Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:43 - ಕನ್ನಡ ಸಮಕಾಲಿಕ ಅನುವಾದ

43 ದೇಹವು ಹೀನಾವಸ್ಥೆಯಲ್ಲಿ ಬಿತ್ತಲಾಗುತ್ತದೆ. ಮಹಿಮೆಯಲ್ಲಿ ಎದ್ದು ಬರುವುದು. ಬಲಹೀನತೆಯಲ್ಲಿ ಬಿತ್ತಲಾಗುತ್ತದೆ, ಶಕ್ತಿಯಲ್ಲಿ ಎದ್ದು ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಪುನರುತ್ಥಾನಹೊಂದುವುದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಹೊಂದಿ ಪುನರುತ್ಥಾನಹೊಂದುವುದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಬಿತ್ತಿದ್ದು ಕುರೂಪಿಯಾದುದು; ಪುನರುತ್ಥಾನಹೊಂದುವುದು ಕೋಮಲವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

43 ಹೀನಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಮಹಿಮೆಯಲ್ಲಿ ಎದ್ದು ಬರುವದು; ನಿರ್ಬಲಾವಸ್ಥೆಯಲ್ಲಿ ಬಿತ್ತಲ್ಪಡುತ್ತದೆ, ಬಲಾವಸ್ಥೆಯಲ್ಲಿ ಎದ್ದು ಬರುವದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ದೇಹವು ಹೀನಾವಸ್ಥೆಯಲ್ಲಿ ಬಿತ್ತಲ್ಪಡುವುದು, ಆದರೆ ಮಹಿಮೆಯೊಡನೆ ಎದ್ದುಬರುವುದು. ದೇಹವು ಬಿತ್ತಲ್ಪಟ್ಟಾಗ, ಅದು ಬಲಹೀನವಾಗಿರುತ್ತದೆ. ಆದರೆ ಅದು ಎದ್ದುಬಂದಾಗ ಅದಕ್ಕೆ ಶಕ್ತಿಯಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಮಾಟಿ ದಿತಾನಾ ತೆ ಬುರ್ಶೆ ಅನಿ ಬಳ್ ನಸಲ್ಲೆ, ಖರೆ ಉಟ್ವುನ್ ಹೊಲ್ಲ್ಯಾ ತನ್ನಾ ತೆ ಸುಂದರ್ ಅನಿ ಘಟ್ಮುಟ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:43
13 ತಿಳಿವುಗಳ ಹೋಲಿಕೆ  

ನಿಮಗೆ ಜೀವವಾಗಿರುವ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ, ನೀವು ಸಹ ಅವರೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.


ಕ್ರಿಸ್ತನನ್ನೂ ಅವರ ಪುನರುತ್ಥಾನದ ಶಕ್ತಿಯನ್ನೂ ನಾನು ಅರಿತುಕೊಂಡು, ಕ್ರಿಸ್ತನ ಶ್ರಮೆಯಲ್ಲಿ ಪಾಲುಗೊಳ್ಳುವ ಅನ್ಯೋನ್ಯತೆಯನ್ನೂ ಅವರ ಮರಣದಲ್ಲಿ ಅವರ ಹಾಗೆ ಆಗುವುದನ್ನೂ ತಿಳಿಯುವುದೇ ನನ್ನ ಅಪೇಕ್ಷೆ.


ಕ್ರಿಸ್ತ ಯೇಸು ಬಲಹೀನತೆಯಲ್ಲಿ ಶಿಲುಬೆಗೆ ಹಾಕಲಾದರು ನಿಜ. ಆದರೆ ಅವರು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾರೆ. ನಾವು ಸಹ ಬಲಹೀನತೆಯುಳ್ಳವರಾಗಿದ್ದೇವೆ. ಆದರೆ ನಾವು ನಿಮ್ಮ ಸೇವೆ ಮಾಡುವಂತೆ, ನಾವು ಕ್ರಿಸ್ತ ಯೇಸುವಿನೊಂದಿಗೆ ದೇವರ ಶಕ್ತಿಯಿಂದ ಬದುಕುತ್ತಿದ್ದೇವೆ.


“ಆ ಕಾಲದಲ್ಲಿ ನಿನ್ನ ಜನರನ್ನು ಕಾಪಾಡುವುದಕ್ಕಾಗಿ ಮಹಾರಾಜಕುಮಾರನಾದ ಮೀಕಾಯೇಲನು ಏಳುವನು. ಮೊಟ್ಟಮೊದಲು ಜನಾಂಗ ಉಂಟಾದಂದಿನಿಂದ ಇಂದಿನವರೆಗೂ ಸಂಭವಿಸದಂತಹ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಎಂದರೆ ಜೀವ ಪುಸ್ತಕದಲ್ಲಿ ಯಾರ ಹೆಸರು ಬರೆಯಲಾಗಿದೆಯೋ, ಅವರೆಲ್ಲರೂ ಬಿಡುಗಡೆಯಾಗುವರು.


ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಕೃಪೆಯೂ ದೇವರ ಪ್ರೀತಿಯೂ ಪವಿತ್ರಾತ್ಮ ದೇವರ ಅನ್ಯೋನ್ಯತೆಯೂ ನಿಮ್ಮೆಲ್ಲರ ಸಂಗಡ ಇರಲಿ.


ದೇವರು ತಮ್ಮ ಶಕ್ತಿಯಿಂದ ನಮಗೆ ಕರ್ತ ಆಗಿರುವ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದರು ಮತ್ತು ನಮ್ಮನ್ನೂ ಎಬ್ಬಿಸುವರು.


ಆಗ ನೀತಿವಂತರು ತಮ್ಮ ತಂದೆಯ ರಾಜ್ಯದಲ್ಲಿ ಸೂರ್ಯನಂತೆ ಪ್ರಕಾಶಿಸುವರು. ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.


ದೇವರು ನನ್ನ ಜೀವಮಾನದ ಬಲವನ್ನು ಕುಂದಿಸಿದ್ದಾರೆ, ನನ್ನ ದಿನಗಳನ್ನೂ ಕಡಿಮೆ ಮಾಡಿದ್ದಾರೆ.


ಆದರೆ ಮನುಷ್ಯನು ಸತ್ತು ಬಿದ್ದಿರುತ್ತಾನೆ; ಅವನು ಕೊನೆಯುಸಿರೆಳೆದಾಗ ಅವನ ಅಂತ್ಯವಾಗುತ್ತದೆ.


ಅದಕ್ಕೆ ಯೇಸು, “ನನಗೆ ದೆವ್ವ ಹಿಡಿದಿಲ್ಲ. ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ. ನೀವು ನನ್ನನ್ನು ಅವಮಾನಪಡಿಸುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು