Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:57 - ಕನ್ನಡ ಸಮಕಾಲಿಕ ಅನುವಾದ

57 ಆದರೆ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

57 ಆದರೆ ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಡುವ ದೇವರಿಗೆ ಸದಾಕಾಲ ಮಹಿಮೆಯುಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

57 ಆದರೆ ನಮ್ಮ ಪ್ರಭುವಾದ ಯೇಸುಕ್ರಿಸ್ತರ ಮುಖಾಂತರ ನಮಗೆ ಜಯವನ್ನು ದೊರಕಿಸಿಕೊಟ್ಟಿರುವ ದೇವರಿಗೆ ಸ್ತೋತ್ರ ಸಲ್ಲಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

57 ಆದರೆ ದೇವರು ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ನಮಗೆ ಜಯವನ್ನು ಕೊಟ್ಟಿದ್ದಾನೆ; ಆತನಿಗೆ ಸ್ತೋತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

57 ಆದರೆ ನಾವು ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಮೂಲಕ ಆತನು ನಮಗೆ ಜಯವನ್ನು ಕೊಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

57 ಖರೆ ಅಮ್ಚ್ಯಾ ಧನಿಯಾ ಜೆಜು ಕ್ರಿಸ್ತಾಚ್ಯಾ ವೈನಾ ಅಮ್ಕಾ ಜಿಕ್ ದಿತಲ್ಯಾ ದೆವಾಕ್ ಧನ್ಯವಾದ್ ಸ್ತುತಿ ಹೊಂವ್ದಿತ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:57
18 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರೆಸುತ್ತಾ, ಅವರ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ಪ್ರಸಾರಗೊಳಿಸುವ ದೇವರಿಗೆ ಕೃತಜ್ಞತೆಗಳು.


ಇವೆಲ್ಲವುಗಳಲ್ಲಿಯೂ ನಾವು ನಮ್ಮನ್ನು ಪ್ರೀತಿಸಿದಾತನ ಮೂಲಕ ಜಯ ಹೊಂದಿದವರಿಗಿಂತಲೂ ಹೆಚ್ಚಿನವರಾಗಿದ್ದೇವೆ.


ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಆದರೆ ಜಯ ದೊರೆಯುವುದು ಯೆಹೋವ ದೇವರಿಂದಲೇ.


ಅವರು ಮರಣದವರೆಗೆ ತಮ್ಮ ಪ್ರಾಣವನ್ನು ಪ್ರೀತಿಸದೆ, ಕುರಿಮರಿಯಾಗಿರುವವರ ರಕ್ತದಿಂದಲೂ ತಮ್ಮ ಸಾಕ್ಷಿಯ ವಾಕ್ಯದಿಂದಲೂ ಅವನನ್ನು ಜಯಿಸಿದರು.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ವರ್ಣಿಸಲು ಅಸಾಧ್ಯವಾದ ದೇವರ ಕೃಪಾವರಕ್ಕಾಗಿ ಅವರಿಗೆ ಸ್ತೋತ್ರವಾಗಲಿ!


ಯೆಹೋವ ದೇವರಿಗೆ ಹೊಸಹಾಡನ್ನು ಹಾಡಿರಿ; ಏಕೆಂದರೆ ಅವರು ಅದ್ಭುತಗಳನ್ನು ಮಾಡಿದ್ದಾರೆ; ಅವರ ಬಲಗೈಯೂ, ಅವರ ಪರಿಶುದ್ಧ ಭುಜವು ಅವರಿಗೆ ಜಯವನ್ನು ತಂದಿವೆ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ದೇವರಿಗೆ ಸ್ತೋತ್ರ! ಏಕೆಂದರೆ ನನ್ನಷ್ಟಕ್ಕೆ ನಾನೇ ನನ್ನ ಮನಸ್ಸಿನಲ್ಲಿ ದೇವರ ನಿಯಮಕ್ಕೆ ಗುಲಾಮನಾಗಿಯೂ ನನ್ನ ಮಾಂಸಭಾವದ ದೇಹದಲ್ಲಿ ಪಾಪದ ನಿಯಮಕ್ಕೆ ಗುಲಾಮನಾಗಿಯೂ ಇದ್ದೇನೆ.


“ನನ್ನ ಮಗನೇ, ಯೆಹೋವ ದೇವರು ನಿನ್ನನ್ನು ಕುರಿತು ಹೇಳಿದ ಪ್ರಕಾರ, ನೀನು ಕೃತಾರ್ಥನಾಗಿ, ನೀನು ನಿನ್ನ ದೇವರಾದ ಯೆಹೋವ ದೇವರ ಆಲಯವನ್ನು ಕಟ್ಟಿಸುವಂತೆ ಅವರು ನಿನ್ನ ಸಂಗಡ ಇರಲಿ.


ನೀವು ನಿಮ್ಮ ಪ್ರಾರ್ಥನೆಯಿಂದ ನಮಗೆ ಸಹಾಯಮಾಡಿರಿ. ಹೀಗೆ, ಬಹಳ ಜನರ ಪ್ರಾರ್ಥನೆಗಳಿಗೆ ಉತ್ತರವಾಗಿ ನಮಗೆ ದೊರಕಿದ ಕೃಪೆಯ ಮೆಚ್ಚುಗೆಗಾಗಿ, ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುವರು.


ನಾನು ರಹಸ್ಯವಾಗಿದ್ದ ಸಂಗತಿಯನ್ನು ನಿಮಗೆ ಹೇಳುತ್ತೇನೆ ಕೇಳಿರಿ: ನಾವೆಲ್ಲರೂ ನಿದ್ರೆ ಹೋಗುವುದಿಲ್ಲ, ನಾವೆಲ್ಲರೂ ರೂಪಾಂತರವಾಗುವೆವು.


ಅರಾಮಿನ ಅರಸನ ಸೈನ್ಯಾಧಿಪತಿ ನಾಮಾನನು ತನ್ನ ಯಜಮಾನನ ಮುಂದೆ ಮಹಾಪುರುಷನಾಗಿಯೂ, ಘನವುಳ್ಳವನಾಗಿಯೂ ಇದ್ದನು. ಏಕೆಂದರೆ ಅವನಿಂದ ಯೆಹೋವ ದೇವರು ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದರು. ಇದಲ್ಲದೆ ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾಗಿದ್ದನು.


ಹೀಗೆ ಹೇಳಿದ ನಂತರ ಅವನು ರೊಟ್ಟಿಯನ್ನು ತೆಗೆದುಕೊಂಡು ಅವರೆಲ್ಲರ ಎದುರಿನಲ್ಲಿ ದೇವರಿಗೆ ಕೃತಜ್ಞತೆ ಸಲ್ಲಿಸಿ, ಅದನ್ನು ಮುರಿದು ತಿನ್ನಲು ಪ್ರಾರಂಭಿಸಿದನು.


ಮಕ್ಕಳು ರಕ್ತಮಾಂಸಧಾರಿಗಳು ಆಗಿರುವುದರಿಂದ ಯೇಸು ತಮ್ಮ ಮರಣದಿಂದಲೇ ಮರಣಾಧಿಕಾರಿಯನ್ನು ಅಂದರೆ, ಸೈತಾನನನ್ನು ನಾಶಮಾಡುವುದಕ್ಕೂ


‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು