Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 2:5 - ಕನ್ನಡ ಸಮಕಾಲಿಕ ಅನುವಾದ

5 ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ ದೇವರು ಒಬ್ಬನೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ, ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದೇವರು ಒಬ್ಬರೇ; ದೇವರನ್ನೂ ಮಾನವರನ್ನೂ ಒಂದುಗೂಡಿಸುವ ಮಧ್ಯಸ್ಥರೂ ಒಬ್ಬರೇ; ಅವರೇ ಮಾನವರಾಗಿರುವ ಕ್ರಿಸ್ತಯೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಏಕಂದರೆ ದೇವರು ಒಬ್ಬನೇ; ದೇವರಿಗೂ ಮನುಷ್ಯರಿಗೂ ಮಧ್ಯಸ್ಥನು ಒಬ್ಬನೇ; ಆತನು ಮನುಷ್ಯನಾಗಿರುವ ಕ್ರಿಸ್ತ ಯೇಸುವೇ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ಒಬ್ಬನೇ. ದೇವರಿಗೂ ಮನುಷ್ಯರಿಗೂ ಮಧ್ಯಸ್ತನು ಒಬ್ಬನೇ. ಮನುಷ್ಯನಾಗಿರುವ ಯೇಸುಕ್ರಿಸ್ತನೇ ಆತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಎಕ್ಲೊಚ್ ದೆವ್ ಹಾಯ್, ಅನಿ ಮಾನ್ಸಾಕ್ನಿ, ಅನಿ ದೆವಾಕ್ ಎಕ್‍ಕ್ಡೆ ಕರ್‍ತಲೊ ತೊ ಮಾನುಸ್ ಎಕ್ಲೊಚ್ ತೊಚ್ ಕ್ರಿಸ್ತ್ ಜೆಜು ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 2:5
28 ತಿಳಿವುಗಳ ಹೋಲಿಕೆ  

ಒಂದು ಪಕ್ಷಕ್ಕಿಂತಲೂ ಹೆಚ್ಚಿನವನಾಗಿದ್ದರೆ ಮಾತ್ರ ಮಧ್ಯಸ್ಥನ ಅಗತ್ಯವಿರುವುದು; ದೇವರಾದರೋ ಒಬ್ಬರೇ.


ನಮಗಾದರೋ ತಂದೆ ದೇವರು ಒಬ್ಬರೇ ಇರುತ್ತಾರೆ. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರಿಗಾಗಿಯೇ ನಾವು ಜೀವಿಸುತ್ತೇವೆ. ನಮಗಿರುವ ಕರ್ತದೇವರು ಒಬ್ಬರೇ. ಅವರೇ ಕ್ರಿಸ್ತ ಯೇಸು. ಅವರಿಂದಲೇ ಸಮಸ್ತವೂ ಉಂಟಾಯಿತು. ಅವರ ಮುಖಾಂತರವೇ ನಾವು ಜೀವಿಸುತ್ತೇವೆ.


ಈ ಕಾರಣದಿಂದ ಕರೆಯಲಾದವರು ವಾಗ್ದಾನವಾದ ನಿತ್ಯಬಾಧ್ಯತೆಯನ್ನು ಸ್ವೀಕರಿಸುವಂತೆ ಕ್ರಿಸ್ತ ಯೇಸು ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿದ್ದಾರೆ. ಮೊದಲಿನ ಒಡಂಬಡಿಕೆಯ ಕೆಳಗೆ ಮಾಡಿದ ಪಾಪಗಳಿಂದ ಅವರನ್ನು ವಿಮೋಚಿಸಲು ಯೇಸು ಆಗಲೇ ಈಡಾಗಿ ತಮ್ಮ ಪ್ರಾಣಕೊಟ್ಟಿದ್ದಾರೆ.


ಇದಲ್ಲದೆ ಯೇಸು ತಮ್ಮ ಮೂಲಕ ದೇವರ ಕಡೆ ಬರುವವರನ್ನು ಪರಿಪೂರ್ಣವಾಗಿ ರಕ್ಷಿಸುವುದಕ್ಕೆ ಶಕ್ತರಾಗಿದ್ದಾರೆ. ಏಕೆಂದರೆ ಅವರಿಗೋಸ್ಕರ ಯೇಸು ವಿಜ್ಞಾಪನೆ ಮಾಡುವುದಕ್ಕಾಗಿ ಯಾವಾಗಲೂ ಬದುಕುವವರಾಗಿದ್ದಾರೆ.


ಇಸ್ರಾಯೇಲರೇ, ಕೇಳಿರಿ: ದೇವರಾದ ಯೆಹೋವ ನಮ್ಮ ದೇವರು; ಯೆಹೋವ ದೇವರು ಒಬ್ಬರೇ.


ಹೊಸ ಒಡಂಬಡಿಕೆಗೆ ಮಧ್ಯಸ್ಥರಾಗಿರುವ ಯೇಸುವಿನ ಬಳಿಗೂ ಹೇಬೆಲನ ರಕ್ತಕ್ಕಿಂತ ಉತ್ತಮವಾಗಿ ಮಾತನಾಡುವ, ಪ್ರೋಕ್ಷಿಸಿದ ರಕ್ತದ ಬಳಿಗೂ ಬಂದಿದ್ದೀರಿ.


ವಾಕ್ಯವೆಂಬುವವರು ದೇಹಧಾರಿಯಾಗಿ ನಮ್ಮ ಮಧ್ಯದಲ್ಲಿ ವಾಸಿಸಿದರು. ನಾವು ಅವರ ಮಹಿಮೆಯನ್ನು ಕಂಡೆವು. ಆ ಮಹಿಮೆಯು ತಂದೆಯಿಂದ ಬಂದ ಏಕೈಕ ಪುತ್ರ ಆಗಿರುವವರಿಗೆ ಇರತಕ್ಕ ಮಹಿಮೆ. ಆ ವಾಕ್ಯವೆಂಬುವವರು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವರಾಗಿದ್ದರು.


“ಇಸ್ರಾಯೇಲಿನ ಅರಸನೂ ವಿಮೋಚಕನೂ, ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ: ನಾನೇ ಮೊದಲನೆಯವನು, ನಾನೇ ಕಡೆಯವನು. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಈ ವಿಷಯದಲ್ಲಿ ಯೆಹೂದ್ಯರಿಗೂ ಯೆಹೂದ್ಯರಲ್ಲದವರಿಗೂ ಯಾವ ವ್ಯತ್ಯಾಸವೂ ಇಲ್ಲ. ಎಲ್ಲರಿಗೂ ಕರ್ತ ಆಗಿರುವ ಒಬ್ಬರೇ ಕರ್ತ; ಅವರು ತಮ್ಮನ್ನು ಕರೆಯುವವರೆಲ್ಲರನ್ನು ಹೇರಳವಾಗಿ ಆಶೀರ್ವದಿಸುತ್ತಾರೆ.


ಏಕೈಕ ಸತ್ಯ ದೇವರಾಗಿರುವ ನಿಮ್ಮನ್ನೂ ನೀವು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ತಿಳಿಯುವುದೇ ನಿತ್ಯಜೀವ.


ಯೇಸುವಾದರೋ ಈಗ ಅದಕ್ಕಿಂತ ಶ್ರೇಷ್ಠ ಸೇವೆಯನ್ನು ಹೊಂದಿದವರಾಗಿದ್ದಾರೆ. ಅಷ್ಟೇ ಅಲ್ಲದೆ ಇವರು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಒಡಂಬಡಿಕೆಗೆ ಸಹ ಮಧ್ಯಸ್ಥರಾಗಿದ್ದಾರೆ.


ಎಲ್ಲರಿಗೂ ತಂದೆಯಾಗಿರುವ ದೇವರು ಒಬ್ಬರೇ; ಅವರೇ ಎಲ್ಲರ ಮೇಲಿರುವರೂ ಎಲ್ಲರ ಮೂಲಕ ಕಾರ್ಯನಡಿಸುವವರೂ ಎಲ್ಲರಲ್ಲಿ ವಾಸಿಸುವವರೂ ಆಗಿದ್ದಾರೆ.


ಹಾಗಾದರೆ, ವಿಗ್ರಹಗಳಿಗೆ ನೈವೇದ್ಯ ಮಾಡಿದ ಆಹಾರ ಪದಾರ್ಥಗಳನ್ನು ತಿನ್ನುವುದರ ವಿಷಯ: “ಲೋಕದಲ್ಲಿ ವಿಗ್ರಹವು ಏನೂ ಅಲ್ಲ. ಒಬ್ಬ ದೇವರೇ ಹೊರತು ಬೇರೆ ದೇವರಿಲ್ಲ,” ಎಂದು ನಮಗೆ ಗೊತ್ತಿದೆ.


ನಮ್ಮಿಬ್ಬರನ್ನು ಒಟ್ಟು ಸೇರಿಸುವ ಮಧ್ಯಸ್ಥ ಒಂದು ವೇಳೆ ನಮ್ಮ ನಡುವೆ ಇದ್ದಿದ್ದರೆ,


“ಇಗೋ ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು, ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.” ಈ ಹೆಸರಿನ ಅರ್ಥ, “ದೇವರು ನಮ್ಮ ಸಂಗಡ ಇದ್ದಾರೆ,” ಎಂಬುದು.


ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಪುತ್ರ ಇವರ ಹಾಗೆ ಒಬ್ಬ ವ್ಯಕ್ತಿ ಇರುವವರನ್ನೂ ಕಂಡೆನು. ಅವರು ಪಾದದವರೆಗೆ ಮುಚ್ಚುವ ನಿಲುವಂಗಿಯನ್ನು ತೊಟ್ಟು, ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದರು.


ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:


ಯೇಸು ಅಲ್ಲದೆ ಬೇರೆ ಯಾರಿಂದಲೂ ರಕ್ಷಣೆಯು ಇಲ್ಲ, ಏಕೆಂದರೆ ಆಕಾಶದ ಕೆಳಗೆ ಮನುಷ್ಯರೊಳಗೆ ಆ ಹೆಸರಲ್ಲದೇ ಬೇರೆ ಯಾವ ಹೆಸರಿನಿಂದಲೂ ರಕ್ಷಣೆಯಾಗುವುದಿಲ್ಲ,” ಎಂದನು.


ಈ ಸುವಾರ್ತೆಯು ದೇವಪುತ್ರನ ವಿಷಯವಾದದ್ದು. ಯೇಸು ಮನುಷ್ಯತ್ವದ ಪ್ರಕಾರ ದಾವೀದನ ಸಂತಾನದವರೂ


ಎಲ್ಲಕ್ಕೂ ಜೀವ ನೀಡುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಒಳ್ಳೆಯ ಅರಿಕೆಯನ್ನು ಸಾಕ್ಷಿಯಾಗಿ ನೀಡಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳವುದೇನೆಂದರೆ:


ನನ್ನ ಪ್ರಿಯ ಮಕ್ಕಳೇ, ನೀವು ಪಾಪಮಾಡದಂತೆ ಇವುಗಳನ್ನು ನಾನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತರಾದ ಕ್ರಿಸ್ತ ಯೇಸುವು ನಮ್ಮ ಪರವಾಗಿ ವಾದಿಸುವ ವಕೀಲರಾಗಿದ್ದಾರೆ.


“ಆ ಸೇವಕನು, ‘ಸ್ವಾಮಿ, ನೀನು ಅಪ್ಪಣೆ ಕೊಟ್ಟಂತೆ ಮಾಡಿದ್ದಾಯಿತು, ಆದರೂ ಸ್ಥಳವಿದೆ,’ ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು