Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:4 - ಕನ್ನಡ ಸಮಕಾಲಿಕ ಅನುವಾದ

4 ಎಲ್ಲಾ ಮನುಷ್ಯರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಬರಬೇಕೆಂಬುದು ದೇವರ ಚಿತ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಎಲ್ಲಾ ಮಾನವರೂ ಸತ್ಯವನ್ನರಿತು ಜೀವೋದ್ಧಾರ ಪಡೆಯಬೇಕೆಂಬುದೇ ದೈವೇಚ್ಛೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಎಲ್ಲಾ ಮನುಷ್ಯರು ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬದು ಆತನ ಚಿತ್ತವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಲ್ಲಾ ಜನರು ರಕ್ಷಿಸಲ್ಪಡಬೇಕೆಂದು, ಸತ್ಯವನ್ನು ತಿಳಿದು ಕೊಳ್ಳಬೇಕೆಂದು ದೇವರು ಬಯಸುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ಸಗ್ಳ್ಯಾಕ್ನಿ ಸುಟ್ಕಾ ಹೊವ್ಚೆ ಅನಿ ಸಗ್ಳ್ಯಾನಿ ಖರೆ ಶಾನ್ಪಾನ್ ಕಳ್ವುನ್ ಘೆವ್ಚೆ ಮನುನ್ ಆಶಾ ಕರ್‍ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:4
32 ತಿಳಿವುಗಳ ಹೋಲಿಕೆ  

ಏಕೆಂದರೆ ಯಾವುದೇ ವ್ಯಕ್ತಿಯ ಸಾವಿನಲ್ಲಿ ನನಗೆ ಸಂತೋಷವಿಲ್ಲ, ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ. ಆದಕಾರಣ ಮಾನಸಾಂತರಪಟ್ಟು ಬಾಳಿರಿ.


ಕರ್ತದೇವರು ತಮ್ಮ ವಾಗ್ದಾನದ ವಿಷಯವಾಗಿ ತಡಮಾಡುತ್ತಾರೆಂಬದಾಗಿ ಕೆಲವರು ಎಣಿಸುವ ಪ್ರಕಾರ ಅವರು ತಡಮಾಡುವವರಲ್ಲ. ಆದರೆ ಯಾವನಾದರೂ ನಾಶವಾಗುವುದರಲ್ಲಿ ಅವರು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪಡಬೇಕೆಂದು ಅಪೇಕ್ಷಿಸುವವರಾಗಿದ್ದು ನಮ್ಮ ಕಡೆಗೆ ದೀರ್ಘಶಾಂತರಾಗಿದ್ದಾರೆ.


ದುಷ್ಟನು ಸಾಯುವುದರಲ್ಲಿ ನನಗೆ ಸ್ವಲ್ಪ ಸಂತೋಷವಿರುವುದೋ?” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾನೆ. “ಅವನು ತನ್ನ ದುರ್ಮಾರ್ಗಗಳನ್ನು ಬಿಟ್ಟು ಬದುಕಿದರೆ ನನಗೆ ಸಂತೋಷವಲ್ಲವೇ?


ಏಕೆಂದರೆ ಎಲ್ಲಾ ಮನುಷ್ಯರಿಗೆ ರಕ್ಷಣೆಯನ್ನು ತರುವ ದೇವರ ಕೃಪೆಯೂ ಪ್ರತ್ಯಕ್ಷವಾಯಿತು.


ಅವರಿಗೆ ಹೇಳು, ‘ನನ್ನ ಜೀವದಾಣೆ, ನನಗೆ ದುಷ್ಟನ ಸಾವಿನಿಂದ ಸಂತೋಷವಾಗುವುದಿಲ್ಲ. ಆದರೆ ಆ ದುಷ್ಟನು ದುರ್ಮಾರ್ಗದಿಂದ ತಿರುಗಿಕೊಂಡು ಜೀವಿಸುವುದಾದರೆ ಅದರಲ್ಲಿಯೇ ನನಗೆ ಸಂತೋಷ ಸಿಗುವುದು; ಇಸ್ರಾಯೇಲಿನ ಮನೆತನದವರೇ, ನೀವು ನಿಮ್ಮ ನಿಮ್ಮ ದುಷ್ಟಮಾರ್ಗಗಳನ್ನು ಬಿಟ್ಟು ತಿರುಗಿಕೊಳ್ಳಿರಿ. ನೀವು ಸಾಯುವುದು ಏಕೆ? ಇದು ಸಾರ್ವಭೌಮ ಯೆಹೋವ ದೇವರ ವಾಕ್ಯ.’


ವಿರೋಧಿಸುವವರ ಮನಸ್ಸನ್ನು ತಾಳ್ಮೆಯಿಂದ ತಿದ್ದುವವನಾಗಿದ್ದರೆ, ದೇವರು ಒಂದು ವೇಳೆ ಅಂಥವರಿಗೆ ಸತ್ಯದ ತಿಳುವಳಿಕೆಗೆ ನಡೆಸುವ ಪಶ್ಚಾತ್ತಾಪವನ್ನು ಕೊಡುವ ನಿರೀಕ್ಷೆ ಇರುವುದು.


ಇದಕ್ಕಾಗಿ ನಾವು ಕಷ್ಟಪಡುತ್ತೇವೆ ಮತ್ತು ಪ್ರಯಾಸ ಪಡುತ್ತೇವೆ. ಏಕೆಂದರೆ ಎಲ್ಲಾ ಮನುಷ್ಯರಿಗೆ ವಿಶೇಷವಾಗಿ ನಂಬುವವರಿಗೆ ರಕ್ಷಕ ಆಗಿರುವ ಜೀವಸ್ವರೂಪರಾದ ದೇವರನ್ನು ನಾವು ನಿರೀಕ್ಷಿಸಿದ್ದೇವೆ.


“ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿರಿ, ರಕ್ಷಣೆಯನ್ನು ಪಡೆಯಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.


ಯೆರೂಸಲೇಮು ಮೊದಲುಗೊಂಡು ಎಲ್ಲಾ ಜನಾಂಗದವರೊಳಗೆ ಆತನ ಹೆಸರಿನಲ್ಲಿ ಪಶ್ಚಾತ್ತಾಪಪಟ್ಟು ಮತ್ತು ಪಾಪಗಳ ಕ್ಷಮಾಪಣೆ ಸಾರಬೇಕೆಂತಲೂ ಬರೆಯಲಾಗಿದೆ.


ಮತ್ತೊಬ್ಬ ದೇವದೂತನು ಆಕಾಶದ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ರಾಷ್ಟ್ರ, ಹಿನ್ನಲೆ, ಭಾಷೆ ಹಾಗೂ ಪ್ರಜೆಗಳವರಿಗೂ ಸಾರಿ ಹೇಳುವುದಕ್ಕೆ ನಿತ್ಯ ಸುವಾರ್ತೆಯು ಅವನಲ್ಲಿತ್ತು.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ಆದ್ದರಿಂದ ನೀವು ಹೋಗಿ ಎಲ್ಲಾ ದೇಶಗಳ ಜನರನ್ನು ಶಿಷ್ಯರನ್ನಾಗಿ ಮಾಡಿರಿ. ಅವರಿಗೆ ತಂದೆಯ, ಮಗನ ಮತ್ತು ಪವಿತ್ರಾತ್ಮನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿ,


ದೇವರು ಆಯ್ದುಕೊಂಡವರ ನಂಬಿಕೆಗನುಸಾರವೂ ಭಕ್ತಿಗನುಸಾರವಾದ ಸತ್ಯದ ತಿಳುವಳಿಕೆಗನುಸಾರವೂ ದೇವರ ಸೇವಕನೂ ಕ್ರಿಸ್ತ ಯೇಸುವಿನ ಅಪೊಸ್ತಲನೂ ಆಗಿರುವ ಪೌಲನೆಂಬ ನನಗೆ


ಬಾಯಾರಿದ ಸಕಲ ಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನೂ ಬರಲಿ. ಬನ್ನಿರಿ, ಕೊಂಡುಕೊಳ್ಳಿರಿ, ಉಣ್ಣಿರಿ. ಬನ್ನಿರಿ, ಹಣವಿಲ್ಲದೆ ಮತ್ತು ಕ್ರಯವಿಲ್ಲದೆ ದ್ರಾಕ್ಷಾರಸವನ್ನೂ ಹಾಲನ್ನೂ ಕೊಂಡುಕೊಳ್ಳಿರಿ.


ಇಂಥ ಸ್ತ್ರೀಯರು ಯಾವಾಗಲೂ ಕಲಿಯುತ್ತಿದ್ದರೂ ಸತ್ಯದ ಜ್ಞಾನಕ್ಕೆ ಬರಲಾರದವರು ಆಗಿರುವರು.


“ಆಗ ಯಜಮಾನನು ಸೇವಕನಿಗೆ, ‘ನೀನು ಬೀದಿಗಳಿಗೂ ಓಣಿಗಳಿಗೂ ಹೊರಟುಹೋಗಿ ನನ್ನ ಮನೆ ತುಂಬುವಂತೆ, ಇಲ್ಲಿ ಬರುವುದಕ್ಕೆ ಕಂಡವರನ್ನು ಬಲವಂತಮಾಡು.


ನೀನು ಜನರ ಪಾಪಕ್ಷಮಾಪಣೆಯ ಮೂಲಕ ರಕ್ಷಣೆ ಹೊಂದುವ ತಿಳುವಳಿಕೆಯನ್ನು ಕೊಡುವೆ,


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು.


ತಂದೆಯು ನನಗೆಂದು ಕೊಟ್ಟಿರುವ ಪ್ರತಿಯೊಬ್ಬರೂ ನನ್ನ ಬಳಿಗೆ ಬರುವರು. ನನ್ನ ಬಳಿಗೆ ಬರುವವರನ್ನು ನಾನು ಎಂದಿಗೂ ತಳ್ಳಿಬಿಡುವುದೇ ಇಲ್ಲ.


ಯೇಸು ಅವರಿಗೆ, “ನೀವು ಜಗತ್ತಿನ ಎಲ್ಲಾ ಕಡೆಗಳಿಗೆ ಹೋಗಿ ಸರ್ವಸೃಷ್ಟಿಗೂ ಸುವಾರ್ತೆಯನ್ನು ಸಾರಿರಿ.


ಏಕೆಂದರೆ, ನಾವು ಸತ್ಯದ ಅರಿವನ್ನು ಹೊಂದಿದ ಮೇಲೆ ಬೇಕೆಂದು ಪಾಪ ಮಾಡುತ್ತಾ ಇದ್ದರೆ, ಪಾಪಗಳಿಗಾಗಿ ಇನ್ನಾವ ಯಜ್ಞವೂ ಉಳಿದಿರುವುದಿಲ್ಲ.


ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ಮಹಿಮೆಯ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಆತನು ತನ್ನ ಪ್ರಾಣದ ವೇದನೆಯನ್ನು ಸಹಿಸಿದ ತರುವಾಯ, ಜೀವದ ಬೆಳಕನ್ನು ಕಂಡು ತೃಪ್ತನಾಗುವನು. ತನ್ನ ತಿಳುವಳಿಕೆಯಿಂದ ನೀತಿವಂತನಾದ ನನ್ನ ಸೇವಕನು ಅನೇಕರಿಗೆ ನೀತಿವಂತನಾಗಿ ನಿರ್ಣಯಿಸುವನು. ಏಕೆಂದರೆ ಆತನೇ ಅವರ ಅಪರಾಧಗಳನ್ನು ಹೊತ್ತುಕೊಳ್ಳುವನು.


ಹೇಗೂ ನಾನು ನನ್ನ ಸ್ವಂತ ಜನರಾದ ಯೆಹೂದ್ಯರಲ್ಲಿ ಮತ್ಸರವನ್ನು ಉದ್ರೇಕಿಸಿ ಅವರಲ್ಲಿ ಕೆಲವರನ್ನಾದರೂ ರಕ್ಷಿಸಬೇಕು.


ನಿಮ್ಮ ಹೃದಯದೊಳಗೆ ಕಹಿಯಾದ ಹಗೆತನವನ್ನೂ ಸ್ವಾರ್ಥ ಉದ್ದೇಶವನ್ನು ಕೂಡಿಟ್ಟು ಕೊಂಡಿರುವಲ್ಲಿ, ನೀವು ಜ್ಞಾನದ ಕುರಿತು ಹೊಗಳಿಕೊಳ್ಳಬೇಡಿರಿ ಮತ್ತು ಸತ್ಯವನ್ನು ನಿರಾಕರಿಸಬೇಡಿರಿ.


ಸಭಾಹಿರಿಯನಾದ ನಾನು, ನಮ್ಮಲ್ಲಿ ವಾಸಿಸುವ ಮತ್ತು ನಮ್ಮೊಂದಿಗೆ ಸದಾಕಾಲವೂ ಇರುವಂಥ ಸತ್ಯದ ನಿಮಿತ್ತವಾಗಿ ನಾನು ಮಾತ್ರವಲ್ಲದೆ ಸತ್ಯವನ್ನು ತಿಳಿದಿರುವವರೆಲ್ಲರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು