Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:42 - ಕನ್ನಡ ಸಮಕಾಲಿಕ ಅನುವಾದ

42 ಸತ್ತವರಿಗಾಗುವ ಪುನರುತ್ಥಾನವು ಸಹ ಹಾಗೆಯೇ ಇರುವುದು. ದೇಹವು ಅಳಿಯುವ ಅವಸ್ಥೆಯಲ್ಲಿ ಬಿತ್ತಲಾಗುತ್ತದೆ. ಅಮರತ್ವ ಅವಸ್ಥೆಯಲ್ಲಿ ಎದ್ದು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

42 ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವುದು. ಬಿತ್ತುವಂಥದ್ದು ಅಳಿದುಹೊಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

42 ಸತ್ತವರ ಪುನರುತ್ಥಾನವೂ ಹಾಗೆಯೇ. ಬಿತ್ತುವಂಥದ್ದು ಅಳಿದುಹೋಗುವಂಥದ್ದು. ಪುನರುತ್ಥಾನವಾಗುವಂಥದ್ದು ಅಮರವಾದುದು. ಬಿತ್ತಿದ್ದು ಬಲಹೀನವಾದುದು; ಪುನರುತ್ಥಾನಹೊಂದುವಂಥದ್ದು, ಬಲಿಷ್ಠವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

42 ಸತ್ತವರಿಗಾಗುವ ಪುನರುತ್ಥಾನವು ಅದೇ ಪ್ರಕಾರವಾಗಿರುವದು. ದೇಹವು ಲಯಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ನಿರ್ಲಯಾವಸ್ಥೆಯಲ್ಲಿ ಎದ್ದುಬರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

42 ಸತ್ತವರಿಗಾಗುವ ಪುನರುತ್ಥಾನವು ಅದೇ ರೀತಿಯಾಗಿರುವುದು. ಬಿತ್ತಲ್ಪಟ್ಟ ದೇಹವು ಹಾಳಾಗುವುದು ಮತ್ತು ಕೊಳೆತು ಹೋಗುವುದು. ಆದರೆ ಜೀವಂತವಾಗಿ ಎದ್ದುಬರುವ ಆ ದೇಹವನ್ನು ನಾಶಮಾಡಲು ಸಾಧ್ಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

42 ಮರಲ್ಲೆ ಝಿತ್ತೆ ಹೊವ್ನ್ ಉಟ್ತಲೆಬಿ ಅಸೆಚ್ ಹೊತಾ. ಉಗಾತ್ ಘಾಲ್ತಾತ್ ತೆ ನಾಸ್ ಹೊವ್ನ್ ಜಾತಲೆ ತೆ ಖರೆ ಹಾಯ್, ಖರೆ ಝಿತ್ತೆ ಹೊವ್ನ್ ಉಟ್ತಲೆ ಕನ್ನಾಚ್ ನಾಸ್ ಹೊಯ್ನಸಲ್ಲೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:42
20 ತಿಳಿವುಗಳ ಹೋಲಿಕೆ  

ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.


ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.


ಈ ನಿರೀಕ್ಷೆಯು ಲಯ, ಕಳಂಕ, ಕ್ಷಯಗಳಿಲ್ಲದ ಬಾಧ್ಯತೆಯಾಗಿದೆ. ಈ ಬಾಧ್ಯತೆಯು ನಿಮಗೋಸ್ಕರ ಪರಲೋಕದಲ್ಲಿ ಇಟ್ಟಿದೆ.


ಈ ಸೃಷ್ಟಿಯು ಕೂಡ ನಾಶದ ಬಂಧನದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ಸ್ವಾತಂತ್ರ್ಯದಲ್ಲಿ ಪಾಲುಗೊಳ್ಳುತ್ತದೆ.


ದಾವೀದನು ಕ್ರಿಸ್ತ ಯೇಸುವಿನ ಪುನರುತ್ಥಾನದ ಬಗ್ಗೆ ಮುಂಚಿತವಾಗಿಯೇ ನೋಡಿ, ಹೀಗೆ ಮಾತನಾಡಿದನು: ‘ಅವರನ್ನು ಪಾತಾಳದಲ್ಲಿಯೇ ಬಿಡಲಿಲ್ಲ; ಅವರ ದೇಹವು ಕೊಳೆಯುವ ಅವಸ್ಥೆಯನ್ನು ಕಾಣಲಿಲ್ಲ.’


ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಶು, ಪಕ್ಷಿ, ಸರ್ಪಾದಿಗಳ ಮೂರ್ತಿಗಳೊಂದಿಗೆ ಬದಲಿಸಿಕೊಂಡರು.


ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ, ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.


ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು. ಆದರೆ ನನ್ನ ಆತ್ಮವನ್ನು ನಾಶದಿಂದ ಬಿಡುಗಡೆ ಮಾಡಿದ್ದು ನಿಮ್ಮ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.


ಅವರು ಕುರಿಗಳಂತೆ ಸಾಯಲು ನೇಮಕವಾಗಿದ್ದಾರೆ. ಮರಣವೇ ಅವರ ಕುರುಬ; ಅವರ ವೈಭವ ನಿವಾಸದಿಂದ ದೂರ ಸಮಾಧಿಯಲ್ಲಿರುವುದು ಅವರ ರೂಪ ಕ್ಷಯವಾಗುವುದು. ಆದರೆ ಯಥಾರ್ಥರು ಬೆಳಿಗ್ಗೆ ಅವರನ್ನು ಬಿಟ್ಟು ಸಾಗುತ್ತಿರುವರು.


ಏಕೆಂದರೆ ನೀವು ನನ್ನ ಪ್ರಾಣವನ್ನು ಪಾತಾಳದಲ್ಲಿ ಬಿಟ್ಟುಬಿಡುವುದಿಲ್ಲ; ನಿಮ್ಮ ನಂಬಿಗಸ್ತನನ್ನು ಕೊಳೆಯುವ ಅವಸ್ಥೆಗೆ ತರುವುದಿಲ್ಲ.


ಸಮಾಧಿಗೆ, ‘ನೀನು ನನ್ನ ತಂದೆ’ ಎಂದೂ, ಹುಳಕ್ಕೆ, ‘ನನ್ನ ತಾಯಿ, ನನ್ನ ತಂಗಿ’ ಎಂದೂ ನಾನು ಕರೆಯುವುದಾದರೆ,


ನೀನು ಪುನಃ ಮಣ್ಣಿಗೆ ಸೇರುವ ತನಕ, ಬೆವರಿಡುತ್ತಾ ಆಹಾರವನ್ನು ಉಣ್ಣುವೆ. ನೀನು ಮಣ್ಣಿನಿಂದ ತೆಗೆದವನಾಗಿರುವುದರಿಂದ ನೀನು ಮಣ್ಣೇ. ನೀನು ಪುನಃ ಮಣ್ಣಿಗೆ ಸೇರತಕ್ಕವನು.”


ಮನುಷ್ಯರು ಮರಣ ನಾಶವನ್ನು ಕಾಣದೆ, ಶಾಶ್ವತವಾಗಿ ಬದುಕುವಂತೆ ಮಾಡಲು ಯಾರಿಗೂ ಸಾಧ್ಯವಿಲ್ಲ.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ಸೂರ್ಯನ ಮಹಿಮೆ ಬೇರೆ, ಚಂದ್ರನ ಮಹಿಮೆಯೇ ಬೇರೆ ವಿಧ, ನಕ್ಷತ್ರಗಳ ಮಹಿಮೆ ಇನ್ನೊಂದು ವಿಧ. ಏಕೆಂದರೆ, ನಕ್ಷತ್ರ ನಕ್ಷತ್ರಕ್ಕೆ ಮಹಿಮೆಯಲ್ಲಿ ವ್ಯತ್ಯಾಸವಾಗಿರುವುದು.


ಮಾಂಸಭಾವಕ್ಕೆ ಬಿತ್ತುವವನು, ಮಾಂಸಭಾವದಿಂದ ನಾಶವನ್ನು ಕೊಯ್ಯುವನು. ಆದರೆ ದೇವರ ಆತ್ಮರನ್ನು ಮೆಚ್ಚಿಸಲು ಬಿತ್ತುವವನು, ಆತ್ಮದಿಂದ ನಿತ್ಯಜೀವವನ್ನು ಕೊಯ್ಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು