Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:17 - ಕನ್ನಡ ಸಮಕಾಲಿಕ ಅನುವಾದ

17 ನಿತ್ಯವಾದ ಅರಸರೂ ಅಮರರೂ ಅದೃಶ್ಯರೂ ಆಗಿರುವ ಜ್ಞಾನಿಯಾದ ಒಬ್ಬರೇ ದೇವರಿಗೆ ಯುಗಯುಗಾಂತರಗಳಲ್ಲಿಯೂ ಘನವೂ ಮಹಿಮೆಯೂ ಉಂಟಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸರ್ವಯುಗಗಳ ಅರಸನೂ, ಅಮರನೂ, ಅದೃಶ್ಯನೂ ಆಗಿರುವ ಏಕ ದೇವರಿಗೆ ಘನವೂ ಮಹಿಮೆಯೂ ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸರ್ವಯುಗಗಳ ಅರಸನೂ ನಿರ್ಲಯನೂ ಅದೃಶ್ಯನೂ ಆಗಿರುವ ಏಕದೇವರಿಗೆ ಯುಗಯುಗಾಂತರಗಳಲ್ಲಿಯೂ ಮಾನಪ್ರಭಾವಗಳಿರಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸದಾಕಾಲ ಆಳುವ ಅರಸನಿಗೆ ಗೌರವವೂ ಮಹಿಮೆಯೂ ಇರಲಿ. ಆತನಿಗೆ ಲಯವೆಂಬುದೇ ಇಲ್ಲ. ಆತನು ಅದೃಶ್ಯನಾಗಿರುವನು. ಒಬ್ಬನೇ ದೇವರಾದ ಆತನಿಗೆ ಗೌರವವೂ ಮಹಿಮೆಯೂ ಉಂಟಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅತ್ತಾ ತ್ಯಾ ನಿರಂತರ್ ರಾಜ್ವಟ್ ಕರ್ತಲ್ಯಾ ರಾಜಾಕ್, ಕನ್ನಾಚ್ ನಾಸ್ ಹೊಯ್ನಸಲ್ಲ್ಯಾ ಅನಿ ದಿಸ್ಟಿಕ್ ದಿಸಿನಸಲ್ಲ್ಯಾ ಎಕ್ಲ್ಯಾಚ್ ದೆವಾಕ್ ಮಹಿಮಾ ಅನಿ ಮಾನ್ ಹೊಂವ್ದಿತ್ ಸದಾ ಸರ್ವತಾಕ್ ಆಮೆನ್!

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:17
48 ತಿಳಿವುಗಳ ಹೋಲಿಕೆ  

ನಮ್ಮ ರಕ್ಷಕರಾದ ಒಬ್ಬರೇ ದೇವರಿಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಬಲವು, ಅಧಿಕಾರಗಳು ಎಂದೂ ಇದ್ದಂತೆ ಈಗಲೂ ಯಾವಾಗಲೂ ಇರಲಿ. ಆಮೆನ್.


ಇವುಗಳಾದ ಮೇಲೆ ಪರಲೋಕದಲ್ಲಿ ದೊಡ್ಡ ಸಮೂಹದ ಮಹಾಸ್ವರವನ್ನು ಕೇಳಿದೆನು. ಅವರು: “ಹಲ್ಲೆಲೂಯಾ! ರಕ್ಷಣೆಯೂ ಮಹಿಮೆಯೂ ಶಕ್ತಿಯೂ ನಮ್ಮ ದೇವರದಾಗಿವೆ!


ಯೆಹೋವ ದೇವರೇ, ಮಹತ್ವವೂ, ಪರಾಕ್ರಮವೂ, ಮಹಿಮೆಯೂ, ಜಯವೂ, ವೈಭವವೂ ನಿಮ್ಮವೇ. ಆಕಾಶಗಳಲ್ಲಿಯೂ, ಭೂಮಿಯಲ್ಲಿಯೂ ಇರುವುದೆಲ್ಲಾ ನಿಮ್ಮದೇ. ಯೆಹೋವ ದೇವರೇ, ರಾಜ್ಯವು ನಿಮ್ಮದು. ನೀವು ಸಮಸ್ತಕ್ಕೂ ತಲೆಯಾಗಿ ಉನ್ನತರು.


ಅವರು ಕುರಿಮರಿಯಾದವರ ಮೇಲೆ ಯುದ್ಧಮಾಡುವರು. ಆದರೆ ಕುರಿಮರಿಯಾದವರು ಕರ್ತರ ಕರ್ತರೂ ರಾಜಾಧಿರಾಜರೂ ಆಗಿರುವುದರಿಂದ ಅವರನ್ನು ಜಯಿಸುವರು. ಅವರೊಂದಿಗಿದ್ದವರು ದೇವರಿಂದ ಕರೆಹೊಂದಿದವರೂ ಆಯ್ದುಕೊಂಡವರೂ ನಂಬಿಗಸ್ತರೂ ಆಗಿರುವರು.”


ಕ್ರಿಸ್ತ ಯೇಸು ಅದೃಶ್ಯರಾದ ದೇವರ ಸ್ವರೂಪವೂ ಸರ್ವಸೃಷ್ಟಿಗು ಜ್ಯೇಷ್ಠ ಪುತ್ರರೂ ಆಗಿದ್ದಾರೆ.


ಆತನ ತೊಡೆಯ ಮೇಲಣ ವಸ್ತ್ರದಲ್ಲಿ: ರಾಜಾಧಿರಾಜನೂ ಕರ್ತರ ಕರ್ತನೂ. ಎಂಬ ಹೆಸರು ಬರೆದಿದೆ.


ಲಯವಿಲ್ಲದ ದೇವರ ಮಹಿಮೆಯನ್ನು ಲಯವಾಗುವ ಮನುಷ್ಯ, ಪಶು, ಪಕ್ಷಿ, ಸರ್ಪಾದಿಗಳ ಮೂರ್ತಿಗಳೊಂದಿಗೆ ಬದಲಿಸಿಕೊಂಡರು.


ದೇವರೇ, ನಿಮ್ಮ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು; ನ್ಯಾಯದಂಡವೇ ನಿಮ್ಮ ರಾಜದಂಡವಾಗಿದೆ.


ತರುವಾಯ ಜನರ ದೊಡ್ಡ ಗುಂಪಿನ ಶಬ್ದವನ್ನು ಕೇಳಿದೆನು. ಅದು ಹೀಗೆ ಹೇಳಿತು: “ಹಲ್ಲೆಲೂಯಾ! ಸರ್ವಶಕ್ತ ಆಗಿರುವ ನಮ್ಮ ಕರ್ತದೇವರು ಆಳುತ್ತಾರೆ.


ದೇವರನ್ನು ಯಾರೂ ಎಂದೂ ನೋಡಿಲ್ಲ, ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ, ದೇವರು ನಮ್ಮಲ್ಲಿ ನೆಲೆಗೊಂಡಿದ್ದಾರೆ ಮತ್ತು ಅವರ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ.


ದೇವರನ್ನು ಯಾರೂ ಎಂದೂ ಕಂಡಿಲ್ಲ; ತಂದೆ ದೇವರ ಹೃದಯಕ್ಕೆ ಹತ್ತಿರವಾಗಿರುವ ಏಕೈಕ ಪುತ್ರ ಆಗಿರುವವರೂ ಸ್ವತಃ ದೇವರೂ ಆಗಿರುವವರೂ ತಂದೆಯನ್ನು ಪ್ರಕಟಪಡಿಸಿದ್ದಾರೆ.


ನಮ್ಮನ್ನು ಶೋಧನೆಗೆ ಸೇರಿಸದೆ, ಕೇಡಿನಿಂದ ತಪ್ಪಿಸಿರಿ. ಏಕೆಂದರೆ ರಾಜ್ಯವೂ ಬಲವೂ ಮಹಿಮೆಯೂ ಸದಾಕಾಲ ನಿಮ್ಮದೇ. ಆಮೆನ್.’


ಬೆಟ್ಟಗಳು ಹುಟ್ಟುವುದಕ್ಕಿಂತ ಮುಂಚೆಯೂ ನೀವು ಲೋಕವನ್ನೂ ನಿರ್ಮಿಸುವುದಕ್ಕಿಂತ ಮುಂಚೆಯೂ ಯುಗಯುಗಾಂತರಕ್ಕೂ ನೀವು ದೇವರಾಗಿದ್ದೀರಿ.


ಯೆಹೋವ ದೇವರು ಯುಗಯುಗಾಂತರಗಳಿಗೂ ಅರಸರಾಗಿದ್ದಾರೆ; ರಾಷ್ಟ್ರಗಳು ಅವರ ದೇಶದೊಳಗಿಂದ ಹೊರಹಾಕಲಾಯಿತು.


ದೇವರ ದಾಸನಾದ ಮೋಶೆಯ ಮತ್ತು ಕುರಿಮರಿ ಆಗಿರುವವರ ಹಾಡನ್ನೂ ಹಾಡುತ್ತಾ: “ಕರ್ತ ಆಗಿರುವ ಸರ್ವಶಕ್ತ ದೇವರೇ, ನಿಮ್ಮ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯವಾದವುಗಳೂ ಆಗಿವೆ. ರಾಷ್ಟ್ರಗಳ ಅರಸರಾಗಿರುವ ನಿಮ್ಮ ಮಾರ್ಗಗಳು ನೀತಿಯುಳ್ಳವೂ ಸತ್ಯವೂ ಆಗಿವೆ.


“ಆಮೆನ್! ಸ್ತೋತ್ರ, ಮಹಿಮೆ, ಜ್ಞಾನ, ಕೃತಜ್ಞತೆ, ಗೌರವ, ಶಕ್ತಿ, ಬಲ ನಮ್ಮ ದೇವರಿಗೆ ಯುಗಯುಗಾಂತರಕ್ಕೂ ಉಂಟಾಗಲಿ. ಆಮೆನ್!” ಎಂದು ಹೇಳುತ್ತಿದ್ದರು.


ನೀವು ಕೃಪೆಯಲ್ಲಿ ಬೆಳೆಯಿರಿ ಮತ್ತು ನಮಗೆ ಕರ್ತ ಹಾಗೂ ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಅವರಿಗೆ ಈಗಲೂ ಸರ್ವಕಾಲವೂ ಮಹಿಮೆ ಇರಲಿ! ಆಮೆನ್.


ಅವರಿಗೆ ಸರ್ವಾಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ನಂಬಿಕೆಯಿಂದಲೇ ಮೋಶೆ ಅರಸನ ಕೋಪಕ್ಕೆ ಭಯಪಡದೆ ಈಜಿಪ್ಟನ್ನು ಬಿಟ್ಟುಹೋದನು. ಏಕೆಂದರೆ ಅವನು ಕಣ್ಣಿಗೆ ಕಾಣದ ದೇವರನ್ನು ಕಣ್ಣಾರೆ ಕಾಣುತ್ತಿರುವನೋ ಎನ್ನುವಷ್ಟು ದೃಢಚಿತ್ತನಾಗಿದ್ದನು.


ಶಕ್ತರಾಗಿರುವ ಒಬ್ಬರೇ ಜ್ಞಾನವಂತರಾಗಿರುವ ದೇವರಿಗೆ ಕ್ರಿಸ್ತ ಯೇಸುವಿನ ಮೂಲಕ ಎಂದೆಂದಿಗೂ ಮಹಿಮೆಯಾಗಲಿ! ಆಮೆನ್.


ಏಕೆಂದರೆ ಸಮಸ್ತವೂ ದೇವರಿಂದ ಉಂಟಾಗಿ ದೇವರ ಮೂಲಕವಾಗಿಯೂ ದೇವರಿಗಾಗಿಯೂ ಇರುತ್ತವೆ. ಮಹಿಮೆಯು ಸದಾಕಾಲವೂ ದೇವರಿಗೇ ಸಲ್ಲುವುದಾಗಿರಲಿ. ಆಮೆನ್.


ಯಾರು ಮಹಿಮೆ, ಮಾನ, ಅಮರತ್ವ ಸತ್ಕ್ರಿಯೆಗಳನ್ನು ಸಹನೆಯಿಂದ ಮಾಡುತ್ತಾರೋ ಅವರಿಗೆ ದೇವರು ನಿತ್ಯಜೀವವನ್ನು ಕೊಡುವರು.


ಹೇಗೆಂದರೆ ಕಣ್ಣಿಗೆ ಕಾಣದ ಗುಣಲಕ್ಷಣಗಳಾಗಿರುವ ದೇವರ ಗುಣವೂ ನಿತ್ಯಶಕ್ತಿಯೂ ದೈವಸ್ವಭಾವವೂ ಜಗದ ಸೃಷ್ಟಿ ದಿನದಿಂದ ಅವರು ಸೃಷ್ಟಿಸಿದವುಗಳ ಮೂಲಕ ಸ್ಪಷ್ಟವಾಗಿ ಕಂಡುಬರುತ್ತಿವೆ. ಹೀಗಿರುವುದರಿಂದ ಜನರಿಗೆ ತಪ್ಪಿಸಿಕೊಳ್ಳಲು ನೆಪ ಇಲ್ಲವಾಗಿದೆ.


ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಅನುಸರಿಸುವ ಹಾಗೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಎಲ್ಲಾ ದಿವಸ ನಾನು ನಿಮ್ಮ ಸಂಗಡ ಇರುತ್ತೇನೆ,” ಎಂದರು.


“ಆಗ ನಾನು ನನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯಿಂದ ಆಶೀರ್ವಾದ ಹೊಂದಿದವರೇ, ಬನ್ನಿರಿ, ಭೂಲೋಕಕ್ಕೆ ಅಸ್ತಿವಾರ ಹಾಕಿದ ದಿನದಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಆಸ್ತಿಯನ್ನಾಗಿ ಹೊಂದಿರಿ.


“ಆದರೆ ತನ್ನ ಮಂದೆಯಲ್ಲಿ ದೋಷವಿಲ್ಲದ ಗಂಡು ಪಶು ಇರಲಾಗಿ ಅದನ್ನು ಅರ್ಪಿಸಲು ಪ್ರಮಾಣಮಾಡಿ, ಯೆಹೋವ ದೇವರಿಗೆ ದೋಷವುಳ್ಳದ್ದನ್ನು ಅರ್ಪಿಸುವ ಮೋಸಗಾರನಿಗೆ ಶಾಪ, ಏಕೆಂದರೆ ನಾನು ಮಹಾ ಅರಸನು, ನನ್ನ ಹೆಸರು ಇತರ ಜನಾಂಗಗಳಲ್ಲಿ ಭಯಭಕ್ತಿಯುಳ್ಳದ್ದಾಗಿರಬೇಕು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


ಆತನನ್ನು ಸಕಲ ಪ್ರಜೆ, ಜನಾಂಗ, ಭಾಷೆಗಳವರು ಸೇವಿಸುವ ಹಾಗೆ ಆತನಿಗೆ ಅಧಿಕಾರವು, ಮಹತ್ವವು, ರಾಜ್ಯವು ಇವುಗಳನ್ನು ಕೊಡಲಾಯಿತು. ಈತನ ಅಧಿಕಾರವು ಎಂದಿಗೂ ಮುಗಿಯದ ನಿತ್ಯ ಅಧಿಕಾರವುಳ್ಳದ್ದು. ಈತನ ರಾಜ್ಯವು ನಾಶವಾಗದಂಥ ರಾಜ್ಯವಾಗಿದೆ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ಆ ಸಮಯದ ಅಂತ್ಯದಲ್ಲಿ ನೆಬೂಕದ್ನೆಚ್ಚರನಾದ ನಾನು ನನ್ನ ಕಣ್ಣುಗಳನ್ನು ಪರಲೋಕದ ಕಡೆಗೆ ಎತ್ತಿದೆನು. ನನ್ನ ತಿಳುವಳಿಕೆ ನನಗೆ ತಿರುಗಿ ಬಂತು. ಆಗ ನಾನು ಮಹೋನ್ನತರನ್ನು ಕೊಂಡಾಡಿದೆನು. ಸದಾಕಾಲಕ್ಕೂ ಇರುವವರಾದ ಅವರನ್ನು ಗೌರವಿಸಿ, ಮಹಿಮೆ ಪಡಿಸಿದೆನು. ಅವರ ಆಡಳಿತವು ನಿತ್ಯವಾದ ಆಡಳಿತವಾಗಿದೆ. ಅವರ ರಾಜ್ಯವು ತಲತಲಾಂತರಕ್ಕೂ ಇರುವುದು.


ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ. ಅವರು ಜೀವಸ್ವರೂಪರಾದ ದೇವರೂ, ನಿತ್ಯನಾದ ಅರಸರೂ ಆಗಿದ್ದಾರೆ. ಅವರ ರೌದ್ರದಿಂದ ಭೂಮಿ ಕಂಪಿಸುವುದು. ಅವರ ಉಗ್ರತೆಯನ್ನು ಜನಾಂಗಗಳು ತಾಳಲಾರವು.


ನಿಮ್ಮ ರಾಜ್ಯವು ಶಾಶ್ವತವಾದ ರಾಜ್ಯವಾಗಿದೆ; ನಿಮ್ಮ ಅಧಿಪತ್ಯವು ಎಲ್ಲಾ ತಲತಲಾಂತರಗಳಲ್ಲಿ ಇರುವುದು. ಯೆಹೋವ ದೇವರು ತಮ್ಮ ಎಲ್ಲಾ ಪ್ರತಿಜ್ಞೆಗಳಲ್ಲಿ ನಂಬಿಗಸ್ತರಾಗಿರುತ್ತಾರೆ. ಎಲ್ಲಾ ಕಾರ್ಯಗಳಲ್ಲಿಯೂ ಅವರ ಅನುಗ್ರಹ ಉಳಿದಿದೆ.


ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಯುಗಯುಗಕ್ಕೂ ಸ್ತುತಿಯುಂಟಾಗಲಿ. ಜನರೆಲ್ಲರೂ, “ಆಮೆನ್!” ಎಂದು ಹೇಳಲಿ. ನೀವು ಯೆಹೋವ ದೇವರನ್ನು ಸ್ತುತಿಸಿರಿ.


ಲೇವಿಯರಾದ ಯೇಷೂವ, ಕದ್ಮಿಯೇಲ್, ಬಾನೀ, ಹಷಬ್ನೆಯ, ಶೇರೇಬ್ಯ, ಹೋದೀಯ, ಶೆಬನ್ಯ, ಪೆತಹ್ಯ ಎಂಬವರು ಜನರಿಗೆ: “ಏಳಿರಿ, ಎಂದೆಂದಿಗೂ ಏಕರೀತಿಯಾಗಿರುವ ನಿಮ್ಮ ದೇವರಾಗಿರುವ ಯೆಹೋವ ದೇವರನ್ನು ಸ್ತುತಿಸಿರಿ,” ಎಂದರು. ಅನಂತರ ಅವರು, “ಯೆಹೋವ ದೇವರೇ, ಸಕಲ ಸ್ತುತಿ ಆಶೀರ್ವಾದಗಳಿಗೆ ಉನ್ನತವಾದದ್ದು ನಿಮ್ಮ ಮಹಿಮೆಯುಳ್ಳ ಹೆಸರು.


“ಆ ಅರಸರ ದಿವಸಗಳಲ್ಲಿ ಪರಲೋಕದ ದೇವರು ಎಂದಿಗೂ ನಾಶವಾಗದ ರಾಜ್ಯವನ್ನು ಸ್ಥಾಪಿಸುವರು. ಅದು ಬೇರೆ ಜನರಿಗೆ ಸೇರಿ ಹೋಗುವುದಿಲ್ಲ. ಅದು ಆ ರಾಜ್ಯಗಳನ್ನೆಲ್ಲಾ ಧ್ವಂಸಮಾಡಿ, ಮುಗಿಸಿ, ತಾನು ಎಂದೆಂದಿಗೂ ನಿಲ್ಲುವುದು.


ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.


ನನ್ನ ಹೃದಯವು ಸೊಗಸಾದ ವಿಷಯದಿಂದ ಮಿಡಿಯುತ್ತಿದೆ. ಮಹಾರಾಜನನ್ನು ಕುರಿತು ನಾನು ರಚಿಸುವೆನು ಗೀತಾಂಜಲಿ. ನನ್ನ ನಾಲಿಗೆಯು ನಿಪುಣ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.


ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರಿಗೆ, ಯುಗಯುಗಕ್ಕೂ ಸ್ತುತಿಯಾಗಲಿ. ಆಮೆನ್, ಆಮೆನ್.


ಒಬ್ಬರೇ ದೇವರಿಂದ ಬರುವ ಮಹಿಮೆಯನ್ನು ಹುಡುಕದೆ ಒಬ್ಬರಿಂದೊಬ್ಬರಿಗೆ ಬರುವ ಮಹಿಮೆಯನ್ನು ಸ್ವೀಕರಿಸುವ ನಿಮಗೆ ನಂಬಲು ಹೇಗೆ ಸಾಧ್ಯ?


ಆದರೆ ಒಳ್ಳೆಯದನ್ನು ನಡೆಸುವ ಪ್ರತಿಯೊಬ್ಬನಿಗೆ ಮಹಿಮೆಯೂ ಗೌರವವೂ ಸಮಾಧಾನವೂ ಉಂಟಾಗುತ್ತವೆ. ಯೆಹೂದ್ಯರಿಗೆ ಮೊದಲು, ಅನಂತರ ಯೆಹೂದ್ಯರಲ್ಲದವರಿಗೂ ಸಹ.


ನೀನು ಆತನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದೆಯಲ್ಲಾ? ಮಹಿಮೆಯನ್ನೂ ಮಾನವನ್ನೂ ಆತನಿಗೆ ಕಿರೀಟವನ್ನಾಗಿ ಇಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು