Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:2 - ಕನ್ನಡ ಸಮಕಾಲಿಕ ಅನುವಾದ

2 ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಆದಾಯಕ್ಕೆ ತಕ್ಕಂತೆ ವಾರದ ಮೊದಲನೆಯ ದಿನದಲ್ಲಿ ಕೂಡಿಟ್ಟುಕೊಂಡಿರಲಿ. ಹೀಗೆ ಮಾಡಿದರೆ, ನಾನು ಬಂದಾಗ ನೀವು ಹಣ ಕೂಡಿಸುವ ಅವಶ್ಯವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದಂಥ ಸಂಪಾದನೆಯಲ್ಲಿ ಸಾಧ್ಯವಾದಷ್ಟನ್ನು ವಾರದ ಮೊದಲನೆಯ ದಿನದಲ್ಲಿ ಸಂಗ್ರಹಿಸಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು. ಇದರಿಂದ ನಾನು ಬಂದಾಗ ಹಣ ಸಂಗ್ರಹಣೆ ಮಾಡುವ ಅಗತ್ಯವಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಈ ಕಾರಣ, ನಿಮ್ಮಲ್ಲಿ ಪ್ರತಿ ಒಬ್ಬನೂ ತನ್ನ ಸಂಪಾದನೆಗೆ ತಕ್ಕಂತೆ ಸ್ವಲ್ಪ ಹಣವನ್ನು ಪ್ರತಿ ವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ ಇಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾನು ಬಂದಾಗ ಹಣ ವಸೂಲುಮಾಡಬೇಕಾದ ಅವಶ್ಯವಾಗದಂತೆ ನಿಮ್ಮಲ್ಲಿ ಪ್ರತಿಯೊಬ್ಬನು ತನಗೆ ಬಂದ ಸಂಪಾದನೆಯ ಮೇರೆಗೆ ವಾರವಾರದ ಮೊದಲನೆಯ ದಿನದಲ್ಲಿ ಗಂಟುಮಾಡಿ ತನ್ನ ಮನೆಯಲ್ಲಿಟ್ಟುಕೊಂಡಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನಿಮ್ಮಲ್ಲಿ ಪ್ರತಿಯೊಬ್ಬನು ತನಗಾದ ಅಭಿವೃದ್ಧಿಗೆ ತಕ್ಕಂತೆ ನಿಮ್ಮಿಂದ ಸಾಧ್ಯವಾದಷ್ಟು ಹಣವನ್ನು ಪ್ರತಿವಾರದ ಮೊದಲನೆಯ ದಿನವೇ ಪ್ರತ್ಯೇಕಿಸಿ, ವಿಶೇಷವಾದ ಸ್ಥಳವೊಂದರಲ್ಲಿ ಇಟ್ಟಿರಬೇಕು. ಆಗ ನಾನು ನಿಮ್ಮಲ್ಲಿಗೆ ಬಂದ ನಂತರ ಹಣವನ್ನು ಸಂಗ್ರಹಿಸುವ ಅವಶ್ಯಕತೆಯಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಹರ್ ಎಕ್ ಆಯ್ತಾರ್‍ಚೆ ತುಮ್ಚ್ಯಾತ್ಲೊ ಹರಿ ಎಕ್ಲೊ ಅಪ್ನಾಚ್ಯಾನ್ ಹೊತಾ ತೌಡೆ ಉಲ್ಲೆ ಪೈಸೆ ಕಡೆಕ್ ಕಾಡುನ್ ಥಂವ್ದಿತ್; ಅಶೆ ಮಿಯಾ ತುಮ್ಚ್ಯಾಕ್ಡೆ ಯೆಲ್ಲ್ಯಾ ತನ್ನಾ ಪೈಸೆ ಉಸುಲಿ ಕರ್‍ತಲೆ ಲಾಗಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:2
22 ತಿಳಿವುಗಳ ಹೋಲಿಕೆ  

ವಾರದ ಮೊದಲನೆಯ ದಿನ ನಾವು ರೊಟ್ಟಿ ಮುರಿಯಲು ಒಂದಾಗಿ ಕೂಡಿಬಂದೆವು. ಪೌಲನು ಅಲ್ಲಿ ಬೋಧನೆ ಮಾಡಿದನು. ಮರುದಿನ ಅವನು ಹೊರಡಬೇಕಾದ್ದರಿಂದ ಮಧ್ಯರಾತ್ರಿಯವರೆಗೆ ಮಾತನಾಡುತ್ತಲೇ ಇದ್ದನು.


“ಸ್ವಲ್ಪವಾದದ್ದರಲ್ಲಿ ನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ನಂಬಿಗಸ್ತರಾಗಿರುವರು ಮತ್ತು ಸ್ವಲ್ಪವಾದದ್ದರಲ್ಲಿ ಅಪನಂಬಿಗಸ್ತರಾಗಿರುವವರು ಬಹಳವಾದದ್ದರಲ್ಲಿಯೂ ಅಪನಂಬಿಗಸ್ತರಾಗಿರುವರು.


ನಿಮ್ಮ ದೇವರಾದ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ. ಅವರೇ ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸುವಂತೆ ಇಂದು ನೀವು ಇಷ್ಟು ಆಸ್ತಿಯನ್ನು ಸಂಪಾದಿಸುವ ಸಾಮರ್ಥ್ಯವನ್ನು ನಿಮಗೆ ಕೊಟ್ಟಿದ್ದಾರೆ.


ನಾನು ಕರ್ತ ಯೇಸುವಿನ ದಿನದಲ್ಲಿ ಆತ್ಮಭರಿತನಾಗಿರಲು ನನ್ನ ಹಿಂದೆ ತುತೂರಿಯ ಶಬ್ದದಂತಿರುವ ಮಹಾಧ್ವನಿಯನ್ನು ಕೇಳಿದೆನು.


ಅದೇ ಭಾನುವಾರದ ಸಾಯಂಕಾಲದಲ್ಲಿ ಯೆಹೂದ್ಯರ ಭಯದಿಂದ ಶಿಷ್ಯರು ಕೂಡಿದ್ದ ಮನೆಯ ಬಾಗಿಲುಗಳು ಮುಚ್ಚಿದ್ದವು. ಆಗ ಯೇಸು ಬಂದು ಅವರ ಮಧ್ಯೆ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದು ಅವರಿಗೆ ಹೇಳಿದರು.


ವಾರದ ಮೊದಲನೆಯ ದಿನದ, ಬೆಳಗಿನ ಜಾವದಲ್ಲಿ, ಆ ಸ್ತ್ರೀಯರು ಸಿದ್ಧಪಡಿಸಿದ್ದ ಪರಿಮಳ ದ್ರವ್ಯಗಳನ್ನು ತೆಗೆದುಕೊಂಡು ಸಮಾಧಿಗೆ ಹೋದರು.


ಚಾದೋಕ್ ಸಂತಾನದ ಮುಖ್ಯಯಾಜಕ ಅಜರ್ಯನು, “ಜನರು ದೇವರಾದ ಯೆಹೋವ ದೇವರಿಗೆ ಕಾಣಿಕೆಯಾಗಿ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಯೆಹೋವ ದೇವರು ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.


ಇಸಾಕನು ಆ ದೇಶದಲ್ಲಿ ಬಿತ್ತಿದ ವರ್ಷದಲ್ಲಿಯೇ ನೂರರಷ್ಟು ಬೆಳೆಯನ್ನು ಹೊಂದಿದನು. ಯೆಹೋವ ದೇವರು ಅವನನ್ನು ಆಶೀರ್ವದಿಸಿದರು.


ಎಂಟು ದಿವಸಗಳಾದ ಮೇಲೆ ಯೇಸುವಿನ ಶಿಷ್ಯರು ಪುನಃ ಮನೆಯ ಒಳಗಿದ್ದಾಗ ತೋಮನೂ ಅವರ ಸಂಗಡ ಇದ್ದನು. ಆಗ ಬಾಗಿಲುಗಳು ಮುಚ್ಚಿರಲಾಗಿ ಯೇಸು ಬಂದು ಮಧ್ಯದಲ್ಲಿ ನಿಂತು, “ನಿಮಗೆ ಸಮಾಧಾನವಾಗಲಿ!” ಎಂದರು.


ಈಕೆಯು ತನ್ನಿಂದಾದಷ್ಟು ಮಾಡಿದ್ದಾಳೆ. ನನ್ನ ಶವಸಂಸ್ಕಾರಕ್ಕಾಗಿ ಮುಂಚಿತವಾಗಿ ನನ್ನ ದೇಹವನ್ನು ಅಭಿಷೇಕಿಸಿದ್ದಾಳೆ.


ನಿನಗೋಸ್ಕರ ತಂದಿರುವ ನನ್ನ ಕಾಣಿಕೆಯನ್ನು ಸ್ವೀಕರಿಸಬೇಕೆಂದು ಬೇಡುತ್ತೇನೆ. ದೇವರು ನನ್ನೊಂದಿಗೆ ಕೃಪೆಯಿಂದ ವರ್ತಿಸಿದ್ದರಿಂದ ನನಗೆ ಬೇಕಾದಷ್ಟು ಇವೆ,” ಎಂದು ಹೇಳಿ, ಅವನನ್ನು ಬಲವಂತ ಮಾಡಿದ್ದರಿಂದ ಏಸಾವನು ಅದನ್ನು ತೆಗೆದುಕೊಂಡನು.


ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.


ನಾನು ಬರುವುದಕ್ಕಿಂತ ಮುಂಚೆ ನಿನಗಿದ್ದದ್ದು ಸ್ವಲ್ಪವೇ. ಈಗ ಅದು ಬಹಳವಾಗಿ ಹೆಚ್ಚಿದೆ. ನಾನು ಬಂದಂದಿನಿಂದ ಯೆಹೋವ ದೇವರು ನಿನ್ನನ್ನು ಆಶೀರ್ವದಿಸಿದ್ದಾರೆ. ಈಗ ನಾನು ನನ್ನ ಸ್ವಂತ ಮನೆಗೋಸ್ಕರ ಯಾವಾಗ ಸಂಪಾದಿಸಲಿ?” ಎಂದನು.


ಲಾಬಾನನು ಅವನಿಗೆ, “ನಾನು ನಿನ್ನ ದೃಷ್ಟಿಯಲ್ಲಿ ದಯೆ ಹೊಂದಿದವನಾಗಿದ್ದರೆ, ನನ್ನ ಬಳಿಯಲ್ಲಿಯೇ ಇರು. ಏಕೆಂದರೆ ಯೆಹೋವ ದೇವರು ನಿನಗೋಸ್ಕರ ನನ್ನನ್ನು ಆಶೀರ್ವದಿಸಿದ್ದಾರೆಂದು ನಾನು ಭವಿಷ್ಯಜ್ಞಾನ ಅನುಭವದಿಂದ ಕಲಿತುಕೊಂಡಿದ್ದೇನೆ.


ಈ ವಿಷಯದಲ್ಲಿ ನನ್ನ ಸಲಹೆ ಏನೆಂದರೆ, ಕಳೆದ ವರ್ಷದಲ್ಲಿ ಮೊದಲು ನೀವೇ ಈ ಕಾರ್ಯವನ್ನು ಪ್ರಾರಂಭಿಸಿದ್ದಲ್ಲದೇ ಇದನ್ನು ಮಾಡಬೇಕೆಂದು ಬಯಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು