿಂದ ಬೆಸುಗೆ ಹಾಕಿದ ಕೋಲಿನಿಂದಲೂ ಮನುಷ್ಯರ ಕೈಗಳಿಂದ ಹೊಡೆದ ಹೊಡೆತದಿಂದ ದಂಡಿಸುವೆನು.


ಇದಲ್ಲದೆ ಪಾಪಮಾಡಿದ ಒಬ್ಬನಿಂದಲೇ ದುಷ್ಪಲ ಬಂದಂತೆ ಈ ವರವು ಬರಲಿಲ್ಲ. ಹೇಗೆಂದರೆ, ಒಬ್ಬನೇ ಮನುಷ್ಯನ ಪಾಪದ ದೆಸೆಯಿಂದ ಸಾಯಬೇಕೆಂಬ ದಂಡನಾತೀರ್ಪು ಉಂಟಾಯಿತು. ಆದರೆ ದೇವರ ಕೃಪೆಯು ಅನೇಕರ ಅಪರಾಧಗಳಿಂದ ಅವರನ್ನು ನೀತಿವಂತರೆಂದು ನಿರ್ಣಯಿಸುವುದಾಗಿದೆ.


ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ?


ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.


ನಮ್ಮನ್ನು ನಾವೇ ತೀರ್ಪುಮಾಡಿಕೊಂಡರೆ, ನಾವು ನ್ಯಾಯವಿಚಾರಣೆಗೆ ಒಳಗಾಗುವುದಿಲ್ಲ.


ಹೀಗಿರುವುದರಿಂದ ನನ್ನ ಪ್ರಿಯರೇ, ನೀವು ಭೋಜನಕ್ಕಾಗಿ ಕೂಡಿಬರುವಾಗ ಎಲ್ಲರಿಗಾಗಿ ಕಾದುಕೊಂಡಿರಿ.


ಹುಮೆನಾಯನೂ ಅಲೆಕ್ಸಾಂಡರನೂ ಅಂಥವರಾಗಿದ್ದಾರೆ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನಿಗೆ ಒಪ್ಪಿಸಿಬಿಟ್ಟಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು