Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 1:5 - ಕನ್ನಡ ಸಮಕಾಲಿಕ ಅನುವಾದ

5 ಈ ಆಜ್ಞೆಯ ಗುರಿಯು ಪ್ರೀತಿಯೇ ಆಗಿರುತ್ತದೆ. ಶುದ್ಧ ಹೃದಯ, ಒಳ್ಳೆಯ ಮನಸ್ಸಾಕ್ಷಿ ಹಾಗೂ ನಿಷ್ಕಪಟವಾದ ನಂಬಿಕೆಯಿಂದ ಈ ಪ್ರೀತಿಯು ಹುಟ್ಟುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಶುದ್ಧಹೃದಯ, ಒಳ್ಳೆಯ ಮನಸ್ಸಾಕ್ಷಿ, ಪ್ರಾಮಾಣಿಕವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವಾಜ್ಞೆಯ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಿರ್ಮಲ ಹೃದಯ, ಶುದ್ಧ ಮನಸ್ಸಾಕ್ಷಿ ಹಾಗೂ ನಿಷ್ಕಪಟ ವಿಶ್ವಾಸದಿಂದ ಹುಟ್ಟುವ ಪ್ರೀತಿಯು ವೃದ್ಧಿಯಾಗಬೇಕೆಂಬುದೇ ವಾಕ್ಯೋಪದೇಶದ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಶುದ್ಧ ಹೃದಯ ಒಳ್ಳೇಮನಸ್ಸಾಕ್ಷಿ ನಿಷ್ಕಪಟವಾದ ನಂಬಿಕೆ ಎಂಬಿವುಗಳಿಂದ ಹುಟ್ಟಿದ ಪ್ರೀತಿಯೇ ದೇವವಾಕ್ಯೋಪದೇಶದ ಗುರಿಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಪ್ರೀತಿಯೇ ಈ ಆಜ್ಞೆಯ ಗುರಿಯಾಗಿದೆ. ಈ ಪ್ರೀತಿಯನ್ನು ಹೊಂದಿಕೊಳ್ಳಲು ಜನರು ಶುದ್ಧಹೃದಯ ಉಳ್ಳವರಾಗಿರಬೇಕು; ಯೋಗ್ಯವಾದ ಕಾರ್ಯವನ್ನೇ ಮಾಡುವವರಾಗಿರಬೇಕು; ಮತ್ತು ನಿಷ್ಕಪಟವಾದ ನಂಬಿಕೆಯನ್ನು ಹೊಂದಿದವರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಹ್ಯಾ ಕರಾರಾಚ್ಯಾ ನೆಮಾಚೊ ಉದ್ದೆಶ್ ಪ್ರೆಮ್ ಹೊವ್ನ್ ಹಾಯ್. ಹೆ, ಎಕ್ ಪವಿತ್ರ್ ಭುತ್ತುರ್‍ಲ್ಯಾ ಮನಾಕ್, ಬರಿ ಬುದ್ದ್ ಅನಿ ವಿಶ್ವಾಸ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 1:5
43 ತಿಳಿವುಗಳ ಹೋಲಿಕೆ  

ನಂಬಿಗಸ್ತನೂ ಒಳ್ಳೆಯ ಮನಸ್ಸಾಕ್ಷಿಯುಳ್ಳವನೂ ಆಗಿರು. ಕೆಲವರು ಈ ಒಳ್ಳೆಯ ಮನಸ್ಸಾಕ್ಷಿಯನ್ನು ತಳ್ಳಿಬಿಟ್ಟು ನಂಬಿಕೆಯ ಹಡಗನ್ನು ಒಡೆದವರ ಹಾಗೆ ಇದ್ದಾರೆ.


ಪವಿತ್ರಾತ್ಮರ ಫಲವೇನೆಂದರೆ: ಪ್ರೀತಿ, ಆನಂದ, ಸಮಾಧಾನ, ಸಹನೆ, ದಯೆ, ಸದ್ಗುಣ, ನಂಬಿಗಸ್ತಿಕೆ,


ಯೌವನದ ಆಶೆಗಳನ್ನು ಬಿಟ್ಟು ಓಡಿಹೋಗು. ಶುದ್ಧ ಹೃದಯವುಳ್ಳವರಾಗಿ ಕರ್ತ ಯೇಸುವನ್ನು ಬೇಡಿಕೊಳ್ಳುವವರ ಸಂಗಡ ನೀತಿ, ವಿಶ್ವಾಸ, ಪ್ರೀತಿ, ಸಮಾಧಾನ ಇವುಗಳನ್ನು ಬೆನ್ನಟ್ಟು.


ನಿನ್ನಲ್ಲಿರುವ ನಿಷ್ಕಪಟವಾದ ನಂಬಿಕೆಯು ನನ್ನ ನೆನಪಿನಲ್ಲಿದೆ. ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನಿಕೆಯಲ್ಲಿಯೂ ಮೊದಲು ಇದ್ದ ನಂಬಿಕೆಯು ಈಗ ನಿನ್ನಲ್ಲಿಯೂ ಇದೆಯೆಂದು ನಾನು ದೃಢವಾಗಿ ನಂಬಿದ್ದೇನೆ.


ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ನೆನೆಸಿಕೊಳ್ಳುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕರಂತೆ ದೇವರ ಸೇವೆಮಾಡುತ್ತಾ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಈ ನೀರು ದೀಕ್ಷಾಸ್ನಾನವನ್ನು ಸೂಚಿಸುವಂತದ್ದಾಗಿದೆ. ಈ ದೀಕ್ಷಾಸ್ನಾನ ಕ್ರಿಸ್ತ ಯೇಸುವಿನ ಪುನರುತ್ಥಾನದ ಮೂಲಕ ಈಗ ನಮ್ಮನ್ನು ರಕ್ಷಿಸುತ್ತದೆ. ಅದು ಮೈಕೊಳೆಯನ್ನು ಹೋಗಲಾಡಿಸುವಂಥದಲ್ಲ. ಆದರೆ ಒಳ್ಳೆಯ ಮನಸ್ಸಾಕ್ಷಿಯು ಬೇಕೆಂದು ದೇವರನ್ನು ಬೇಡಿಕೊಳ್ಳುವಂಥದ್ದಾಗಿದೆ.


ಒಳ್ಳೆಯ ಮನಸ್ಸಾಕ್ಷಿಯುಳ್ಳವರಾಗಿರಿ. ಆಗ ನೀವು ಕೆಟ್ಟದ್ದನ್ನು ಮಾಡುವವರೆಂದು ನಿಮ್ಮ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡಿ ಕ್ರಿಸ್ತ ಯೇಸುವಿನಲ್ಲಿರುವ ನಿಮ್ಮ ಒಳ್ಳೆಯ ನಡವಳಿಕೆಯ ವಿಷಯವಾಗಿ ಸುಳ್ಳಾಗಿ ದೂರು ಹೇಳುವವರು ನಾಚಿಕೊಳ್ಳುವರು.


ನೀವು ಕ್ರಿಸ್ತ ಯೇಸುವಿನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡಿದ್ದರಿಂದ ನಿಷ್ಕಪಟವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.


ತಾಳ್ಮೆಗೆ ಭಕ್ತಿಯನ್ನೂ ಭಕ್ತಿಗೆ ಸೋದರ ಸ್ನೇಹವನ್ನೂ ಸೋದರ ಸ್ನೇಹಕ್ಕೆ ಪ್ರೀತಿಯನ್ನೂ ಕೂಡಿಸಿರಿ.


ಕ್ರಿಸ್ತ ಯೇಸುವನ್ನು ನಂಬುವ ಪ್ರತಿಯೊಬ್ಬರಿಗೂ ನೀತಿಯು ದೊರಕುವಂತೆ ಕ್ರಿಸ್ತ ಯೇಸು ಮೋಶೆಯ ನಿಯಮದ ಅಂತ್ಯವಾಗಿರುತ್ತಾರೆ.


ಶುದ್ಧರಿಗೆ ಎಲ್ಲವೂ ಶುದ್ಧವೇ. ಆದರೆ ಮಲಿನವಾದವರಿಗೂ ಅವಿಶ್ವಾಸಿಗಳಿಗೂ ಯಾವುದೂ ಶುದ್ಧವಲ್ಲ. ಅವರ ಬುದ್ಧಿಯೂ ಮನಸ್ಸಾಕ್ಷಿಯೂ ಮಲಿನವಾಗಿವೆ.


ನಂಬಿಕೆಯ ರಹಸ್ಯವನ್ನು ಶುದ್ಧಮನಸ್ಸಾಕ್ಷಿಯಿಂದ ಹಿಡಿದುಕೊಂಡವರಾಗಿರಬೇಕು.


ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.


ಓ ದೇವರೇ, ಶುದ್ಧ ಹೃದಯವನ್ನು ನನ್ನಲ್ಲಿ ಸೃಷ್ಟಿಮಾಡಿರಿ, ಸ್ಥಿರವಾದ ಆತ್ಮವನ್ನು ನನ್ನಲ್ಲಿ ನವೀಕರಿಸಿರಿ.


ಎಲ್ಲಕ್ಕೂ ಮಿಗಿಲಾಗಿ ನಿಮ್ಮನಿಮ್ಮೊಳಗೆ ಯಥಾರ್ಥವಾದ ಪ್ರೀತಿ ಇರಲಿ. ಏಕೆಂದರೆ ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ದೇವರ ಸಮೀಪಕ್ಕೆ ಬನ್ನಿರಿ. ಆಗ ನಿಮ್ಮ ಸಮೀಪಕ್ಕೆ ದೇವರು ಬರುವರು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ. ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲ ಮಾಡಿಕೊಳ್ಳಿರಿ.


ಪೌಲನು ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ನನ್ನ ಸಹೋದರರೇ, ಇಂದಿನವರೆಗೂ ಒಳ್ಳೆಯ ಮನಸ್ಸಾಕ್ಷಿಯಿಂದ ನಾನು ದೇವರ ಮುಂದೆ ನಡೆದುಕೊಂಡಿದ್ದೇನೆ,” ಎಂದನು.


ಶುದ್ಧಹಸ್ತಗಳೂ ನಿರ್ಮಲವಾದ ಹೃದಯವೂ ಉಳ್ಳವನಾಗಿದ್ದು; ವಂಚನೆಯಿಂದ ಮುಕ್ತನಾಗಿ, ಮೋಸದಿಂದ ಆಣೆ ಇಡದೆಯೂ ಇರುವವನೇ.


ಕ್ರಿಸ್ತ ಯೇಸುವಿನಲ್ಲಿ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನೂ ಅವರು ಶುದ್ಧರಾಗಿರುವಂತೆಯೇ ತನ್ನನ್ನು ಶುದ್ಧಮಾಡಿಕೊಳ್ಳುತ್ತಾನೆ.


ಆದಕಾರಣ ಅಪರಾಧ ಮನಸ್ಸಾಕ್ಷಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ಶುದ್ಧ ನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಸಮೀಪಕ್ಕೆ ಬರೋಣ.


ನಾನು ಮನುಷ್ಯರ ಭಾಷೆಗಳನ್ನೂ, ದೇವದೂತರ ಭಾಷೆಗಳನ್ನೂ ಮಾತನಾಡುವವನಾದರೂ ನನಗೆ ಪ್ರೀತಿಯಿಲ್ಲದಿದ್ದರೆ, ನಾದ ಕೊಡುವ ಕಂಚೂ ಗಣಗಣಿಸುವ ತಾಳವೂ ಆಗಿದ್ದೇನೆ.


ನೀವು ಆಹಾರದಿಂದ ನಿಮ್ಮ ಸಹೋದರರನ್ನು ದುಃಖ ಪಡಿಸುವುದಾದರೆ ನೀವು ಪ್ರೀತಿಯಿಂದ ನಡೆದುಕೊಳ್ಳುವುದಿಲ್ಲ. ನೀವು ತಿನ್ನುವುದರ ಮೂಲಕ ಕ್ರಿಸ್ತನು ಯಾವನಿಗೋಸ್ಕರವಾಗಿ ಸತ್ತರೋ ಅಂಥವರನ್ನು ನಾಶಮಾಡಬೇಡಿರಿ.


ನಾನು ಕ್ರಿಸ್ತ ಯೇಸುವಿನಲ್ಲಿ ಸತ್ಯವನ್ನು ಮಾತನಾಡುತ್ತೇನೆ. ನಾನು ಸುಳ್ಳು ಹೇಳುತ್ತಾ ಇಲ್ಲ. ನನ್ನ ಮನಸ್ಸಾಕ್ಷಿಯು ಇದನ್ನು ಪವಿತ್ರಾತ್ಮ ದೇವರ ಮೂಲಕ ಖಚಿತ ಪಡಿಸುತ್ತದೆ.


ಆದ್ದರಿಂದ ದೇವರ ಮುಂದೆಯೂ ಜನರ ಮುಂದೆಯೂ ನನ್ನ ಮನಸ್ಸಾಕ್ಷಿಯನ್ನು ಯಾವಾಗಲೂ ಶುದ್ಧವಾಗಿಟ್ಟುಕೊಂಡಿರಲು ಪರಿಶ್ರಮಿಸುತ್ತಿದ್ದೇನೆ.


ದೇವರು ಅವರಿಗೂ ನಮಗೂ ಮಧ್ಯದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೆ, ವಿಶ್ವಾಸದ ಮೂಲಕ ಅವರ ಹೃದಯಗಳನ್ನು ಶುದ್ಧೀಕರಿಸಿದರು.


ಒಳ್ಳೆಯವನು ಒಳ್ಳೆಯ ಬೊಕ್ಕಸದಿಂದ ಒಳ್ಳೆಯದನ್ನೇ ಹೊರತರುತ್ತಾನೆ; ಕೆಟ್ಟವನು ಕೆಟ್ಟ ಬೊಕ್ಕಸದಿಂದ ಕೆಟ್ಟದ್ದನ್ನೇ ಹೊರತರುತ್ತಾನೆ.


ಹೃದಯದಲ್ಲಿ ಶುದ್ಧರಾಗಿರುವವರು ಧನ್ಯರು, ಅವರು ದೇವರನ್ನು ಕಾಣುವರು.


ನಾವು ದೇವರ ಪುತ್ರ ಆಗಿರುವ ಯೇಸುಕ್ರಿಸ್ತರ ಹೆಸರನ್ನು ನಂಬಿ, ಅವರು ನಮಗೆ ಆಜ್ಞಾಪಿಸಿದ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ದೇವರ ಆಜ್ಞೆಯಾಗಿರುತ್ತದೆ.


ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಶುದ್ಧಮನಸ್ಸಾಕ್ಷಿಯಿಂದ ಪ್ರತಿಯೊಂದರಲ್ಲಿಯೂ ಪ್ರಾಮಾಣಿಕವಾಗಿ ಇರಲು ಬಯಸುತ್ತೇವೆ.


ನಿತ್ಯಾತ್ಮರಿಂದ ತಮ್ಮನ್ನು ತಾವೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತ ಯೇಸುವಿನ ರಕ್ತವು ಎಷ್ಟೋ ಹೆಚ್ಚಾಗಿ ನಿರ್ಜೀವ ಕ್ರಿಯೆಗಳಿಂದ ನಮ್ಮನ್ನು ಬಿಡಿಸಿ ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುವುದಲ್ಲವೇ?


ಏಕೆಂದರೆ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಸುನ್ನತಿ ಆಗದಿದ್ದರೂ ಯಾವ ವ್ಯತ್ಯಾಸವಿರುವುದಿಲ್ಲ. ಆದರೆ ಪ್ರೀತಿಯಿಂದ ಕಾರ್ಯ ನಡೆಸುವ ನಂಬಿಕೆಯು ಮಾತ್ರ ಪ್ರಯೋಜನವಾಗಿರುತ್ತದೆ.


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.


ಈಗ ಇಸ್ರಾಯೇಲರೇ, ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಅವರ ಎಲ್ಲಾ ಮಾರ್ಗಗಳಲ್ಲಿ ನಡೆದುಕೊಂಡು, ಅವರನ್ನು ಪ್ರೀತಿಸಿ, ನಿಮ್ಮ ದೇವರಾದ ಯೆಹೋವ ದೇವರಿಗೆ ನಿಮ್ಮ ಪೂರ್ಣಹೃದಯದಿಂದಲೂ, ನಿಮ್ಮ ಪೂರ್ಣಪ್ರಾಣದಿಂದಲೂ ಸೇವೆಮಾಡಿರಿ.


‘ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವೆ,’ ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ನಾಶವಾಗುವುದಿಲ್ಲ. ಆದರೆ ಅವರು ಬೇಗನೆ ಎದ್ದು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟದ್ದನ್ನು ದ್ವೇಷಿಸಿ ಒಳ್ಳೆಯದಕ್ಕೆ ಅಂಟಿಕೊಳ್ಳಿರಿ.


ಮಗನಾದ ತಿಮೊಥೆಯನೇ, ನಿನ್ನ ವಿಷಯವಾಗಿ ಮೊದಲು ಉಂಟಾದ ಪ್ರವಾದನೆಗಳ ಪ್ರಕಾರವೇ ನೀನು ಅವುಗಳಿಂದ ಒಳ್ಳೆಯ ಯುದ್ಧವನ್ನು ನಡಿಸಬೇಕೆಂದು ಈ ಆಜ್ಞೆಯನ್ನು ನಿನಗೆ ಒಪ್ಪಿಸುತ್ತೇನೆ.


ಇವರು ದೇವರ ಮಕ್ಕಳೆಂಬುದೂ ಅವರು ಸೈತಾನನ ಮಕ್ಕಳೆಂಬುದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರ ಮಗುವಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು