Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 13:3 - ಕನ್ನಡ ಸಮಕಾಲಿಕ ಅನುವಾದ

3 ನಾನು ನನ್ನ ಎಲ್ಲಾ ಆಸ್ತಿಯನ್ನು ದಾನಮಾಡಿದರೂ, ನಾನು ಹೊಗಳಿಕೊಳ್ಳುವಂತೆ ನನ್ನ ದೇಹವನ್ನು ಸುಡುವುದಕ್ಕಾಗಿ ಒಪ್ಪಿಸಿಕೊಟ್ಟರೂ ಪ್ರೀತಿಯು ನನಗಿಲ್ಲದಿದ್ದರೆ, ನನಗೇನೂ ಪ್ರಯೋಜನವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನನಗಿರುವುದೆಲ್ಲವನ್ನು ಬಡವರಿಗೆ ಅನ್ನದಾನಮಾಡಿದರೂ, ನನ್ನ ದೇಹವನ್ನು ಸುಡುವುದಕ್ಕೆ ಒಪ್ಪಿಸಿದರೂ, ಪ್ರೀತಿಯು ನನಗಿಲ್ಲದಿದ್ದರೆ ನನಗೇನು ಪ್ರಯೋಜನವಿಲ್ಲ. ನಾನು ಬರಿದಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನನಗಿರುವುದೆಲ್ಲವನು ನಾ ದಾನಮಾಡೆ ದೇಹವನೆ ಸಜೀವ ದಹಿಸಲು ನೀಡೆ ನಾನಾಗಿರೆ ಪರಮ ಪ್ರೀತಿ ವಿಹೀನ ಏನದು ಜೀವನ, ನನಗೇನದು ಪ್ರಯೋಜನ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನನಗಿರುವದೆಲ್ಲವನ್ನು ಅನ್ನದಾನಮಾಡಿದರೂ ನನ್ನ ದೇಹವನ್ನು ಸುಡುವದಕ್ಕೆ ಒಪ್ಪಿಸಿದರೂ ಪ್ರೀತಿಯು ನನಗಿಲ್ಲದಿದ್ದರೆ ನನಗೇನೂ ಪ್ರಯೋಜನವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನನ್ನಲ್ಲಿರುವ ಪ್ರತಿಯೊಂದನ್ನು ಜನರ ಊಟಕ್ಕಾಗಿ ಕೊಟ್ಟುಬಿಡಬಹುದು. ಹೆಮ್ಮೆಪಡುವುದಕ್ಕಾಗಿ ನಾನು ನನ್ನ ದೇಹವನ್ನೇ ಸಜೀವದಹನವನ್ನಾಗಿ ಒಪ್ಪಿಸಿಕೊಡಬಹುದು. ಆದರೆ ಈ ಕಾರ್ಯಗಳನ್ನೆಲ್ಲ ಮಾಡಿದರೂ ಪ್ರೀತಿಯು ಇಲ್ಲದಿದ್ದರೆ ನನಗೇನೂ ಪ್ರಯೋಜನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ಸಗ್ಳಿ ಮಾಜಿ ಆಸ್ತಿ ಅನಿ ಬದಿಕ್ ಗರಿಬಾಕ್ನಿ ಬಾಳ್ಗುಕ್ ಮನುನ್ ಮಿಯಾ ವಾಟುನ್ ದಿಯ್ನ್ ಅನಿ ಮಾಜೆ ಆಂಗ್ ಸೈತ್ ಮಿಯಾ ಒಪ್ಸುನ್ ದಿಯ್ನ್ ಜಾಲ್ಯಾರ್ಬಿ ಮಾಜ್ಯಾ ಭುತ್ತುರ್ ಪ್ರೆಮ್ ನಸ್ಲ್ಯಾರ್ ಹೆ ಮಾಕಾ ಕಸ್ಲ್ಯಾಬಿ ಫಾಯ್ದ್ಯಾಕ್ ಪಡಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 13:3
22 ತಿಳಿವುಗಳ ಹೋಲಿಕೆ  

ಒಬ್ಬನು ತನ್ನ ಸ್ನೇಹಿತರಿಗಾಗಿ ತನ್ನ ಪ್ರಾಣವನ್ನೇ ಕೊಡುವ ಪ್ರೀತಿಗಿಂತ ಮಹತ್ತಾದದ್ದು ಯಾರಲ್ಲೂ ಇಲ್ಲ.


“ಆದರೆ ತಾವು ಮಾಡುವ ತಮ್ಮ ಕ್ರಿಯೆಗಳನ್ನೆಲ್ಲಾ ಜನರು ನೋಡುವಂತೆ ಮಾಡುತ್ತಾರೆ. ಅವರು ತಮ್ಮ ಬಾಹುಗಳ ಮೇಲೆ ದೇವರ ವಾಕ್ಯವುಳ್ಳ ಡಬ್ಬಿಗಳನ್ನು ಮತ್ತು ಹಣೆಯ ಮೇಲೆ ಅಗಲ ಪಟ್ಟಿಗಳನ್ನು ಮಾಡಿ ಉಡುಪುಗಳ ಅಂಚುಗಳನ್ನು ಉದ್ದಮಾಡುತ್ತಾರೆ.


ನಾವು ಅಹಂಕಾರಿಗಳಾಗಿರಬಾರದು. ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಮತ್ಸರಗೊಳ್ಳದೆಯೂ ಇರೋಣ.


ಆಗ ಪೇತ್ರನು, “ಇಗೋ, ನಾವು ಎಲ್ಲವನ್ನೂ ಬಿಟ್ಟು ನಿಮ್ಮನ್ನು ಹಿಂಬಾಲಿಸಿದ್ದೇವಲ್ಲ,” ಎಂದನು.


ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.


ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.


ಅವರು ದೇವರಿಂದ ಬರುವ ಹೊಗಳಿಕೆಗಿಂತ ಮನುಷ್ಯರ ಹೊಗಳಿಕೆಯನ್ನೇ ಹೆಚ್ಚಾಗಿ ಪ್ರೀತಿಸಿದರು.


ಯೇಸು ಇವುಗಳನ್ನು ಕೇಳಿ ಅವನಿಗೆ, “ಆದರೂ ನಿನಗೆ ಒಂದು ಕೊರತೆ ಇದೆ. ನೀನು ಹೋಗಿ ನಿನಗೆ ಇರುವುದೆಲ್ಲವನ್ನು ಮಾರಿ ಬಡವರಿಗೆ ಕೊಡು; ಆಗ ಪರಲೋಕದಲ್ಲಿ ನಿನಗೆ ಸಂಪತ್ತಿರುವುದು ಮತ್ತು ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಪೇತ್ರನು ಯೇಸುವಿಗೆ, “ಕರ್ತದೇವರೇ, ನಾನು ಈಗ ನಿಮ್ಮನ್ನು ಏಕೆ ಹಿಂಬಾಲಿಸಲಾರೆನು? ನಿಮಗಾಗಿ ನನ್ನ ಪ್ರಾಣವನ್ನೇ ಕೊಡುವೆನು,” ಎಂದನು.


ಬದುಕಿಸುವುದು ದೇವರ ಆತ್ಮವೇ, ನರಮಾಂಸವಾದರೋ ಯಾವುದಕ್ಕೂ ಪ್ರಯೋಜನವಾಗುವುದಿಲ್ಲ. ನಾನು ನಿಮಗೆ ನುಡಿದ ಮಾತುಗಳೇ ದೇವರಾತ್ಮವೂ ಜೀವವೂ ಆಗಿರುತ್ತವೆ.


ಆದರೆ ಜಕ್ಕಾಯನು ನಿಂತುಕೊಂಡು ಕರ್ತದೇವರಿಗೆ, “ಸ್ವಾಮೀ, ಇಗೋ, ನನ್ನ ಸ್ವತ್ತಿನಲ್ಲಿ ಅರ್ಧವನ್ನು ಬಡವರಿಗೆ ಕೊಟ್ಟುಬಿಡುತ್ತೇನೆ. ನಾನು ಯಾರಿಗಾದರೂ ಏನಾದರೂ ಮೋಸಮಾಡಿ ಅವರಿಂದ ತೆಗೆದುಕೊಂಡಿದ್ದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ,” ಎಂದನು.


ನೀವು ಪ್ರಯೋಜನವಿಲ್ಲದ ಮೋಸಕರ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.


ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ.


ನಾನೇ ನಿನ್ನ ನೀತಿಯನ್ನೂ, ನಿನ್ನ ಕ್ರಿಯೆಗಳನ್ನೂ ತಿಳಿಯ ಮಾಡುವೆನು. ಏಕೆಂದರೆ ಅವು ನಿನಗೆ ಪ್ರಯೋಜನವಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು