Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 6:3 - ಕನ್ನಡ ಸಮಕಾಲಿಕ ಅನುವಾದ

3 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಈ ಜೀವನದ ವ್ಯಾಜ್ಯಗಳನ್ನು ಕುರಿತು ತೀರ್ಪು ಮಾಡುವುದು ಎಷ್ಟು ಸುಲಭವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬುದು ನಿಮಗೆ ತಿಳಿಯದೋ? ಹಾಗಾದರೆ ಇಹಲೋಕ ಜೀವನದ ವಿಷಯಗಳ ಕುರಿತು ನಾವು ಎಷ್ಟೋ ಹೆಚ್ಚಾಗಿ ತೀರ್ಪುಮಾಡಬಹುದಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇವದೂತರಿಗೂ ನಾವು ನ್ಯಾಯತೀರ್ಪು ಮಾಡುವೆವೆಂದು ನಿಮಗೆ ತಿಳಿಯದೋ? ಹೀಗಿರುವಲ್ಲಿ, ಈ ಜೀವನದ ಸಮಸ್ಯೆಗಳನ್ನು ಕುರಿತು ನ್ಯಾಯತೀರ್ಪು ಮಾಡುವುದು ಎಷ್ಟೋ ಸುಲಭವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾವು ದೇವದೂತರಿಗೂ ತೀರ್ಪುಮಾಡುವೆವೆಂಬದು ನಿಮಗೆ ತಿಳಿಯದೋ? ಐಹಿಕ ಜೀವದ ಕಾರ್ಯಗಳನ್ನು ಕುರಿತು ನಾವು ತೀರ್ಪುಮಾಡುವದು ದೊಡ್ಡದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮುಂದಿನ ಕಾಲದಲ್ಲಿ ನಾವು ದೇವದೂತರಿಗೂ ನ್ಯಾಯತೀರಿಸುತ್ತೇವೆ ಎಂಬುದು ನಿಮಗೆ ಗೊತ್ತಿದೆ. ಆದ್ದರಿಂದ ಈ ಜೀವಿತದ ಸಂಗತಿಗಳನ್ನು ಕುರಿತು ನಾವು ತೀರ್ಪುಮಾಡಬಲ್ಲೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ದೆವಾಚ್ಯಾ ದುತಾತ್ನಿ ಸೈತ್ ಅಮಿ ಝಡ್ತಿ ಕರ್ತಾವ್ ಮನುನ್ ತುಮ್ಕಾ ಗೊತ್ತ್ ನಾ ಕಾಯ್? ತರ್ ಹ್ಯಾ ಜಿವನಾಚ್ಯಾ ಚಿಲ್ಲರ್ ಸಂಗ್ತಿಯಾಂಚ್ಯಾ ವಿಶಯಾತ್ ತುಮಿ ನಿರ್ನಯ್ ದಿತಲ್ಲೆ ಮೊಟೆ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 6:3
14 ತಿಳಿವುಗಳ ಹೋಲಿಕೆ  

ತಮ್ಮ ಅಧಿಕಾರದ ಸ್ಥಾನವನ್ನು ಕಾಪಾಡದೆ, ತಮ್ಮ ಸ್ವಂತ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ಅವರು ನಿತ್ಯವಾದ ಬೇಡಿಗಳನ್ನು ಹಾಕಿ, ಮಹಾದಿನದ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಕಾದಿಟ್ಟಿದ್ದಾರೆ.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆದ್ದರಿಂದ ಇಂಥ ವ್ಯಾಜ್ಯಗಳ ಬಗ್ಗೆ ವ್ಯಾಜ್ಯಗಳಿದ್ದರೂ ಸಭೆಯಲ್ಲಿ ಮರ್ಯಾದೆ ಇಲ್ಲದವರನ್ನು ನ್ಯಾಯಾಧೀಶರಾಗಿ ನೇಮಿಸುವಿರೋ?


ಬೀಜ ಬಿದ್ದ ಮುಳ್ಳುನೆಲವು ಯಾರೆಂದರೆ ವಾಕ್ಯವನ್ನು ಕೇಳಿದ ಮೇಲೆ ಮುಂದುವರಿದು, ಈ ಜೀವನದ ಚಿಂತೆಗಳಿಂದಲೂ ಐಶ್ವರ್ಯಗಳಿಂದಲೂ ಮತ್ತು ಭೋಗಗಳಿಂದಲೂ ಅದುಮಿಬಿಟ್ಟು, ಪರಿಪಕ್ವತೆಗೆ ಫಲಕೊಡದಿದ್ದವರು.


“ನಿಮ್ಮ ಮೇಲೆ ಆ ದಿನವು ಉರುಲಿನಂತೆ ಫಕ್ಕನೆ ಬಾರದಂತೆ ನೀವು ಅತಿಭೋಜನದಿಂದಲೂ ಅಮಲಿನಿಂದಲೂ ಈ ಜೀವನದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗದಂತೆ, ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ.


ಏಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ ನನ್ನನ್ನು ತೊರೆದುಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ, ತೀತನು ದಲ್ಮಾತ್ಯಕ್ಕೂ ಹೋದನು.


ತನ್ನನ್ನು ಸೈನಿಕನನ್ನಾಗಿ ಆರಿಸಿಕೊಂಡ ನಾಯಕನನ್ನು ಮೆಚ್ಚಿಸಬೇಕೆಂದು ಯುದ್ಧಕ್ಕೆ ಹೋಗುವವನು ಈ ಜೀವನದ ವ್ಯವಹಾರಗಳಲ್ಲಿ ಸಿಕ್ಕಿಕೊಳ್ಳಲಾರನು.


ದೇವದೂತರು ಪಾಪಮಾಡಿದಾಗ ದೇವರು ಅವರನ್ನು ಸುಮ್ಮನೆ ಬಿಡದೆ ನರಕಕ್ಕೆ ದೊಬ್ಬಿ ನ್ಯಾಯತೀರ್ಪನ್ನು ಹೊಂದುವುದಕ್ಕೆ ಬಂಧಿಸಿ, ಕತ್ತಲೆಯ ಸಂಕೋಲೆಗಳಿಗೆ ಒಪ್ಪಿಸಿದರು.


ಯೆಹೋವ ದೇವರೇ, ಈ ಲೋಕಜೀವನದಲ್ಲಿಯಷ್ಟೇ ಪ್ರತಿಫಲವೆಂದು ತಿಳಿಯುವ ಜನರಿಂದ, ನನ್ನನ್ನು ನಿಮ್ಮ ಹಸ್ತದ ಮೂಲಕ ರಕ್ಷಿಸಿ ಕಾಪಾಡಿರಿ. ಅಂಥ ಜನರಿಗಾಗಿ ನೀವು ಸಂಗ್ರಹಿಸಿ ಇಟ್ಟಿರುವುದು ಅವರ ಹೊಟ್ಟೆ ತುಂಬಲಿ; ಅವರ ಮಕ್ಕಳು ಅದರಿಂದ ಸಮೃದ್ಧಿ ಹೊಂದಲಿ, ಅವರ ಚಿಕ್ಕಮಕ್ಕಳಿಗೂ ಉಳಿದದ್ದು ಸಿಕ್ಕಲಿ.


ಪುರಾತನ ಮನುಷ್ಯನು ಬಂದು ಮಹೋನ್ನತನ ಪರಿಶುದ್ಧರಿಗೆ ನ್ಯಾಯತೀರ್ಪು ಕೊಡುವವರೆಗೂ, ಪರಿಶುದ್ಧರು ರಾಜ್ಯವನ್ನು ವಶಪಡಿಸಿಕೊಳ್ಳುವ ಕಾಲದವರೆಗೂ ಅವರ ಮೇಲೆ ಜಯವನ್ನು ಹೊಂದಿತು.


ನೀವು ಯಾರಾದರೊಬ್ಬರಿಗೆ ವಿಧೇಯರಾಗಿರುವುದಕ್ಕಾಗಿ ಗುಲಾಮರಾಗಿ ನಿಮ್ಮನ್ನು ಒಪ್ಪಿಸಿಕೊಟ್ಟಾಗ, ನೀವು ಅವನಿಗೆ ವಿಧೇಯರಾದ ಗುಲಾಮರಾಗುತ್ತೀರಿ ಎಂಬುದು ನಿಮಗೆ ತಿಳಿಯದೋ? ಮರಣಕ್ಕೆ ನಡೆಸುವ ಪಾಪಕ್ಕೆ ನೀವು ಗುಲಾಮರಾಗಿರಬಹುದು ಇಲ್ಲವೆ ನೀತಿಗೆ ನಡೆಸುವ ವಿಧೇಯತೆಗೆ ಒಳಪಟ್ಟಿರಬಹುದು.


ನಿಮ್ಮ ದೇಹಗಳು ಕ್ರಿಸ್ತ ಯೇಸುವಿನ ಅಂಗಗಳಾಗಿವೆ ಎಂಬುದು ನಿಮಗೆ ತಿಳಿಯದೋ? ಹೀಗಿರಲಾಗಿ ನಾವು ಕ್ರಿಸ್ತ ಯೇಸುವಿನ ಅಂಗಗಳಾಗಿರುವಂಥವುಗಳನ್ನೇ ತೆಗೆದುಕೊಂಡು ವೇಶ್ಯೆಯ ಅಂಗಗಳನ್ನಾಗಿ ಮಾಡಬಹುದೇ? ಎಂದಿಗೂ ಬೇಡ.


ವೇಶ್ಯೆಯನ್ನು ಸೇರುವವನು ಅವಳೊಂದಿಗೆ ಒಂದೇ ದೇಹವಾಗುವನೆಂಬುದು ನಿಮಗೆ ತಿಳಿಯದೋ? “ಅವರಿಬ್ಬರೂ ಒಂದೇ ಶರೀರವಾಗಿರುವರು,” ಎಂದು ಹೇಳಲಾಗಿದೆಯಲ್ಲವೇ?


ದೇವರಿಂದ ನಿಮಗೆ ದೊರಕಿ, ನಿಮ್ಮಲ್ಲಿ ವಾಸವಾಗಿರುವ ಪವಿತ್ರಾತ್ಮರ ಆಲಯವು ನಿಮ್ಮ ದೇಹವಾಗಿದೆ ಎಂಬುದು ನಿಮಗೆ ತಿಳಿಯದೋ? ನೀವು ನಿಮ್ಮ ಸ್ವಂತ ಸೊತ್ತಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು