Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:19 - ಕನ್ನಡ ಸಮಕಾಲಿಕ ಅನುವಾದ

19 ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ. ದೇವರ ಆಜ್ಞೆಗಳನ್ನು ಕೈಗೊಳ್ಳುವುದೇ ಪ್ರಯೋಜನಕರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸುನ್ನತಿ ಇರುವುದೋ ಸುನ್ನತಿ ಇಲ್ಲದಿರುವುದೋ ಪ್ರಾಮುಖ್ಯವಲ್ಲ. ದೇವರ ಆಜ್ಞೆಗಳನ್ನು ಅನುಸರಿಸಿ ನಡೆಯುವುದೇ ಮುಖ್ಯವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಮುಖ್ಯವಲ್ಲ, ದೇವರ ಆಜ್ಞೆಗಳಿಗೆ ವಿಧೇಯನಾಗಿರುವುದೇ ಮುಖ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸುನ್ನತಿಯಿದ್ದರೂ ಪ್ರಯೋಜನವಿಲ್ಲ, ಸುನ್ನತಿಯಿಲ್ಲದಿದ್ದರೂ ಪ್ರಯೋಜನವಿಲ್ಲ; ದೇವರ ಕಟ್ಟಳೆಗಳನ್ನು ಅನುಸರಿಸಿ ನಡೆಯುವದೇ ಪ್ರಯೋಜನವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಸುನ್ನತಿಯನ್ನು ಮಾಡಿಸಿಕೊಳ್ಳುವುದಾಗಲಿ ಮಾಡಿಸಿಕೊಳ್ಳದಿರುವುದಾಗಲಿ ಮುಖ್ಯವಲ್ಲ. ದೇವರ ಆಜ್ಞೆಗಳಿಗೆ ವಿಧೇಯರಾಗುವುದೇ ಮುಖ್ಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಸುನ್ನತ್ ಕರುನ್ ನಾ ಹೊಲ್ಯಾರ್ ಕರಿನಸ್ತಾನಾ ರ್‍ಹಾತಲೆ ಮುಖ್ಯ್ ನ್ಹಯ್ ದೆವಾಚೆ ಖಾಯ್ದೆ ಪಾಳ್ತಲೆ ಮುಖ್ಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:19
16 ತಿಳಿವುಗಳ ಹೋಲಿಕೆ  

ಸುನ್ನತಿಯಾಗುವುದರಿಂದ ಇಲ್ಲವೆ, ಸುನ್ನತಿಯಾಗದೆ ಇರುವುದರಿಂದ ಏನೂ ಪ್ರಯೋಜನವಿಲ್ಲ. ಆದರೆ ಹೊಸ ಸೃಷ್ಟಿಯೇ ಬೇಕು.


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


ಯೆಹೂದ್ಯರು ಯೆಹೂದ್ಯರಲ್ಲದವರು, ಸುನ್ನತಿ ಹೊಂದಿದವರು, ಸುನ್ನತಿ ಹೊಂದದವರು, ನಾಗರಿಕ, ಅನಾಗರಿಕ, ಆಳು, ಸ್ವತಂತ್ರರು ಎಂಬ ಭೇದವಿಲ್ಲ. ಆದರೆ ಕ್ರಿಸ್ತ ಯೇಸುವೇ ಸಮಸ್ತರಲ್ಲಿಯೂ ಸಮಸ್ತವೂ ಆಗಿದ್ದಾರೆ.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ, ಯೆಹೂದ್ಯರು ಯೆಹೂದ್ಯರಲ್ಲದವರು ಎಂದೂ ದಾಸರು ಸ್ವತಂತ್ರರು ಎಂದೂ ಗಂಡು ಹೆಣ್ಣು ಎಂದೂ ಭೇದವಿಲ್ಲ.


ಆದರೆ ಆಹಾರವು ನಮ್ಮನ್ನು ದೇವರ ಸಮೀಪಕ್ಕೆ ಸೇರಿಸಲಾರದು. ಅದನ್ನು ತಿನ್ನದಿದ್ದರೆ ನಮಗೆ ನಷ್ಟವಿಲ್ಲ, ತಿಂದರೆ ನಮಗೆ ಲಾಭವಿಲ್ಲ.


ಸುನ್ನತಿಯವರಿಗೂ ಸುನ್ನತಿಯಿಲ್ಲದವರಿಗೂ ಒಂದೇ ನಂಬಿಕೆಯ ಮೂಲಕ ನೀತಿವಂತರೆಂದು ನಿರ್ಣಯಿಸುವುದಕ್ಕೆ ಒಬ್ಬರೇ ದೇವರಿದ್ದಾರೆ.


ನಾನು ನಿಮಗೆ ಆಜ್ಞಾಪಿಸಿದ್ದನ್ನು ಪಾಲಿಸಿದರೆ ನೀವು ನನ್ನ ಸ್ನೇಹಿತರು.


ಆದ್ದರಿಂದ ಈ ಆಜ್ಞೆಗಳಲ್ಲಿ ಅತ್ಯಂತ ಚಿಕ್ಕದಾದ ಒಂದನ್ನು ಮೀರಿ, ಹಾಗೆಯೇ ಮೀರಲು ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಅತಿ ಚಿಕ್ಕವನೆಂದು ಎನಿಸಿಕೊಳ್ಳುವನು. ಆದರೆ ಈ ಆಜ್ಞೆಗಳನ್ನು ಪಾಲಿಸಿ ಇತರರಿಗೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ದೊಡ್ಡವನೆಂದು ಎನಿಸಿಕೊಳ್ಳುವನು.


ಅದಕ್ಕೆ ಸಮುಯೇಲನು ಹೇಳಿದ್ದೇನೆಂದರೆ, “ಯೆಹೋವ ದೇವರ ವಾಕ್ಯಕ್ಕೆ ವಿಧೇಯನಾದರೆ, ಯೆಹೋವ ದೇವರಿಗೆ ಆಗುವ ಸಂತೋಷ ದಹನಬಲಿಗಳಲ್ಲಿಯೂ ಯಜ್ಞಗಳಲ್ಲಿಯೂ ಆಗುವುದೋ? ಇಗೋ, ಯಜ್ಞಕ್ಕಿಂತ ವಿಧೇಯತೆಯು, ಟಗರುಗಳ ಕೊಬ್ಬಿಗಿಂತ ಮಾತುಕೇಳುವುದೇ ಉತ್ತಮವಾಗಿರುವುದು.


ಈಜಿಪ್ಟಿನಿಂದ ಹೊರಟ ಗಂಡಸರೆಲ್ಲರಿಗೂ ಸುನ್ನತಿ ಆಗಿತ್ತು. ಆದರೆ ಈಜಿಪ್ಟಿನಿಂದ ಹೊರಟಾಗ ಮರುಭೂಮಿಯೊಳಗೆ ಮಾರ್ಗದಲ್ಲಿ ಹುಟ್ಟಿದ ಗಂಡುಮಕ್ಕಳಿಗೆ ಸುನ್ನತಿ ಆಗಿರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು