Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:10 - ಕನ್ನಡ ಸಮಕಾಲಿಕ ಅನುವಾದ

10 ದೇವರು ನನಗೆ ಕೊಟ್ಟ ಕೃಪೆಗೆ ಅನುಸಾರವಾಗಿ, ನಾನು ಜ್ಞಾನಿಯಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ಪ್ರತಿಯೊಬ್ಬನೂ ತಾನು ಅದರ ಮೇಲೆ ಎಷ್ಟು ಶ್ರದ್ಧೆಯಿಂದ ಕಟ್ಟುತ್ತಾನೆಂದು ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದೇವರು ನನಗೆ ಕೊಟ್ಟ ಕೃಪೆಯ ಪ್ರಕಾರ ನಾನು ಜಾಣ್ಮೆಯುಳ್ಳ ಪ್ರವೀಣನಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ತಾನು ಅದರ ಮೇಲೆ ಹೇಗೆ ಕಟ್ಟುತ್ತಿದ್ದೇನೆಂದು ಪ್ರತಿಯೊಬ್ಬನು ಎಚ್ಚರಿಕೆಯಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ದೇವರು ನನಗಿತ್ತ ವರದಾನಗಳಿಗೆ ಅನುಸಾರವಾಗಿ ನಾನು ಚತುರಶಿಲ್ಪಿಯಂತೆ ಅಸ್ತಿವಾರ ಹಾಕಿದೆ. ಇನ್ನೊಬ್ಬನು ಅದರ ಮೇಲೆ ಕಟ್ಟುತ್ತಿದ್ದಾನೆ. ಆದರೆ ಕಟ್ಟುವ ಪ್ರತಿಯೊಬ್ಬನು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದೇವರು ನನಗೆ ಕೃಪೆಯಿಂದ ಒಪ್ಪಿಸಿದ ಕೆಲಸವನ್ನು ನಡಿಸಿ ನಾನು ಪ್ರವೀಣಶಿಲ್ಪಿಯಂತೆ ಅಸ್ತಿವಾರ ಹಾಕಿದೆನು, ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಪ್ರತಿಯೊಬ್ಬನು ತಾನು ಅದರ ಮೇಲೆ ಎಂಥದನ್ನು ಕಟ್ಟುತ್ತಾನೋ ಎಚ್ಚರಿಕೆಯಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದೇವರು ನನಗೆ ಕೊಟ್ಟ ವರದಾನಗಳನ್ನು ಉಪಯೋಗಿಸಿ ಚತುರ ಶಿಲ್ಪಿಯಂತೆ ನಾನು ಆ ಮನೆಗೆ ಅಸ್ತಿವಾರವನ್ನು ಹಾಕಿದೆನು. ಇತರ ಜನರು ಆ ಅಸ್ತಿವಾರದ ಮೇಲೆ ಕಟ್ಟುತ್ತಿದ್ದಾರೆ. ಆದರೆ ಪ್ರತಿಯೊಬ್ಬ ವ್ಯಕ್ತಿಯು ತಾನು ಹೇಗೆ ಕಟ್ಟುತ್ತಿದ್ದಾನೆ ಎಂಬುದರ ಬಗ್ಗೆ ಎಚ್ಚರದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದೆವಾನ್ ಮಾಕಾ ದಿಲ್ಲ್ಯಾ ಕುರ್ಪೆಚ್ಯಾ ವೈನಾ, ಮಿಯಾ ಎಕ್ ಶಾನ್ಯಾ ಭಾಂದ್ಪ್ಯಾಚ್ಯಾ ಸಾರ್ಕೆ ಪಾಯಾ ಘಾಟ್ಲಾ ಅನಿ ತೆಚ್ಯಾ ವೈರ್ ದುಸ್ರೊ ಎಕ್ಲೊ ಘರ್ ಭಾಂದುಲ್ಲಾ, ಖರೆ ಹರಿ ಎಕ್ಲೊ ಅಪ್ನಿ ಕಶೆ ಭಾಂದುಲ್ಲಾ ತೆಚ್ಯಾ ವಿಶಯಾತ್ ಕಾಳ್ಜಿ ಘೆವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:10
37 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವೆಂಬ ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.


ಕ್ರಿಸ್ತ ಯೇಸು ಎಂಬ ಮುಖ್ಯ ಮೂಲೆಗಲ್ಲಿನೊಂದಿಗೆ ಅಪೊಸ್ತಲರು ಹಾಗೂ ಪ್ರವಾದಿಗಳೆಂಬ ಅಸ್ತಿವಾರದ ಮೇಲೆ ನೀವು ಕಟ್ಟಲಾಗಿದ್ದೀರಿ.


ಬೇರೊಬ್ಬರು ಹಾಕಿರುವ ಅಸ್ತಿವಾರದ ಮೇಲೆ ನಾನು ಕಟ್ಟಬಾರದೆಂದು, ಕ್ರಿಸ್ತನ ಹೆಸರು ತಿಳಿಯಪಡಿಸದೆ ಇರುವಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಆತುರದಿಂದ ಹೋರಾಡುತ್ತಿದ್ದೇನೆ.


ಜ್ಞಾನಿಗಳಾದವರು ಆಕಾಶದ ಕಾಂತಿಯ ಹಾಗೆಯೂ, ಅನೇಕರನ್ನು ನೀತಿಯ ಕಡೆಗೆ ತಿರುಗಿಸುವರು, ನಕ್ಷತ್ರಗಳ ಹಾಗೆ ಎಂದೆಂದಿಗೂ ಪ್ರಕಾಶಿಸುವರು, ನಿತ್ಯ ಅವಮಾನವನ್ನು ಅನುಭವಿಸುವರು.


“ಹಾಗಾದರೆ ತನ್ನ ಮನೆಯಲ್ಲಿದ್ದವರಿಗೆ ತಕ್ಕ ಕಾಲದಲ್ಲಿ ಆಹಾರ ಕೊಡುವಂತೆ ಅವರ ಮೇಲೆ ತನ್ನ ಯಜಮಾನನು ನೇಮಿಸಿದ ನಂಬಿಗಸ್ತನೂ ಜ್ಞಾನಿಯೂ ಆಗಿರುವ ಸೇವಕನು ಯಾರು?


ಪಟ್ಟಣದ ಗೋಡೆಯು ಮತ್ತು ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತ, ಎರಡನೆಯದು ವೈಡೂರ್ಯ, ಮೂರನೆಯದು ಪಚ್ಚೆ, ನಾಲ್ಕನೆಯದು ಪದ್ಮರಾಗ,


ಇತರರಿಗೆ ನಾನು ಅಪೊಸ್ತಲನಲ್ಲದಿದ್ದರೂ ನಿಮಗೆ ನಾನು ಅಪೊಸ್ತಲನಾಗಿದ್ದೇನೆ! ನನ್ನ ಅಪೊಸ್ತಲ ಸೇವೆಯ ಮುದ್ರೆಯು ಕರ್ತ ದೇವರಲ್ಲಿ ನೀವೇ ಆಗಿದ್ದೀರಷ್ಟೇ.


“ಆದ್ದರಿಂದ ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ಮಾಡುವ ಪ್ರತಿಯೊಬ್ಬನೂ ಬಂಡೆಯ ಮೇಲೆ ತನ್ನ ಮನೆಯನ್ನು ಕಟ್ಟಿದ ಬುದ್ಧಿವಂತನಿಗೆ ಸಮಾನ.


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ನೀನು ನಾಚಿಕೆಗೆ ಒಳಪಡದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಬೋಧಿಸುವವನೂ ಆಗಿರುವಂತೆ ನಿನ್ನನ್ನು ದೇವರಿಗೆ ಮೆಚ್ಚಿಕೆಯಾದವನಾಗಿರಲು ಸಮರ್ಪಿಸಲು ಅತ್ಯಂತ ಆಸಕ್ತನಾಗಿರು.


ಅರ್ಖಿಪ್ಪನಿಗೆ, “ನೀನು ಕರ್ತ ಯೇಸುವಿನಿಂದ ಹೊಂದಿರುವ ಸೇವೆಯನ್ನು ನೆರವೇರಿಸುವುದಕ್ಕೆ ಎಚ್ಚರವಾಗಿರಬೇಕು!” ಎಂದು ಹೇಳಿರಿ.


ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ಅಪೊಲ್ಲೋಸನು ಅಖಾಯಕ್ಕೆ ಹೋಗಲು ಬಯಸಿದಾಗ, ಸಹೋದರರು ಅವನನ್ನು ಪ್ರೋತ್ಸಾಹಿಸಿ, ಅವನನ್ನು ಸ್ವೀಕರಿಸುವಂತೆ ಅಲ್ಲಿಯ ಶಿಷ್ಯರಿಗೆ ಪತ್ರವನ್ನು ಬರೆದುಕೊಟ್ಟರು. ಅವನು ಅಲ್ಲಿಗೆ ತಲುಪಿದಾಗ ದೇವರ ಕೃಪೆಯಿಂದ ವಿಶ್ವಾಸವಿಟ್ಟವರಿಗೆ ಅವನು ಬಹಳ ಸಹಾಯಮಾಡಿದನು.


ಆದ್ದರಿಂದ, ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ.


ಇದಲ್ಲದೆ ಜ್ಞಾನವಂತ ಪ್ರಸಂಗಿಯು ಇನ್ನೂ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು. ಅನೇಕ ಜ್ಞಾನೋಕ್ತಿಗಳನ್ನು ಅವನು ಪರೀಕ್ಷಿಸಿ, ವಿಚಾರಿಸಿ ಕ್ರಮಪಡಿಸಿದನು.


ನನ್ನ ಪ್ರಿಯರೇ, ಬೋಧಕರಾದ ನಮಗೆ ದೊಡ್ಡ ದಂಡನೆಯಾಗುವುದೆಂದು ತಿಳಿದುಕೊಂಡು ಬಹುಮಂದಿ ಬೋಧಕರಾಗಬೇಡಿರಿ.


ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.


ನನ್ನಲ್ಲಿ ಬಲದಿಂದ ಕಾರ್ಯ ಮಾಡುವ ಕ್ರಿಸ್ತನ ಶಕ್ತಿಗೆ ಅನುಸಾರವಾಗಿ, ನಾನೂ ಸಹ ಪ್ರಯಾಸ ಪಡುತ್ತಾ ಈ ಗುರಿಗಾಗಿ ಹೋರಾಡುತ್ತೇನೆ.


ನಾನು ನಿಮಗೆ ಕೆಲವು ವಿಷಯಗಳನ್ನು ಜ್ಞಾಪಕ ಪಡಿಸುವುದಕ್ಕಾಗಿ ಬಹಳ ಧೈರ್ಯದಿಂದ ಹೀಗೆ ಬರೆದಿದ್ದೇನೆ.


ಅದಕ್ಕೆ ಯೇಸು, “ನೀವು ಮೋಸಹೋಗದಂತೆ ಎಚ್ಚರಿಕೆಯಾಗಿರಿ. ಅನೇಕರು ನನ್ನ ಹೆಸರಿನಲ್ಲಿ ಬಂದು, ‘ನಾನೇ ಅವರು,’ ಎಂದೂ ‘ಸಮಯ ಸಮೀಪಿಸಿದೆ,’ ಎಂದೂ ಹಕ್ಕು ಸಾಧಿಸುವರು. ನೀವು ಅವರನ್ನು ಹಿಂಬಾಲಿಸಬೇಡಿರಿ.


“ಜೆರುಬ್ಬಾಬೆಲನ ಕೈಗಳು ಈ ಆಲಯದ ಅಸ್ತಿವಾರವನ್ನು ಹಾಕಿವೆ, ಅವನ ಕೈಗಳೇ ಅದನ್ನು ಪೂರೈಸುವುವು. ಆಗ ಸರ್ವಶಕ್ತರಾದ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆಂದು ತಿಳಿಯುವಿರಿ.


ಇದಲ್ಲದೆ ಹೀರಾಮನು, “ಯೆಹೋವ ದೇವರಿಗೋಸ್ಕರ ಆಲಯವನ್ನೂ ತನ್ನ ರಾಜ್ಯಕ್ಕೋಸ್ಕರ ಅರಮನೆಯನ್ನೂ ಕಟ್ಟಿಸುವುದಕ್ಕೆ ಅರಸನಾದ ದಾವೀದನಿಗೆ ಬುದ್ಧಿ ವಿವೇಚನೆಯುಳ್ಳ ಒಬ್ಬ ಮಗನನ್ನು ಕೊಟ್ಟಿದ್ದಾರೆ; ಆಕಾಶವನ್ನೂ ಭೂಮಿಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ.


ಪಟ್ಟಣದ ಗೋಡೆಗೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಕುರಿಮರಿಯಾದವರ ಹನ್ನೆರಡು ಜನ ಅಪೊಸ್ತಲರ ಹೆಸರುಗಳಿದ್ದವು.


ಬೇರೆಯವರು ಮಾಡಿದ ಪ್ರಯಾಸದ ಫಲಕ್ಕಾಗಿ, ನಾವು ಮೇರೆ ತಪ್ಪಿ ಹೊಗಳಿಕೊಳ್ಳುವವರಲ್ಲ. ಆದರೆ ನಿಮ್ಮ ವಿಶ್ವಾಸವು ವೃದ್ಧಿಯಾದಂತೆ, ನಿಮ್ಮ ಮಧ್ಯೆ ನಮ್ಮ ಸೇವಾಕ್ಷೇತ್ರವು ಅಧಿಕವಾಗಿ ವಿಸ್ತಾರವಾಗಬೇಕೆಂದು ನಿರೀಕ್ಷಿಸುತ್ತೇವೆ.


ಜ್ಞಾನ ಎಂಬಾಕೆಯು ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ; ಆಕೆಯು ತನ್ನ ಏಳು ಕಂಬಗಳನ್ನು ಕೆತ್ತಿಸಿದ್ದಾಳೆ.


ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.


ನಮ್ಮ ಕರ್ತದೇವರ ದೀರ್ಘಶಾಂತಿಯು ನಮ್ಮ ರಕ್ಷಣೆಯ ಕಾರಣಕ್ಕಾಗಿ ಇದೆ ಎಂದು ಎಣಿಸಿಕೊಳ್ಳಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.


ಆಗ ಪರಿಶುದ್ಧಸ್ಥಳದ ಕೆಲಸವನ್ನು ಮಾಡುವ ಜ್ಞಾನಿಗಳೆಲ್ಲರೂ ತಮ್ಮ ತಮ್ಮ ಕೆಲಸವನ್ನು ಬಿಟ್ಟು ಬಂದು,


ತನ್ನ ಜ್ಞಾನಕ್ಕನುಸಾರವಾಗಿ ಮನುಷ್ಯನು ಗೌರವ ಹೊಂದುವನು; ವಕ್ರಹೃದಯವುಳ್ಳವನು ಕಡೆಗಣಿಸಲಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು