Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 3:6 - ಕನ್ನಡ ಸಮಕಾಲಿಕ ಅನುವಾದ

6 ನಾನು ಬೀಜವನ್ನು ಬಿತ್ತಿದೆನು, ಅಪೊಲ್ಲೋಸನು ನೀರು ಹಾಕಿದನು, ಆದರೆ ಬೆಳೆಸಿದವರು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾನು ಸಸಿಯನ್ನು ನೆಟ್ಟೆನು; ಅಪೊಲೋಸನು ನೀರೆರೆದನು; ಆದರೆ ಅದನ್ನು ಬೆಳೆಸಿದವರು ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋಸನು ನೀರು ಹೊಯಿದನು, ಆದರೆ ಬೆಳೆಸುತ್ತಾ ಬಂದವನು ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ನಾನು ಬೀಜವನ್ನು ಬಿತ್ತಿದೆನು; ಅಪೊಲ್ಲೋಸನು ನೀರನ್ನು ಹಾಕಿದನು. ಆದರೆ ಬೀಜವನ್ನು ಬೆಳೆಯಿಸಿದವನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಮಿಯಾ ಭಿಂಯ್ ಪೆರ್‍ಲೊ ಅಪೊಲ್ಲೊನ್ ಪಾನಿ ವೊತ್ಲ್ಯಾನ್, ಖರೆ ತೆ ವಾಡಿ ಸರ್ಕೆ ಕರಲ್ಲೆ ದೆವಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 3:6
29 ತಿಳಿವುಗಳ ಹೋಲಿಕೆ  

ಉದಾರಿಯು ಅಭಿವೃದ್ಧಿ ಹೊಂದುವನು; ಬೇರೆಯವರಿಗೆ ಚೈತನ್ಯ ಕೊಡುವವನು ಚೈತನ್ಯ ಹೊಂದುವನು.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ನಾನು ಸ್ವತಂತ್ರನಲ್ಲವೇ? ನಾನೂ ಅಪೊಸ್ತಲನಲ್ಲವೇ? ನಾನು ನಮ್ಮ ಕರ್ತ ಆಗಿರುವ ಯೇಸುವನ್ನು ಕಂಡವನಲ್ಲವೇ? ನಾನು ಕರ್ತ ದೇವರಲ್ಲಿ ಮಾಡಿದ ಕೆಲಸದ ಫಲವು ನೀವಲ್ಲವೇ?


ಏಕೆಂದರೆ ಭೂಮಿಯು ತನ್ನ ಮೊಳಕೆಯನ್ನು ಹೇಗೆ ಹೊರಡಿಸುವುದೋ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಹೇಗೆ ಮೊಳೆಯಿಸುವುದೋ, ಹಾಗೆಯೇ ಸಾರ್ವಭೌಮ ಯೆಹೋವ ದೇವರು ನೀತಿಯನ್ನೂ, ಸ್ತೋತ್ರವನ್ನೂ ಎಲ್ಲಾ ಜನಾಂಗಗಳ ಮುಂದೆ ಮೊಳೆಯಿಸುವರು.


ಅಪೊಲ್ಲೋಸನು ಕೊರಿಂಥದಲ್ಲಿ ಇದ್ದಾಗಲೇ, ಕಾಲ್ನಡಿಗೆಯಾಗಿ ಪೌಲನು ಪ್ರಯಾಣಮಾಡಿ ಎಫೆಸ ಪಟ್ಟಣಕ್ಕೆ ಬಂದನು. ಅಲ್ಲಿ ಕೆಲವು ಶಿಷ್ಯರನ್ನು ಕಂಡು,


ಯೆಹೂದಿ ವಿಶ್ವಾಸಿಗಳು ಇದನ್ನು ಕೇಳಿದಾಗ, ಅವರಿಗೆ ಯಾವ ಆಕ್ಷೇಪಣೆಯೂ ಇರಲಿಲ್ಲ. ಹಾಗಾದರೆ ದೇವರು, “ಯೆಹೂದ್ಯರಲ್ಲದವರಿಗೂ ಸಹ ಜೀವಕ್ಕಾಗಿ ಪಶ್ಚಾತ್ತಾಪವನ್ನು ಕೊಟ್ಟಿದ್ದಾರೆ,” ಎಂದು ಹೇಳಿ ದೇವರನ್ನು ಕೊಂಡಾಡಿದರು.


ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ.


ಯೆಹೂದ್ಯರಲ್ಲದವರನ್ನು ದೇವರಿಗೆ ವಿಧೇಯರಾಗುವುದಕ್ಕಾಗಿ ಕ್ರಿಸ್ತನು ನನ್ನ ಮೂಲಕ ಮಾತಿನಿಂದಲೂ ಕೃತ್ಯದಿಂದಲೂ


ಪೌಲನು ಅವರನ್ನು ವಂದಿಸಿ, ತನ್ನ ಸೇವೆಯ ಮೂಲಕ ದೇವರು ಯೆಹೂದ್ಯರಲ್ಲದವರ ಮಧ್ಯದಲ್ಲಿ ಮಾಡಿದ ಕಾರ್ಯಗಳನ್ನು ವಿವರಿಸಿದನು.


ಅಲೆಕ್ಸಾಂದ್ರಿಯ ನಿವಾಸಿ ಅಪೊಲ್ಲೋಸ ಎಂಬ ಹೆಸರಿನ ಒಬ್ಬ ಯೆಹೂದ್ಯನು ಎಫೆಸಕ್ಕೆ ಬಂದಿದ್ದನು. ಅವನು ವಾಕ್ಚಾತುರ್ಯವುಳ್ಳವನೂ ಪವಿತ್ರ ವೇದದಲ್ಲಿ ಪ್ರವೀಣನೂ ಆಗಿದ್ದನು.


ಅವರಲ್ಲಿ ಒಬ್ಬ ಮಹಿಳೆಯ ಹೆಸರು ಲುದ್ಯ ಎಂದಿತ್ತು. ಆಕೆ ಥುವತೈರ ಊರಿನವಳೂ ಕೆನ್ನೀಲಿ ಬಣ್ಣದ ಬಟ್ಟೆಗಳ ವ್ಯಾಪಾರಿಯೂ ದೇವರನ್ನು ಆರಾಧಿಸುವವಳೂ ಆಗಿದ್ದಳು. ಪೌಲನು ಹೇಳಿದ್ದನ್ನು ಲಕ್ಷ್ಯಕೊಡುವಂತೆ ಕರ್ತ ಯೇಸು ಆಕೆಯ ಹೃದಯವನ್ನು ತೆರೆದರು.


ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.


ಒಂದು ಸಾರಿ ದೇವರು ಮಾತನಾಡಿದ್ದಾರೆ. ನಾನು ಎರಡು ಸಾರಿ ಇದನ್ನು ಹೀಗೆಂದು ಕೇಳಿದ್ದೇನೆ: “ದೇವರೇ, ಶಕ್ತಿಯು ನಿಮಗೇ ಸೇರಿದೆ.


ಸಾಮಾನ್ಯ ಜನರು ಬರೀ ಉಸಿರೇ, ಉನ್ನತ ಜನರು ಬರೀ ಸುಳ್ಳೇ. ತಕ್ಕಡಿಯಲ್ಲಿ ತೂಗಿದರೆ ಅವರೇನೂ ಇಲ್ಲ, ಎಲ್ಲರೂ ಬರೀ ಉಸಿರೇ.


ಇಲ್ಲಿಗೆ ತಲುಪಿದಾಗ, ಅವರು ಸಭೆಯನ್ನು ಒಟ್ಟುಕೂಡಿಸಿದರು. ದೇವರು ಅವರಿಗೆ ತಮ್ಮ ಮುಖಾಂತರವಾಗಿ ಮಾಡಿದ್ದನ್ನೂ ಯೆಹೂದ್ಯರಲ್ಲದವರಿಗೂ ದೇವರು ವಿಶ್ವಾಸದ ದ್ವಾರವನ್ನು ತೆರೆದಿರುವುದನ್ನೂ ವರದಿಮಾಡಿದರು.


ನಿಮ್ಮಲ್ಲಿ ಒಬ್ಬನು, “ನಾನು ಪೌಲನವನು,” ಇನ್ನೊಬ್ಬನು, “ನಾನು ಅಪೊಲ್ಲೋಸನವನು,” ಬೇರೊಬ್ಬನು, “ನಾನು ಕೇಫನವನು,” ಇನ್ನೊಬ್ಬನು, “ನಾನು ಕ್ರಿಸ್ತನವನು,” ಎಂದು ಹೇಳುತ್ತೀರಂತೆ.


ಹೀಗಿರಲಾಗಿ ನೆಡುವವನಾಗಲಿ, ನೀರು ಹಾಕುವವನಾಗಲಿ ಪ್ರಾಮುಖ್ಯರಾಗಿರದೆ, ಬೆಳೆಸುವ ದೇವರೇ ಬಹು ಪ್ರಾಮುಖ್ಯವಾದವರು.


ಪೌಲನಾಗಲಿ, ಅಪೊಲ್ಲೋಸನಾಗಲಿ, ಕೇಫನಾಗಲಿ, ಲೋಕವಾಗಲಿ, ಜೀವವಾಗಲಿ, ಮರಣವಾಗಲಿ, ವರ್ತಮಾನದ ಸಂಗತಿಗಳಾಗಲಿ, ಭವಿಷ್ಯತ್ಕಾಲದ ಸಂಗತಿಗಳಾಗಲಿ ಸಮಸ್ತವೂ ನಿಮ್ಮವೇ.


ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು