Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:12 - ಕನ್ನಡ ಸಮಕಾಲಿಕ ಅನುವಾದ

12 ಯಾವನಾದರೂ ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಕಟ್ಟಿಗೆ, ಹುಲ್ಲು ಅಥವಾ ಜೊಂಡು ಮುಂತಾದವುಗಳಿಂದ ಕಟ್ಟಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನಗಳು, ಕಟ್ಟಿಗೆ, ಹುಲ್ಲು, ಆಪು ಮುಂತಾದವುಗಳಲ್ಲಿ ಯಾವುದರಿಂದ ಕಟ್ಟಿದರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಈ ಅಸ್ತಿವಾರದ ಮೇಲೆ ಕೆಲವರು ಚಿನ್ನ, ಬೆಳ್ಳಿ, ರತ್ನ - ಇವುಗಳನ್ನು ಉಪಯೋಗಿಸ ಕಟ್ಟುತ್ತಾರೆ. ಮತ್ತೆ ಕೆಲವರು ಹುಲ್ಲು, ಕಟ್ಟಿಗೆ, ಜೊಂಡು - ಇವುಗಳನ್ನು ಬಳಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಆ ಅಸ್ತಿವಾರದ ಮೇಲೆ ಚಿನ್ನ ಬೆಳ್ಳಿ ರತ್ನ ಕಟ್ಟಿಗೆ ಹುಲ್ಲು ಆಪು ಮುಂತಾದವುಗಳಲ್ಲಿ ಯಾವದರಿಂದ ಕಟ್ಟಿದರೂ ಅವನವನ ಕೆಲಸವು ವ್ಯಕ್ತವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಒಬ್ಬ ವ್ಯಕ್ತಿಯು ಆ ಅಸ್ತಿವಾರದ ಮೇಲೆ ಚಿನ್ನ, ಬೆಳ್ಳಿ, ರತ್ನ, ಮರ, ಹುಲ್ಲು ಮತ್ತು ಜೊಂಡುಗಳಿಂದ ಕಟ್ಟಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಉಲ್ಲೆ ಜಾನಾ ಸೊನೆ, ನಾ ಹೊಲ್ಯಾರ್ ಚಾಂದಿ, ನಾ ಹೊಲ್ಯಾರ್ ಲೈ ಕಿಮ್ತಿಚೆ ಗುಂಡೆ ಹ್ಯಾ ಪಾಯಾಚ್ಯಾ ವೈರ್ ಭಾಂದಾಪ್ ಭಾಂದುಕ್ ವಾಪರ್ತಾತ್ ಅನಿ ಉಲ್ಲೆ ಜಾನಾ ನಾಕುಡ್, ನಾ ಜಾಲ್ಯಾರ್ ಗವಾತ್, ನಾ ಜಾಲ್ಯಾರ್ ಬಾರಿಕ್ ಝಾಡ್ ವಾಪರ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:12
33 ತಿಳಿವುಗಳ ಹೋಲಿಕೆ  

ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.


ಇಂಥ ಸ್ತ್ರೀಯರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಜ್ಞಾನಕ್ಕೆ ಬರಲಾರದವರು ಆಗಿರುವರು.


ದೊಡ್ಡ ಮನೆಯಲ್ಲಿ ಬೆಳ್ಳಿಬಂಗಾರದ ಪಾತ್ರೆಗಳಲ್ಲದೆ ಮರದ ಹಾಗೂ ಮಣ್ಣಿನ ಪಾತ್ರೆಗಳೂ ಇರುತ್ತವೆ. ಕೆಲವು ವಿಶೇಷ ಉದ್ದೇಶಗಳಿಗಾಗಿಯೂ ಕೆಲವು ಸಾಮಾನ್ಯ ಉಪಯೋಗಕ್ಕಾಗಿಯೂ ಇರುತ್ತವೆ.


ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲಾಗಿತ್ತು. ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.


ನೀನು ಸಿರಿವಂತನಾಗುವಂತೆ ಬೆಂಕಿಯಲ್ಲಿ ಪುಟಕ್ಕೆ ಹಾಕಿದ ಚಿನ್ನವನ್ನೂ ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳಿ ವಸ್ತ್ರಗಳನ್ನೂ ಕಣ್ಣು ಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಮುಲಾಮನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಸಾವಿರಾರು ಬೆಳ್ಳಿಬಂಗಾರ ನಾಣ್ಯಗಳಿಗಿಂತಲೂ ನಿಮ್ಮ ಬಾಯಿಯ ನಿಯಮವು ನನಗೆ ಹೆಚ್ಚು ಅಮೂಲ್ಯವಾದದ್ದಾಗಿದೆ.


ಅವು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ಅಮೂಲ್ಯವಾಗಿವೆ; ಅವು ಜೇನಿಗಿಂತಲೂ, ಅಪ್ಪಟ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.


ಆದರೂ ನಿನಗೆ ವಿರೋಧವಾಗಿ ಕೆಲವು ವಿಷಯಗಳು ನನಗಿವೆ. ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನುವುದರಲ್ಲಿಯೂ ವ್ಯಭಿಚಾರ ಮಾಡುವುದರಲ್ಲಿಯೂ ಇಸ್ರಾಯೇಲರು ಮುಗ್ಗರಿಸಿ ಬೀಳುವಂತೆ ಬಿಳಾಮನು ಬಾಲಾಕನಿಗೆ ಕಲಿಸಿದ ಬೋಧನೆಯನ್ನು ಹಿಡಿದುಕೊಂಡಿರುವವರು ನಿನ್ನಲ್ಲಿದ್ದಾರೆ.


ವಿಚಿತ್ರವಾದ ವಿವಿಧ ಬೋಧನೆಗಳ ಸೆಳೆತಕ್ಕೆ ಸಿಲುಕದಿರಿ. ಏಕೆಂದರೆ ಕೃಪೆಯ ಮೂಲಕ ಹೃದಯವನ್ನು ಬಲಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳಲ್ಲಿ ಮಗ್ನರಾದವರು, ಅವುಗಳಿಂದ ಏನೂ ಪ್ರಯೋಜನ ಹೊಂದಲಿಲ್ಲ.


ಆದರೆ ದುಷ್ಟರೂ ಇತರರಂತೆ ನಟಿಸುವ ವೇಷಧಾರಿಗಳೂ ಇತರರನ್ನು ವಂಚಿಸುತ್ತಾ ತಮ್ಮನ್ನೂ ವಂಚಿಸಿಕೊಳ್ಳುತ್ತಾ ಹೆಚ್ಚಾದ ಕೆಟ್ಟತನಕ್ಕೆ ಸಾಗುವರು.


ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶುದ್ಧವಾದ ಮಾತುಗಳಿಗೂ ಭಕ್ತಿಗೆ ಅನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ,


ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ ಅನುಸರಿಸುವವರಾಗಿದ್ದಾರೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ, ಅದರಿಂದ ಹಣಗಳಿಸುತ್ತಾರೆ. ನಾವಾದರೋ ಹಾಗೆ ಮಾಡುವವರಲ್ಲ. ನಾವು ದೇವರಿಂದ ಕಳುಹಿಸಲಾದವರಾಗಿ ಕ್ರಿಸ್ತ ಯೇಸುವಿನಲ್ಲಿದ್ದುಕೊಂಡು ದೇವರ ಮುಂದೆ ಯಥಾರ್ಥವಾಗಿ ಮಾತನಾಡುತ್ತೇವೆ.


ಪ್ರಿಯರೇ, ನೀವು ಕಲಿತುಕೊಂಡ ಬೋಧನೆಗೆ ವಿರೋಧವಾಗಿರುವ ಭೇದಗಳನ್ನೂ ಅಭ್ಯಂತರಗಳನ್ನೂ ಮಾಡುವವರ ಬಗ್ಗೆ ಎಚ್ಚರಿಕೆಯಿಂದಿರಿ. ಅಂಥವರಿಂದ ದೂರವಾಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಿಮ್ಮೊಳಗಿಂದಲೂ ಜನರು ಎದ್ದು ವಕ್ರಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳೆದುಕೊಳ್ಳುವರು.


ಕನಸುಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ ಆದರೆ ನನ್ನ ವಾಕ್ಯವನ್ನು ಕೇಳಿದವನು ಅದನ್ನು ಯಥಾರ್ಥವಾಗಿ ನುಡಿಯಲಿ. ಹೊಟ್ಟನ್ನು ಕಾಳಿನೊಂದಿಗೆ ಹೋಲಿಸಲಾದೀತೆ?” ಎಂದು ಯೆಹೋವ ದೇವರು ಹೇಳುತ್ತಾರೆ.


ಕಂಚಿನ ಬದಲಾಗಿ ನಿನಗೆ ಬಂಗಾರವನ್ನು ತರುವೆನು. ಕಬ್ಬಿಣಕ್ಕೆ ಬದಲಾಗಿ ಬೆಳ್ಳಿಯನ್ನೂ, ಮರಕ್ಕೆ ಬದಲಾಗಿ ಕಂಚನ್ನೂ, ಕಲ್ಲುಗಳಿಗೆ ಬದಲಾಗಿ ಕಬ್ಬಿಣವನ್ನೂ ತರುವೆನು. ಸಮಾಧಾನವನ್ನು ನಿನಗೆ ಅಧಿಪತಿಯನ್ನಾಗಿ, ನೀತಿಯನ್ನು ನಿನಗೆ ಅಧಿಕಾರಿಯನ್ನಾಗಿ ಮಾಡುವೆನು.


ದೇವರ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ. ಇಲ್ಲವಾದರೆ ದೇವರು ನಿನ್ನನ್ನು ಗದರಿಸಿ ನಿನ್ನನ್ನು ಸುಳ್ಳುಗಾರನೆಂದು ಸಾಬೀತುಪಡಿಸುವರು.


ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವುದು ಎಷ್ಟೋ ಉತ್ತಮ.


ಬೆಳ್ಳಿಗಿಂತ ನನ್ನ ಬೋಧನೆಯನ್ನು ಆರಿಸಿಕೋ ಉತ್ತಮ ಬಂಗಾರಕ್ಕಿಂತ ಮಿಗಿಲಾದ ತಿಳುವಳಿಕೆಯನ್ನು ಪಡೆದುಕೋ.


ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.


ಕ್ರಿಸ್ತ ಯೇಸುವೆಂಬ ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.


ಕ್ರಿಸ್ತ ಯೇಸುವಿನ ದಿನವು ಇದನ್ನು ಬಹಿರಂಗಕ್ಕೆ ತರುವಾಗ, ಅವನವನ ಕೆಲಸವು ಏನಾಗಿರುವುದೆಂಬುದು ವ್ಯಕ್ತವಾಗುವುದು. ಏಕೆಂದರೆ ಅದು ಬೆಂಕಿಯಿಂದ ಪ್ರಕಟವಾಗುವುದು. ಪ್ರತಿಯೊಬ್ಬನ ಕೆಲಸದ ಯೋಗ್ಯತೆಯನ್ನು ಬೆಂಕಿಯೇ ಪರೀಕ್ಷಿಸುವುದು.


ಆಗ ಜನರು ಒಣಹುಲ್ಲಿಗಾಗಿ ಕಳೆಕೀಳಿಸುವುದಕ್ಕೆ ಈಜಿಪ್ಟ್ ದೇಶದಲ್ಲೆಲ್ಲಾ ಚದರಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು