Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 12:8 - ಕನ್ನಡ ಸಮಕಾಲಿಕ ಅನುವಾದ

8 ಹೇಗೆಂದರೆ, ಪವಿತ್ರಾತ್ಮ ದೇವರ ಮೂಲಕ ಒಬ್ಬನಿಗೆ ಜ್ಞಾನ ವಾಕ್ಯವು, ಒಬ್ಬನಿಗೆ ಆ ಆತ್ಮರ ಅನುಸಾರವಾಗಿ ವಿದ್ಯಾವಾಕ್ಯವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು ಮತ್ತೊಬ್ಬನಿಗೆ ಆ ಆತ್ಮನಿಂದಲೇ ತಿಳಿವಳಿಕೆಯ ವಾಕ್ಯವು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪವಿತ್ರಾತ್ಮ ಮುಖಾಂತರ ಒಬ್ಬನಿಗೆ ಜ್ಞಾನೋಕ್ತಿಗಳು, ಇನ್ನೊಬ್ಬನಿಗೆ ಅವರ ಮುಖಾಂತರವೇ ವಿದ್ಯೋಕ್ತಿಗಳು ಲಭಿಸುತ್ತವೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಒಬ್ಬನಿಗೆ ದೇವರಾತ್ಮನ ಮೂಲಕ ಜ್ಞಾನವಾಕ್ಯವು, ಒಬ್ಬನಿಗೆ ಆ ಆತ್ಮನಿಗೆ ಅನುಗುಣವಾಗಿ ವಿದ್ಯಾವಾಕ್ಯವು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತನು ಒಬ್ಬನಿಗೆ ಜ್ಞಾನದಿಂದ ಮಾತಾಡುವ ವರವನ್ನೂ ಮತ್ತೊಬ್ಬನಿಗೆ ತಿಳುವಳಿಕೆಯಿಂದ ಮಾತಾಡುವ ವರವನ್ನೂ ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಅಶೆ ಪವಿತ್ರ್ ಆತ್ಮೊ ಎಕ್ಲ್ಯಾಕ್ ಬುದ್ದಿಚೊ, ಅನಿಎಕ್ಲ್ಯಾಕ್ ಶಾನ್ಪಾನಾಚೊ ವರು ದಿತಾ. ಅನಿಎಕ್ಲ್ಯಾಕ್ ತೆಚೊ ಅರ್ಥ್ ಸೊಡ್ಸುನ್ ಸಾಂಗ್ತಲೆ ವರು ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 12:8
30 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ; ಅವರ ಬಾಯಿಂದಲೇ ಅರಿವೂ ತಿಳುವಳಿಕೆಯೂ ಹೊರಟುಬರುತ್ತವೆ.


ಹೇಗೆ ನೀವು ವಿಶ್ವಾಸ, ವಾಕ್ಚಾತುರ್ಯ, ತಿಳುವಳಿಕೆ, ಉತ್ಸಾಹ ಹಾಗೂ ನಮ್ಮ ಮೇಲೆ ನಿಮಗಿರುವ ಪ್ರೀತಿ, ಇವೆಲ್ಲವುಗಳಲ್ಲಿ ನೀವು ಸಮೃದ್ಧರಾಗಿದ್ದಂತೆ, ಈ ದಾನವೆಂಬ ಕೃಪಾಕಾರ್ಯದಲ್ಲಿಯೂ ಸಮೃದ್ಧರಾಗಿರಿ.


ನೀವು ಕ್ರಿಸ್ತ ಯೇಸುವಿನಲ್ಲಿ ಜ್ಞಾನದಲ್ಲಿಯೂ ಮಾತುಗಳಲ್ಲಿಯೂ ಎಲ್ಲಾ ಸಮೃದ್ಧಿಯನ್ನು ಹೊಂದಿದ್ದೀರಿ.


ನಿಮ್ಮ ಚಿತ್ತದಂತೆ ಮಾಡುವುದಕ್ಕೆ ನನಗೆ ಬೋಧಿಸಿರಿ, ಏಕೆಂದರೆ ನೀವು ನನ್ನ ದೇವರು; ನಿಮ್ಮ ಒಳ್ಳೆಯ ಆತ್ಮವು ನನ್ನನ್ನು ಸಮಹಾದಿಯಲ್ಲಿ ನಡೆಸಲಿ.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಇದಲ್ಲದೆ ನೀವು ಅವರಿಗೆ ಬೋಧಿಸುವ ನಿಮ್ಮ ಒಳ್ಳೆಯ ಆತ್ಮವನ್ನು ಕೊಟ್ಟಿರಿ. ಅವರ ಬಾಯಿಂದ ನಿಮ್ಮ ಮನ್ನವನ್ನು ಹಿಂದೆಗೆಯಲಿಲ್ಲ. ಬಾಯಾರಿದ ಅವರಿಗೆ ನೀರನ್ನು ಕೊಟ್ಟಿರಿ.


ಪ್ರೀತಿಯು ಎಂದಿಗೂ ಅಳಿದುಹೋಗುವುದಿಲ್ಲ, ಪ್ರವಾದನೆಗಳಾದರೋ ಇಲ್ಲದಂತಾಗುವುವು, ಅನ್ಯ ಭಾಷೆಗಳು ಗತಿಸಿ ಹೋಗುವುವು, ವಿದ್ಯೆಯೋ ಇಲ್ಲದಂತಾಗುವುವು.


ಯೇಸು ಅದಕ್ಕೆ ಉತ್ತರವಾಗಿ ಹೇಳಿದ್ದು: “ಪರಲೋಕ ರಾಜ್ಯದ ರಹಸ್ಯಗಳನ್ನು ತಿಳಿದುಕೊಳ್ಳುವ ಜ್ಞಾನವು ನಿಮಗೆ ಕೊಡಲಾಗಿದೆ, ಆದರೆ ಅವರಿಗಲ್ಲ.


ಮಾತ್ರವಲ್ಲದೆ, “ನಾನಾದರೋ ಅವರ ಸಂಗಡ ಮಾಡುವ ಒಡಂಬಡಿಕೆ ಇದೇ. ಎಂದು ಯೆಹೋವ ದೇವರು ಹೇಳುತ್ತಾರೆ. ನಿನ್ನ ಮೇಲಿರುವ ನನ್ನ ಆತ್ಮನೂ, ನಾನು ನಿನ್ನ ಬಾಯಲ್ಲಿ ಇಟ್ಟಿರುವ ನನ್ನ ವಾಕ್ಯಗಳೂ, ಇಂದಿನಿಂದ ಸದಾಕಾಲಕ್ಕೆ ನಿನ್ನ ಬಾಯಿಂದಲೂ, ನಿನ್ನ ಸಂತಾನದ ಬಾಯಿಂದಲೂ ತೊಲಗುವುದಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಬಳಲಿ ಹೋದವನನ್ನು ಹೇಗೆ ಮಾತಿನಿಂದ ಆದರಿಸುವೆ ಎಂಬುದನ್ನು ನಾನು ತಿಳಿಯುವ ಹಾಗೆ ಸಾರ್ವಭೌಮ ಯೆಹೋವ ದೇವರು ಶಿಕ್ಷಿತರ ನಾಲಿಗೆಯನ್ನು ನನಗೆ ಕೊಟ್ಟಿದ್ದಾರೆ. ಆತನು ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ, ಸುರಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಆತನು ಎಚ್ಚರಗೊಳಿಸುತ್ತಾರೆ.


ಆದರೆ ಮನುಷ್ಯನಲ್ಲಿ ಒಂದು ಆತ್ಮ ಉಂಟು; ಸರ್ವಶಕ್ತರ ಶ್ವಾಸವು ಅವನಿಗೆ ತಿಳುವಳಿಕೆಯನ್ನು ಕೊಡುತ್ತದೆ.


ನಾನು ಅವನನ್ನು ದೇವರ ಆತ್ಮನಿಂದಲೂ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ವಿವೇಕದಿಂದಲೂ ಎಲ್ಲಾ ವಿಧವಾದ ಕೌಶಲ್ಯದಿಂದಲೂ ತುಂಬಿಸಿದ್ದೇನೆ.


ನನಗೆ ಪ್ರವಾದನ ವರವಿದ್ದರೂ ನಾನು ಎಲ್ಲಾ ರಹಸ್ಯಗಳನ್ನೂ, ಸಕಲ ವಿದ್ಯೆಯನ್ನು ತಿಳಿದಿದ್ದರೂ ಬೆಟ್ಟಗಳನ್ನು ಕದಲಿಸುವಷ್ಟು ನಂಬಿಕೆಯಿದ್ದರೂ ನನಗೆ ಪ್ರೀತಿಯಿಲ್ಲದಿದ್ದರೆ, ಶೂನ್ಯನಾಗಿದ್ದೇನೆ.


ಅವರು ಕಾಲವನ್ನೂ, ಸಮಯವನ್ನೂ ಬದಲಾಯಿಸುತ್ತಾ ಅವರು ಅರಸರನ್ನು ಕಡೆಗಣಿಸುತ್ತಾರೆ ಮತ್ತು ಇತರರನ್ನು ಮೇಲಕ್ಕೆತ್ತುತ್ತಾರೆ. ಜ್ಞಾನಿಗಳಿಗೆ ಜ್ಞಾನವನ್ನೂ, ಬುದ್ಧಿವಂತರಿಗೆ ತಿಳುವಳಿಕೆಯನ್ನೂ ಕೊಡುವರು.


ಸಹೋದರರೇ, ನಿಮ್ಮಲ್ಲಿ ಪವಿತ್ರಾತ್ಮಭರಿತರೂ ಜ್ಞಾನವಂತರೂ ಎಂದು ಸಾಕ್ಷಿ ಹೊಂದಿರುವ ಏಳು ಜನರನ್ನು ಆಯ್ಕೆ ಮಾಡಿರಿ. ನಾವು ಅವರನ್ನು ಈ ಕಾರ್ಯಕ್ಕಾಗಿ ನೇಮಿಸುವೆವು.


ನನ್ನ ಪ್ರಿಯರೇ, ನೀವು ಒಳ್ಳೆಯತನದಿಂದ ಪೂರ್ಣವಾದವರೂ ಸಕಲ ತಿಳುವಳಿಕೆಯಿಂದ ತುಂಬಿದವರೂ ಆಗಿದ್ದು, ಒಬ್ಬರಿಗೊಬ್ಬರು ಬುದ್ಧಿ ಹೇಳುವುದಕ್ಕೆ ಶಕ್ತರಾಗಿದ್ದೀರೆಂದು ನಿಮ್ಮ ಬಗ್ಗೆ ನನಗೆ ಭರವಸೆ ಇದೆ.


ಮನುಷ್ಯನ ಆಲೋಚನೆಗಳು ಅವನಲ್ಲಿರುವ ಆತ್ಮಕ್ಕೆ ಹೊರತು ಮತ್ತಾರಿಗೆ ತಿಳಿಯುವುದು? ಹಾಗೆಯೇ, ದೇವರ ಆಲೋಚನೆಗಳನ್ನು ಪವಿತ್ರಾತ್ಮರಲ್ಲದೆ ಬೇರೆ ಯಾರೂ ಗ್ರಹಿಸಲಾರರು.


ಏಕೆಂದರೆ, “ಕರ್ತದೇವರ ಮನಸ್ಸನ್ನು ತಿಳಿದುಕೊಂಡು, ಅವರಿಗೆ ಉಪದೇಶಿಸುವವನಾರು?” ಆದರೆ ನಮಗೆ ಕ್ರಿಸ್ತ ಯೇಸುವಿನ ಮನಸ್ಸು ಇದೆ.


ಹೀಗಿರುವುದರಿಂದ ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟನೆಯಿಂದಾಗಲಿ, ವಿದ್ಯೆಯಿಂದಾಗಲಿ, ಪ್ರವಾದನೆಯಿಂದಾಗಲಿ, ಉಪದೇಶದಿಂದಾಗಲಿ ಮಾತನಾಡದೆ, ಅನ್ಯಭಾಷೆಗಳಿಂದ ಮಾತನಾಡುವವನಾಗಿದ್ದರೆ, ನನ್ನಿಂದ ನಿಮಗೇನು ಪ್ರಯೋಜನ?


ಹಾಗಾದರೇನು ಪ್ರಿಯರೇ? ನೀವು ಸಭೆಯಾಗಿ ಕೂಡಿಬರುವಾಗ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಸಂದೇಶವಾಗಲಿ, ಪ್ರಕಟನೆಯಾಗಲಿ, ಅನ್ಯಭಾಷೆಯನ್ನಾಡುವುದಾಗಲಿ, ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವಾಗಲಿ ಇರುತ್ತದಷ್ಟೆ. ಇವೆಲ್ಲವೂ ಸಭೆಗೆ ಭಕ್ತಿವೃದ್ಧಿಗಾಗಿಯೇ ಇರಲಿ.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ಕ್ರಿಸ್ತ ಯೇಸುವಿನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರೆಸುತ್ತಾ, ಅವರ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ಪ್ರಸಾರಗೊಳಿಸುವ ದೇವರಿಗೆ ಕೃತಜ್ಞತೆಗಳು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಪವಿತ್ರಾತ್ಮ ದೇವರ ಸಹಾಯದಿಂದ ಶುದ್ಧ ಮನಸ್ಸು, ತಿಳುವಳಿಕೆ, ಸಹನೆಯು ಮತ್ತು ದಯೆಯಿಂದಕೂಡಿ, ನಿಷ್ಕಪಟ ಪ್ರೀತಿಯಲ್ಲಿ ಜೀವಿಸಿದ್ದೇವೆ.


ನನ್ನ ಮಾತಿನಲ್ಲಿ ಚಾತುರ್ಯ ಇಲ್ಲದಿದ್ದರೂ ನನಗೆ ತಿಳುವಳಿಕೆಯಿದೆ. ಇದನ್ನು ನಾನು ಪ್ರತಿಯೊಂದು ಸಂದರ್ಭಗಳಲ್ಲಿಯೂ ಬಹಳ ಸ್ಪಷ್ಟಪಡಿಸಿರುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು