Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 16:7 - ಕನ್ನಡ ಸಮಕಾಲಿಕ ಅನುವಾದ

7 ನಾನು ಹಾದುಹೋಗುವಾಗ, ನಿಮ್ಮನ್ನು ಸ್ವಲ್ಪ ಸಮಯ ಮಾತ್ರ ಸಂದರ್ಶಿಸುವುದಕ್ಕೆ ನನಗೆ ಇಷ್ಟವಿಲ್ಲ. ಕರ್ತನು ಅನುಮತಿಸಿದರೆ, ನಿಮ್ಮ ಬಳಿಯಲ್ಲಿ ಬಂದು ಹೆಚ್ಚುಕಾಲ ಇರುವೆನೆಂದು ನಿರೀಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾನು ಹಾದುಹೋಗುವ ಈ ಸ್ವಲ್ಪ ಸಮಯದಲ್ಲಿ ನಿಮ್ಮನ್ನು ನೋಡಲು ಬಯಸುವುದಿಲ್ಲ. ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ತಂಗಲು ಬಯಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಯಾಣದ ನಡುವೆ ನಿಮ್ಮನ್ನು ನೋಡಿ ಹೋಗಲು ನನಗೆ ಇಷ್ಟವಿಲ್ಲ. ಪ್ರಭುವಿನ ಚಿತ್ತವಾದರೆ, ಕೊಂಚಕಾಲವಾದರೂ ನಿಮ್ಮೊಡನೆ ಕಾಲಕಳೆಯಬೇಕೆಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಈ ಸಮಯದಲ್ಲಿ ಹೋಗುಹೋಗುತ್ತಾ ನಿಮ್ಮನ್ನು ನೋಡುವದಕ್ಕೆ ನನಗೆ ಇಷ್ಟವಿಲ್ಲ; ಕರ್ತನ ಅಪ್ಪಣೆಯಾದರೆ ನಿಮ್ಮ ಬಳಿಯಲ್ಲಿ ಕೆಲವು ಕಾಲ ಇರುವೆನೆಂದು ನಿರೀಕ್ಷಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಈಗ ನಿಮ್ಮ ಬಳಿಗೆ ಬರಲು ನನಗೆ ಇಷ್ಟವಿಲ್ಲ. ಏಕೆಂದರೆ ನಾನು ಬೇರೆ ಸ್ಥಳಗಳಿಗೆ ಹೋಗಬೇಕಾಗಿರುವುದರಿಂದ ನಿಮ್ಮೊಂದಿಗೆ ಬಹಳ ಕಾಲವಿರಲು ಸಾಧ್ಯವಿಲ್ಲ. ಪ್ರಭುವು ಅವಕಾಶಕೊಡುವುದಾದರೆ, ನಾನು ನಿಮ್ಮೊಂದಿಗೆ ದೀರ್ಘಕಾಲ ತಂಗುವ ನಿರೀಕ್ಷೆಯಿಂದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅತ್ತಾ ಮಿಯಾ ವಾಟೆರ್ ಜಾವ್ನಗೆತ್ ಹಾಂವ್ ಮನ್ತಾನಾ ತುಮ್ಕಾ ಭೆಟುಕ್ ಮಾಕಾ ಮನ್ ನಾ. ಧನಿಯಾಚಿ ಕುಶಿ ರ್‍ಹಾಲ್ಯಾರ್ ಎಕ್ ಉಲ್ಲೊ ಎಳ್ ತುಮ್ಚ್ಯಾ ವಾಂಗ್ಡಾ ರ್‍ಹಾವ್ಚೆ ಮನ್ತಲಿ ಮಾಜಿ ಆಶಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 16:7
8 ತಿಳಿವುಗಳ ಹೋಲಿಕೆ  

ಆದರೆ ಅವನು ಅಲ್ಲಿಂದ ಹೊರಟು ಹೋಗಲಿಕ್ಕಿದ್ದಾಗ, “ದೇವರ ಚಿತ್ತವಾದರೆ, ನಾನು ಹಿಂದಿರುಗಿ ಬರುವೆ,” ಎಂದನು. ಆಮೇಲೆ ಎಫೆಸದಿಂದ ನೌಕೆಯಲ್ಲಿ ಪ್ರಯಾಣಮಾಡಿದನು.


ಆದ್ದರಿಂದ, “ಕರ್ತದೇವರ ಚಿತ್ತವಾದರೆ ನಾವು ಬದುಕಿ ಈ ಕೆಲಸವನ್ನಾಗಲಿ, ಆ ಕೆಲಸವನ್ನಾಗಲಿ ಮಾಡುವೆವು!” ಎಂದು ನೀವು ಹೇಳುವುದೇ ಸರಿ.


ಆದರೆ ಕರ್ತದೇವರ ಚಿತ್ತವಿದ್ದರೆ, ನಾನು ಬೇಗ ನಿಮ್ಮ ಬಳಿಗೆ ಬಂದು, ಅಹಂಕಾರಿಗಳ ಮಾತನ್ನಲ್ಲ, ಅವರಿಗೆ ಎಷ್ಟು ಶಕ್ತಿ ಇದೆ ಎಂಬುವುದನ್ನು ಕಂಡುಕೊಳ್ಳುವೆನು.


ಈ ಭರವಸೆಯಿಂದ, ನಾನು ನಿಮ್ಮನ್ನು ಮೊದಲು ಸಂದರ್ಶಿಸಿ, ನಿಮಗೆ ಎರಡರಷ್ಟು ಉಪಯುಕ್ತತೆಯನ್ನು ಹೊಂದುವಂತೆ ಯೋಚನೆ ಮಾಡಿದ್ದೆನು.


ನಾನು ಪ್ರಾರ್ಥನೆ ಮಾಡುವಾಗಲೆಲ್ಲಾ ತಪ್ಪದೆ ನಿಮಗೋಸ್ಕರ ವಿಜ್ಞಾಪನೆ ಮಾಡುತ್ತಾ ಇನ್ನು ಮೇಲಾದರೂ ನಿಮ್ಮ ಬಳಿಗೆ ಬರುವುದಕ್ಕೆ ದೇವರ ಚಿತ್ತದಿಂದ ನನಗೆ ಯಾವ ರೀತಿಯಲ್ಲಾದರೂ ಅನುಕೂಲವಾಗಬೇಕೆಂದು ಬೇಡಿಕೊಳ್ಳುತ್ತೇನೆ.


ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ, ತನ್ನ ಹೆಜ್ಜೆ ನೆಟ್ಟಗೆ ಮಾಡುವುದು ನಡೆಯುವ ಮನುಷ್ಯನದ್ದಲ್ಲವೆಂದೂ ಬಲ್ಲೆನು.


ಮನುಷ್ಯನ ಹೃದಯದಲ್ಲಿ ಅನೇಕ ಯೋಜನೆಗಳಿವೆ; ಆದರೂ ಯೆಹೋವ ದೇವರ ಸಂಕಲ್ಪವೇ ಈಡೇರುವುದು.


ಯೇಸು ಉತ್ತರವಾಗಿ, “ಸದ್ಯಕ್ಕೆ ಒಪ್ಪಿಕೋ, ಹೀಗೆ ನಾವು ಸಕಲ ನೀತಿಯನ್ನೂ ನೆರವೇರಿಸಬೇಕಾಗಿದೆ,” ಎಂದು ಹೇಳಿದಾಗ, ಯೋಹಾನನು ಒಪ್ಪಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು