Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:4 - ಕನ್ನಡ ಸಮಕಾಲಿಕ ಅನುವಾದ

4 ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದಾಗಿದೆ. ಕೃತಜ್ಞತೆ ಮಾಡಿ ಸ್ವೀಕರಿಸುವ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ದೇವರು ಉಂಟುಮಾಡಿದ್ದೆಲ್ಲವೂ ಒಳ್ಳೆಯದೇ, ನಾವು ಕೃತಜ್ಞತಾಸ್ತುತಿಮಾಡಿ ತೆಗೆದುಕೊಳ್ಳುವ ಯಾವ ಆಹಾರವನ್ನು ತಿರಸ್ಕರಿಸಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೇವರು ಸೃಷ್ಟಿಸಿದ್ದೆಲ್ಲವೂ ಒಳ್ಳೆಯದೇ. ಅವರಿಗೆ ಸ್ತುತಿಸಲ್ಲಿಸಿ ಸ್ವೀಕರಿಸಿದ ಯಾವುದನ್ನೂ ತಿರಸ್ಕರಿಸಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆತನು ಉಂಟುಮಾಡಿದ್ದೆಲ್ಲವೂ ಒಳ್ಳೇದೇ; ದೇವರ ಸ್ತೋತ್ರಮಾಡಿ ತೆಗೆದುಕೊಳ್ಳುವ ಪಕ್ಷಕ್ಕೆ ಯಾವದನ್ನೂ ನಿಷಿದ್ಧವೆಂದು ಹೇಳತಕ್ಕದ್ದಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆತನು ನಿರ್ಮಿಸಿದ ಪ್ರತಿಯೊಂದೂ ಉತ್ತಮವಾಗಿರುತ್ತದೆ. ಆತನಿಗೆ ಕೃತಜ್ಞತಾಸ್ತುತಿ ಮಾಡಿ ತೆಗೆದುಕೊಳ್ಳುವ ಯಾವುದನ್ನೇ ಆಗಲಿ ನಿಷಿದ್ಧವೆಂದು ತಿರಸ್ಕರಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಕಶ್ಯಾಕ್ ಮಟ್ಲ್ಯಾರ್ ದೆವಾನ್ ರಚಲ್ಲೆ ಸಗ್ಳೆ ಬರೆಚ್; ಬುರ್ಶೆ ಮನ್ತಲೆ ಕಾಯ್ಬಿ ನಾ, ಖರೆ ಧನ್ಯವಾದಾಚಿ ಮಾಗ್ನಿ ಕರುನ್ ತೆ ಖಾವ್ಚೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:4
15 ತಿಳಿವುಗಳ ಹೋಲಿಕೆ  

ಆಹಾರದ ನಿಮಿತ್ತವಾಗಿ ದೇವರ ಕೆಲಸವನ್ನು ಕೆಡಿಸಬೇಡ, ಎಲ್ಲಾ ಆಹಾರವೂ ಶುದ್ಧವಾದದ್ದೇ. ಆದರೆ ಒಬ್ಬರು ತಿಂದು ವಿಘ್ನವನ್ನು ಒಡ್ಡುವುದು ಕೆಟ್ಟದ್ದು.


ಮಾಂಸದ ಅಂಗಡಿಯಲ್ಲಿ ಮಾರುವುದು ಏನಿದ್ದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ತಿನ್ನಿರಿ.


ಯಾವುದೇ ಪದಾರ್ಥವು ತನ್ನಷ್ಟಕ್ಕೆ ಅಶುದ್ಧವಲ್ಲ ಎಂದು ನಾನು ಕರ್ತ ಆಗಿರುವ ಯೇಸುವಿನಲ್ಲಿ ನಿಶ್ಚಯವಾಗಿ ಬಲ್ಲೆನು. ಆದರೆ ಯಾರಾದರೂ ಅಶುದ್ಧವೆಂದು ಪರಿಗಣಿಸಿದರೆ ಅದು ಅವರಿಗೆ ಅಶುದ್ಧವಾಗಿರುವುದು.


ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ. ಆದರೆ ಎಲ್ಲಾ ಕಾರ್ಯಗಳೂ ಪ್ರಯೋಜನಕರವಾಗಿರುವುದಿಲ್ಲ. ಎಲ್ಲಾ ಕಾರ್ಯಗಳನ್ನು ಮಾಡಲು ಸ್ವಾತಂತ್ರ್ಯವಿದೆ ಆದರೆ, ಎಲ್ಲಾ ಕಾರ್ಯಗಳೂ ಭಕ್ತಿವೃದ್ಧಿಯನ್ನುಂಟುಮಾಡುವುದಿಲ್ಲ.


ಯೆಹೂದ್ಯರಲ್ಲದವರಿಂದ ಬಂದ ವಿಶ್ವಾಸಿಗಳಿಗಾದರೋ, ಅವರು ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕೆಂದು ನಾವು ಬರೆದ ನಮ್ಮ ತೀರ್ಮಾನವನ್ನು ತಿಳಿಸಿದ್ದೇವೆ,” ಎಂದರು.


ಮದುವೆಯಾಗಬಾರದೆಂತಲೂ ಯಾರು ನಂಬುವವರಾಗಿದ್ದು ಸತ್ಯವನ್ನು ತಿಳಿದುಕೊಂಡಿದ್ದಾರೋ ಅವರು ಕೃತಜ್ಞತಾಸ್ತುತಿ ಮಾಡಿ ತಿನ್ನುವುದಕ್ಕೋಸ್ಕರ ದೇವರು ಸೃಷ್ಟಿಸಿದ ಆಹಾರವನ್ನು ತಿನ್ನಬಾರದೆಂತಲೂ ಆಜ್ಞಾಪಿಸುತ್ತಾರೆ.


ದೇವರು ತಾವು ಉಂಟು ಮಾಡಿದ್ದನ್ನೆಲ್ಲಾ ನೋಡಲು, ಅವೆಲ್ಲವೂ ಬಹಳ ಒಳ್ಳೆಯದಾಗಿದ್ದವು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.


ದೇವರು ಸಂರಕ್ಷಿಸುವ ಬಂಡೆ. ದೇವರ ಕಾರ್ಯವು ಸಂಪೂರ್ಣವಾದದ್ದು. ಅವರ ಮಾರ್ಗಗಳೆಲ್ಲಾ ನ್ಯಾಯವಾಗಿವೆ. ಅವರು ಯಾವ ತಪ್ಪನ್ನೂ ಮಾಡದ ನಂಬಿಗಸ್ತ ದೇವರು, ನೀತಿವಂತರೂ ಯಥಾರ್ಥರೂ ಆದ ದೇವರು.


ದೇವರಲ್ಲದವುಗಳಿಗೆ ಅರ್ಪಿತವಾದ ಮಲಿನ ಆಹಾರದಿಂದಲೂ ರಕ್ತದಿಂದಲೂ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಯ ಮಾಂಸದಿಂದಲೂ ಅನೈತಿಕತೆಯಿಂದಲೂ ದೂರವಿರಬೇಕು. ಇವುಗಳಿಂದ ನಿಮ್ಮನ್ನು ಕಾಪಾಡಿಕೊಳ್ಳುವುದರಿಂದ ನಿಮಗೆ ಒಳಿತಾಗುವುದು. ನಿಮಗೆ ಶುಭವಾಗಲಿ.


ವಾಣಿಯು ಎರಡನೆಯ ಬಾರಿಗೆ, “ದೇವರು ಶುದ್ಧೀಕರಿಸಿದ ಯಾವುದನ್ನೂ ಅಶುದ್ಧವೆನ್ನಬೇಡ,” ಎಂದಿತು.


ಒಬ್ಬ ಒಂದು ದಿನವನ್ನು ವಿಶೇಷವೆಂದು ಎಣಿಸುವುದಾದರೆ ಅವನು ಅದನ್ನು ಕರ್ತನಿಗಾಗಿಯೇ ಮಾಡಲಿ. ಮಾಂಸಾಹಾರಿಯು ದೇವರಿಗೆ ಕೃತಜ್ಞತೆಯನ್ನು ಮಾಡಿ ಊಟಮಾಡುವುದಾದರೆ ಅವನು ಅದನ್ನು ಮಾಡುವುದು ಕರ್ತನಿಗಾಗಿಯೇ. ಸಸ್ಯಾಹಾರಿಯು ಕರ್ತನಿಗಾಗಿಯೇ ತಿನ್ನದೆ ಕೃತಜ್ಞತೆ ಸಲ್ಲಿಸುತ್ತಾನೆ.


ಏಕೆಂದರೆ, “ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತ ದೇವರದಾಗಿದೆ.”


ನಾನು ಕೃತಜ್ಞತೆ ಸಲ್ಲಿಸಿ ಆ ಊಟವನ್ನು ಮಾಡಿದರೆ, ಹಾಗೆ ದೇವರಿಗೆ ಕೃತಜ್ಞತೆ ಸಲ್ಲಿಸಿ ಮಾಡಿದ ಊಟಕ್ಕಾಗಿ ನನ್ನ ಮೇಲೆ ತಪ್ಪುಹೊರಿಸುವುದೇಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು