Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:10 - ಕನ್ನಡ ಸಮಕಾಲಿಕ ಅನುವಾದ

10 ನಾವು ಕ್ರಿಸ್ತ ಯೇಸುವಿನ ನಿಮಿತ್ತ ಮೂರ್ಖರಾಗಿದ್ದೇವೆ! ನೀವೋ ಕ್ರಿಸ್ತ ಯೇಸುವಿನಲ್ಲಿ ಬುದ್ಧಿವಂತರು, ನಾವೋ ಬಲಹೀನರು. ನೀವು ಬಲಿಷ್ಠರು, ನೀವು ಮಾನವಂತರು, ನಾವೋ ಮಾನಹೀನರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನಾವಂತೂ ಕ್ರಿಸ್ತನ ನಿಮಿತ್ತ ಮೂರ್ಖರಾಗಿದ್ದೇವೆ. ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ. ನಾವು ಬಲಹೀನರು, ನೀವು ಬಲಿಷ್ಠರು, ನೀವು ಗೌರವವುಳ್ಳವರು, ನಾವು ನಿಂದಿಸಲ್ಪಟ್ಟವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕ್ರಿಸ್ತಯೇಸುವಿನ ನಿಮಿತ್ತ ನಾವಂತೂ ಹುಚ್ಚರು, ನೀವಾದರೋ ಕ್ರಿಸ್ತಯೇಸುವಿನಲ್ಲಿ ಬುದ್ಧಿವಂತರು; ನಾವು ಬಲಹೀನರು, ನೀವು ಬಲಾಢ್ಯರು; ನಾವು ಅವಮಾನಿತರು, ನೀವು ಸನ್ಮಾನಿತರು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನಾವಂತು ಕ್ರಿಸ್ತನ ನಿವಿುತ್ತ ಹುಚ್ಚರಾಗಿದ್ದೇವೆ, ನೀವೋ ಕ್ರಿಸ್ತನಲ್ಲಿ ಬುದ್ಧಿವಂತರಾಗಿದ್ದೀರಿ; ನಾವು ಬಲಹೀನರು, ನೀವು ಬಲಿಷ್ಠರು; ನೀವು ಮಾನಶಾಲಿಗಳು, ನಾವು ಮಾನಹೀನರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನಾವು ಕ್ರಿಸ್ತನಿಗೋಸ್ಕರ ಮೂರ್ಖರಾಗಿದ್ದೇವೆ. ಆದರೆ ನೀವು ನಿಮ್ಮನ್ನು ಕ್ರಿಸ್ತನಲ್ಲಿ ಬಹು ಜ್ಞಾನಿಗಳೆಂದು ಭಾವಿಸಿಕೊಂಡಿದ್ದೀರಿ. ನಾವು ಬಲಹೀನರಾಗಿದ್ದೇವೆ, ಆದರೆ ನೀವು ನಿಮ್ಮನ್ನು ಬಲಿಷ್ಠರೆಂದು ಭಾವಿಸಿಕೊಂಡಿದ್ದೀರಿ. ಜನರು ನಿಮಗೆ ಗೌರವವನ್ನು ಕೊಡುತ್ತಾರೆ; ನಮಗಾದರೋ ಅವರು ಗೌರವವನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅಮಿ ಕ್ರಿಸ್ತಾಸಾಟ್ನಿ ಪಿಶೆ, ತುಮಿ ಕ್ರಿಸ್ತಾಚ್ಯಾ ಎಕ್ವಟ್ಟಾ ವೈನಾ ‍ಶಾನೆ! ಅಮಿ ಬಳ್ ನಸಲ್ಲ್ಯಾ ಸಾರ್ಕೆ, ಖರೆ ತುಮಿ ತಾಕ್ತಿಚೆ! ತುಮ್ಕಾ ಮಾನ್ ಗಾವ್ತಾ, ಅಮ್ಕಾ ಅವ್ಮಾನ್ ಗಾವ್ತಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:10
38 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಬಳಿಗೆ ಬಂದಾಗ ಬಲಹೀನನೂ ಬಹಳವಾಗಿ ಭಯಪಟ್ಟು ನಡುಗುವವನೂ ಆಗಿದ್ದೆನು.


ಹೀಗೆ ಪೌಲನು ಪ್ರತಿವಾದ ಮಾಡುತ್ತಿದ್ದಾಗ, ಫೆಸ್ತನು ಮಧ್ಯೆ ಬಾಯಿ ಹಾಕಿ, “ಪೌಲನೇ, ನಿನಗೆ ಹುಚ್ಚುಹಿಡಿದಿದೆ! ನಿನ್ನ ಅಧಿಕಪಾಂಡಿತ್ಯ ನಿನ್ನನ್ನು ಹುಚ್ಚನನ್ನಾಗಿ ಮಾಡಿದೆ,” ಎಂದು ಗಟ್ಟಿಯಾಗಿ ಕೂಗಿದನು.


ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.


ನೀವು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ, ಧನ್ಯರು. ಏಕೆಂದರೆ, ಮಹಿಮೆಯ ಆತ್ಮರೂ, ದೇವರೂ ನಿಮ್ಮಲ್ಲಿ ವಾಸಿಸುತ್ತಾರೆ.


ನಾವು ಬಲಹೀನರಾಗಿದ್ದರೂ, ನೀವು ಬಲಿಷ್ಠರಾಗಿದ್ದಿರೆಂದು ತಿಳಿದು ಆನಂದಪಡುತ್ತೇವೆ. ನೀವು ಪರಿಪೂರ್ಣರಾಗಬೇಕೆಂದೇ ನಾವು ಪ್ರಾರ್ಥಿಸುತ್ತೇವೆ.


ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರೂ ಇಹಲೋಕ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸಿಕೊಂಡರೆ, ಅಂಥವನು ಜ್ಞಾನಿಯಾಗುವಂತೆ ಮೂರ್ಖನಾಗಲಿ.


ಆದ್ದರಿಂದ, ಈ ಆಜ್ಞೆಗಳನ್ನು ತಿರಸ್ಕರಿಸುವವನು ಮನುಷ್ಯನನ್ನಲ್ಲ ದೇವರನ್ನು ಅಂದರೆ, ತಮ್ಮ ಪವಿತ್ರಾತ್ಮರನ್ನು ನಮಗೆ ಕೊಡುವ ದೇವರನ್ನೇ ತಿರಸ್ಕರಿಸುತ್ತಾನೆ.


ನಿಮ್ಮಲ್ಲಿ ಯಾರಾದರೂ ಬಲಹೀನರಾಗಿದ್ದರೆ, ನಾನೂ ಬಲಹೀನನಾಗಿರುವುದಿಲ್ಲವೋ? ನಿಮ್ಮಲ್ಲಿ ಯಾವನಾದರೂ ಪಾಪದಲ್ಲಿ ಬಿದ್ದುಹೋದರೆ, ನಾನು ನೊಂದುಕೊಳ್ಳುವುದಿಲ್ಲವೋ?


ಬುದ್ಧಿಹೀನರನ್ನು ಹರ್ಷದಿಂದ ಸಹಿಸಿಕೊಳ್ಳುತ್ತಿರುವ ಬುದ್ಧಿವಂತರು ನೀವು!


“ಅವನ ಪತ್ರಗಳು ತೀಕ್ಷ್ಣವಾಗಿಯೂ ಶಕ್ತಿಯುತವಾಗಿಯೂ ಇವೆ. ಆದರೆ ಅವನು ಎದುರು ಬಂದಾಗ ನಿರ್ಬಲನೂ ಕೆಲಸಕ್ಕೆ ಬಾರದ ಮಾತುಗಳನ್ನಾಡುವವನೂ ಆಗಿದ್ದಾನೆ,” ಎಂದು ಕೆಲವರು ಹೇಳುತ್ತಾರೆ.


ಆದಕಾರಣ ದೃಢವಾಗಿ ನಿಂತಿದ್ದೇವೆಂದು ಭಾವಿಸುವ ನೀವು ಬೀಳದಿರುವಂತೆ ನೋಡಿಕೊಳ್ಳಿರಿ.


ಈಗ ನೀವು ತೃಪ್ತರಾಗಿದ್ದೀರಿ! ಈಗಾಗಲೇ ಐಶ್ವರ್ಯವಂತರಾಗಿದ್ದೀರಿ. ನಮ್ಮ ಸಹಾಯವಿಲ್ಲದೆ ಆಳುತ್ತಿದ್ದೀರಿ. ನೀವು ನಿಜವಾಗಿಯೂ ಅರಸರಾಗಿದ್ದರೆ, ನಾವು ಸಹ ನಿಮ್ಮೊಂದಿಗೆ ಸೇರಿ ಆಳುತ್ತಿದ್ದೇವಲ್ಲವೇ?


ನಾನು ನಿಮಗೆ ಹಾಲು ಕೊಟ್ಟೆನು. ಗಟ್ಟಿ ಆಹಾರವನ್ನು ಕೊಡಲಿಲ್ಲ, ಏಕೆಂದರೆ ನಿಮಗೆ ಶಕ್ತಿ ಇರಲಿಲ್ಲ, ಈಗಲಾದರೂ ನಿಮಗೆ ಶಕ್ತಿಯಿಲ್ಲ.


ಆದರೆ ಭೌತಿಕ ಮನುಷ್ಯನು ದೇವರಾತ್ಮರ ವಿಷಯಗಳನ್ನು ಸ್ವೀಕರಿಸುವುದಿಲ್ಲ. ಅವು ಅವನಿಗೆ ಬುದ್ಧಿಹೀನವಾಗಿ ತೋರುತ್ತವೆ. ಏಕೆಂದರೆ ಆತ್ಮಿಕ ವಿವೇಚನೆಯಿಂದ ತಿಳಿಯಬೇಕಾಗಿದ್ದ ಕಾರಣ ಅವನು ಅವುಗಳನ್ನು ತಿಳಿದುಕೊಳ್ಳಲಾರನು.


ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ, ಅವರಲ್ಲಿ ಕೆಲವರು ಪರಿಹಾಸ್ಯ ಮಾಡಿದರು. ಇತರರು, “ನಾವು ಇನ್ನೊಮ್ಮೆ ಈ ವಿಷಯದ ಮೇಲೆ ನೀನು ಮಾತನಾಡುವುದನ್ನು ಕೇಳುತ್ತೇವೆ,” ಎಂದರು.


ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.


ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸೆಯನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ, ಯೇಸು ಈ ಸಾಮ್ಯವನ್ನು ಹೇಳಿದರು:


“ನಿಮ್ಮ ಮಾತನ್ನು ಕೇಳುವವರು ನನ್ನ ಮಾತನ್ನು ಕೇಳುತ್ತಾರೆ; ನಿಮ್ಮನ್ನು ತಿರಸ್ಕರಿಸುವವರು ನನ್ನನ್ನು ತಿರಸ್ಕರಿಸುತ್ತಾರೆ; ಆದರೆ ನನ್ನನ್ನು ತಿರಸ್ಕರಿಸುವವರು ನನ್ನನ್ನು ಕಳುಹಿಸಿದಾತನನ್ನೇ ತಿರಸ್ಕರಿಸುತ್ತಾರೆ,” ಎಂದರು.


ಮನುಷ್ಯಪುತ್ರನಾದ ನನ್ನ ನಿಮಿತ್ತ ಜನರು ನಿಮ್ಮನ್ನು ದ್ವೇಷಮಾಡಿ, ನಿಮ್ಮನ್ನು ಬಹಿಷ್ಕರಿಸಿ, ನಿಂದಿಸಿ, ನಿಮ್ಮ ಹೆಸರನ್ನು ಕೆಟ್ಟದೆಂದು ತಿರಸ್ಕರಿಸಿದರೆ ನೀವು ಧನ್ಯರು.


“ಆಗ ಜನರು ನಿಮ್ಮನ್ನು ಹಿಂಸೆಪಡಿಸುವುದಕ್ಕಾಗಿ ಒಪ್ಪಿಸಿ ನಿಮ್ಮನ್ನು ಕೊಲ್ಲುವರು. ಇದಲ್ಲದೆ ನನ್ನ ಹೆಸರಿನ ನಿಮಿತ್ತವಾಗಿ ಎಲ್ಲಾ ಜನಾಂಗದವರು ನಿಮ್ಮನ್ನು ದ್ವೇಷಮಾಡುವರು.


“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ, ಹಿಂಸಿಸಿ ನಿಮ್ಮ ಮೇಲೆ ಎಲ್ಲಾ ವಿಧವಾದ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.


ದಂಡನೆಯ ದಿವಸಗಳು ಬಂದಿವೆ, ಮುಯ್ಯಿ ತೀರಿಸುವ ದಿವಸಗಳೂ ಸಮೀಪವಾಗಿವೆ. ಇಸ್ರಾಯೇಲು ಅದನ್ನು ತಿಳಿದುಕೊಳ್ಳಲಿ. ಏಕೆಂದರೆ ನಿನ್ನ ಪಾಪಗಳು ಬಹಳವಾಗಿರುವುದರಿಂದಲೂ, ದ್ವೇಷವು ಹೆಚ್ಚಾಗಿರುವುದರಿಂದಲೂ, “ಪ್ರವಾದಿ ಮೂರ್ಖನೂ, ಪ್ರೇರಿತ ಮನುಷ್ಯನು ಹುಚ್ಚನೂ,” ಎಂದು ಇಸ್ರಾಯೇಲು ಹೇಳಿಕೊಳ್ಳುತ್ತದೆ.


ಆತನು ತಿರಸ್ಕೃತನೂ ಮಾನವಕುಲದಿಂದ ನಿರಾಕರಿಸಲಾದವನೂ, ದುಃಖಿತ ಮನುಷ್ಯನೂ, ನೋವನ್ನು ಅನುಭವಿಸಿದವನೂ ಆಗಿದ್ದನು. ನಾವು ನಮ್ಮ ಮುಖಗಳನ್ನು ಆತನಿಂದ ಮರೆಮಾಡಿಕೊಂಡೆವು. ಆತನು ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಆತನನ್ನು ಅತ್ಯಲ್ಪವಾಗಿ ಎಣಿಸಿದೆವು.


ಜ್ಞಾನವಿಲ್ಲದವನು ತನ್ನ ನೆರಯವನನ್ನು ಹೀನೈಸುತ್ತಾನೆ, ಆದರೆ ತಿಳುವಳಿಕೆಯುಳ್ಳವನು ಮೌನವಾಗಿರುತ್ತಾನೆ.


ಆಗ ಯೇಹುವು ತನ್ನ ಯಜಮಾನನ ಸೇವಕರ ಬಳಿಗೆ ಬಂದನು. ಅವರು ಅವನಿಗೆ, “ಶುಭವೋ? ಆ ಹುಚ್ಚನು ನಿನ್ನ ಬಳಿಗೆ ಬಂದದ್ದೇನು?” ಎಂದರು. ಅವನು ಅವರಿಗೆ, “ಆ ಮನುಷ್ಯನನ್ನೂ ಅವನ ಮಾತನ್ನೂ ನೀವು ಬಲ್ಲಿರಿ,” ಎಂದನು.


ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.


ನಾವಾದರೋ ಶಿಲುಬೆಗೆ ಹಾಕಲಾದ ಕ್ರಿಸ್ತ ಯೇಸುವನ್ನೇ ಪ್ರಸಂಗಿಸುತ್ತಿದ್ದೇವೆ. ಇದು ಯೆಹೂದ್ಯರಿಗೆ ವಿಘ್ನವೂ ಯೆಹೂದ್ಯರಲ್ಲದವರಿಗೆ ಬುದ್ದಿಹೀನತೆಯಾಗಿದೆ.


ಏಕೆಂದರೆ ದೇವರ ಬುದ್ಧಿಹೀನತೆ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆ ಮನುಷ್ಯರ ಬಲಕ್ಕಿಂತಲೂ ಬಲವುಳ್ಳದ್ದಾಗಿದೆ.


ಮಾನ ಅವಮಾನಗಳಿಂದಲೂ ಕೀರ್ತಿ ಅಪಕೀರ್ತಿಗಳಿಂದಲೂ ಸತ್ಯವಂತರಾಗಿದ್ದರೂ ಮೋಸಗಾರರೂ ಎಂದೆಣಿಸಿಕೊಂಡವರಾಗಿದ್ದೇವೆ.


ಹೀಗಿರುವುದರಿಂದ, ನಮ್ಮೊಳಗೆ ಮರಣವು ಕಾರ್ಯ ಮಾಡುತ್ತದೆ, ಆದರೆ ನಿಮ್ಮೊಳಗೆ ಜೀವವು ಕಾರ್ಯ ಮಾಡುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು