Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:10 - ಕನ್ನಡ ಸಮಕಾಲಿಕ ಅನುವಾದ

10 ಕಳ್ಳರು, ಲೋಭಿಗಳು, ಕುಡುಕರು, ಬೈಯ್ಯುವವರು, ಸುಲಿಗೆ ಮಾಡುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಕಳ್ಳರು, ಲೋಭಿಗಳು, ಕುಡುಕರು, ಪರನಿಂದಕರು, ಸುಲಿಗೆಗಾರರು - ಇವರಾರೂ ದೇವರ ಸಾಮ್ರಾಜ್ಯಕ್ಕೆ ಬಾಧ್ಯರಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕಳ್ಳರು ಲೋಭಿಗಳು ಕುಡಿಕರು ಬೈಯುವವರು ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಚೊರಾ, ಖುದ್ಗೆ, ಫಿದೊಡೆ, ದುಸ್ರ್ಯಾಚೆ ನಾವ್ ವೈಟ್ ಕರ್ತಲೆ , ಲುಟ್ತಲೊ, ಅಸ್ಲೆ ಕೊನ್‍ಬಿ ದೆವಾಚೊ ರಾಜ್ ಜೊಡುಕ್ ಸಕಿನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:10
19 ತಿಳಿವುಗಳ ಹೋಲಿಕೆ  

ಆದರೆ ಸಹೋದರಿ ಅಥವಾ ಸಹೋದರನೆನಿಸಿಕೊಂಡವನು ಜಾರನಾದರೂ ಲೋಭಿಯಾದರೂ ವಿಗ್ರಹಾರಾಧಕನಾದರೂ ಪರನಿಂದಕನಾದರೂ ಕುಡುಕನಾದರೂ ಸುಲಿಗೆ ಮಾಡುವವನಾದರೂ ಆಗಿದ್ದರೆ, ಅಂಥವರ ಸಹವಾಸ ಮಾಡಬೇಡಿರಿ. ಅಂಥವರ ಸಂಗಡ ಊಟ ಮಾಡಲೂ ಬೇಡಿರಿ ಎಂದು ಈಗ ಬರೆಯುತ್ತಿದ್ದೇನೆ.


ಮತ್ಸರ, ಕುಡಿಕತನ, ದುಂದೌತಣ ಈ ಮೊದಲಾದವುಗಳೇ. ಇಂಥ ಕೃತ್ಯಗಳನ್ನು ನಡೆಸುವವರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂದು ನಾನು ನಿಮಗೆ ಮುಂಚೆಯೇ ಹೇಳಿದಂತೆ ಈಗಲೂ ಹೇಳುತ್ತೇನೆ.


ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.


ನಿಮ್ಮಲ್ಲಿ ಯಾವನಾದರೂ ಕೊಲೆಗಾರನು, ಕಳ್ಳನು, ದುಷ್ಟನು ಪರರ ಕಾರ್ಯಗಳಲ್ಲಿ ತಲೆಹಾಕುವವನು ಆಗಿದ್ದು ಬಾಧೆಯನ್ನು ಅನುಭವಿಸಬಾರದು.


ದೇಶದ ಜನರು ಬಲಾತ್ಕಾರದಿಂದ ಸೂರೆಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ, ದರಿದ್ರರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯ ಕೊಡದೆ ವಿದೇಶಿಯರನ್ನು ಬಲಾತ್ಕಾರ ಪಡಿಸಿದ್ದಾರೆ.


“ಹಾವುಗಳೇ, ಸರ್ಪಸಂತತಿಯವರೇ, ನೀವು ನರಕದಂಡನೆಯಿಂದ ಹೇಗೆ ತಪ್ಪಿಸಿಕೊಂಡೀರಿ?


ಅಲ್ಲಿಯ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ಪ್ರಾಣಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿದ್ದಾರೆ.


ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.


ಅವನು ಬಡವರ ಹಿತಚಿಂತನೆಯಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು, ಹಣದ ಚೀಲವನ್ನು ಇಟ್ಟುಕೊಂಡು ಅದರಲ್ಲಿ ಹಾಕಿದ್ದನ್ನು ಕದ್ದುಕೊಳ್ಳುತ್ತಿದ್ದನು. ಆದ್ದರಿಂದಲೇ ಇದನ್ನು ಹೇಳಿದನು.


“ ‘ಆದ್ದರಿಂದ ನೀನು ಮಾಡಿದ ಈ ದುರ್ಲಾಭದಿಂದಲೂ, ನಿನ್ನಲ್ಲಿರುವ ನಿನ್ನ ರಕ್ತಾಪರಾಧದಿಂದಲೂ ನಾನು ನನ್ನ ಕೈ ಬಡಿದುಕೊಂಡಿದ್ದೇನೆ.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


ಯೇಸು ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು, ಅದರ ಹತ್ತಿರಕ್ಕೆ ಬಂದಾಗ ಎಲೆಗಳನ್ನೇ ಹೊರತು ಮತ್ತೇನೂ ಕಾಣಲಿಲ್ಲ. ಆಗ ಯೇಸು, ಆ ಮರಕ್ಕೆ, “ಇನ್ನು ಮೇಲೆ ಎಂದೆಂದಿಗೂ ನಿನ್ನಲ್ಲಿ ಫಲವು ಬಾರದಿರಲಿ,” ಎಂದರು. ತಕ್ಷಣವೇ ಅಂಜೂರದ ಮರವು ಒಣಗಿ ಹೋಯಿತು.


ನಿನ್ನ ಪ್ರಭುಗಳು ಎದುರುಬೀಳುವವರೂ, ಕಳ್ಳರ ಜೊತೆಗಾರರೂ ಆಗಿದ್ದಾರೆ. ಪ್ರತಿಯೊಬ್ಬನೂ ಲಂಚ ಪ್ರಿಯನೂ, ಬಹುಮಾನಗಳನ್ನು ಅಪೇಕ್ಷಿಸುವವನೂ ಆಗಿದ್ದಾನೆ. ಅವರು ಅನಾಥರಿಗೆ ನ್ಯಾಯತೀರಿಸರು, ಇಲ್ಲವೆ ವಿಧವೆಯರ ವ್ಯಾಜ್ಯವು ಅವರ ಬಳಿಗೆ ಬರುವುದಿಲ್ಲ.


ನನ್ನ ಹೆಸರನ್ನು ಹೊಂದಿರುವ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಯೆಹೋವ ದೇವರು ಹೇಳುತ್ತಾರೆ.


ಅವಳ ಮನೆಯು ಪಾತಾಳಕ್ಕೆ ಹೆದ್ದಾರಿ, ಅದು ಮೃತ್ಯುವಿನ ಕೊಠಡಿಗೆ ಇಳಿದು ಹೋಗುತ್ತದೆ.


“ಆದಕಾರಣ ನಾನು ದೇವರಿಗೂ ಅವರ ಕೃಪಾವಾಕ್ಯಕ್ಕೂ ಈಗ ನಿಮ್ಮನ್ನು ಒಪ್ಪಿಸಿಕೊಡುತ್ತೇನೆ. ಆ ವಾಕ್ಯವು ನಿಮ್ಮಲ್ಲಿ ಭಕ್ತಿವೃದ್ಧಿ ಮಾಡಿ, ಪವಿತ್ರರಾದವರೆಲ್ಲರಲ್ಲಿ ನಿಮಗೆ ಬಾಧ್ಯತೆಯನ್ನು ಕೊಡಲು ಸಾಮರ್ಥ್ಯವುಳ್ಳದ್ದು.


ಪ್ರಿಯರೇ, ನಾನು ಹೇಳುವುದೇನೆಂದರೆ, ರಕ್ತಮಾಂಸವು ದೇವರ ರಾಜ್ಯಕ್ಕೆ ಬಾಧ್ಯವಾಗಲಾರವು. ಅಳಿಯುವಂಥದ್ದು ಅಮರತ್ವಕ್ಕೆ ಬಾಧ್ಯವಾಗಲಾರದು.


ಏಕೆಂದರೆ ಯಾವ ಜಾರನಾಗಲಿ, ಅಶುದ್ಧನಾಗಲಿ, ದೇವರಲ್ಲದವುಗಳನ್ನು ಪೂಜಿಸುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಹಕ್ಕುಬಾಧ್ಯತೆಯನ್ನು ಹೊಂದುವುದಿಲ್ಲವೆಂಬುದು ನಿಮಗೆ ಮನದಟ್ಟಾಗಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು