Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 15:58 - ಕನ್ನಡ ಸಮಕಾಲಿಕ ಅನುವಾದ

58 ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

58 ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

58 ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿರಿ; ನಿಶ್ಚಲರಾಗಿರಿ. ಪ್ರಭುವಿನ ಸೇವೆಯಲ್ಲಿ ನೀವು ಪಡುವ ಪ್ರಯಾಸ ಎಂದಿಗೂ ನಿಷ್ಫಲವಾಗದು. ಆದ್ದರಿಂದ ಅವರ ಸೇವೆಯಲ್ಲಿ ನಿರಂತರ ಶ್ರದ್ಧೆಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

58 ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

58 ಆದ್ದರಿಂದ, ನನ್ನ ಪ್ರಿಯ ಸಹೋದರ ಸಹೋದರಿಯರೇ, ದೃಢವಾಗಿರಿ, ನಿಶ್ಚಲರಾಗಿರಿ. ಪ್ರಭುವಿನ ಸೇವೆಗಾಗಿ ನಿಮ್ಮನ್ನು ಯಾವಾಗಲೂ ಸಂಪೂರ್ಣವಾಗಿ ಪ್ರತಿಷ್ಠಿಸಿಕೊಳ್ಳಿರಿ. ನೀವು ಪ್ರಭುವಿಗಾಗಿ ಪಡುವ ಪ್ರಯಾಸವು ಎಂದಿಗೂ ವ್ಯರ್ಥವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

58 ತೆಚೆಸಾಟ್ನಿ ಮಾಜ್ಯಾ ಪ್ರೆಮಾಚ್ಯಾ ಭಾವಾನು ಅನಿ ಭೆನಿಯಾನು ಘಟ್ ರ್‍ಹಾವಾ, ಗೊಂದ್ಳುನಕಾಶಿ, ಸಗ್ಳ್ಯಾ ಎಳಾರ್ ಧನಿಯಾಚ್ಯಾ ಕಾಮಾತ್ ಮಗ್ನ್ ಹೊವ್ನ್ ರ್‍ಹಾವಾ. ಧನಿಯಾಚ್ಯಾ ವಾಂಗ್ಡಾ ಎಕ್ ಹೊವ್ನ್ ರ್‍ಹಾವ್ನ್, ತುಮಿ ರಾಬಲ್ಲಿ ರಾಬ್ನುಕ್ ಕನ್ನಾಬಿ ಬೆಕಾರ್ ಹೊಯ್ನಾ ಮನುನ್ ಕಳ್ವುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 15:58
42 ತಿಳಿವುಗಳ ಹೋಲಿಕೆ  

ಒಳ್ಳೆಯದನ್ನು ಮಾಡುವುದರಲ್ಲಿ ಎದೆಗುಂದದಿರೋಣ. ಏಕೆಂದರೆ ನಾವು ಬೇಸರಗೊಳ್ಳದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.


ಆದ್ದರಿಂದ ನೀವು ಬಲಗೊಳ್ಳಿರಿ. ನಿಮ್ಮ ಕೈಗಳು ಬಲಹೀನವಾಗದೆ ಇರಲಿ. ನಿಮ್ಮ ಕೆಲಸಕ್ಕೆ ಪ್ರತಿಫಲ ಸಿಕ್ಕುವುದು,” ಎಂದನು.


ಅವರು ನಿಮ್ಮ ಸೇವೆಯನ್ನೂ ನೀವು ಪರಿಶುದ್ಧರಿಗೆ ಸೇವೆಮಾಡಿದ್ದರಲ್ಲಿ ಇನ್ನೂ ಮಾಡುತ್ತಿರುವುದರಲ್ಲಿ ದೇವರ ಹೆಸರಿನ ಕಡೆಗೆ ತೋರಿಸಿದ ಪ್ರೀತಿಯನ್ನೂ ಅವರು ಮರೆಯುವುದಕ್ಕೆ ದೇವರು ಅನ್ಯಾಯಗಾರರಲ್ಲ.


ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು.


ನೆಡುವವನೂ ನೀರು ಹಾಕುವವನೂ ಒಂದೇ ಉದ್ದೇಶವುಳ್ಳವರಾಗಿರುತ್ತಾರೆ. ಪ್ರತಿಯೊಬ್ಬನಿಗೆ ಅವನವನ ಶ್ರಮಕ್ಕೆ ತಕ್ಕಂತೆ ಪ್ರತಿಫಲ ದೊರೆಯುವುದು.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ನಿಮ್ಮ ವಿಶ್ವಾಸ ಪ್ರಕಟಿಸುವ ಕ್ರಿಯೆಯನ್ನೂ ಪ್ರೀತಿ ಪ್ರೇರಿತ ಪ್ರಯಾಸವನ್ನೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿರುವ ನಿರೀಕ್ಷೆಯ ಸ್ಮರಣೆಯನ್ನೂ ನಾವು ನಮ್ಮ ತಂದೆಯಾದ ದೇವರ ಮುಂದೆ ಎಡಬಿಡದೆ ಜ್ಞಾಪಿಸಿಕೊಳ್ಳುತ್ತೇವೆ.


ಯೆಹೋವ ದೇವರ ಮೇಲೆ ನಿಮ್ಮ ಭಾರವನ್ನು ಹಾಕಿರಿ. ಅವರು ನಿಮಗೆ ಆಧಾರವಾಗಿರುವರು. ದೇವರು ಎಂದೆಂದಿಗೂ ನೀತಿವಂತನನ್ನು ಕದಲಗೊಡಿಸುವುದಿಲ್ಲ.


ನೀವು ದೇವರ ಚಿತ್ತಾನುಸಾರವಾಗಿ ಎಲ್ಲವನ್ನೂ ಮಾಡುವಂತೆ ನಿಮ್ಮನ್ನು ಸನ್ನದ್ಧರಾಗಿ ಮಾಡಲಿ. ಕ್ರಿಸ್ತ ಯೇಸುವಿನ ಶಕ್ತಿಯ ಮೂಲಕವಾಗಿ ಪ್ರತಿಯೊಂದು ಸತ್ಕಾರ್ಯಗಳನ್ನು ತಮಗೆ ಮೆಚ್ಚಿಕೆಯಾಗುವಂತೆ ನಿಮ್ಮ ಮೂಲಕವಾಗಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಯೇಸುವಿಗೆ ಮಹಿಮೆ ಉಂಟಾಗಲಿ. ಆಮೆನ್.


ನನ್ನ ಹಾಗೆಯೇ ತಿಮೊಥೆ ಕರ್ತನ ಸೇವೆ ಮಾಡುತ್ತಿದ್ದಾನೆ. ಅವನು ಬಂದರೆ, ಅವನು ನಿಮ್ಮೊಂದಿಗಿರುವಾಗ ಅವನಿಗೆ ಯಾವ ಭಯವೂ ಇಲ್ಲದಂತೆ ನೋಡಿಕೊಳ್ಳಿರಿ.


ನಮ್ಮ ಪ್ರೀತಿಯು ನಿಮ್ಮ ಕಡೆಗೆ ಸಮೃದ್ಧಿಯಾಗಿರುವಂತೆಯೇ ನಿಮ್ಮ ಪ್ರೀತಿಯೂ ಒಬ್ಬರಿಂದೊಬ್ಬರಿಗೂ ಎಲ್ಲರ ಮೇಲೆಯೂ ತುಂಬಿರುವಂತೆ ಕರ್ತ ಯೇಸು ನಿಮಗೆ ಅನುಗ್ರಹಿಸಲಿ.


ನೀವು ಕ್ರಿಸ್ತ ಯೇಸುವಿನಲ್ಲಿ ಬೇರೂರಿದವರಾಗಿಯೂ ಕಟ್ಟಲಾದವರಾಗಿಯೂ ಇದ್ದು, ನಿಮಗೆ ಬೋಧನೆ ನೀಡಿದ ಪ್ರಕಾರ ನಿಮ್ಮ ವಿಶ್ವಾಸದಲ್ಲಿ ಬಲಹೊಂದಿ ಕೃತಜ್ಞತೆಯಿಂದ ತುಂಬಿ ಪ್ರವಾಹಿಸುವವರಾಗಿರಿ.


ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.


ಪ್ರಿಯರೇ, ಇಂಥಾ ವಾಗ್ದಾನಗಳು ನಮಗಿರುವುದರಿಂದ ನಮ್ಮ ದೇಹಾತ್ಮಗಳನ್ನು ಮಲಿನಗೊಳಿಸುವ ಎಲ್ಲಾ ವಿಷಯಗಳಿಂದ ನಮ್ಮನ್ನು ಶುದ್ಧಮಾಡಿ, ದೇವರ ಮೇಲಿನ ಭಯಭಕ್ತಿಯಿಂದ ನಮ್ಮ ಪವಿತ್ರತೆಯನ್ನು ಪರಿಪೂರ್ಣಗೊಳಿಸೋಣ.


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ಕ್ರಿಸ್ತ ಯೇಸು ನಮ್ಮನ್ನು ಎಲ್ಲಾ ದುಷ್ಟತನದಿಂದ ವಿಮೋಚಿಸಿ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಂತ ಜನರನ್ನು ತಮಗಾಗಿ ಪರಿಶುದ್ಧ ಮಾಡುವಂತೆ ನಮಗೋಸ್ಕರ ತಮ್ಮನ್ನು ತಾವೇ ಒಪ್ಪಿಸಿಕೊಟ್ಟರು.


ಆದಕಾರಣ ಪ್ರಿಯ ಸ್ನೇಹಿತರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವುದರಿಂದ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಅವರಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವರಾಗಿರಿ.


ನಾನು ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನೀವು ಎಷ್ಟು ಕ್ರಮವುಳ್ಳವರೆಂಬುದನ್ನೂ, ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಶ್ವಾಸ ಎಷ್ಟು ದೃಢವಾಗಿದೆ ಎಂಬುದನ್ನೂ, ನೋಡಿ ನನಗೆ ಆನಂದವಾಗುತ್ತದೆ.


ಮೊದಲಿನಿಂದಿರುವ ನಮ್ಮ ನಿರೀಕ್ಷೆಯನ್ನು ಅಂತ್ಯದವರೆಗೂ ನಾವು ದೃಢವಾಗಿ ಹಿಡಿದುಕೊಳ್ಳುವುದಾದರೆ ಕ್ರಿಸ್ತ ಯೇಸುವಿನ ಭಾಗಿಗಳಾಗಿದ್ದೇವಲ್ಲಾ!


ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ. ಏಕೆಂದರೆ ಇವುಗಳಿಗಾಗಿಯೇ ನಾವು ನೇಮಕವಾಗಿದ್ದೇವೆ ಎಂದು ನೀವೇ ಬಲ್ಲಿರಿ.


ನಿಮ್ಮ ಪ್ರೀತಿಯು ಹೆಚ್ಚುತ್ತಾ ಜ್ಞಾನದಲ್ಲಿಯೂ ಒಳನೋಟದಲ್ಲಿಯೂ ಬಹು ಹೆಚ್ಚಾಗಿ ಸಮೃದ್ಧಿಯಾಗಲಿ.


ಪ್ರಿಯರೇ, ನಾವು ಯಾವಾಗಲೂ ನಿಮಗಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಲು ಬದ್ಧರಾಗಿದ್ದೇವೆ. ಹಾಗೆ ಮಾಡುವುದು ಯೋಗ್ಯ. ಏಕೆಂದರೆ ನಿಮ್ಮ ವಿಶ್ವಾಸವು ಹೆಚ್ಚೆಚ್ಚಾಗಿ ಅಭಿವೃದ್ಧಿಯಾಗುತ್ತಾ ಇದೆ ಮತ್ತು ಪರಸ್ಪರ ನಿಮ್ಮೆಲ್ಲರಲ್ಲಿ ಪ್ರೀತಿಯೂ ಹೆಚ್ಚುತ್ತಿದೆ.


ನಿಮ್ಮ ಸೇವಕನು ಅವುಗಳಿಂದ ಎಚ್ಚರಿಕೆ ಪಡೆಯುತ್ತಾನೆ; ಅವುಗಳನ್ನು ಕೈಗೊಳ್ಳುವುದರಲ್ಲಿ ದೊಡ್ಡ ಪ್ರತಿಫಲವುಂಟು.


ದೇವರ ಮಹಿಮೆ ಹಾಗೂ ಸ್ತೋತ್ರಕ್ಕಾಗಿ ಕ್ರಿಸ್ತ ಯೇಸುವಿನ ಮೂಲಕ ಬರುವ ನೀತಿಯ ಫಲಗಳಿಂದ ತುಂಬಿದವರಾಗಿರಬೇಕೆಂತಲೂ ಪ್ರಾರ್ಥಿಸುತ್ತೇನೆ.


ನಾನು ನಿಮ್ಮಿಂದ ದಾನವನ್ನು ನಿರೀಕ್ಷಿಸುವುದಿಲ್ಲ. ಆದರೆ ನಿಮ್ಮ ಲೆಕ್ಕಕ್ಕೆ ಲಾಭ ಹೆಚ್ಚಿಸುವುದನ್ನೇ ನೋಡುತ್ತಿದ್ದೇನೆ.


ನಾವು ನಿಮ್ಮ ಮಧ್ಯದಲ್ಲಿ ಪ್ರಯಾಸಪಟ್ಟದ್ದು ವ್ಯರ್ಥವಾಯಿತೇನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.


ರೂತಳು ತನ್ನ ಸಂಗಡ ಬರಲು ದೃಢವಾದ ಮನಸ್ಸು ಮಾಡಿಕೊಂಡಿದ್ದಾಳೆಂದು ನೊವೊಮಿ ತಿಳಿದು ಸುಮ್ಮನಾದಳು.


ಈ ಕಾರಣದಿಂದ, ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಶೋಧಿಸುವನೋ ಎಂಬ ಭಯದ ದೆಸೆಯಿಂದ, ನಾನು ಸಹ ಸಹಿಸಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವುದಕ್ಕೆ ತಿಮೊಥೆಯನನ್ನು ಕಳುಹಿಸಿದೆನು.


ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು.


ಆಗ ಅವರು ತಮ್ಮ ಪಿತೃಗಳ ಹಾಗೆ ಹಟಮಾರಿ ಮತ್ತು ದಂಗೆಕೋರ ಸಂತತಿಯವರು ಆಗಿರುವುದಿಲ್ಲ, ಅವರ ಹೃದಯವು ದೇವರಿಗೆ ಸತ್ಯವಾಗಿರಲಿಲ್ಲ, ಅವರ ಆತ್ಮವು ದೇವರಲ್ಲಿ ನಂಬಿಗಸ್ತಿಕೆಯಿಂದಲೂ ಇರಲಿಲ್ಲ.


ನನ್ನ ಹೃದಯವನ್ನು ಶುದ್ಧ ಮಾಡಿಕೊಂಡಿದ್ದು ವ್ಯರ್ಥವೋ? ನನ್ನ ಅಂಗೈಗಳನ್ನು ನಿರಪರಾಧದಲ್ಲಿ ತೊಳೆದಿದ್ದೂ ವ್ಯರ್ಥವೋ?


ಅವರ ಹೃದಯವು ದೇವರ ಸಂಗಡ ಸ್ಥಿರವಾಗಿರಲಿಲ್ಲ. ಅವರು ದೇವರ ಒಡಂಬಡಿಕೆಯಲ್ಲಿ ನಂಬಿಗಸ್ತರಾಗಿರಲಿಲ್ಲ.


ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು ಜೀವವನ್ನೂ, ನೀತಿಯನ್ನೂ, ಕೀರ್ತಿಯನ್ನೂ ಕಂಡುಕೊಳ್ಳುತ್ತಾನೆ.


ಅವರು ಈ ಪ್ರಕಾರ ನಾಲ್ಕು ಸಾರಿ ನನ್ನ ಬಳಿಗೆ ಕಳುಹಿಸಿದರು. ನಾನು ಅದೇ ಪ್ರಕಾರ ಉತ್ತರ ಕಳುಹಿಸಿದೆನು.


ಯೇಸು ಕೈಬತ್ತಿದವನಿಗೆ, “ಎದ್ದು ಮುಂದೆ ಬಾ,” ಎಂದರು.


“ಅದಕ್ಕೆ ಅವನು, ‘ನೀನು ಐದು ಪಟ್ಟಣಗಳ ಮೇಲೆ ಅಧಿಕಾರಿಯಾಗಿರು,’ ಎಂದು ಅವನಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು