Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 4:8 - ಕನ್ನಡ ಸಮಕಾಲಿಕ ಅನುವಾದ

8 ಈಗ ನೀವು ತೃಪ್ತರಾಗಿದ್ದೀರಿ! ಈಗಾಗಲೇ ಐಶ್ವರ್ಯವಂತರಾಗಿದ್ದೀರಿ. ನಮ್ಮ ಸಹಾಯವಿಲ್ಲದೆ ಆಳುತ್ತಿದ್ದೀರಿ. ನೀವು ನಿಜವಾಗಿಯೂ ಅರಸರಾಗಿದ್ದರೆ, ನಾವು ಸಹ ನಿಮ್ಮೊಂದಿಗೆ ಸೇರಿ ಆಳುತ್ತಿದ್ದೇವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಇಷ್ಟು ಬೇಗನೆ ನೀವು ತೃಪ್ತರಾದಿರಿ. ಇಷ್ಟುಬೇಗನೆ ಐಶ್ವರ್ಯವಂತರಾದಿರಿ. ನಮ್ಮ ಸಹಾಯವಿಲ್ಲದೆ ಅರಸರಂತೆ ಆದಿರಿ. ನೀವು ನಿಜವಾಗಿ ಆಳುವವರಾಗಿದ್ದರೇ ನನಗೆ ಆನಂದವಾಗುತ್ತಿತ್ತು. ಆಗ ನಾವು ಸಹ ನಿಮ್ಮೊಂದಿಗೆ ಆಳುತ್ತಿದ್ದೇವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈಗಾಗಲೇ ನೀವು ಸಂತೃಪ್ತರಾಗಿಬಿಟ್ಟಿರೋ? ಇಷ್ಟಕ್ಕೇ ಶ್ರೀಮಂತರಾಗಿಬಿಟ್ಟಿರೋ? ನಮ್ಮನ್ನು ಬಿಟ್ಟು ನೀವು ಸಿಂಹಾಸನವೇರಿಬಿಟ್ಟಿರೋ? ನೀವು ನಿಜವಾಗಿಯೂ ರಾಜರಾಗಿದ್ದರೆ ಚೆನ್ನಾಗಿರುತ್ತಿತ್ತು! ಆಗ ನಾವೂ ನಿಮ್ಮ ಜೊತೆ ರಾಜ್ಯ ಆಳಬಹುದಿತ್ತು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಈಗಾಗಲೇ ನೀವು ತೃಪ್ತರಾದಿರಿ, ಈಗಾಗಲೇ ಐಶ್ವರ್ಯವಂತರಾದಿರಿ, ನಮ್ಮ ಸಹಾಯವಿಲ್ಲದೆ ಅರಸರಾದಿರಿ. ನೀವು ನಿಜವಾಗಿ ಅರಸರಾಗಿದ್ದರೆ ನನಗೆ ಎಷ್ಟೋ ಆನಂದವಾಗುತ್ತಿತ್ತು; ಆಗ ನಾವು ಸಹ ನಿಮ್ಮೊಂದಿಗೆ ಅರಸರಾಗಿರುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಿಮಗೆ ಅಗತ್ಯವಾದ ಪ್ರತಿಯೊಂದೂ ನಿಮಗಿದೆಯೆಂದು ನೀವು ಭಾವಿಸಿಕೊಂಡಿದ್ದೀರಿ. ನೀವು ನಿಮ್ಮನ್ನು ಐಶ್ವರ್ಯವಂತರೆಂದೂ ರಾಜರುಗಳೆಂದೂ ಭಾವಿಸಿಕೊಂಡಿದ್ದೀರಿ. ನೀವು ನಿಜವಾಗಿಯೂ ರಾಜರುಗಳಾಗಿದ್ದರೆ ನನಗೆ ಎಷ್ಟೋ ಸಂತೋಷವಾಗುತ್ತಿತ್ತು. ಆಗ ನಾವೂ ನಿಮ್ಮೊಂದಿಗೆ ರಾಜರುಗಳಾಗುತ್ತಿದ್ದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಎವ್ಡ್ಯಾತುಚ್ ತುಮಿ ತೃಪ್ತಿ ಹಾಸಿ ದಿಸ್ತಾ, ತುಮಿ ಸಾವ್ಕಾರ್ ಹಾಸಿ, ಅಮಿ ನಸ್ತಾನಾಚ್ ತುಮಿ ಖರೆಚ್ ರಾಜಾ ಹೊಲ್ಲೆ ರ್‍ಹಾಲ್ಯಾರ್ ಕವ್ಡೆ ಬರೆ ಹೊತ್ತೆ! ಅಮಿಬಿ ತುಮ್ಚ್ಯಾ ವಾಂಗ್ಡಾ ರಾಜ್ ಚಾಲ್ವುನ್ಗೆತ್ ರ್‍ಹಾಯ್ ಹೊತ್ತಾಂವ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 4:8
27 ತಿಳಿವುಗಳ ಹೋಲಿಕೆ  

ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, ಅವರು ಭೂಮಿಯ ಮೇಲೆ ಆಳುವರು!” ಎಂದು ಹೇಳಿದರು.


ಏನೂ ಅಲ್ಲದವನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿಕೊಂಡರೆ, ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ.


ನಾವು ಬಲಹೀನರಾಗಿದ್ದರೂ, ನೀವು ಬಲಿಷ್ಠರಾಗಿದ್ದಿರೆಂದು ತಿಳಿದು ಆನಂದಪಡುತ್ತೇವೆ. ನೀವು ಪರಿಪೂರ್ಣರಾಗಬೇಕೆಂದೇ ನಾವು ಪ್ರಾರ್ಥಿಸುತ್ತೇವೆ.


ನೀವು ಜಂಬ ಕೊಚ್ಚಿಕೊಳ್ಳುವುದು ಸರಿಯಲ್ಲ. ಸ್ವಲ್ಪ ಹುಳಿ ಕಲಸಿದರೆ ಕಣಕವೆಲ್ಲಾ ಹುಳಿಯಾಗುತ್ತದೆಂಬುದು ನಿಮಗೆ ತಿಳಿಯದೋ?


ನೀವು ಕ್ರಿಸ್ತ ಯೇಸುವಿನಲ್ಲಿ ಜ್ಞಾನದಲ್ಲಿಯೂ ಮಾತುಗಳಲ್ಲಿಯೂ ಎಲ್ಲಾ ಸಮೃದ್ಧಿಯನ್ನು ಹೊಂದಿದ್ದೀರಿ.


ನನಗೆ ದಯಪಾಲಿಸಿರುವ ಕೃಪೆಯಿಂದ ನಿಮ್ಮಲ್ಲಿ ಪ್ರತಿಯೊಬ್ಬರಿಗೂ ನಾನು ಹೇಳುವುದೇನೆಂದರೆ, ನೀವು ಭಾವಿಸುವುದಕ್ಕಿಂತ ಹೆಚ್ಚಾಗಿ ಯಾರೂ ನಿಮ್ಮನ್ನು ನೀವೇ ಉನ್ನತವಾಗಿ ಭಾವಿಸಿಕೊಳ್ಳಬೇಡಿರಿ. ಅದರ ಬದಲಾಗಿ ದೇವರು ನಿಮಗೆ ಅನುಗ್ರಹಿಸಿರುವ ವಿಶ್ವಾಸದ ಅಳತೆಗೆ ಅನುಸಾರವಾಗಿ ಸ್ವಸ್ಥಚಿತ್ತವುಳ್ಳವರಾಗಿ ಭಾವಿಸಿಕೊಳ್ಳಿರಿ.


ಈಗ ತಿಂದು ತೃಪ್ತಿಯಿಂದಿರುವವರೇ, ನಿಮಗೆ ಕಷ್ಟ, ಏಕೆಂದರೆ ನಿಮಗೆ ಹಸಿವೆಯಾಗುವುದು. ಈಗ ನಗುವವರೇ ನಿಮಗೆ ಕಷ್ಟ, ಏಕೆಂದರೆ ನೀವು ದುಃಖಿಸಿ ಗೋಳಾಡುವಿರಿ.


ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ; ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ.


ಏಕೆಂದರೆ ನೀನು ನಿನ್ನ ವಿಷಯದಲ್ಲಿ, ‘ನಾನು ಐಶ್ವರ್ಯವಂತನು, ನಾನು ಸಂಪಾದಕನಾಗಿದ್ದೇನೆ ಮತ್ತು ಕೊರತೆ ನನಗಿಲ್ಲ,’ ಎಂದು ಹೇಳಿಕೊಳ್ಳುತ್ತಿ. ಆದರೆ ನೀನು ಕೇವಲ ದುರವಸ್ಥೆಯುಳ್ಳವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾದವನು ಎಂಬುದನ್ನು ತಿಳಿಯದೆ ಇದ್ದೀ.


ಹೀಗಿರುವಲ್ಲಿ ನನ್ನ ಪ್ರಿಯ ಸ್ನೇಹಿತರೇ, ನಿಮ್ಮಲ್ಲಿರುವಾಗ ಮಾತ್ರವಲ್ಲದೆ ನಾನಿಲ್ಲದಿರುವಾಗಲೂ ನೀವು ಯಾವಾಗಲೂ ನನಗೆ ವಿಧೇಯರಾದಂತೆ ಈಗಲೂ ವಿಧೇಯರಾಗಿ, ಬಹು ಹೆಚ್ಚಾಗಿ ಭಯದಿಂದ ನಡುಗುತ್ತಾ ನಿಮ್ಮ ರಕ್ಷಣೆಯನ್ನು ಕಾರ್ಯರೂಪಕ್ಕೆ ತನ್ನಿರಿ.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ನನ್ನ ಬುದ್ಧಿಹೀನತೆಯನ್ನು ನೀವು ಇನ್ನೂ ಸ್ವಲ್ಪ ಸಹಿಸಿಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಈಗಾಗಲೇ ನೀವು ಸಹಿಸಿಕೊಂಡಿದ್ದೀರಿ.


ನಾನು ನಿಮ್ಮಲ್ಲಿಗೆ ಬರುವುದಿಲ್ಲವೆಂದು ಕೆಲವರು ಅಹಂಕಾರಿಗಳಾಗಿದ್ದಾರೆ.


ಪೌಲನು, “ಅಲ್ಪ ಕಾಲದಲ್ಲಾಗಲಿ, ದೀರ್ಘಕಾಲದಲ್ಲಾಗಲಿ ನೀವಷ್ಟೇ ಅಲ್ಲ, ನನ್ನ ಮಾತುಗಳನ್ನು ಇಂದು ಆಲಿಸುತ್ತಿರುವ ಪ್ರತಿಯೊಬ್ಬರೂ ಈ ಬೇಡಿಗಳನ್ನು ಹೊರತು ನನ್ನಂತೆಯೇ ಆಗಬೇಕೆಂದು ದೇವರನ್ನು ಪ್ರಾರ್ಥಿಸುತ್ತೇನೆ,” ಎಂದನು.


“ಆಮೆನ್, ಯೆಹೋವ ದೇವರು ಹಾಗೆಯೇ ಮಾಡಲಿ; ನೀನು ಪ್ರವಾದಿಸಿದೆ; ನಿನ್ನ ವಾಕ್ಯಗಳನ್ನು ಯೆಹೋವ ದೇವರು ನೆರವೇರಿಸಿ, ಯೆಹೋವ ದೇವರ ಆಲಯದ ಪಾತ್ರೆಗಳನ್ನೂ, ಸೆರೆಯವರೆಲ್ಲರನ್ನೂ ಬಾಬಿಲೋನಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ.


ತಮ್ಮ ಸ್ವಂತ ಕಣ್ಣುಗಳಲ್ಲಿ ಜ್ಞಾನಿಗಳು ತಮ್ಮ ಸ್ವಂತ ದೃಷ್ಟಿಯಲ್ಲಿ ವಿವೇಕಿಗಳು ಆಗಿರುವವರಿಗೆ ಕಷ್ಟ!


ದಾನ ಕೊಡದೆ ಕೊಟ್ಟಿದ್ದೇನೆಂದು ಹೊಗಳಿಕೊಳ್ಳುವವನು, ಮಳೆ ಇಲ್ಲದ ಮೋಡಗಳ ಮತ್ತು ಗಾಳಿಯ ಹಾಗೆ ಇದ್ದಾನೆ.


ಮೋಶೆಯು ಅವನಿಗೆ, “ನನ್ನ ನಿಮಿತ್ತವಾಗಿ ನೀನು ಹೊಟ್ಟೆಕಿಚ್ಚು ಪಡುತ್ತೀಯೋ? ಯೆಹೋವ ದೇವರ ಜನರೆಲ್ಲಾ ಪ್ರವಾದಿಗಳಾಗಿದ್ದು, ಯೆಹೋವ ದೇವರು ತನ್ನ ಆತ್ಮವನ್ನು ಅವರ ಮೇಲೆ ಇಟ್ಟರೆ ಎಷ್ಟೋ ಒಳ್ಳೆಯದು,” ಎಂದನು.


ಯೇಸು ಜನರ ಗುಂಪನ್ನು ಕಂಡು, ಒಂದು ಬೆಟ್ಟವನ್ನೇರಿ ಕುಳಿತುಕೊಂಡರು. ಶಿಷ್ಯರು ಅವರ ಬಳಿಗೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು