Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 2:3 - ಕನ್ನಡ ಸಮಕಾಲಿಕ ಅನುವಾದ

3 ನಾನು ನಿಮ್ಮ ಬಳಿಗೆ ಬಂದಾಗ ಬಲಹೀನನೂ ಬಹಳವಾಗಿ ಭಯಪಟ್ಟು ನಡುಗುವವನೂ ಆಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ, ಭಯಪಡುವವನೂ, ಬಹು ನಡುಗುವವನೂ ಆಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಈ ಕಾರಣ, ನಾನು ನಿಮ್ಮ ನಡುವೆ ದುರ್ಬಲನೂ ಭಯಭೀತನೂ ಆಗಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ ಭಯಪಡುವವನೂ ಬಹು ನಡುಗುವವನೂ ಆಗಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನಿಮ್ಮ ಬಳಿಗೆ ಬಂದಿದ್ದಾಗ ಬಲಹೀನನಾಗಿದ್ದೆನು; ಭಯದಿಂದ ನಡುಗುತ್ತಿದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತೆಚೆಸಾಟ್ನಿ ಮಿಯಾ ತುಮ್ಚ್ಯಾ ಮದ್ದಿ ಯೆಲ್ಲ್ಯಾ ತನ್ನಾ ಬಳ್ ನತ್ತೊ ಸರ್ಕೊ ಹೊತ್ತೊ ಅನಿ ಭಿಂಯಾನ್ ಘಾಬರಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 2:3
22 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸು ಬಲಹೀನತೆಯಲ್ಲಿ ಶಿಲುಬೆಗೆ ಹಾಕಲಾದರು ನಿಜ. ಆದರೆ ಅವರು ದೇವರ ಶಕ್ತಿಯಿಂದ ಜೀವಿಸುತ್ತಿದ್ದಾರೆ. ನಾವು ಸಹ ಬಲಹೀನತೆಯುಳ್ಳವರಾಗಿದ್ದೇವೆ. ಆದರೆ ನಾವು ನಿಮ್ಮ ಸೇವೆ ಮಾಡುವಂತೆ, ನಾವು ಕ್ರಿಸ್ತ ಯೇಸುವಿನೊಂದಿಗೆ ದೇವರ ಶಕ್ತಿಯಿಂದ ಬದುಕುತ್ತಿದ್ದೇವೆ.


ನಾವು ಬಲಹೀನರಾಗಿದ್ದರೂ, ನೀವು ಬಲಿಷ್ಠರಾಗಿದ್ದಿರೆಂದು ತಿಳಿದು ಆನಂದಪಡುತ್ತೇವೆ. ನೀವು ಪರಿಪೂರ್ಣರಾಗಬೇಕೆಂದೇ ನಾವು ಪ್ರಾರ್ಥಿಸುತ್ತೇವೆ.


“ಅವನ ಪತ್ರಗಳು ತೀಕ್ಷ್ಣವಾಗಿಯೂ ಶಕ್ತಿಯುತವಾಗಿಯೂ ಇವೆ. ಆದರೆ ಅವನು ಎದುರು ಬಂದಾಗ ನಿರ್ಬಲನೂ ಕೆಲಸಕ್ಕೆ ಬಾರದ ಮಾತುಗಳನ್ನಾಡುವವನೂ ಆಗಿದ್ದಾನೆ,” ಎಂದು ಕೆಲವರು ಹೇಳುತ್ತಾರೆ.


ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ಅದಕ್ಕೆ ಬದಲಾಗಿ, ಸರ್ವ ವಿಷಯಗಳಲ್ಲಿ ನಾವು ದೇವರ ಸೇವಕರಾಗಿದ್ದೇವೆಂದು ತೋರಿಸುತ್ತೇವೆ. ಕಷ್ಟ, ಸಂಕಟ ತೊಂದರೆಗಳಲ್ಲಿ ಮಹಾ ದೀರ್ಘತಾಳ್ಮೆಯನ್ನು ತೋರಿಸುತ್ತೇವೆ.


ಆದ್ದರಿಂದ ನಾವು ಅಧೈರ್ಯಪಡುವುದಿಲ್ಲ. ನಮ್ಮ ಹೊರಗಿನ ಮನುಷ್ಯ ಕ್ಷಯಿಸುತ್ತಿದ್ದರೂ ನಮ್ಮ ಆಂತರ್ಯ ಮನುಷ್ಯ ಅನುದಿನವೂ ನೂತನವಾಗುತ್ತಿದೆ.


ದೇವರ ಕರುಣೆಯ ನಿಮಿತ್ತ ನಾವು ಈ ಸೇವೆಯನ್ನು ಹೊಂದಿರುವುದರಿಂದ ನಾವು ಧೈರ್ಯಗೆಡುವವರಲ್ಲ.


ಗಲ್ಲಿಯೋನ ಎಂಬುವನು ಅಖಾಯದ ರಾಜ್ಯಪಾಲನಾಗಿದ್ದನು. ಯೆಹೂದ್ಯರು ಒಟ್ಟುಗೂಡಿ ಪೌಲನನ್ನು ವಿರೋಧಿಸಿ, ಅವನನ್ನು ನ್ಯಾಯಸ್ಥಾನಕ್ಕೆ ಕರೆದುಕೊಂಡು ಬಂದು,


ಆದರೆ ಯೆಹೂದ್ಯರು ಪೌಲನನ್ನು ವಿರೋಧಿಸಿ ದೂಷಿಸಿದಾಗ, ಅವನು ಅವರನ್ನು ಪ್ರತಿಭಟಿಸುವಂತೆ ತನ್ನ ಬಟ್ಟೆಗಳನ್ನು ಝಾಡಿಸಿ, “ನಿಮ್ಮ ರಕ್ತವು ನಿಮ್ಮ ತಲೆಯ ಮೇಲೆ ಇರಲಿ. ನಿಮ್ಮ ವಿನಾಶಕ್ಕೆ ನೀವೇ ಹೊಣೆ. ಅದಕ್ಕೆ ನಾನು ಜವಾಬ್ದಾರನಲ್ಲ, ಇಂದಿನಿಂದ ನಾನು ಶುದ್ಧಮನಸ್ಸುಳ್ಳವನಾಗಿ ಯೆಹೂದ್ಯರಲ್ಲದವರ ಬಳಿಗೆ ಹೋಗುತ್ತೇನೆ,” ಎಂದನು.


ನಾವು ಮಕೆದೋನ್ಯಕ್ಕೆ ಬಂದಿದ್ದಾಗ ನಮ್ಮ ದೇಹಕ್ಕೆ ವಿಶ್ರಾಂತಿ ದೊರೆಯಲಿಲ್ಲ. ಎಲ್ಲಾ ವಿಧದಲ್ಲಿಯೂ ಒತ್ತಡಗಳು: ಹೊರಗೆ ಹೋರಾಟ, ಒಳಗೆ ಅಂಜಿಕೆ.


ಅವರು ಅಂಫಿಪೊಲಿ ಮತ್ತು ಅಪೊಲೋನ್ಯ ಮಾರ್ಗವಾಗಿ ಥೆಸಲೋನಿಕಕ್ಕೆ ಬಂದರು. ಅಲ್ಲಿ ಯೆಹೂದ್ಯರ ಒಂದು ಸಭಾಮಂದಿರವಿತ್ತು.


ಇದಾದನಂತರ, ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥ ಪಟ್ಟಣಕ್ಕೆ ಹೋದನು.


ಆ ದಿನದಲ್ಲಿ ಈಜಿಪ್ಟಿನವರು ಹೆಂಗಸರ ಹಾಗೆ ಇರುವರು. ಸೇನಾಧೀಶ್ವರ ಯೆಹೋವ ದೇವರು ಅದರ ಮೇಲೆ ಎತ್ತಿದ ಕೈಯನ್ನು ಬೀಸುತ್ತಿರುವುದರಿಂದ ಅವರು ಹೆದರಿ ಭಯಪಡುವರು.


ನೀವು ತೀತನ ಮಾತುಗಳಿಗೆ ವಿಧೇಯರಾಗಿದ್ದುದ್ದನ್ನೂ ಅವನನ್ನು ಭಯಭಕ್ತಿಯಿಂದಲೂ ನಡುಗುವಿಕೆಯಿಂದಲೂ ಸ್ವೀಕರಿಸಿದ್ದನ್ನೂ, ಅವನು ಜ್ಞಾಪಕಕ್ಕೆ ತಂದುಕೊಂಡಾಗ, ನಿಮ್ಮನ್ನು ಅತ್ಯಧಿಕವಾಗಿ ಪ್ರೀತಿಸುವವನಾಗಿದ್ದಾನೆ.


ಸೇವಕರೇ, ಭಯಭಕ್ತಿಯಿಂದಲೂ ಸರಳ ಹೃದಯದಿಂದ ಕ್ರಿಸ್ತನಿಗೆ ವಿಧೇಯರಾಗುವ ಪ್ರಕಾರ ಲೌಕಿಕವಾಗಿ ನಿಮ್ಮ ಯಜಮಾನನಾಗಿರುವವರಿಗೆ ವಿಧೇಯರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು