Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:11 - ಕನ್ನಡ ಸಮಕಾಲಿಕ ಅನುವಾದ

11 ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಚಿತ್ತಾನುಸಾರ ಪ್ರತಿಯೊಬ್ಬನಿಗೂ ಹಂಚಿಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದರೆ ಈ ಎಲ್ಲವುಗಳಲ್ಲಿ ಕಾರ್ಯ ಮಾಡುವ ಆ ಒಬ್ಬ ಆತ್ಮನೇ ವರಗಳನ್ನೆಲ್ಲಾ ತನ್ನ ಚಿತ್ತಾನುಸಾರವಾಗಿ ಒಬ್ಬೊಬ್ಬನಿಗೆ ಹಂಚಿಕೊಡುವವನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಈ ವರಗಳನ್ನೆಲ್ಲ ಆ ಪವಿತ್ರಾತ್ಮ ಒಬ್ಬರೇ ತಮ್ಮ ಇಷ್ಟಾನುಸಾರ ಪ್ರತಿಯೊಬ್ಬನಿಗೂ ಹಂಚುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಈ ವರಗಳನ್ನೆಲ್ಲಾ ಆ ಒಬ್ಬ ಆತ್ಮನೇ ತನ್ನ ಚಿತ್ತಕ್ಕೆ ಬಂದ ಹಾಗೆ ಒಬ್ಬೊಬ್ಬನಿಗೆ ಹಂಚಿಕೊಟ್ಟು ನಡಿಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಪವಿತ್ರಾತ್ಮನು ಒಬ್ಬನೇ. ಆತನೇ ಎಲ್ಲಾ ವರಗಳನ್ನು ತನ್ನ ಚಿತ್ತಕ್ಕನುಸಾರವಾಗಿ ಪ್ರತಿಯೊಬ್ಬನಿಗೂ ಹಂಚಿಕೊಟ್ಟು ನಡೆಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಖರೆ ಹಿ ಸಗ್ಳಿ ವರಾ ದಿತಲೊ ಎಕ್ಲೊಚ್ ಅನಿ ತೊಚ್ ಪವಿತ್ರ್ ಆತ್ಮೊ; ಅಪ್ನಾಂಚ್ಯಾ ಮನಾಕ್ ಯೆತಾ ತಸೆ ಹರಿ ಎಕ್ಲ್ಯಾಕ್ ತೊ ತಿ ವಾಟುನ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:11
18 ತಿಳಿವುಗಳ ಹೋಲಿಕೆ  

ಆತ್ಮಿಕ ವರಗಳಲ್ಲಿ ಬೇರೆ ಬೇರೆ ವಿಧಗಳಿವೆ, ಆದರೆ ಪವಿತ್ರಾತ್ಮರು ಒಬ್ಬರೇ.


ದೇವರು ಸಹ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ತಮ್ಮ ಚಿತ್ತಾನುಸಾರವಾಗಿ ದಯಪಾಲಿಸಿದ ಪವಿತ್ರಾತ್ಮರ ವರದಾನಗಳಿಂದಲೂ ಸಾಕ್ಷಿನೀಡಿ ದೃಢಪಡಿಸಿದ್ದಾರೆ.


ನಾವಾದರೋ ಮೇರೆ ತಪ್ಪಿ ಹೊಗಳಿಕೊಳ್ಳುವುದಿಲ್ಲ; ದೇವರು ತಾವೇ ನಮಗೆ ನೇಮಿಸಿದ ಸೇವಾಕ್ಷೇತ್ರದ ಮೇರೆಯೊಳಗಿದ್ದು ಹೊಗಳಿಕೊಳ್ಳುತ್ತೇವೆ. ಆ ಮೇರೆಯೊಳಗೆ ನೀವೂ ಒಳಪಟ್ಟಿದ್ದೀರಿ.


ನಮ್ಮಲ್ಲಿ ಪ್ರತಿಯೊಬ್ಬನಿಗೂ ಕ್ರಿಸ್ತ ಯೇಸುವು ನೀಡಿದ ಅಳತೆಗೆ ಅನುಸಾರವಾಗಿ ವರವನ್ನು ಕೊಡಲಾಗಿದೆ.


ಕಾರ್ಯರೀತಿಗಳಲ್ಲಿ ಬೇರೆ ಬೇರೆ ವಿಧಗಳಿವೆ, ಎಲ್ಲರಲ್ಲಿಯೂ ಎಲ್ಲಾ ಕಾರ್ಯಗಳನ್ನು ಸಾಧಿಸುವ ದೇವರು ಒಬ್ಬರೇ.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ದೇವರ ಚಿತ್ತಾನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವ ಅವರ ಉದ್ದೇಶದ ಪ್ರಕಾರ ಕ್ರಿಸ್ತನಲ್ಲಿ ನಮ್ಮನ್ನು ಮೊದಲೇ ಆರಿಸಿಕೊಂಡರು.


ಆದರೂ ಕರ್ತದೇವರು ಪ್ರತಿಯೊಬ್ಬನಿಗೆ ನೇಮಿಸಿದಂತೆಯೂ ದೇವರು ಪ್ರತಿಯೊಬ್ಬನನ್ನು ಕರೆದಂತೆಯೂ ನಡೆದುಕೊಳ್ಳಲಿ. ಎಲ್ಲಾ ಸಭೆಗಳಲ್ಲಿಯೂ ಇರಬೇಕೆಂದು ನಾನು ಕೊಡುವ ನಿಯಮವು ಇದೇ.


ನಾನಿರುವಂತೆಯೇ ಎಲ್ಲಾ ಮನುಷ್ಯರು ಇರಬೇಕೆಂಬುದು ನನ್ನ ಇಷ್ಟ. ಆದರೆ ಒಬ್ಬರು ಒಂದು ವಿಧವಾಗಿಯೂ ಮತ್ತೊಬ್ಬರು ಇನ್ನೊಂದು ವಿಧವಾಗಿಯೂ ಸ್ವಂತ ವರವನ್ನು ದೇವರಿಂದ ಪಡೆದುಕೊಂಡಿರುತ್ತಾರೆ.


ನಮಗೆ ಕೊಟ್ಟಿರುವ ದೇವರ ಕೃಪೆಗೆ ಅನುಸಾರವಾಗಿ ನಮಗೆ ಬೇರೆ ಬೇರೆ ವರಗಳಿರುತ್ತವೆ. ಒಬ್ಬನಿಗೆ ಪ್ರವಾದನಾ ವರವಾಗಿದ್ದರೆ, ಅದನ್ನು ಅವನ ವಿಶ್ವಾಸದ ಅಳತೆಗೆ ತಕ್ಕ ರೀತಿಯಲ್ಲಿ ಉಪಯೋಗಿಸಲಿ.


ಆದ್ದರಿಂದ ದೇವರು ಯಾರನ್ನು ಕರುಣಿಸಬೇಕೆಂದು ಬಯಸುತ್ತಾರೋ, ಅವರನ್ನು ಕರುಣಿಸುತ್ತಾರೆ. ಯಾರನ್ನು ಕಠಿಣಪಡಿಸಬೇಕೆಂದು ಬಯಸುತ್ತಾರೋ, ಅವರನ್ನು ಕಠೋರನ್ನಾಗಿ ಮಾಡುತ್ತಾರೆ.


ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ.


ಅದಕ್ಕೆ ಯೋಹಾನನು, “ಪರಲೋಕದಿಂದ ಒಬ್ಬ ಮನುಷ್ಯನಿಗೆ ದಯಪಾಲಿಸದ ಹೊರತು ಅವನು ಯಾವುದನ್ನೂ ಹೊಂದಲಾರನು.


ಗಾಳಿಯು ಅದರ ಇಷ್ಟ ಬಂದ ಕಡೆ ಬೀಸುತ್ತದೆ. ನೀನು ಅದರ ಶಬ್ದವನ್ನು ಕೇಳುತ್ತೀ, ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗುತ್ತದೋ ನಿನಗೆ ತಿಳಿಯದು. ಅದರಂತೆಯೇ ಆತ್ಮದಿಂದ ಹುಟ್ಟಿದ ಪ್ರತಿಯೊಬ್ಬರೂ ಹೀಗೇ ಇದ್ದಾರೆ,” ಎಂದು ಉತ್ತರಕೊಟ್ಟರು.


ನನ್ನದನ್ನು ನನ್ನ ಇಷ್ಟಬಂದಂತೆ ಕೊಡುವುದಕ್ಕೆ ನನಗೆ ಹಕ್ಕಿಲ್ಲವೇ? ನಾನು ಔದಾರ್ಯವುಳ್ಳವನಾದ್ದರಿಂದ, ನಿನಗೆ ಹೊಟ್ಟೆಯುರಿಯೋ?’ ಎಂದನು.


ಹೌದು ತಂದೆಯೇ, ಹೀಗೆ ಮಾಡುವುದು ನಿಮ್ಮ ದೃಷ್ಟಿಗೆ ಒಳ್ಳೆಯದಾಗಿ ತೋಚಿತು.


ದೇವರ ದೃಷ್ಟಿಯಲ್ಲಿ ಭೂನಿವಾಸಿಗಳೆಲ್ಲರೂ ಯಾವ ಮಹತ್ವವಿಲ್ಲದೆ ಶೂನ್ಯರಾಗಿದ್ದಾರೆ. ದೇವರು ಪರಲೋಕದ ಸೈನ್ಯದಲ್ಲಿಯೂ, ಭೂನಿವಾಸಿಗಳಲ್ಲಿಯೂ ತಮ್ಮ ಚಿತ್ತದ ಪ್ರಕಾರವೇ ಮಾಡುತ್ತಾರೆ. ಯಾರೂ ಅವರ ಹಸ್ತವನ್ನು ಹಿಂತೆಗೆಯಲಾರರು. “ನೀವು ಏನು ಮಾಡುತ್ತಿರುವಿರಿ?” ಎಂದು ದೇವರನ್ನು ಯಾರೂ ಕೇಳಲಾರರು.


ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತಮ್ಮ ಇಷ್ಟದ ಪ್ರಕಾರ ದೇಹದಲ್ಲಿ ಇಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು