Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:4 - ಕನ್ನಡ ಸಮಕಾಲಿಕ ಅನುವಾದ

4 ನನ್ನ ಮನಸ್ಸಾಕ್ಷಿಯು ಶುದ್ಧವಾಗಿದೆ. ಆದರೆ ಅದು ನನ್ನನ್ನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯತೀರಿಸುವವರು ಕರ್ತದೇವರೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಿಗೆ ತೋರುವುದಿಲ್ಲವಾದರೂ ನಾನು ನಿರ್ದೋಷಿಯೆಂದು ನಿರ್ಣಯಿಸುವಂತಿಲ್ಲ. ನನ್ನನ್ನು ನ್ಯಾಯವಿಚಾರಣೆ ಮಾಡುವವನು ಕರ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನಲ್ಲಿ ದೋಷವಿದೆಯೆಂದು ನನ್ನ ಬುದ್ಧಿಗೆ ತೋರುವದಿಲ್ಲವಾದರೂ ದೋಷವಿಲ್ಲದವನೆಂಬ ನಿರ್ಣಯವು ಇದರಿಂದಾಗುವದಿಲ್ಲ; ನನ್ನನ್ನು ವಿಚಾರಣೆಮಾಡುವವನು ಕರ್ತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ತಪ್ಪುಮಾಡಿದ್ದೇನೆಂದು ನನ್ನ ಮನಸ್ಸಾಕ್ಷಿಗೆ ತೋರುತ್ತಿಲ್ಲ. ಅದು ನನ್ನನ್ನು ನಿರ್ದೋಷಿಯನ್ನಾಗಿ ಮಾಡಲಾರದು. ನನಗೆ ನ್ಯಾಯನಿರ್ಣಯ ಮಾಡುವವನು ಪ್ರಭುವೊಬ್ಬನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಮಾಜೊ ಭುತ್ತುರ್‍ಲೊ ಮನ್ ಮಾಜ್ಯಾ ವೈರ್ ಚುಕ್ ವಾವಿನಾ, ಹೆ ಖರೆ ಜಾಲ್ಯಾರ್ಬಿ ಮಿಯಾ ಚುಕ್ ನಸ್ತಾನಾ ಹಾಂವ್ ಮನುಕ್ ಹೊಯ್ನಾ. ಮಾಜಿ ಝಡ್ತಿ ಕರ್‍ತಲೊ ಎಕ್ಲೊಚ್ ತೊ ಧನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:4
24 ತಿಳಿವುಗಳ ಹೋಲಿಕೆ  

ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.


ಯೆಹೋವ ದೇವರೇ, ನೀವು ಪಾಪಗಳನ್ನು ಎಣಿಸಿದರೆ, ನಿಮ್ಮ ಮುಂದೆ ಯಾರು ನಿಲ್ಲುವರು?


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ಮನುಷ್ಯನ ಪ್ರತಿಯೊಂದು ಮಾರ್ಗವು ಅವನ ದೃಷ್ಟಿಯಲ್ಲಿ ಸರಿಯಾಗಿದೆ; ಆದರೆ ಯೆಹೋವ ದೇವರು ಹೃದಯಗಳನ್ನು ಪರೀಕ್ಷಿಸುತ್ತಾರೆ.


ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.


ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.


ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.


ಯಾರೂ ನಿಯಮವನ್ನು ಕೇಳಿದ ಮಾತ್ರಕ್ಕೆ ದೇವರ ಮುಂದೆ ನೀತಿವಂತರಾಗುವುದಿಲ್ಲ. ಆದರೆ ನಿಯಮಕ್ಕೆ ವಿಧೇಯರಾಗುವವರೇ ನೀತಿವಂತರಾಗುವರು.


“ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ? ಬಾಯಿಯ ಮೇಲೆ ಕೈಯಿಟ್ಟುಕೊಳ್ಳುತ್ತೇನೆ.


ನನ್ನ ನಿಷ್ಕಪಟತೆಯನ್ನು ದೃಢವಾಗಿ ಹಿಡುಕೊಂಡಿದ್ದೇನೆ; ಅದನ್ನು ಎಂದಿಗೂ ನಾನು ಹೋಗಗೊಡಿಸುವುದಿಲ್ಲ; ನಾನು ಜೀವಂತವಾಗಿ ಇರುವವರೆಗೂ ನನ್ನ ಮನಸ್ಸಾಕ್ಷಿಯು ನನ್ನನ್ನು ನಿಂದಿಸುವುದಿಲ್ಲ.


ಮನುಷ್ಯನು ದೇವರ ಮುಂದೆ ನೀತಿವಂತನಾಗುವುದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ಪರಿಶುದ್ಧನಾಗಿರುವುದು ಹೇಗೆ?


ಪೌಲನು ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ನನ್ನ ಸಹೋದರರೇ, ಇಂದಿನವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ನಾನು ದೇವರ ಮುಂದೆ ನಡೆದುಕೊಂಡಿದ್ದೇನೆ,” ಎಂದನು.


ಯೇಸು ಮೂರನೆಯ ಸಾರಿ ಪೇತ್ರನಿಗೆ, “ಯೋಹಾನನ ಮಗನಾದ ಸೀಮೋನನೇ, ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ಕೇಳಿದರು. ಯೇಸು ಮೂರನೆಯ ಸಾರಿ, “ನೀನು ನನ್ನ ಮೇಲೆ ಮಮತೆ ಇಟ್ಟಿದ್ದೀಯೋ?” ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು, “ಕರ್ತನೇ, ನಿಮಗೆ ಎಲ್ಲವೂ ತಿಳಿದಿದೆ. ನಾನು ನಿಮ್ಮ ಮೇಲೆ ಎಷ್ಟು ಮಮತೆ ಇಟ್ಟಿದ್ದೇನೆಂದು ನಿಮಗೆ ತಿಳಿದಿದೆ,” ಎಂದನು. ಆಗ ಯೇಸು ಪೇತ್ರನಿಗೆ, “ನನ್ನ ಕುರಿಗಳನ್ನು ಮೇಯಿಸು,” ಎಂದರು.


“ಮನುಷ್ಯನು ಎಷ್ಟರವನು? ಅವನು ಶುದ್ಧನಿರಲು ಸಾಧ್ಯವೇ? ಸ್ತ್ರೀಯರಲ್ಲಿ ಹುಟ್ಟಿದವನು ನೀತಿವಂತನಾಗಿರಬಹುದೆ?


ನಾನು ನೀತಿವಂತನಾಗಿದ್ದರೂ, ನನ್ನ ಸ್ವಂತ ಬಾಯೇ ನನ್ನನ್ನು ಖಂಡಿಸುತ್ತದೆ; ನಾನು ನಿರ್ದೋಷಿಯಾಗಿದ್ದರೂ, ದೇವರು ನನ್ನನ್ನು ಅಪರಾಧಿ ಎಂದು ನಿರೂಪಿಸುವರು.


ಅಬ್ರಹಾಮನು ಕ್ರಿಯೆಗಳ ಮೂಲಕ ನೀತಿವಂತನೆಂದು ನಿರ್ಣಯ ಹೊಂದಿದವನಾಗಿದ್ದರೆ, ದೇವರ ಮುಂದೆ ಹೊಗಳಿಸಿಕೊಳ್ಳಲು ಅವನಿಗೆ ಆಸ್ಪದ ಇರುವುದಿಲ್ಲ.


ಮತ್ತು ದೇವರು ನ್ಯಾಯಾಧಿಪತಿಯಾಗಿದ್ದಾರೆ. ಆಕಾಶಗಳು ದೇವರ ನೀತಿಯನ್ನು ಪ್ರಕಟಿಸುತ್ತವೆ.


ನನ್ನ ಪಾದವು ಸಮ ನೆಲದಲ್ಲಿ ನಿಂತಿದೆ; ನಾನು ಮಹಾಸಭೆಯಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು.


ಅನೇಕರು ಅಧಿಕಾರಿಯ ದಯೆಯನ್ನು ಹುಡುಕುತ್ತಾರೆ. ಆದರೆ ಯೆಹೋವ ದೇವರಿಂದಲೇ ಪ್ರತಿಯೊಬ್ಬರಿಗೂ ನ್ಯಾಯ ದೊರಕುತ್ತದೆ.


ನನಗಾದರೋ ನಿಮ್ಮಿಂದಾಗಲಿ, ಮನುಷ್ಯರ ನ್ಯಾಯಾಲಯದಿಂದಾಗಲಿ ವಿಚಾರಣೆಯಾಗುವುದು ಅತ್ಯಲ್ಪ ಕಾರ್ಯವಾಗಿದೆ. ನನ್ನನ್ನು ನಾನೇ ನ್ಯಾಯತೀರ್ಪು ಮಾಡಿಕೊಳ್ಳುವುದೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು