Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:5 - ಕನ್ನಡ ಸಮಕಾಲಿಕ ಅನುವಾದ

5 ಆದುದರಿಂದ ನೀವು ಕಾಲಕ್ಕೆ ಮೊದಲು ಯಾವುದನ್ನು ಕುರಿತೂ ತೀರ್ಪುಮಾಡದೆ, ಕರ್ತದೇವರ ಬರುವಿಕೆಗಾಗಿ ಕಾಯಿರಿ. ಅವರು ಕತ್ತಲಲ್ಲಿರುವ ಗುಪ್ತ ಕಾರ್ಯಗಳನ್ನು ಬೆಳಕಿಗೆ ತಂದು ಮನುಷ್ಯನ ಹೃದಯದ ಉದ್ದೇಶಗಳನ್ನು ಪ್ರತ್ಯಕ್ಷಪಡಿಸುವರು. ಆಗ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದೇ ಮೇರೆಗೆ, ನೀವು ಸೂಕ್ತಕಾಲಕ್ಕೆ ಮುಂಚೆ ತೀರ್ಪುಮಾಡಬೇಡಿ; ಪ್ರಭುವಿನ ಪುನರಾಗಮನದವರೆಗೂ ಕಾದುಕೊಂಡಿರಿ. ಕತ್ತಲಲ್ಲಿ ಗುಪ್ತವಾಗಿರುವುಗಳನ್ನು ಪ್ರಭುವು ಬೆಳಕಿಗೆ ತರುವರು; ಅಂತರಂಗದ ಯೋಜನೆಗಳನ್ನು ಬಹಿರಂಗಪಡಿಸುವರು. ಆಗ ಪ್ರತಿಯೊಬ್ಬನಿಗೂ ತಕ್ಕ ಪ್ರಶಂಸೆ ದೇವರಿಂದಲೇ ದೊರಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆದ್ದರಿಂದ ಸರಿಯಾದ ಸಮಯಕ್ಕಿಂತ ಮೊದಲೇ ತೀರ್ಪುಮಾಡಬೇಡಿ. ಪ್ರಭುವು ಬರುವ ತನಕ ಕಾದುಕೊಂಡಿರಿ. ಕತ್ತಲೆಯಲ್ಲಿ ಅಡಗಿಕೊಂಡಿರುವವುಗಳ ಮೇಲೆ ಆತನು ಬೆಳಕನ್ನು ಬೆಳಗಿಸುವನು. ಮನುಷ್ಯರ ಹೃದಯಗಳ ರಹಸ್ಯವಾದ ಉದ್ದೇಶಗಳನ್ನು ಆತನು ಬಹಿರಂಗಪಡಿಸುವನು. ಆಗ ಪ್ರತಿಯೊಬ್ಬನಿಗೂ ಬರತಕ್ಕ ಹೊಗಳಿಕೆಯು ದೇವರಿಂದಲೇ ಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತೆಚೆಸಾಟ್ನಿ ಎಳ್ ಭರುಚ್ಯಾ ಅದ್ದಿ ಧನಿ ಪರ್ತುನ್ ಯೆಯ್ ಪತರ್ ತುಮಿ ಕೊನಾಚಿಬಿ ಝಡ್ತಿ ಕರುಚೆ ನ್ಹಯ್ . ತೊ ಯೆವ್ನ್ ಕಾಳ್ಕಾತ್ ನಿಪುನ್ ಹೊತ್ತೆ ಉಜ್ವೊಡಾಕ್ ಹಾನ್ತಾ ಅನಿ ಮಾನ್ಸಾಚ್ಯಾ ಭುತ್ತುರ್‍ಲ್ಯಾ ಮನಾಚೆ ಘುಟ್ ದಾಕ್ವುನ್ ದಿತಾ, ತನ್ನಾ ಹರಿ ಎಕ್ಲ್ಯಾಕ್ ದೆವಾಕ್ನಾ ಗಾವ್ತಲೆ ಹೊಗ್ಳಾಪ್ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:5
48 ತಿಳಿವುಗಳ ಹೋಲಿಕೆ  

ಪ್ರಿಯರೇ, ಕರ್ತ ಯೇಸು ಬರುವ ತನಕ ದೀರ್ಘಶಾಂತಿಯಿಂದಿರಿ. ವ್ಯವಸಾಯಗಾರನನ್ನು ನೋಡಿರಿ. ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.


ಏಕೆಂದರೆ, ನಾವೆಲ್ಲರೂ ನಮ್ಮ ದೇಹದ ಮೂಲಕ ನಡೆಸಿದ ಒಳ್ಳೆಯದಕ್ಕಾಗಲಿ, ಕೆಟ್ಟದ್ದಕ್ಕಾಗಲಿ ಸಿಗಬೇಕಾದ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಕಾಣಿಸಿಕೊಳ್ಳಲೇಬೇಕು.


ಕ್ರಿಸ್ತ ಯೇಸುವಿನ ದಿನವು ಇದನ್ನು ಬಹಿರಂಗಕ್ಕೆ ತರುವಾಗ, ಅವನವನ ಕೆಲಸವು ಏನಾಗಿರುವುದೆಂಬುದು ವ್ಯಕ್ತವಾಗುವುದು. ಏಕೆಂದರೆ ಅದು ಬೆಂಕಿಯಿಂದ ಪ್ರಕಟವಾಗುವುದು. ಪ್ರತಿಯೊಬ್ಬನ ಕೆಲಸದ ಯೋಗ್ಯತೆಯನ್ನು ಬೆಂಕಿಯೇ ಪರೀಕ್ಷಿಸುವುದು.


ನಾವು ಲೆಕ್ಕ ಒಪ್ಪಿಸಬೇಕಾಗಿರುವ ದೇವರ ದೃಷ್ಟಿಗೆ ಸಮಸ್ತವೂ ಬಹಿರಂಗವಾದದ್ದಾಗಿಯೂ ಬಯಲಾದದ್ದಾಗಿಯೂ ಆಗಿದೆ. ಎಲ್ಲಾ ಸೃಷ್ಟಿಯಲ್ಲಿ ದೇವರ ದೃಷ್ಟಿಗೆ ಮರೆಯಾದದ್ದು ಯಾವುದೂ ಇಲ್ಲ.


ತನ್ನನ್ನು ತಾನೇ ಹೊಗಳಿಕೊಳ್ಳುವವನಲ್ಲ, ಕರ್ತ ಯೇಸು ಯಾರನ್ನು ಹೊಗಳುತ್ತಾರೋ ಅವನೇ ಯೋಗ್ಯನು.


ನಾನು ಸಾರುವ ಸುವಾರ್ತೆಯ ಪ್ರಕಾರ ದೇವರು ಕ್ರಿಸ್ತ ಯೇಸುವಿನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ವಿಚಾರಿಸುವ ದಿನದಲ್ಲಿ ಇವೆಲ್ಲಾ ಸಂಭವಿಸುವುದು.


ಆದ್ದರಿಂದ, ಯಾವ ಕಾರಣಕ್ಕಾಗಿ ನೀನು ಇತರರಿಗೆ ತೀರ್ಪು ಮಾಡುತ್ತಿರುವೆಯೋ ಅದನ್ನೇ ನೀನೂ ಮಾಡುತ್ತಿರುವುದರಿಂದ ನಿನ್ನನ್ನು ನೀನೇ ತೀರ್ಪು ಮಾಡಿಕೊಂಡ ಹಾಗಾಯಿತು. ಇತರರ ಮೇಲೆ ತೀರ್ಪುಮಾಡುವ ನಿನಗೆ ಹೇಳುವುದಕ್ಕೆ ನೆಪವಿಲ್ಲ.


ಇದಲ್ಲದೆ ಸತ್ತವರಾದ ಹಿರಿಯರೂ ಕಿರಿಯರೂ ಸಿಂಹಾಸನದ ಎದುರಿಗೆ ನಿಂತಿರುವುದನ್ನೂ ಕಂಡೆನು. ಆಗ ಪುಸ್ತಕಗಳನ್ನು ತೆರೆಯಲಾಯಿತು. ನಿತ್ಯಜೀವ ಪುಸ್ತಕವೆಂಬ ಇನ್ನೊಂದು ಪುಸ್ತಕವನ್ನು ತೆರೆಯಲಾಯಿತು. ಆ ಪುಸ್ತಕಗಳಲ್ಲಿ ಬರೆದಿದ್ದರ ಪ್ರಕಾರ, ಅವರವರ ಕ್ರಿಯೆಗಳಿಗೆ ತಕ್ಕಂತೆ ಸತ್ತವರಿಗೆ ನ್ಯಾಯತೀರ್ಪಾಯಿತು.


ಏಕೆಂದರೆ ಒಳ್ಳೆಯದಾಗಿರಲಿ, ಕೆಟ್ಟದ್ದಾಗಿರಲಿ, ದೇವರು ಆ ಎಲ್ಲಾ ಕಾರ್ಯಗಳನ್ನೂ ಪ್ರತಿಯೊಂದು ರಹಸ್ಯವನ್ನೂ ನ್ಯಾಯವಿಚಾರಣೆಗೆ ತರುವರು.


ಬಂಗಾರವು ನಾಶವಾಗುವಂಥದ್ದಾಗಿದ್ದರೂ ಅದನ್ನು ಬೆಂಕಿಯಿಂದ ಶೋಧಿಸುವುದುಂಟಷ್ಟೆ. ಬಂಗಾರಕ್ಕಿಂತ ಬಹು ಅಮೂಲ್ಯವಾಗಿರುವ ನಿಮ್ಮ ನಿಷ್ಕಪಟ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಕ್ರಿಸ್ತ ಯೇಸು ಪ್ರತ್ಯಕ್ಷರಾಗುವಾಗ ನಿಮಗೆ ಕೀರ್ತಿ, ಮಾನ, ಮಹಿಮೆಗಳನ್ನು ಉಂಟುಮಾಡುವುದು.


ಆದರೆ, ಆಂತರ್ಯದಲ್ಲಿ ಯೆಹೂದ್ಯನಾಗಿರುವವನೇ ಯೆಹೂದ್ಯನು. ಹಾಗೆಯೇ ಸುನ್ನತಿಯು ಆತ್ಮನಿಂದ ಹೃದಯದಲ್ಲಿ ಆಗುವಂಥದ್ದಾಗಿದೆ. ಇದು ಲಿಖಿತ ನಿಯಮದಿಂದ ಆಗುವಂಥದಲ್ಲ. ಅಂಥವನಿಗೆ ಮೆಚ್ಚುಗೆಯು ಮನುಷ್ಯರಿಂದ ಬರುವಂಥದಲ್ಲ, ದೇವರಿಂದಲೇ ಬರುವಂಥದ್ದಾಗಿದೆ.


ನಾವು ನಾಚಿಕೆಯ ಗುಪ್ತ ಕಾರ್ಯಗಳನ್ನು ಬಿಟ್ಟುಬಿಟ್ಟು, ಕುತಂತ್ರದಲ್ಲಿ ನಡೆಯದೆಯೂ ವಂಚನೆಯಿಂದ ದೇವರ ವಾಕ್ಯಗಳನ್ನು ವ್ಯಾಖ್ಯಾನ ಮಾಡದೆಯೂ ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತಾ, ಎಲ್ಲಾ ಮನುಷ್ಯರ ಮನಸ್ಸಾಕ್ಷಿಯು ಒಪ್ಪಬೇಕಾದ ರೀತಿಯಲ್ಲಿ ನಮ್ಮನ್ನು ನಾವೇ ದೇವರ ಮುಂದೆ ಸಮರ್ಪಿಸಿಕೊಳ್ಳುತ್ತೇವೆ.


ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು.


ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?


ಪ್ರಿಯರೇ, ಒಬ್ಬರ ವಿಷಯದಲ್ಲಿ ಒಬ್ಬರು ಕೆಟ್ಟದ್ದನ್ನು ಮಾತನಾಡಬೇಡಿರಿ. ಯಾವನಾದರೂ ತನ್ನ ಸಹೋದರನ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿದರೆ ಅಥವಾ ತೀರ್ಪುಮಾಡಿದರೆ ಅವನು ದೇವರ ನಿಯಮದ ವಿಷಯದಲ್ಲಿ ಕೆಟ್ಟದ್ದಾಗಿ ಮಾತನಾಡಿ, ನಿಯಮವನ್ನೇ ತೀರ್ಪುಮಾಡಿದ ಹಾಗಾಗುವುದು. ಆದರೆ ನೀನು ದೇವರ ನಿಯಮವನ್ನೇ ತೀರ್ಪುಮಾಡಿದರೆ ನೀನು ಅನುಸರಿಸುವವನಾಗಿರದೆ ನ್ಯಾಯಾಧಿಪತಿಯೆನಿಸಿಕೊಳ್ಳುವಿ.


“ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ. ಇತರರನ್ನು ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ. ಕ್ಷಮಿಸಿರಿ, ಆಗ ನಿಮ್ಮನ್ನೂ ಕ್ಷಮಿಸುವರು.


ತನ್ನ ಯಜಮಾನನು ಬಂದಾಗ ಯಾವ ಸೇವಕನು ಸೇವೆ ಮಾಡುವುದನ್ನು ಕಾಣುವನೋ ಆ ಸೇವಕನು ಧನ್ಯನು.


“ಇಗೋ, ಯೇಸು ಮೇಘಗಳೊಂದಿಗೆ ಬರುತ್ತಾರೆ,” ಮತ್ತು “ಎಲ್ಲರ ಕಣ್ಣುಗಳು ಅವರನ್ನು ಕಾಣುವವು, ಅವರನ್ನು ಇರಿದವರು ಸಹ ಕಾಣುವರು.” ಭೂಲೋಕದಲ್ಲಿರುವ ಎಲ್ಲಾ ಜನರು, “ಅವರ ದೆಸೆಯಿಂದ ಗೋಳಾಡುವರು.” ಹೌದು, ಹಾಗೆಯೇ ಆಗುವುದು! ಆಮೆನ್.


ಪ್ರಧಾನ ಕುರುಬ ಆಗಿರುವವರು ಪ್ರತ್ಯಕ್ಷರಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯುಳ್ಳ ಕಿರೀಟವನ್ನು ಹೊಂದುವಿರಿ.


ರಾತ್ರಿಯಲ್ಲಿ ಕಳ್ಳನು ಬರುವಂತೆ ಕರ್ತ ಯೇಸುವಿನ ದಿನವು ಬರುವುದೆಂದು ನೀವೇ ಚೆನ್ನಾಗಿ ಬಲ್ಲಿರಿ.


ಯೇಸು ಅವನಿಗೆ, “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು,” ಎಂದರು.


“ಆತನ ಪ್ರತ್ಯಕ್ಷತೆಯ ವಿಷಯವಾದ ವಾಗ್ದಾನವು ಏನಾಯಿತು? ಪಿತೃಗಳು ನಿದ್ರೆಹೊಂದಿದಂದಿನಿಂದ ಸಮಸ್ತವೂ ಸೃಷ್ಟಿ ಮೊದಲುಗೊಂಡು ಹಾಗೆಯೇ ಇರುತ್ತದಲ್ಲಾ?” ಎಂದು ಕುಚೋದ್ಯದಿಂದ ಕೇಳುವರೆಂದು ನೀವು ಮೊದಲು ತಿಳಿದುಕೊಳ್ಳಬೇಕು.


“ಆಗ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ, ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.


ಆಗ ನೀವು ನೀತಿವಂತನಿಗೂ, ದುಷ್ಟನಿಗೂ, ದೇವರ ಸೇವೆ ಮಾಡುವವನಿಗೂ, ಮಾಡದವನಿಗೂ ಇರುವ ವ್ಯತ್ಯಾಸವನ್ನು ಪುನಃ ನೋಡುವಿರಿ.


ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ, “ಇಗೋ, ಕರ್ತದೇವರು ತಮ್ಮ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು


ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿಹತ್ತಿ ಲಯವಾಗಿ ಹೋಗುವವು. ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ?


ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು.


ನೀವು ಈ ರೊಟ್ಟಿಯನ್ನು ತಿಂದು, ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ, ಕರ್ತದೇವರ ಮರಣವನ್ನು ಅವರು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.


ಹೀಗಿರುವುದರಿಂದ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಪುನರಾಗಮನವನ್ನು ಆತುರದಿಂದ ಎದುರು ನೋಡುವವರಾದ ನಿಮಗೆ, ಯಾವುದೇ ಆತ್ಮಿಕ ವರಗಳ ಕೊರತೆಯು ಇರುವುದಿಲ್ಲ.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


“ಆಗ ಮನುಷ್ಯಪುತ್ರನಾದ ನನ್ನ ಸೂಚನೆಯು ಆಕಾಶದಲ್ಲಿ ಕಾಣುವುದು. ಭೂಮಿಯ ಎಲ್ಲಾ ಜನಾಂಗದವರು ಗೋಳಾಡುವರು. ಮನುಷ್ಯಪುತ್ರನಾದ ನಾನು ಆಕಾಶದ ಮೇಘಗಳಲ್ಲಿ, ಶಕ್ತಿಯಿಂದಲೂ ಮಹಾಪ್ರಭಾವದಿಂದಲೂ ಬರುವುದನ್ನು ಅವರು ಕಾಣುವರು.


ಯುವಕನೇ, ನಿನ್ನ ಯೌವನದಲ್ಲಿ ಸಂತೋಷಪಡು. ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ. ನೀನು ನಿನ್ನ ಮನಸ್ಸಿಗೆ ಬಂದಂತೆಯೂ ನಿನ್ನ ಕಣ್ಣಿನ ನೋಟದಂತೆಯೂ ನಡೆ. ಆದರೆ ಈ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯವಿಚಾರಿಸುವರು ಎಂದು ತಿಳಿದುಕೋ.


ನೆಡುವವನೂ ನೀರು ಹಾಕುವವನೂ ಒಂದೇ ಉದ್ದೇಶವುಳ್ಳವರಾಗಿರುತ್ತಾರೆ. ಪ್ರತಿಯೊಬ್ಬನಿಗೆ ಅವನವನ ಶ್ರಮಕ್ಕೆ ತಕ್ಕಂತೆ ಪ್ರತಿಫಲ ದೊರೆಯುವುದು.


“ಆಗ ಅವನ ಯಜಮಾನನು ಅವನಿಗೆ, ‘ಭಲಾ, ನಂಬಿಗಸ್ತನಾದ ಒಳ್ಳೆಯ ಸೇವಕನೇ, ಒಳ್ಳೆಯದನ್ನು ಮಾಡಿದ್ದಿ. ಚಿಕ್ಕ ಕಾರ್ಯದಲ್ಲಿ ನೀನು ನಂಬಿಗಸ್ತನಾದದ್ದರಿಂದ ನಾನು ನಿನ್ನನ್ನು ದೊಡ್ಡ ಕಾರ್ಯಗಳ ಮೇಲೆ ಅಧಿಕಾರಿಯನ್ನಾಗಿ ನೇಮಿಸುವೆನು. ನೀನು ನಿನ್ನ ಯಜಮಾನನ ಸಂತೋಷದಲ್ಲಿ ಭಾಗಿಯಾಗು,’ ಎಂದನು.


ದೇವರು ಕತ್ತಲೆಯೊಳಗಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾರೆ, ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾರೆ.


ನನ್ನ ಕಣ್ಣುಗಳು ಅವರ ಎಲ್ಲಾ ಮಾರ್ಗಗಳ ಮೇಲೆ ಇವೆ. ಅವು ನನ್ನ ಮುಖಕ್ಕೆ ಮರೆಯಾದವುಗಳಲ್ಲ, ಅವರ ಅಕ್ರಮವು ನನ್ನ ದೃಷ್ಟಿಗೆ ಅಡಗಿರುವುದಿಲ್ಲ.


“ ‘ನನಗೆ ಕನಸು ಬಿತ್ತು, ಕನಸು ಬಿತ್ತು,’ ಎಂದು ನನ್ನ ಹೆಸರು ಹೇಳಿ ಸುಳ್ಳು ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.


ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ, ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ. ಆದರೆ ಯೆಹೋವ ದೇವರು ಅವುಗಳಿಗೆ ಮೆಚ್ಚುವುದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕಮಾಡಿಕೊಂಡು, ಅವರ ಪಾಪಗಳನ್ನು ಶಿಕ್ಷಿಸಿದರು. ಅವರು ಈಜಿಪ್ಟಿಗೆ ಹಿಂದಿರುಗುವರು.


“ಆದ್ದರಿಂದ ಅವರಿಗೆ ಹೆದರಬೇಡಿರಿ, ಪ್ರಕಟಗೊಳ್ಳದಂತೆ ಯಾವುದೂ ಮುಚ್ಚಿಡಲಾಗುವುದಿಲ್ಲ, ತಿಳಿಯಲಾಗದಂತೆ ಯಾವುದೂ ಗುಪ್ತವಾಗಿರುವುದಿಲ್ಲ.


ಆದ್ದರಿಂದ ಆ ಶಿಷ್ಯನು ಸಾಯುವುದಿಲ್ಲವೆಂಬ ಮಾತು ಸಹೋದರರಲ್ಲಿ ಹಬ್ಬಿತು. ಆದರೂ ಅವನು ಸಾಯುವುದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ. “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು?” ಎಂದು ಮಾತ್ರ ಹೇಳಿದರು.


ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಬೆಂಕಿಯಿಂದ ತಪ್ಪಿಸಿಕೊಂಡು ಉಳಿದರೆ, ಅವನಿಗೆ ಪ್ರತಿಫಲ ಸಿಕ್ಕುವುದು.


ಇದರ ಬಗ್ಗೆ ಯಾರಿಗಾದರೂ ವಾಗ್ವಾದ ಮಾಡಬಯಸಿದರೆ, ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ.


ಪ್ರಿಯರೇ, ನೀವು ಒಬ್ಬರ ಮೇಲೊಬ್ಬರು ಗೊಣಗುಟ್ಟಬೇಡಿರಿ. ನ್ಯಾಯವಿಚಾರಣೆಗೆ ಗುರಿಯಾದೀರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾರೆ.


ತನ್ನ ಜ್ಞಾನಕ್ಕನುಸಾರವಾಗಿ ಮನುಷ್ಯನು ಗೌರವ ಹೊಂದುವನು; ವಕ್ರಹೃದಯವುಳ್ಳವನು ಕಡೆಗಣಿಸಲಾಗುವನು.


ನನ್ನ ಪತ್ರಗಳಿಂದ ನಾನು ನಿಮಗೆ ಭಯ ಹುಟ್ಟಿಸಲು ಪ್ರಯತ್ನಿಸುವುದಕ್ಕೆ ನನಗೆ ಮನಸ್ಸಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು