Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 5:4 - ಕನ್ನಡ ಸಮಕಾಲಿಕ ಅನುವಾದ

4 ನೀವು ಕರ್ತ ಯೇಸುವಿನ ಹೆಸರಿನಲ್ಲಿ ಸಭೆಯಾಗಿ ಬಂದು ಸೇರಿದಾಗ, ನಾನೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನಮಗೆ ಕರ್ತ ಆಗಿರುವ ಯೇಸುವಿನ ಸಾನಿಧ್ಯ ಶಕ್ತಿಯೊಂದಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅದೇನೆಂದರೆ: ನೀವು ಸಭೆಸೇರಿ, ಪ್ರಭು ಯೇಸುವಿನ ಶಕ್ತಿಯ ಆಧಾರದ ಮೇಲೆ ಅವನನ್ನು ಸೈತಾನನಿಗೆ ಒಪ್ಪಿಸಿಬಿಡಬೇಕು. ನಾನು ಆತ್ಮಿಕವಾಗಿ ನಿಮ್ಮ ಮಧ್ಯೆಯಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀವೂ ನನ್ನಾತ್ಮನೂ ಕರ್ತನಾದ ಯೇಸುವಿನ ಸಾಮರ್ಥ್ಯ ಸಹಿತ ಒಟ್ಟುಗೂಡಿ ಬಂದಿರಲಾಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಮ್ಮ ಪ್ರಭುವಾದ ಯೇಸುವಿನ ಹೆಸರಿನಲ್ಲಿ ಒಟ್ಟಾಗಿ ಸೇರಿಬನ್ನಿ. ನಾನು ಆತ್ಮದಲ್ಲಿ ನಿಮ್ಮೊಂದಿಗಿರುವೆನು. ನಮ್ಮ ಪ್ರಭುವಾದ ಯೇಸುವಿನ ಶಕ್ತಿಯೂ ನಿಮ್ಮೊಂದಿಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಅಸ್ಲಿ ಕಾಮಾ ಕರ್‍ತಲ್ಯಾಂಚ್ಯಾ ವೈರ್ ಅಶೆ ತುಮಿ ಎಕಾಕ್ಡೆ ಗೊಳಾ ಹೊತಾನಾ, ಆತ್ಮಿಕ್ ರಿತಿನ್ ಮಿಯಾಬಿ ತುಮ್ಚ್ಯಾ ವಾಂಗ್ಡಾ ರ್‍ಹಾತಾ ಅನಿ ಅಮ್ಚ್ಯಾ ಧನಿಯಾ ಜೆಜುಚೊ ಬಳ್‍ಬಿ ಥೈ ಹಾಜರ್ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 5:4
18 ತಿಳಿವುಗಳ ಹೋಲಿಕೆ  

ನೀವು ಮಾತಿನಿಂದಾಗಲಿ, ಕ್ರಿಯೆಯಿಂದಾಗಲಿ ಏನು ಮಾಡಿದರೂ ಅದೆಲ್ಲವನ್ನೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ, ಕ್ರಿಸ್ತ ಯೇಸುವಿನ ಮೂಲಕ ತಂದೆಯಾದ ದೇವರಿಗೆ ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಕ್ರಿಸ್ತ ಯೇಸು ನನ್ನ ಮೂಲಕ ಮಾತನಾಡುತ್ತಾನೆಂಬುದಕ್ಕೆ ನಿಮಗೆ ಬೇಕಾದ ನಿದರ್ಶನವು ಆಗ ತೋರಿಬರುವುದು. ಬಲಹೀನನಾಗಿ ಕ್ರಿಸ್ತನು ನಿಮ್ಮೊಂದಿಗೆ ವ್ಯವಹರಿಸದೆ, ನಿಮ್ಮ ನಡುವೆ ಶಕ್ತನಾಗಿದ್ದಾನೆ.


ನೀವು ಯಾರ ಪಾಪಗಳನ್ನು ಕ್ಷಮಿಸುತ್ತೀರೋ ಅವು ಅವರಿಗೆ ಕ್ಷಮಿಸಲಾಗುವುದು ಮತ್ತು ಯಾರ ಪಾಪಗಳನ್ನು ನೀವು ಉಳಿಸುತ್ತೀರೋ ಅವು ಅವರಿಗೆ ಉಳಿಸಲಾಗುವುದು,” ಎಂದು ಹೇಳಿದರು.


ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು.


ನಾನು ನಿನಗೆ ಪರಲೋಕ ರಾಜ್ಯದ ಬೀಗದ ಕೈಗಳನ್ನು ಕೊಡುವೆನು; ನೀನು ಭೂಮಿಯಲ್ಲಿ ಯಾವುದನ್ನು ಬಂಧಿಸುತ್ತೀಯೋ ಅದು ಪರಲೋಕದಲ್ಲಿಯೂ ಬಂಧಿತವಾಗುವುದು. ನೀನು ಭೂಮಿಯಲ್ಲಿ ಏನನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಲಾಗುವುದು,” ಎಂದರು.


ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ತಂದೆಯಾದ ದೇವರಿಗೆ, ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ಕೃತಜ್ಞತೆಯನ್ನು ಸಲ್ಲಿಸಿರಿ.


ಇದಕ್ಕಾಗಿಯೇ ನಾನು ನಿಮ್ಮಲ್ಲಿ ಇಲ್ಲದಿರುವಾಗ, ಈ ಮಾತುಗಳನ್ನು ಬರೆದಿದ್ದೇನೆ. ನಾನು ಬಂದಾಗ ನಿಮ್ಮನ್ನು ಕೆಡವಿ ಹಾಕುವುದಕ್ಕಲ್ಲ ಆದರೆ ಕಟ್ಟುವುದಕ್ಕಾಗಿ ಕರ್ತ ಯೇಸು ನನಗೆ ಕೊಟ್ಟಿರುವ ಅಧಿಕಾರದಿಂದ ನಿಮಗೆ ಕಾಠಿಣ್ಯವನ್ನು ತೋರಿಸುವುದಕ್ಕೆ ಅವಕಾಶವಿರಬಾರದೆಂದು ಅಪೇಕ್ಷಿಸುತ್ತೇನೆ.


ಹೀಗೆ ಬಹಳ ದಿನ ಮಾಡುತ್ತಲೇ ಇದ್ದಳು. ಆದರೆ ಪೌಲನು ಬಹು ಬೇಸರಗೊಂಡು ಹಿಂದಿರುಗಿ ಆ ದುರಾತ್ಮಕ್ಕೆ, “ಇವಳನ್ನು ಈಗಲೇ ಬಿಟ್ಟು ಹೊರಗೆ ಬರಬೇಕೆಂದು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ನಿನಗೆ ಅಪ್ಪಣೆ ಕೊಡುತ್ತೇನೆ,” ಎಂದು ಹೇಳಲು, ಅದೇ ಗಳಿಗೆಯಲ್ಲಿ ಆ ದುರಾತ್ಮವು ಆಕೆಯನ್ನು ಬಿಟ್ಟುಹೋಯಿತು.


ಆಗ ಪೇತ್ರನು, “ಬೆಳ್ಳಿಬಂಗಾರ ನನ್ನಲ್ಲಿಲ್ಲ, ನನ್ನಲ್ಲಿರುವುದನ್ನು ನಿನಗೆ ಕೊಡುತ್ತೇನೆ. ನಜರೇತಿನ ಕ್ರಿಸ್ತ ಯೇಸುವಿನ ಹೆಸರಿನಲ್ಲಿ, ಎದ್ದು ನಡೆ,” ಎಂದು ಹೇಳಿ,


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


ಯೇಸು ಬಂದು ಅವರೊಂದಿಗೆ ಮಾತನಾಡಿ, “ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರ ನನಗೆ ಕೊಡಲಾಗಿದೆ.


ಏಕೆಂದರೆ ಇಬ್ಬರಾಗಲಿ ಮೂವರಾಗಲಿ ನನ್ನ ಹೆಸರಿನಲ್ಲಿ ಎಲ್ಲಿ ಸೇರಿ ಬರುತ್ತಾರೋ ಅವರ ಮಧ್ಯದಲ್ಲಿ ನಾನು ಇದ್ದೇನೆ,” ಎಂದರು.


ನಿಮ್ಮ ಪವಿತ್ರ ಸೇವಕ ಯೇಸುವಿನ ನಾಮದ ಮೂಲಕವಾಗಿ ಗುಣಪಡಿಸಲು, ಸೂಚಕಕಾರ್ಯಗಳನ್ನೂ ಅದ್ಭುತಗಳನ್ನೂ ಮಾಡಲು ದೇವರೇ, ನಿಮ್ಮ ಹಸ್ತವನ್ನು ಚಾಚಿರಿ.”


ಅವನಿಗೆ ನಿಮ್ಮಲ್ಲಿ ಅನೇಕರಿಂದ ಉಂಟಾದ ಶಿಕ್ಷೆಯೇ ಸಾಕು.


ಇವರು ಗಿಲ್ಯಾದ್ ನಾಡಿನಲ್ಲಿ ರೂಬೇನ್ಯರ, ಗಾದ್ಯರ ಹಾಗು ಮನಸ್ಸೆಯ ಅರ್ಧ ಗೋತ್ರದವರ ಬಳಿಗೆ ಬಂದು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು