Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಕೊರಿಂಥದವರಿಗೆ 9:1 - ಕನ್ನಡ ಸಮಕಾಲಿಕ ಅನುವಾದ

1 ನಾನು ಸ್ವತಂತ್ರನಲ್ಲವೇ? ನಾನೂ ಅಪೊಸ್ತಲನಲ್ಲವೇ? ನಾನು ನಮ್ಮ ಕರ್ತ ಆಗಿರುವ ಯೇಸುವನ್ನು ಕಂಡವನಲ್ಲವೇ? ನಾನು ಕರ್ತ ದೇವರಲ್ಲಿ ಮಾಡಿದ ಕೆಲಸದ ಫಲವು ನೀವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಾನು ಸ್ವತಂತ್ರನಲ್ಲವೋ? ನಾನು ಅಪೊಸ್ತಲನಲ್ಲವೋ? ನಮ್ಮ ಕರ್ತನಾದ ಯೇಸುವನ್ನು ನಾನು ಕಂಡವನಲ್ಲವೇ? ನಾನು ಕರ್ತನಲ್ಲಿ ಮಾಡಿದ ಸೇವೆಯ ಪ್ರತಿಫಲವು ನೀವೇ ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ಸ್ವತಂತ್ರನಲ್ಲವೇ? ಪ್ರೇಷಿತನಲ್ಲವೇ? ನಮ್ಮ ಪ್ರಭು ಯೇಸುವನ್ನು ಕಂಡವನಲ್ಲವೇ? ಪ್ರಭುವಿನಲ್ಲಿ ನಾನು ಮಾಡಿದ ಸೇವೆಯ ಪ್ರತಿಫಲ ನೀವಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಾನು ಸ್ವತಂತ್ರನಲ್ಲವೇ. ಅಪೊಸ್ತಲನಲ್ಲವೇ ನಮ್ಮ ಕರ್ತನಾದ ಯೇಸುವನ್ನು ಕಂಡವನಲ್ಲವೇ. ನಾನು ಕರ್ತನ ಸೇವೆಯಲ್ಲಿ ಮಾಡಿದ ಕೆಲಸದ ಫಲವು ನೀವೇ ಅಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ಸ್ವತಂತ್ರನಾಗಿದ್ದೇನೆ; ಅಪೊಸ್ತಲನಾಗಿದ್ದೇನೆ; ನಮ್ಮ ಪ್ರಭುವಾದ ಯೇಸುವನ್ನು ನೋಡಿದ್ದೇನೆ. ನಾನು ಪ್ರಭುವಿನಲ್ಲಿ ಮಾಡಿದ ಸೇವೆಯ ಫಲವು ನೀವೇ ಆಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ಎಕ್‍ ಸ್ವತಂತ್ರ್ ಮಾನುಸ್ ನ್ಹಯ್ ಕಾಯ್? ಮಿಯಾ ಎಕ್ ಅಪೊಸ್ತಲ್ ನ್ಹಯ್ ಕಾಯ್? ಅಮ್ಚ್ಯಾ ಧನಿಯಾ ಜೆಜುಕ್ ಮಿಯಾ ಬಗುಕ್ ನಾ ಕಾಯ್? ಧನಿಯಾಸಾಟ್ನಿ ಮಿಯಾ ಕರಲ್ಲ್ಯಾ ಕಾಮಾಚೆ ಫಳ್ ತುಮಿ ನ್ಹಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಕೊರಿಂಥದವರಿಗೆ 9:1
37 ತಿಳಿವುಗಳ ಹೋಲಿಕೆ  

ಆಮೇಲೆ ಅನನೀಯನು ಆ ಮನೆಗೆ ಹೋಗಿ ಒಳಗೆ ಪ್ರವೇಶಿಸಿದನು. ತನ್ನ ಕೈಗಳನ್ನು ಸೌಲನ ಮೇಲಿಟ್ಟು, “ಸಹೋದರ ಸೌಲನೇ, ನೀನು ಇಲ್ಲಿಗೆ ಬರುತ್ತಿದ್ದಾಗ ದಾರಿಯಲ್ಲಿ ನಿನಗೆ ದರ್ಶನಕೊಟ್ಟ ಕರ್ತ ಯೇಸು, ನಿನಗೆ ಪುನಃ ದೃಷ್ಟಿ ಬರುವಂತೆಯೂ ನೀನು ಪವಿತ್ರಾತ್ಮಭರಿತನಾಗುವಂತೆಯೂ ನನ್ನನ್ನು ಕಳುಹಿಸಿದ್ದಾರೆ,” ಎಂದು ಹೇಳಲು,


ಇದಕ್ಕಾಗಿಯೇ ಸಂದೇಶ ಸಾರುವವನೂ ಅಪೊಸ್ತಲನೂ ಆಗಿರುವ ನಾನು ಯೆಹೂದ್ಯರಲ್ಲದವರಿಗೆ ನಂಬಿಗಸ್ತನಾದ ಸತ್ಯ ಬೋಧಕನಾಗಿ ನೇಮಕವಾದೆನು. ಇದು ಸುಳ್ಳಲ್ಲ, ಸತ್ಯವನ್ನೇ ಹೇಳುತ್ತೇನೆ.


ನಾನು ಬೀಜವನ್ನು ಬಿತ್ತಿದೆನು, ಅಪೊಲ್ಲೋಸನು ನೀರು ಹಾಕಿದನು, ಆದರೆ ಬೆಳೆಸಿದವರು ದೇವರೇ.


ಮರುದಿನ ರಾತ್ರಿ ಕರ್ತ ಯೇಸು ಪೌಲನ ಬಳಿಯಲ್ಲಿ ನಿಂತುಕೊಂಡು, “ಧೈರ್ಯದಿಂದಿರು! ನೀನು ಯೆರೂಸಲೇಮಿನಲ್ಲಿ ನನ್ನ ವಿಷಯದಲ್ಲಿ ಸಾಕ್ಷಿ ಕೊಟ್ಟಂತೆಯೇ ರೋಮಿನಲ್ಲಿಯೂ ಸಾಕ್ಷಿಕೊಡತಕ್ಕದ್ದು,” ಎಂದರು.


ಸೌಲನು ಪ್ರಯಾಣ ಮಾಡುತ್ತಾ ದಮಸ್ಕಕ್ಕೆ ಸಮೀಪ ಬಂದಾಗ, ಫಕ್ಕನೆ ಪರಲೋಕದಿಂದ ಒಂದು ಬೆಳಕು ಅವನ ಸುತ್ತಲೂ ಹೊಳೆಯಿತು.


ನಾನು ಸ್ವತಂತ್ರನಾಗಿದ್ದರೂ, ಯಾರಿಗೂ ಸೇರಿದವನಾಗಿರದಿದ್ದರೂ, ಹೆಚ್ಚು ಜನರನ್ನು ಸಂಪಾದಿಸಿಕೊಳ್ಳಬೇಕೆಂಬ ಉದ್ದೇಶದಿಂದ ನನ್ನನ್ನು ಎಲ್ಲರಿಗೂ ಗುಲಾಮನನ್ನಾಗಿ ಮಾಡಿಕೊಂಡೆನು.


ಈ ಸುವಾರ್ತೆಯನ್ನು ನಾನು ಸಾರುವವನಾಗಿಯೂ ಅಪೊಸ್ತಲನಾಗಿಯೂ ಯೆಹೂದ್ಯರಲ್ಲದವರಿಗೆ ಉಪದೇಶಕನಾಗಿಯೂ ದೇವರಿಂದ ನೇಮಕವಾದೆನು.


ಕ್ರಿಸ್ತ ಯೇಸು ನಮ್ಮನ್ನು ಸ್ವತಂತ್ರಕ್ಕಾಗಿಯೇ ಬಿಡುಗಡೆ ಮಾಡಿದ್ದಾರೆ. ಆದ್ದರಿಂದ ಸ್ಥಿರವಾಗಿ ನಿಲ್ಲಿರಿ. ನೀವು ನಿಯಮದ ದಾಸತ್ವದ ನೊಗದಲ್ಲಿ ಪುನಃ ಸಿಕ್ಕಿಕೊಳ್ಳಬೇಡಿರಿ.


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನಾಗುವುದಕ್ಕೆ ಕರೆಹೊಂದಿದವನೂ ದೇವರ ಸುವಾರ್ತೆಯನ್ನು ಸಾರುವುದಕ್ಕೆ ಪ್ರತ್ಯೇಕಗೊಂಡವನೂ ಆಗಿರುವ ಪೌಲನು ಬರೆಯುವ ಪತ್ರ.


ಮನುಷ್ಯರಿಂದಾಗಲಿ, ಮನುಷ್ಯನ ಮುಖಾಂತರದಿಂದಾಗಲಿ ಅಪೊಸ್ತಲನಾಗಿರದೆ ಕ್ರಿಸ್ತ ಯೇಸುವಿನ ಮುಖಾಂತರವೂ ಅವರನ್ನು ಮರಣದಿಂದ ಎಬ್ಬಿಸಿದ ತಂದೆಯಾದ ದೇವರಿಂದಲೂ ಅಪೊಸ್ತಲನಾದ ಪೌಲನೆಂಬ ನಾನೂ


ಕ್ರಿಸ್ತ ಯೇಸುವಿನ ಅಪೊಸ್ತಲರಾದ ನಾವು ನಿಮ್ಮ ಮೇಲೆ ಭಾರವನ್ನು ಹಾಕಬಹುದಾಗಿದ್ದರೂ ಮನುಷ್ಯರಿಂದ ಬರುವ ಗೌರವವನ್ನು ನಿಮ್ಮಿಂದಾಗಲೀ, ಇತರರಿಂದಾಗಲೀ, ಹುಡುಕುವವರಾಗಿರಲಿಲ್ಲ.


“ಅತ್ಯಂತ ಮಹಾ ಅಪೊಸ್ತಲರು” ಎಂದೆನಿಸಿದ ಇತರ ಅಪೊಸ್ತಲರಿಗಿಂತಲೂ ನಾನು ಕಡಿಮೆಯಾದವನಲ್ಲ ಎಂದು ಭಾವಿಸುತ್ತೇನೆ.


ದೇವರ ಚಿತ್ತಾನುಸಾರವಾಗಿ ಕ್ರಿಸ್ತ ಯೇಸುವಿನಿಂದ ಅಪೊಸ್ತಲನಾಗಲು ಕರೆಯಲಾದ ಪೌಲನೆಂಬ ನಾನು ಮತ್ತು ನಮ್ಮ ಸಹೋದರ ಸೊಸ್ಥೆನನು,


ಯೆಹೂದ್ಯರಲ್ಲದವರಾಗಿರುವ ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ನಾನು ಯೆಹೂದ್ಯರಲ್ಲದವರಿಗೆ ಅಪೊಸ್ತಲನಾಗಿರುವಷ್ಟರ ಮಟ್ಟಿಗೆ ನನ್ನ ಸೇವೆಯನ್ನು ಪ್ರಭಾವಗೊಳಿಸುತ್ತೇನೆ.


ಯೇಸುವಿನ ನಾಮದ ಮಹಿಮೆಗಾಗಿ ಯೆಹೂದ್ಯರಲ್ಲದವರಲ್ಲಿಯೂ ನಂಬಿಕೆಯ ವಿಧೇಯತೆ ಉಂಟಾಗುವುದಕ್ಕಾಗಿ ನಾವು ಯೇಸುವಿನ ಮೂಲಕವಾಗಿ ಕೃಪೆಯನ್ನೂ ಅಪೊಸ್ತಲರಾಗಿರುವುದನ್ನೂ ಹೊಂದಿದೆವು.


ಆದರೆ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ಇದನ್ನು ಕೇಳಿದಾಗ, ತಮ್ಮ ಬಟ್ಟೆಗಳನ್ನು ಹರಿದುಕೊಂಡು ಜನಸಮೂಹದ ಕಡೆಗೆ ಓಡಿಬಂದು ಕೂಗಿ ಹೇಳಿದ್ದೇನೆಂದರೆ:


ಆದರೆ ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯಗಳಾದವು. ಕೆಲವರು ಯೆಹೂದ್ಯರ ಪರವಾದರು, ಇನ್ನೂ ಕೆಲವರು ಅಪೊಸ್ತಲರ ಪರವಾದರು.


ಇವರೆಲ್ಲರೂ ಕರ್ತದೇವರನ್ನು ಆರಾಧಿಸಿ, ಉಪವಾಸಮಾಡುತ್ತಿದ್ದರು. ಆಗ ಪವಿತ್ರಾತ್ಮ ದೇವರು, “ಬಾರ್ನಬನನ್ನೂ ಸೌಲನನ್ನೂ ನಾನು ಕರೆದಿರುವ ಕಾರ್ಯಕ್ಕಾಗಿ ಅವರನ್ನು ನನಗಾಗಿ ಪ್ರತ್ಯೇಕಿಸಿರಿ,” ಎಂದರು.


ಆದರೆ ಕರ್ತ ಯೇಸುವು ಅವನಿಗೆ, “ಹೋಗು! ಯೆಹೂದ್ಯರಲ್ಲದವರಿಗೂ ಅವರ ಅರಸುಗಳಿಗೂ ಇಸ್ರಾಯೇಲ್ ದೇಶಕ್ಕೂ ನನ್ನ ಹೆಸರನ್ನು ಪ್ರಸಿದ್ಧಿಪಡಿಸಲು ಅವನು ನಾನು ಆಯ್ದುಕೊಂಡ ಸಾಧನವಾಗಿದ್ದಾನೆ.


“ಸ್ವಾಮಿ, ತಾವು ಯಾರು?” ಎಂದು ಸೌಲನು ಪ್ರಶ್ನಿಸಲು, “ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.


ನಾನು ನಿಮ್ಮ ಮನಸ್ಸಾಕ್ಷಿಯ ಬಗ್ಗೆ ಅಲ್ಲ, ಇತರರ ಮನಸ್ಸಾಕ್ಷಿಯ ಬಗ್ಗೆ ಸೂಚಿಸುತ್ತಿದ್ದೇನೆ. ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತ ನನ್ನ ಸ್ವಾತಂತ್ರ್ಯಕ್ಕೆ ಏಕೆ ಅಡ್ಡಿಯಾಗಬೇಕು?


ನಾನು ಕೃತಜ್ಞತೆ ಸಲ್ಲಿಸಿ ಆ ಊಟವನ್ನು ಮಾಡಿದರೆ, ಹಾಗೆ ದೇವರಿಗೆ ಕೃತಜ್ಞತೆ ಸಲ್ಲಿಸಿ ಮಾಡಿದ ಊಟಕ್ಕಾಗಿ ನನ್ನ ಮೇಲೆ ತಪ್ಪುಹೊರಿಸುವುದೇಕೆ?


ಇದರ ಬಗ್ಗೆ ಯಾರಿಗಾದರೂ ವಾಗ್ವಾದ ಮಾಡಬಯಸಿದರೆ, ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ.


ನೀವು ಹೊರಗಿನ ತೋರಿಕೆಗಳನ್ನು ಮಾತ್ರ ತೀರ್ಪುಮಾಡುವವರಾಗಿದ್ದೀರಿ. ಯಾರಾದರೂ ತಾನು ಯೇಸುವಿಗೆ ಸೇರಿದವನು ಎಂದು ದೃಢವಾಗಿ ನಂಬುವುದಾದರೆ, ತಾನು ಹೇಗೆ ಕ್ರಿಸ್ತ ಯೇಸುವಿನವನೋ, ಹಾಗೆಯೇ ನಾವೂ ಕ್ರಿಸ್ತ ಯೇಸುವಿನವರು ಎಂದು ಅವನು ತಿಳಿದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು