Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:13 - ಕನ್ನಡ ಸಮಕಾಲಿಕ ಅನುವಾದ

13 ನಾನು ಬರುವ ತನಕ ಓದುವುದರಲ್ಲಿಯೂ ಎಚ್ಚರಿಸುವುದರಲ್ಲಿಯೂ ಬೋಧಿಸುವುದರಲ್ಲಿಯೂ ಲಕ್ಷ್ಯಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಾನು ಬರುವವರೆಗೂ ಪವಿತ್ರಗ್ರಂಥವನ್ನು ಪಠಿಸುವುದರಲ್ಲೂ ಪ್ರಬೋಧಿಸುವುದರಲ್ಲೂ ಉಪದೇಶಿಸುವುದರಲ್ಲೂ ಆಸಕ್ತನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಾನು ಬರುವ ತನಕ ವೇದಪಾರಾಯಣವನ್ನೂ ಪ್ರಸಂಗವನ್ನೂ ಉಪದೇಶವನ್ನೂ ಮಾಡುವದರಲ್ಲಿ ಆಸಕ್ತನಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರ ವಾಕ್ಯವನ್ನು ಜನರಿಗೆ ಓದಿಹೇಳಿ ಅವರನ್ನು ಬಲಪಡಿಸು ಮತ್ತು ಅವರಿಗೆ ಬೋಧಿಸು. ನಾನು ಬರುವತನಕ ಈ ಕಾರ್ಯಗಳನ್ನು ಮಾಡುತ್ತಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮಿಯಾ ಯೆಯ್ ಪತರ್, ಲೊಕಾಕ್ನಿ ದೆವಾಚ್ಯಾ ಗೊಸ್ಟಿಯಾ ತೆಂಕಾ ಶಿಕಾಪ್ ಕರ್ ಅನಿ ವಾಚ್ವುನ್, ಅನಿ ಸೊಡ್ಸುನ್ ಸಾಂಗುನ್ಗೆತ್ ರ್‍ಹಾತಲ್ಯಾಕ್ ತುಜೊ ಎಳ್ ಖರ್ಚುಂಗೆತ್ ರ್‍ಹಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:13
20 ತಿಳಿವುಗಳ ಹೋಲಿಕೆ  

ನಾವಾದರೋ ಪ್ರಾರ್ಥನೆ ಮಾಡುವುದರಲ್ಲಿಯೂ ದೇವರ ವಾಕ್ಯ ಬೋಧಿಸುವುದರಲ್ಲಿಯೂ ನಿರತರಾಗಿರುವೆವು,” ಎಂದು ಹೇಳಿದರು.


ಈ ಕಾರ್ಯಗಳ ವಿಷಯದಲ್ಲಿ, ನೀನು ಉಪದೇಶಿಸುತ್ತಾ ಇರು. ಪ್ರೋತ್ಸಾಹಮಾಡುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.


ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.


ಈ ವಿಷಯಗಳನ್ನು ಸಹೋದರರಿಗೆ ತಿಳಿಸುವವನಾದರೆ ನೀನು ಅನುಸರಿಸುತ್ತಿರುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ.


ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.


ನೀವು ಪವಿತ್ರ ವೇದದಲ್ಲಿ ನಿತ್ಯಜೀವ ದೊರೆಯುತ್ತದೆ ಎಂದು ನೆನಸಿ, ಅವುಗಳನ್ನು ಪರಿಶೋಧಿಸುತ್ತೀದ್ದಿರಿ. ಆ ಪವಿತ್ರ ವೇದವೇ ನನ್ನ ವಿಷಯವಾಗಿ ಸಾಕ್ಷಿಕೊಡುತ್ತದೆ.


ಈ ದೇವರ ನಿಯಮವು ನಿನ್ನ ಬಾಯಿಂದ ತೊಲಗಬಾರದು, ಅದರಲ್ಲಿ ಬರೆದಿರುವ ಪ್ರಕಾರವೇ ಕೈಗೊಂಡು ನಡೆಯುವ ಹಾಗೆ ಹಗಲುರಾತ್ರಿ ಅದನ್ನು ಧ್ಯಾನಿಸಬೇಕು. ಆಗ ನಿನ್ನ ಮಾರ್ಗವು ಸಮೃದ್ಧಿಯಾಗಿ ನೀನು ಜಯಶಾಲಿಯಾಗುವೆ.


ಅವನು ಗರ್ವದಿಂದ ತನ್ನ ಸ್ವದೇಶದವರನ್ನು ಹೀಯಾಳಿಸಬಾರದು. ಯೆಹೋವ ದೇವರ ಆಜ್ಞೆಯನ್ನು ಮೀರಿ ಎಡಬಲಕ್ಕೆ ತಿರುಗಿಕೊಳ್ಳಬಾರದು. ದೇವರಾದ ಯೆಹೋವ ದೇವರಲ್ಲಿ ಭಯಭಕ್ತಿಯುಳ್ಳವನಾಗಿರಬೇಕು. ಈ ದೇವರ ನಿಯಮದ ಎಲ್ಲಾ ವಾಕ್ಯಗಳನ್ನು, ತೀರ್ಪುಗಳನ್ನು ಅನುಸರಿಸಲು ಅಭ್ಯಾಸ ಮಾಡಿಕೊಳ್ಳಬೇಕು. ಈ ಕಾರಣ ಈ ಗ್ರಂಥ ಅವನ ಬಳಿಯಲ್ಲೇ ಇರಬೇಕು. ಅವನು ತನ್ನ ಜೀವಮಾನವೆಲ್ಲಾ ಇದನ್ನು ಓದಿಕೊಳ್ಳುತ್ತಾ ಇರಬೇಕು.


ಹಾಗಾದರೇನು ಪ್ರಿಯರೇ? ನೀವು ಸಭೆಯಾಗಿ ಕೂಡಿಬರುವಾಗ ಪ್ರತಿಯೊಬ್ಬನಿಗೆ ಕೀರ್ತನೆಯಾಗಲಿ, ಸಂದೇಶವಾಗಲಿ, ಪ್ರಕಟನೆಯಾಗಲಿ, ಅನ್ಯಭಾಷೆಯನ್ನಾಡುವುದಾಗಲಿ, ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವಾಗಲಿ ಇರುತ್ತದಷ್ಟೆ. ಇವೆಲ್ಲವೂ ಸಭೆಗೆ ಭಕ್ತಿವೃದ್ಧಿಗಾಗಿಯೇ ಇರಲಿ.


ಪ್ರವಾದಿಸುವವನಾದರೋ, ಜನರ ಭಕ್ತಿವೃದ್ಧಿಗಾಗಿ, ಪ್ರೋತ್ಸಾಹಕ್ಕಾಗಿ, ಸಂತೈಸುವಿಕೆಗಾಗಿ ಮಾತನಾಡುತ್ತಾನೆ.


ಹೀಗಿರುವುದರಿಂದ ಪ್ರಿಯರೇ, ನಾನು ನಿಮ್ಮ ಬಳಿಗೆ ಬಂದು ಪ್ರಕಟನೆಯಿಂದಾಗಲಿ, ವಿದ್ಯೆಯಿಂದಾಗಲಿ, ಪ್ರವಾದನೆಯಿಂದಾಗಲಿ, ಉಪದೇಶದಿಂದಾಗಲಿ ಮಾತನಾಡದೆ, ಅನ್ಯಭಾಷೆಗಳಿಂದ ಮಾತನಾಡುವವನಾಗಿದ್ದರೆ, ನನ್ನಿಂದ ನಿಮಗೇನು ಪ್ರಯೋಜನ?


ಅದು ಪ್ರೋತ್ಸಾಹಗೊಳಿಸುವುದಾಗಿದ್ದರೆ, ಅವನು ಪ್ರೋತ್ಸಾಹಗೊಳಿಸಲಿ. ದಾನಕೊಡುವ ವರವಾಗಿದ್ದರೆ, ಅವನು ಧಾರಾಳವಾಗಿ ಕೊಡಲಿ. ನಾಯಕತ್ವ ವಹಿಸುವ ವರವಾಗಿದ್ದರೆ, ಅವನು ಶ್ರದ್ಧೆಯಿಂದ ಮಾಡಲಿ ದಯೆ ತೋರಿಸುವ ವರವಾಗಿದ್ದರೆ ಅದನ್ನು ಅವನು ಸಂತೋಷದಿಂದ ಮಾಡಲಿ.


ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸದ ಮೂಲಕ ರಕ್ಷಣೆ ಹೊಂದುವಂತೆ ನಿನ್ನನ್ನು ಜ್ಞಾನಿಯನ್ನಾಗಿ ಮಾಡಲು ಶಕ್ತವಾಗಿರುವ ಪವಿತ್ರ ವೇದಗಳನ್ನು ನೀನು ಚಿಕ್ಕಂದಿನಿಂದಲೂ ತಿಳಿದವನಾಗಿದ್ದೀಯಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು