Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:15 - ಕನ್ನಡ ಸಮಕಾಲಿಕ ಅನುವಾದ

15 ನಿಮ್ಮ ದೇಹಗಳು ಕ್ರಿಸ್ತ ಯೇಸುವಿನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಕ್ರಿಸ್ತ ಯೇಸುವಿನ ಅಂಗಗಳಾಗಿರುವಂಥವುಗಳನ್ನೇ ತೆಗೆದುಕೊಂಡು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದು ವೇಶ್ಯೆಯ ಅಂಗಗಳೊಡನೆ ಸೇರಿಸುವುದು ಸರಿಯೋ? ಎಂದಿಗೂ ಹಾಗೆ ಮಾಡಬಾರದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನಿಮ್ಮ ದೇಹಗಳು ಕ್ರಿಸ್ತಯೇಸುವಿನ ಅಂಗಗಳೆಂದು ನಿಮಗೆ ತಿಳಿಯದೇ? ಹಾಗಾದರೆ ನಾನು ಕ್ರಿಸ್ತಯೇಸುವಿನ ಅಂಗಗಳನ್ನು ತೆಗೆದು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬದು ನಿಮಗೆ ತಿಳಿಯದೋ? ಹೀಗಿರಲಾಗಿ ಕ್ರಿಸ್ತನ ಅಂಗಗಳಾಗಿರುವಂಥವುಗಳನ್ನು ತೆಗೆದುಬಿಟ್ಟು ಸೂಳೆಯ ಅಂಗಗಳಾಗ ಮಾಡಬಹುದೋ? ಎಂದಿಗೂ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನಿಮ್ಮ ದೇಹಗಳು ಕ್ರಿಸ್ತನ ಅಂಗಗಳಾಗಿವೆ ಎಂಬುದು ನಿಮಗೆ ನಿಶ್ಚಯವಾಗಿ ತಿಳಿದಿಲ್ಲವೇ? ಹೀಗಿರಲಾಗಿ, ನಾನು ಕ್ರಿಸ್ತನ ಅಂಗಗಳನ್ನು ತೆಗೆದುಕೊಂಡು ಅವುಗಳನ್ನು ಸೂಳೆಯ ಅಂಗಗಳನ್ನಾಗಿ ಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತುಮ್ಚಿ ಆಂಗಾ ಕ್ರಿಸ್ತಾಚ್ಯಾ ಆಂಗಾಚಿ ಭಾಗಾ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತಸೆ ಹೊಲ್ಯಾರ್ ಕ್ರಿಸ್ತಾಚ್ಯಾ ಅಂಗಾಚಿ ಭಾಗಾ ಘೆವ್ನ್ ವೆಭಿಚಾರ್ ಕರ್‍ತಲ್ಯಾ ಬಾಯ್ಕೊಮನ್ಸಿಚಿ ಭಾಗಾ ಕರುಕ್ ಹೊತಾ ಕಾಯ್? ಬಿಲ್ಕುಲ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:15
25 ತಿಳಿವುಗಳ ಹೋಲಿಕೆ  

ನಾವು ಕ್ರಿಸ್ತ ಯೇಸುವಿನ ದೇಹದ ಅಂಗಗಳಾಗಿದ್ದೇವೆ.


ಅದೇ ರೀತಿಯಲ್ಲಿ, ಅನೇಕರಾಗಿರುವ ನಾವು ಕ್ರಿಸ್ತನಲ್ಲಿ ಒಂದೇ ದೇಹವಾಗುತ್ತೇವೆ ಮತ್ತು ಪ್ರತಿಯೊಬ್ಬನೂ ಒಬ್ಬರಿಗೊಬ್ಬರು ಅಂಗಗಳಾಗಿರುತ್ತೇವೆ.


ಇಂಥವರು ಶಿರಸ್ಸಾಗಿರುವ ಕ್ರಿಸ್ತ ಯೇಸುವಿನನೊಂದಿಗೆ ಸಂಬಂಧ ಕಳೆದುಕೊಂಡವರಾಗಿದ್ದಾರೆ. ಏಕೆಂದರೆ, ಕ್ರಿಸ್ತನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಪೋಷಣೆ ಪಡೆದು ಒಂದಾಗಿ ಜೋಡಿಸಲಾಗಿ ದೇವರು ಬೆಳೆಸುವಂತೆ ಬೆಳೆಯುತ್ತದೆ.


ಈಗ ನೀವು ಕ್ರಿಸ್ತನ ದೇಹವಾಗಿದ್ದೀರಿ. ನಿಮ್ಮಲ್ಲಿ ಪ್ರತಿಯೊಬ್ಬರೂ ಆ ದೇಹದ ಅಂಗಗಳಾಗಿದ್ದೀರಿ.


ಕ್ರಿಸ್ತನ ದೇಹವನ್ನು ಕಟ್ಟುವುದಕ್ಕಾಗಿಯೂ ದೇವಜನರನ್ನು ಸೇವಾ ಕೆಲಸಕ್ಕಾಗಿ ಪರಿಣಿತರನ್ನಾಗಿ ಮಾಡುವುದಕ್ಕಾಗಿಯೂ ಕ್ರಿಸ್ತನು ಅವರನ್ನು ಕೊಟ್ಟ ಉದ್ದೇಶವಾಗಿತ್ತು.


ಪ್ರತಿ ಪುರುಷನಿಗೂ ಕ್ರಿಸ್ತನು ಶಿರಸ್ಸು, ಸ್ತ್ರೀಗೆ ಪುರುಷನು ಶಿರಸ್ಸು ಮತ್ತು ಕ್ರಿಸ್ತನಿಗೆ ದೇವರು ಶಿರಸ್ಸಾಗಿದ್ದಾರೆ, ಎಂಬುದನ್ನು ನೀವು ತಿಳಿಯಬೇಕೆಂಬುದು ನನ್ನ ಅಪೇಕ್ಷೆ.


ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ಏಕೆಂದರೆ, ಕ್ರಿಸ್ತ ಯೇಸು ಸಭೆಗೆ ಶಿರಸ್ಸಾಗಿರುವ ಪ್ರಕಾರ ಗಂಡನು ಹೆಂಡತಿಗೆ ಶಿರಸ್ಸಾಗಿದ್ದಾನೆ. ಕ್ರಿಸ್ತ ಯೇಸು ತಮ್ಮ ಸಭೆ ಎಂಬ ದೇಹಕ್ಕೆ ರಕ್ಷಕರಾಗಿದ್ದಾರೆ.


ಅವನು ಬಂದು ಆ ಗೇಣಿಗೆದಾರರನ್ನು ಸಂಹರಿಸಿ ದ್ರಾಕ್ಷಿಯ ತೋಟವನ್ನು ಬೇರೆಯವರಿಗೆ ಒಪ್ಪಿಸುವನು,” ಎಂದರು. ಜನರು ಇದನ್ನು ಕೇಳಿದಾಗ, “ಹಾಗೆ ಎಂದಿಗೂ ಆಗಬಾರದು!” ಎಂದರು.


ನನಗಾದರೋ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಶಿಲುಬೆಯನ್ನು ಬಿಟ್ಟು ಹೆಚ್ಚಳ ಪಡುವುದು ಬೇಡವೇ ಬೇಡ. ಅವರ ಮೂಲಕ ಲೋಕವು ನನ್ನ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡಿತು. ನಾನು ಲೋಕದ ಪಾಲಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ.


ಹಾಗಾದರೆ ನಿಯಮವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ಆಗಬಾರದು! ಕೊಡಲಾಗಿದ್ದ ನಿಯಮವು ಒಂದು ವೇಳೆ ಜೀವವನ್ನು ನೀಡುವುದಕ್ಕೆ ಶಕ್ತಿಯುಳ್ಳದ್ದಾಗಿದ್ದರೆ, ನಿಶ್ಚಯವಾಗಿಯೂ ಮೋಶೆಯ ನಿಯಮದಿಂದ ನೀತಿವಂತರಾಗುತ್ತಿದ್ದೆವು.


“ಆದರೆ, ನಾವು ಕ್ರಿಸ್ತ ಯೇಸುವಿನಲ್ಲಿ ನೀತಿವಂತರಾಗಲು ಪ್ರಯತ್ನಿಸುವ ನಾವೂ ಪಾಪಿಗಳಾಗಿ ಇರುವುದಾದರೆ, ಕ್ರಿಸ್ತ ಯೇಸು ಪಾಪಕ್ಕೆ ಪ್ರೋತ್ಸಾಹ ನೀಡಿದ ಹಾಗಾಗುವುದೋ? ಎಂದಿಗೂ ಇಲ್ಲ.


“ಆಹಾರವು ಹೊಟ್ಟೆಗಾಗಿಯೂ, ಹೊಟ್ಟೆಯು ಆಹಾರಕ್ಕಾಗಿಯೂ ಇದೆ,” ಎಂದು ನೀವು ಹೇಳುತ್ತೀರಿ. ಆದರೆ ದೇವರು ಇವೆರಡನ್ನೂ ನಾಶಮಾಡುವರು. ದೇಹವು ಲೈಂಗಿಕ ಅನೈತಿಕತೆಗಾಗಿರುವಂಥದ್ದಲ್ಲ, ಆದರೆ ಕರ್ತ ದೇವರಿಗೋಸ್ಕರವಾಗಿದೆ. ಕರ್ತದೇವರು ದೇಹಕ್ಕೋಸ್ಕರ ಇದ್ದಾರೆ.


ಹಾಗಾದರೆ ಒಳ್ಳೆಯದಾಗಿರುವ ನಿಯಮವೇ ನನಗೆ ಮರಣಕ್ಕೆ ಕಾರಣವಾಯಿತೋ? ಎಂದಿಗೂ ಇಲ್ಲ! ಆದರೂ ಪಾಪವು ಪಾಪವೇ ಎಂದು ಕಾಣುವಂತೆ ಒಳ್ಳೆಯದಾಗಿರುವ ನಿಯಮದ ಮೂಲಕವೇ ಪಾಪವು ನನ್ನಲ್ಲಿ ಮರಣವು ಉಂಟಾಗುವಂತೆ ಮಾಡಿತು. ಈ ರೀತಿಯಾಗಿ ಆಜ್ಞೆಯ ಮೂಲಕ ಪಾಪವು ಘೋರವಾದದ್ದೇ ಎಂದು ಕಂಡುಬರಲು ಸಾಧ್ಯವಾಯಿತು.


ಹಾಗಾದರೆ ನಾವು ಏನು ಹೇಳೋಣ? ನಿಯಮವೇ ಪಾಪವಾಗಿದೆಯೋ? ಎಂದಿಗೂ ಇಲ್ಲ. ಆದರೂ ನಿಯಮವನ್ನು ಬಿಟ್ಟು ಬೇರಾವುದರ ಮೂಲಕವೂ ಪಾಪವೆಂದರೆ ಏನೆಂದು ನನಗೆ ತಿಳಿದುಕೊಳ್ಳಲು ಸಾಧ್ಯವಿರಲಿಲ್ಲ. ನಿಯಮವು, “ದುರಾಶೆ ಪಡಬೇಡ,” ಎಂದು ಹೇಳದೆ ಇರುತ್ತಿದ್ದರೆ ದುರಾಶೆ ಎಂದರೆ ಏನೆಂದು ನಾನು ತಿಳಿಯಲು ಸಾಧ್ಯವಿರಲಿಲ್ಲ.


ಹಾಗಾದರೆ ಏನು? ನಾವು ನಿಯಮಕ್ಕೆ ಅಧೀನರಾಗಿರದೆ ಕೃಪೆಗೆ ಅಧೀನರಾಗಿರುತ್ತೇವೆಂದು ಪಾಪ ಮಾಡಬಹುದೋ? ಎಂದಿಗೂ ಇಲ್ಲ!


ಎಂದಿಗೂ ಹಾಗಾಗದಿರಲಿ! ನಾವು ಪಾಪದ ಪಾಲಿಗೆ ಸತ್ತೆವು, ನಾವು ಇನ್ನೂ ಪಾಪದಲ್ಲಿ ಜೀವಿಸುವುದು ಹೇಗೆ?


ಹಾಗಾದರೆ, ನಾವು ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ. ಹಾಗಾದರೆ, ನಾವು ನಂಬಿಕೆಯ ಮೂಲಕ ನಿಯಮವನ್ನು ನಿರರ್ಥಕಗೊಳಿಸುತ್ತೇವೋ? ಎಂದಿಗೂ ಇಲ್ಲ. ನಾವು ನಿಯಮವನ್ನು ಸ್ಥಿರಪಡಿಸುತ್ತೇವಷ್ಟೇ.


ಆಗ ಯೋಸೇಫನು, “ಹಾಗೆ ಎಂದಿಗೂ ಆಗಬಾರದು. ಯಾರ ಬಳಿಯಲ್ಲಿ ಆ ಪಾತ್ರೆಯು ಸಿಕ್ಕಿತೋ, ಅವನು ನನಗೆ ದಾಸನಾಗಿರಲಿ. ಆದರೆ ನೀವು ಸಮಾಧಾನವಾಗಿ ನಿಮ್ಮ ತಂದೆಯ ಬಳಿಗೆ ಹೋಗಿರಿ,” ಎಂದನು.


ಎಂದಿಗೂ ಹಾಗೆ ಆಗದಿರಲಿ. ದೇವರು ಅನ್ಯಾಯಗಾರರಾಗಿದ್ದರೆ ಲೋಕಕ್ಕೆ ನ್ಯಾಯತೀರಿಸುವುದು ಹೇಗೆ?


ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಈ ಜೀವನದ ವ್ಯಾಜ್ಯಗಳನ್ನು ಕುರಿತು ತೀರ್ಪು ಮಾಡುವುದು ಎಷ್ಟು ಸುಲಭವಲ್ಲವೇ?


ಆದರೆ ಕರ್ತ ದೇವರೊಂದಿಗೆ ಅನ್ಯೋನ್ಯತೆಯಲ್ಲಿರುವವನು ಅವರೊಂದಿಗೆ ಒಂದೇ ಆತ್ಮವಾಗಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು