Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:15 - ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ, ನಿಮಗೆ ಕ್ರಿಸ್ತ ಯೇಸುವಿನಲ್ಲಿ ಹತ್ತು ಸಾವಿರ ಮಂದಿ ಪೋಷಕರು ಇದ್ದರೂ, ತಂದೆಗಳು ಬಹುಮಂದಿ ಇಲ್ಲ. ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ನಾನು ನಿಮ್ಮ ತಂದೆಯಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮಗೆ ಕ್ರಿಸ್ತನಲ್ಲಿ ಬೋಧಕರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹು ಮಂದಿ ಇಲ್ಲ ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದ ತಂದೆಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮಗೆ ಕ್ರಿಸ್ತಯೇಸುವಿನಲ್ಲಿ ಸಾವಿರಾರು ಮಂದಿ ಶಿಕ್ಷಕರು ಇರಬಹುದು. ಆದರೆ ನಿಮಗೆ ನಾನೊಬ್ಬನೇ ತಂದೆ. ಶುಭಸಂದೇಶದ ಮೂಲಕ ನಾನೇ ನಿಮ್ಮನ್ನು ಕ್ರಿಸ್ತಯೇಸುವಿನಲ್ಲಿ ಪಡೆದ ತಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿಮಗೆ ಕ್ರಿಸ್ತನಲ್ಲಿ ಉಪಾಧ್ಯಾಯರು ಸಾವಿರಾರು ಮಂದಿ ಇದ್ದರೂ ತಂದೆಗಳು ಬಹುಮಂದಿ ಇಲ್ಲ; ನಾನೇ ನಿಮ್ಮನ್ನು ಸುವಾರ್ತೆಯ ಮೂಲಕ ಕ್ರಿಸ್ತ ಯೇಸುವಿನಲ್ಲಿ ಪಡೆದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮಗೆ ಕ್ರಿಸ್ತನಲ್ಲಿ ಹತ್ತುಸಾವಿರ ಮಂದಿ ಉಪದೇಶಕರಿರಬಹುದು, ಆದರೆ ಬಹು ಮಂದಿ ತಂದೆಗಳು ಇಲ್ಲ. ಸುವಾರ್ತೆಯ ಮೂಲಕವಾಗಿ ಕ್ರಿಸ್ತ ಯೇಸುವಿನಲ್ಲಿ ನಾನೇ ನಿಮಗೆ ಆತ್ಮಿಕ ತಂದೆಯಾಗಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತುಮ್ಕಾ ಕ್ರಿಸ್ತಾಚ್ಯಾ ವೈನಾ ಹಜಾರಾನಿ ಶಿಕ್ವುತಲಿ ಲೊಕಾ ಅಸ್ತಿಲ್, ಹೊಲ್ಯಾರ್ಬಿ ತುಮ್ಕಾ ಆತ್ಮಿಕ್ ಬಾಬಾ ಎಕ್ಲೊಚ್, ಮಿಯಾಚ್ ತೊ ತುಮ್ಕಾ ಬರಿ ಖಬರ್ ಪ್ರಚಾರ್ ಕರುನ್ ಕ್ರಿಸ್ತಾತ್ ತುಮ್ಕಾ ಜಲಮ್ ದಿಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:15
25 ತಿಳಿವುಗಳ ಹೋಲಿಕೆ  

ನನ್ನ ಮಕ್ಕಳೇ, ಕ್ರಿಸ್ತ ಯೇಸುವು ನಿಮ್ಮಲ್ಲಿ ರೂಪುಗೊಳ್ಳುವ ತನಕ ನಾನು ನಿಮಗಾಗಿ ಪುನಃ ಪ್ರಸವವೇದನೆ ಪಡುತ್ತೇನೆ.


ದೇವರು ನನಗೆ ಕೊಟ್ಟ ಕೃಪೆಗೆ ಅನುಸಾರವಾಗಿ, ನಾನು ಜ್ಞಾನಿಯಾದ ಶಿಲ್ಪಿಯಂತೆ ಅಸ್ತಿವಾರ ಹಾಕಿದೆನು. ಮತ್ತೊಬ್ಬನು ಅದರ ಮೇಲೆ ಕಟ್ಟುತ್ತಾನೆ. ಆದರೆ ಪ್ರತಿಯೊಬ್ಬನೂ ತಾನು ಅದರ ಮೇಲೆ ಎಷ್ಟು ಶ್ರದ್ಧೆಯಿಂದ ಕಟ್ಟುತ್ತಾನೆಂದು ನೋಡಿಕೊಳ್ಳಬೇಕು.


ನಾನು ಸುವಾರ್ತೆಯ ಆಶೀರ್ವಾದಗಳಲ್ಲಿ ಪಾಲುಗಾರನಾಗಬೇಕೆಂದು ಇದೆಲ್ಲವನ್ನು ಸುವಾರ್ತೆಗೋಸ್ಕರವೇ ಮಾಡುತ್ತೇನೆ.


ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು, ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ಕರ್ತದೇವರು ಸಹ ಆಜ್ಞಾಪಿಸಿದ್ದಾರೆ.


ಏಕೆಂದರೆ ನೀವು ತಿರುಗಿ ಹುಟ್ಟಿದವರಾಗಿದ್ದೀರಲ್ಲಾ! ಆ ಜನ್ಮವು ನಾಶವಾಗುವ ಬೀಜದಿಂದಲ್ಲ. ಆದರೆ ನಾಶವಾಗದಂಥದ್ದರಿಂದ ಸಜೀವವಾದ ಸದಾಕಾಲವಿರುವ ದೇವರ ವಾಕ್ಯದ ಮೂಲಕ ಆಗಿದೆ.


ತಂದೆಯು ತಮ್ಮ ಚಿತ್ತದ ಪ್ರಕಾರ ಸತ್ಯವಾಕ್ಯದಿಂದ ನಮ್ಮನ್ನು ಹುಟ್ಟಿಸಲಾಗಿ ನಾವು ಅವರ ಸರ್ವ ಸೃಷ್ಟಿಗಳಲ್ಲಿ ಪ್ರಥಮ ಫಲವಾದೆವು.


ನಾನೇ ಕೊಟ್ಟು ತೀರಿಸುತ್ತೇನೆಂದು ಪೌಲನೆಂಬ ನಾನು ನನ್ನ ಸ್ವಂತ ಕೈಯಲ್ಲಿ ಬರೆದಿದ್ದೇನೆ. ನಿನ್ನ ಆತ್ಮದ ವಿಷಯದಲ್ಲಿ ನೀನು ನಿನ್ನ ಪ್ರಾಣವನ್ನೇ ನನಗೆ ಸಾಲಗಾರನಾಗಿದ್ದೀ ಎಂದು ನಾನು ಬೇರೆ ಹೇಳಬೇಕಾಗಿಲ್ಲ.


ನಮ್ಮಲ್ಲಿ ಹುದುವಾಗಿರುವ ವಿಶ್ವಾಸಕ್ಕೆ ಅನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವುದು: ತಂದೆಯಾದ ದೇವರಿಂದಲೂ ನಮಗೆ ರಕ್ಷಕ ಹಾಗೂ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.


ಹಾಗಾದರೆ ನನಗೆ ದೊರೆಯುವ ಬಹುಮಾನವೇನು? ನಾನು ಸುವಾರ್ತೆಯನ್ನು ಸಾರುವಾಗ, ಅದನ್ನು ಉಚಿತವಾಗಿ ಸಾರುತ್ತಾ, ಸುವಾರ್ತೆಯ ಪ್ರಸಂಗಿಯಾಗಿ ನನ್ನ ಪೂರ್ಣ ಹಕ್ಕನ್ನು ಉಪಯೋಗಿಸದಿರುವುದೇ ನನ್ನ ಬಹುಮಾನ.


ಇತರರಿಗೆ ನಿಮ್ಮ ಸಹಾಯದಲ್ಲಿ ಪಾಲು ಇದ್ದರೆ, ಅದರಲ್ಲಿ ನಮಗೂ ಹೆಚ್ಚು ಪಾಲು ಇರಬೇಕಲ್ಲಾ? ಆದರೆ ನಾವು ಈ ಅಧಿಕಾರವನ್ನು ಚಲಾಯಿಸಿಲ್ಲ. ಕ್ರಿಸ್ತ ಯೇಸುವಿಗೆ ಸೇರಿದ ಸುವಾರ್ತೆಗೆ ಅಡ್ಡಿಯಾಗಬಾರದೆಂದು ಎಲ್ಲವನ್ನೂ ಸಹಿಸಿಕೊಂಡೆವು.


ನಾನು ಬೀಜವನ್ನು ಬಿತ್ತಿದೆನು, ಅಪೊಲ್ಲೋಸನು ನೀರು ಹಾಕಿದನು, ಆದರೆ ಬೆಳೆಸಿದವರು ದೇವರೇ.


ಬೇರೊಬ್ಬರು ಹಾಕಿರುವ ಅಸ್ತಿವಾರದ ಮೇಲೆ ನಾನು ಕಟ್ಟಬಾರದೆಂದು, ಕ್ರಿಸ್ತನ ಹೆಸರು ತಿಳಿಯಪಡಿಸದೆ ಇರುವಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಆತುರದಿಂದ ಹೋರಾಡುತ್ತಿದ್ದೇನೆ.


ನಾನು ಈ ಎಲ್ಲಾ ಜನರನ್ನು ಗರ್ಭಧರಿಸಿ ಜನ್ಮವಿತ್ತೆನೋ? ದಾದಿಯು ಹಸುಗೂಸನ್ನು ಎತ್ತಿಕೊಂಡು ಹೋಗುವಂತೆ, ಈ ಜನರನ್ನು ತನ್ನ ತೋಳುಗಳಲ್ಲಿ ಎತ್ತಿಕೊಂಡು ಅವರ ಪಿತೃಗಳಿಗೆ ನೀವು ವಾಗ್ದಾನ ಮಾಡಿದ ದೇಶಕ್ಕೆ ನಡೆಸಬೇಕೆಂದು ನೀವು ನನಗೇಕೆ ಹೇಳಿದ್ದೀರಿ?


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ನೆಡುವವನೂ ನೀರು ಹಾಕುವವನೂ ಒಂದೇ ಉದ್ದೇಶವುಳ್ಳವರಾಗಿರುತ್ತಾರೆ. ಪ್ರತಿಯೊಬ್ಬನಿಗೆ ಅವನವನ ಶ್ರಮಕ್ಕೆ ತಕ್ಕಂತೆ ಪ್ರತಿಫಲ ದೊರೆಯುವುದು.


ನಾನು ಸುವಾರ್ತೆಯನ್ನು ಸಾರಿದರೂ ಹೊಗಳಿಸಿಕೊಳ್ಳುವ ಯಾವ ಆಸೆಯೂ ನನಗೆ ಇಲ್ಲ. ಸಾರಲೇಬೇಕೆಂಬ ಕರ್ತವ್ಯಕ್ಕೆ ನಾನು ಸಾಲಗಾರನಾಗಿದ್ದೇನೆ. ಸುವಾರ್ತೆಯನ್ನು ಸಾರದಿದ್ದರೆ, ನನ್ನ ಗತಿ ಏನೆಂದು ಹೇಳಲಿ!


ಪ್ರಿಯರೇ, ನಾನು ನಿಮಗೆ ಸಾರಿದ ಸುವಾರ್ತೆಯನ್ನೂ, ನೀವು ಅದನ್ನು ಸ್ವೀಕರಿಸಿದ್ದನ್ನೂ, ಅದರಲ್ಲಿ ನಿಂತಿರುವುದನ್ನೂ, ಈಗ ನಿಮಗೆ ನೆನಪಿಸುತ್ತೇನೆ.


ನಾವು ನಮ್ಮ ಬಗ್ಗೆಯೇ ಪ್ರಚಾರ ಮಾಡುವುದಿಲ್ಲ. ಆದರೆ ಕ್ರಿಸ್ತ ಯೇಸು ಕರ್ತ ದೇವರೆಂದೂ ನಾವು ಯೇಸುವಿಗಾಗಿ ನಿಮ್ಮ ಸೇವಕರಾಗಿದ್ದೇವೆ ಎಂದೂ ಪ್ರಚುರಪಡಿಸುತ್ತೇವೆ.


ಹೀಗಿರಲಾಗಿ ನಿಯಮವು ನಮ್ಮ ಪೋಷಕನಂತಿತ್ತು. ನಾವು ನಂಬಿಕೆಯ ಮೂಲಕ ನೀತಿವಂತರಾಗುವುದಕ್ಕಾಗಿ ಕ್ರಿಸ್ತ ಯೇಸುವಿನ ಬಳಿಗೆ ತರುವ ತನಕ ನಮ್ಮನ್ನು ಪೋಷಿಸುತ್ತದೆ.


ಆದರೆ ಈಗ ನಂಬಿಕೆಯು ಬಂದಿರುವುದರಿಂದ, ಇನ್ನೆಂದಿಗೂ ನಾವು ಪೋಷಕ ಎಂಬ ನಿಯಮದ ಕೆಳಗೆ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು