Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 7:29 - ಕನ್ನಡ ಸಮಕಾಲಿಕ ಅನುವಾದ

29 ಪ್ರಿಯರೇ, ಸಮಯವು ಕೊಂಚವಾಗಿರುವುದರಿಂದ ಇನ್ನು ಮೇಲೆ, ಮದುವೆಯಾದವರು ಮದುವೆಯಾಗದವರಂತೆಯೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಸಹೋದರರೇ, ನಾನು ಹೇಳುವುದೇನಂದರೆ, ಸಮಯವು ಅತಿಕಡಿಮೆಯಿರುವುದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಪ್ರಿಯ ಸಹೋದರರೇ, ನನ್ನ ಅಭಿಪ್ರಾಯ ಇದು: ಉಳಿದಿರುವ ಕಾಲವು ಕೊಂಚ ಮಾತ್ರ. ಆದ್ದರಿಂದ ಮದುವೆಯಾದವರು ಮದುವೆಯಾಗದವರೋ ಎಂಬಂತೆ ನಡೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಸಹೋದರರೇ, ನಾನು ಹೇಳುವದೇನಂದರೆ - ಸಮಯವು ಸಂಕೋಚವಾದದ್ದರಿಂದ ಇನ್ನು ಮೇಲೆ ಹೆಂಡತಿಯುಳ್ಳವರು ಹೆಂಡತಿಯಿಲ್ಲದವರಂತೆಯೂ, ಅಳುವವರು ಅಳದವರಂತೆಯೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಸಹೋದರ ಸಹೋದರಿಯರೇ, ನನ್ನ ಅಭಿಪ್ರಾಯ ಇದು: ನಮಗೆ ಹೆಚ್ಚು ಸಮಯ ಉಳಿದಿಲ್ಲ. ಆದ್ದರಿಂದ, ಹೆಂಡತಿಯರನ್ನು ಹೊಂದಿರುವ ಜನರು ಹೆಂಡತಿಯರಿಲ್ಲದವರಂತೆ ಪ್ರಭುವಿನ ಸೇವೆಗಾಗಿ ತಮ್ಮ ಸಮಯವನ್ನು ಉಪಯೋಗಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 ಭಾವಾನು ಅನಿ ಭೆನಿಯಾನು, ಮಿಯಾ ತುಮ್ಕಾ ಸಾಂಗುಕ್ ಬಗ್ತಲೆ ಎವ್ಡೆಚ್ ಠರವಲ್ಲೊ ಎಳ್ ಬಾರಿಕ್ ಹೊವ್ನಗೆತ್ ಯೆಲೊ, ತಸೆ ಮನುನ್ ಹಿತ್ನಾ ಫಿಡೆ ಬಾಯ್ಕೊ ಹೊತ್ತ್ಯಾನಿ ಬಾಯ್ಕೊ ನಸಲ್ಲ್ಯಾ ಸಾರ್ಕೆ ಚಲುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 7:29
23 ತಿಳಿವುಗಳ ಹೋಲಿಕೆ  

ಲೋಕವೂ ಲೋಕದ ಆಶೆಗಳೂ ಗತಿಸಿಹೋಗುತ್ತವೆ. ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಜೀವಿಸುವನು.


ಲೋಕದ ವಸ್ತುಗಳನ್ನು ಉಪಯೋಗಿಸುವವರು ಅದರಲ್ಲಿಯೇ ಮಗ್ನರಾಗದಿರಲಿ. ಏಕೆಂದರೆ ಈಗಿರುವ ಪ್ರಪಂಚ ಗತಿಸಿಹೋಗುತ್ತಿದೆ.


ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ. ಆದ್ದರಿಂದ ನೀವು ಸ್ವಸ್ಥಚಿತ್ತರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರಿ.


“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿರುವ ಸಮಾಧಿಯಲ್ಲಿ, ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮನುಷ್ಯನ ಜೀವಮಾನದ ಎಲ್ಲಾ ದಿವಸಗಳಲ್ಲಿ ಅವನಿಗೆ ಯಾವುದು ಒಳ್ಳೆಯದೆಂದು ಯಾರಿಗೆ ಗೊತ್ತು? ಅವನು ಹೊರಟುಹೋದ ಮೇಲೆ ಸೂರ್ಯನ ಕೆಳಗೆ ಏನಾಗುತ್ತದೆಂದು ಅವನಿಗೆ ಯಾರು ಹೇಳಬಲ್ಲರು?


ಸಮಯವು ಬಂತು, ದಿನವು ಬಂದೇಬಿಟ್ಟಿತು. ಕೊಂಡುಕೊಳ್ಳುವವನಿಗೆ ಸಂತೋಷವಿಲ್ಲದಿರಲಿ, ಮಾರುವವನು ದುಃಖಿಸದಿರಲಿ. ಏಕೆಂದರೆ ಆ ಎಲ್ಲಾ ಜನಸಮೂಹದ ಮೇಲೆ ನನ್ನ ರೌದ್ರವಿದೆ.


ಒಂದು ವೇಳೆ ನೀನು ಮದುವೆ ಮಾಡಿಕೊಂಡರೆ, ಅದು ಪಾಪವಲ್ಲ. ಕನ್ಯೆಯು ಮದುವೆ ಮಾಡಿಕೊಂಡರೆ, ಅದು ಸಹ ಪಾಪವಲ್ಲ. ಆದರೆ ಮದುವೆ ಮಾಡಿಕೊಳ್ಳುವವರು ಈ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸುವರು. ನಾನು ನಿಮ್ಮನ್ನು ಇದರಿಂದ ತಪ್ಪಿಸಬೇಕೆಂದು ಅಪೇಕ್ಷಿಸುತ್ತೇನೆ.


ದುಃಖಪಡುವವರು ದುಃಖಪಡದವರಂತೆಯೂ ಆನಂದ ಪಡುವವರು ಆನಂದಪಡದವರಂತೆಯೂ ವಸ್ತುಗಳ್ನು ಕೊಂಡುಕೊಳ್ಳುವವರು ತಾವು ಕೊಂಡುಕೊಂಡದ್ದು ತಮ್ಮದಲ್ಲ ಎಂಬಂತೆಯೂ


ಆದರೆ ಬರ್ಜಿಲ್ಲೈಯು ಅರಸನಿಗೆ, “ನಾನು ಅರಸನ ಸಂಗಡ ಯೆರೂಸಲೇಮಿಗೆ ಹೋಗುವಹಾಗೆ ನಾನು ಬದುಕುವ ವರುಷ ಎಷ್ಟು ಉಂಟು?


“ಮತ್ತೊಬ್ಬನು, ‘ನಾನು ಮದುವೆ ಮಾಡಿಕೊಂಡಿದ್ದೇನೆ, ಆದ್ದರಿಂದ ಬರಲಾರೆ,’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು