Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:2 - ಕನ್ನಡ ಸಮಕಾಲಿಕ ಅನುವಾದ

2 ನಾನು ಸಾರಿದ ಈ ಸುವಾರ್ತೆಯ ವಾಕ್ಯವನ್ನು ನೀವು ಬಿಗಿಯಾಗಿ ಹಿಡಿದುಕೊಂಡರೆ, ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ, ನಿಮ್ಮ ನಂಬಿಕೆ ವ್ಯರ್ಥವಾಗಿ ಹೋಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ನಾನು ನಿಮಗೆ ಶುಭಸಂದೇಶವೆಂದು ತಿಳಿಸಿದ ಸಂಗತಿಯನ್ನು ದೃಢವಾಗಿ ವಿಶ್ವಾಸಿಸಿದರೆ ನೀವು ಜೀವೋದ್ಧಾರವನ್ನು ಪಡೆಯುವಿರಿ. ಇಲ್ಲವಾದರೆ ನಿಮ್ಮ ವಿಶ್ವಾಸ ನಿರರ್ಥಕವಾದೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಯಾವ ಸಂಗತಿಯನ್ನು ಹೇಳಿ ನಿಮಗೆ ಸುವಾರ್ತೆಯನ್ನು ತಿಳಿಸಿದೆನೋ ನೀವು ಅದನ್ನು ಗಟ್ಟಿಯಾಗಿ ಹಿಡುಕೊಂಡರೆ ಮತ್ತು ನಿಮ್ಮ ನಂಬಿಕೆಯು ನಿರಾಧಾರವಾಗದ ಪಕ್ಷಕ್ಕೆ ಆ ಸುವಾರ್ತೆಯಿಂದ ನಿಮಗೆ ರಕ್ಷಣೆಯಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನೀವು ಆ ಸಂದೇಶದ ಮೂಲಕ ರಕ್ಷಣೆ ಹೊಂದಿದ್ದೀರಿ. ನಾನು ನಿಮಗೆ ತಿಳಿಸಿದ ಸಂದೇಶದಲ್ಲಿ ನಿಮಗೆ ದೃಢವಾದ ನಂಬಿಕೆ ಇರಲೇಬೇಕು. ನೀವು ಹೀಗೆ ಮಾಡದಿದ್ದರೆ, ನಿಮ್ಮ ನಂಬಿಕೆಯು ನಿರರ್ಥಕವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮಿಯಾ ತುಮ್ಕಾ ಪರ್ಗಟ್ ಕರಲ್ಲ್ಯಾ ಸರ್ಕೆಚ್ ತುಮಿ ತಿ ಖಬರ್ ಸಂಬಾಳುನ್ ಘೆವ್ನ್ ಗೆಲ್ಯಾಶಿ ತರ್, ತಿಚೆ ವೈನಾ ತುಮ್ಕಾ ಸುಟ್ಕಾ ಗಾವ್ತಾ. ನಾ ಹೊಲ್ಯಾರ್ ತುಮ್ಚೊ ವಿಶ್ವಾಸ್ ಬೆಕಾರ್ ಮನುನ್ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:2
31 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಾದರೋ ಮಗನಾಗಿ ದೇವರ ಮನೆಯ ಮೇಲೆ ನಂಬಿಗಸ್ತರಾಗಿದ್ದಾರೆ. ಆದುದರಿಂದ ನಾವು ನಮ್ಮ ಧೈರ್ಯವನ್ನೂ ನಾವು ಹೊಗಳಿಕೊಳ್ಳುವ ನಿರೀಕ್ಷೆಯನ್ನೂ ಕಡೆಯತನಕ ದೃಢವಾಗಿ ಹಿಡಿದುಕೊಂಡಿದ್ದರೆ ನಾವೇ ದೇವರ ಮನೆಯಾಗಿರುತ್ತೇವೆ.


ಆದ್ದರಿಂದ ದಾರಿಬಿಟ್ಟು ಹೋಗದಂತೆ, ನಾವು ಕೇಳಿದ ಸಂಗತಿಗಳಿಗೆ ಹೆಚ್ಚು ಲಕ್ಷ್ಯ ಕೊಡುವವರಾಗಿರಬೇಕು.


ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದ್ದೀರಿ. ಈ ರಕ್ಷಣೆಯು ನಿಮ್ಮಿಂದ ಉಂಟಾದದ್ದಲ್ಲ, ಇದು ದೇವರ ದಾನವೇ.


ಶಿಲುಬೆಯ ಸಂದೇಶವು ವಿನಾಶದ ಮಾರ್ಗದಲ್ಲಿರುವವರಿಗೆ ಬುದ್ದಿಹೀನವಾಗಿದೆ. ರಕ್ಷಣೆ ಹೊಂದುತ್ತಿರುವ ನಮಗಾದರೋ, ಅದು ದೇವರ ಶಕ್ತಿಯಾಗಿದೆ.


ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ, ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿರುತ್ತದೆ.


ನನ್ನ ಪ್ರಿಯರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?


ನಾವು ನಮ್ಮ ನಿರೀಕ್ಷೆಯ ಅರಿಕೆಯನ್ನು ಚಂಚಲರಾಗದೆ ಬಿಗಿಯಾಗಿ ಹಿಡಿಯೋಣ. ಏಕೆಂದರೆ ವಾಗ್ದಾನ ಮಾಡಿದವರು ನಂಬಿಗಸ್ತರು.


ಬೀಜ ಬಿದ್ದ ಕಲ್ಲುಭೂಮಿಯು ಯಾರೆಂದರೆ ವಾಕ್ಯವನ್ನು ಕೇಳಿದಾಗ ಸಂತೋಷದಿಂದ ಸ್ವೀಕರಿಸುವವರು, ಆದರೆ ಇವರು ಬೇರಿಲ್ಲದಿರುವುದರಿಂದ, ಸ್ವಲ್ಪಕಾಲ ನಂಬಿ, ಶೋಧನೆ ಬಂದಾಗ ಬಿದ್ದುಹೋಗುವವರು.


ಅದರಂತೆಯೇ, ಕ್ರಿಯೆಗಳಿಲ್ಲದ ನಂಬಿಕೆಯು, ಕ್ರಿಯೆಗಳು ಇಲ್ಲದಿರುವುದರಿಂದ ಸತ್ತ ನಂಬಿಕೆಯಾಗಿರುತ್ತದೆ.


ಆದ್ದರಿಂದ ಪರಲೋಕಗಳನ್ನು ದಾಟಿಹೋದ ದೇವಪುತ್ರ ಯೇಸು ಎಂಬ ಶ್ರೇಷ್ಠ ಮಹಾಯಾಜಕರು ನಮಗಿರುವುದರಿಂದ ನಾವು ಅರಿಕೆಮಾಡುವ ವಿಶ್ವಾಸವನ್ನು ಬಿಗಿಯಾಗಿ ಹಿಡಿಯೋಣ.


ಹೀಗಿರುವುದರಿಂದ ಪ್ರಿಯರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಪಾಲಿಸಿರಿ.


ನೀವು ಎಷ್ಟೋ ಬಾಧೆಗಳನ್ನು ಅನುಭವಿಸಿದ್ದು ವ್ಯರ್ಥವಾಯಿತೋ?


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ನಾನು ಸುವಾರ್ತೆಯ ವಿಷಯದಲ್ಲಿ ನಾಚಿಕೊಳ್ಳುವವನಲ್ಲ. ಏಕೆಂದರೆ ಅದು ಮೊದಲು ಯೆಹೂದ್ಯರಿಗೆ ಆಮೇಲೆ ಯೆಹೂದ್ಯರಲ್ಲದವರಿಗೆ, ಹೀಗೆ ನಂಬುವವರೆಲ್ಲರಿಗೂ ರಕ್ಷಣೆಯನ್ನು ಉಂಟುಮಾಡುವ ದೇವರ ಶಕ್ತಿಯಾಗಿದೆ.


ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ; ಸದುಪದೇಶವನ್ನು ಕಾಪಾಡಿಕೋ, ಏಕೆಂದರೆ ಅದು ನಿನ್ನ ಜೀವವಾಗಿದೆ.


ಮಗನೇ, ನನ್ನ ಉಪದೇಶವನ್ನು ಮರೆಯಬೇಡ; ನನ್ನ ಆಜ್ಞೆಗಳನ್ನು ನಿನ್ನ ಹೃದಯದಲ್ಲಿ ಇಟ್ಟುಕೋ.


ರಕ್ಷಣಾ ಮಾರ್ಗದಲ್ಲಿರುವವರಿಗೂ ನಾಶದ ಮಾರ್ಗದಲ್ಲಿರುವವರಿಗೂ ನಾವು ದೇವರಿಗೆ ಕ್ರಿಸ್ತ ಯೇಸುವಿನ ಪರಿಮಳವಾಗಿದ್ದೇವೆ.


ಕ್ರಿಸ್ತ ಯೇಸು ಎದ್ದು ಬರಲಿಲ್ಲವಾದರೆ, ನಮ್ಮ ಪ್ರಸಂಗವೂ ನಿಮ್ಮ ವಿಶ್ವಾಸವೂ ನಿಷ್ಪ್ರಯೋಜನವಾದದ್ದು.


ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.


ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.


ಸೀಮೋನನು ಸಹ ವಿಶ್ವಾಸವಿಟ್ಟು, ದೀಕ್ಷಾಸ್ನಾನ ಹೊಂದಿದನು. ಫಿಲಿಪ್ಪ ಮಾಡಿದ ಮಹಾಸೂಚಕಕಾರ್ಯಗಳನ್ನು ಮತ್ತು ಅದ್ಭುತಗಳನ್ನು ಕಂಡು, ಬೆರಗಾಗಿ ಅವನು ಹೋದಲ್ಲೆಲ್ಲಾ ಅವನನ್ನು ಹಿಂಬಾಲಿಸುತ್ತಿದ್ದನು.


ಅವರು ದೇವರಿಗೆ ಸ್ತೋತ್ರ ಮಾಡುತ್ತಾ, ಜನರೆಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ರಕ್ಷಣೆ ಹೊಂದಿದವರನ್ನು ಕರ್ತ ಯೇಸುವು ಪ್ರತಿದಿನವೂ ಅವರೊಂದಿಗೆ ಸೇರಿಸುತ್ತಿದ್ದರು.


ಸತ್ಯವನ್ನೂ ಜ್ಞಾನವನ್ನೂ ಶಿಕ್ಷಣವನ್ನೂ ವಿವೇಕವನ್ನೂ ಕೊಂಡುಕೋ; ಆದರೆ ಅವುಗಳನ್ನು ಮಾರಬೇಡ.


ನೀವು ಎಲ್ಲದರಲ್ಲಿಯೂ ನನ್ನನ್ನು ಜ್ಞಾಪಕಮಾಡಿಕೊಂಡು, ನಾನು ನಿಮಗೆ ಒಪ್ಪಿಸಿಕೊಟ್ಟ ಉಪದೇಶಗಳನ್ನು ಬಿಗಿಯಾಗಿ ಅನುಸರಿಸುತ್ತಿರೆಂದು ನಿಮ್ಮನ್ನು ಹೊಗಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು