Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:6 - ಕನ್ನಡ ಸಮಕಾಲಿಕ ಅನುವಾದ

6 ಈ ವಿಷಯಗಳನ್ನು ಸಹೋದರರಿಗೆ ತಿಳಿಸುವವನಾದರೆ ನೀನು ಅನುಸರಿಸುತ್ತಿರುವ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಪೋಷಣೆ ಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಈ ವಿಷಯಗಳನ್ನೆಲ್ಲಾ ಇತರ ಸಹೋದರರಿಗೆ ನೀನು ವಿವರಿಸುವವನಾದರೆ, ನೀನು ಕ್ರಿಸ್ತಯೇಸುವಿನ ಯೋಗ್ಯ ದಾಸನಾಗುವೆ, ನೀನು ಅನುಸರಿಸುತ್ತಾ ಬಂದಿರುವ ಸದ್ಬೋಧನೆಯಿಂದಲೂ ವಿಶ್ವಾಸದಿಂದಲೂ ಆಧ್ಯಾತ್ಮಿಕ ಪೋಷಣೆಯನ್ನು ಪಡೆಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ ನೀನು ಅನುಸರಿಸಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದುವವನಾಗಿ ಕ್ರಿಸ್ತ ಯೇಸುವಿನ ಒಳ್ಳೇ ಸೇವಕನಾಗಿರುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅಲ್ಲಿರುವ ಸಹೋದರ ಸಹೋದರಿಯರಿಗೆ ಈ ಸಂಗತಿಗಳನ್ನು ತಿಳಿಸಿದರೆ, ನೀನು ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವೆ ಎಂಬುದನ್ನೂ ನಂಬಿಕೆಯ ನುಡಿಗಳಿಂದ ಮತ್ತು ಉತ್ತಮ ಉಪದೇಶಗಳನ್ನು ಅನುಸರಿಸಿದ್ದರಿಂದ ಬಲಗೊಂಡಿರುವೆ ಎಂಬುದನ್ನೂ ತೋರಿಸಿದಂತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ದೆವಾಚ್ಯಾ ಗೊಸ್ಟಿಯಾಂಚ್ಯಾ ವಿಶ್ವಾಸಾನ್ ಅನಿ ಖರ್ಯಾಪಾನಾಚ್ಯಾ ಸಿಕಾಪಾ ಸರ್ಕೆ ಚಲುನ್, ಕಶೆ ತಿಯಾ ದೆವಾಚ್ಯಾ ವಾಟೆರ್ ಚಲ್ತೆ ತಸೆ ದೆವಾ ವರ್‍ತಿ ವಿಶ್ವಾಸ್ ಥವಲ್ಲ್ಯಾ ಭಾವ್ ಭೆನಿಯಾಕ್ನಿ ಹ್ಯಾ ಮಿಯಾ ಸಾಂಗಲ್ಲ್ಯಾ ಗೊಸ್ಟಿಯಾ ಸಿಕ್ವುಲೆ ತರ್ ತಿಯಾ ಜೆಜು ಕ್ರಿಸ್ತಾಚೊ ಬರೊ ಸೆವಕ್ ಹೊತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:6
39 ತಿಳಿವುಗಳ ಹೋಲಿಕೆ  

ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ನೀನಾದರೋ ಸ್ವಸ್ಥಬೋಧನೆಗೆ ಅನುಗುಣವಾಗಿ ಉಪದೇಶಿಸು.


ಪ್ರಿಯ ಸಹೋದರನೂ ನಂಬಿಗಸ್ತ ಸೇವಕನೂ ಮತ್ತು ಕರ್ತ ಯೇಸುವಿನಲ್ಲಿ ಜೊತೆಯ ದಾಸನೂ ಆಗಿರುವ ತುಖಿಕನು ನನ್ನ ವಿಷಯವನ್ನೆಲ್ಲಾ ನಿಮಗೆ ತಿಳಿಸುವನು.


ಯೇಸು ಅವರಿಗೆ, “ಆದಕಾರಣ ಪರಲೋಕ ರಾಜ್ಯದ ಶಿಷ್ಯನಾಗಿರುವ ಪ್ರತಿಯೊಬ್ಬ ನಿಯಮ ಬೋಧಕನು, ತನ್ನ ಬೊಕ್ಕಸದೊಳಗಿಂದ ಹೊಸ ಮತ್ತು ಹಳೆಯ ವಸ್ತುಗಳನ್ನು ಹೊರಗೆ ತರುವ ಒಬ್ಬ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ,” ಎಂದರು.


ಇದನ್ನು ನೀವು ಈಗಾಗಲೇ ಒಂದು ಸಾರಿ ತಿಳಿದವರಾಗಿದ್ದೀರಿ. ಆದರೂ ನಾನು ಅದನ್ನೇ ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅದು ಯಾವುದೆಂದರೆ: ಕರ್ತದೇವರು ತಮ್ಮ ಪ್ರಜೆಯನ್ನು ಈಜಿಪ್ಟ್ ದೇಶದೊಳಗಿಂದ ರಕ್ಷಿಸಿದರೂ ತರುವಾಯ ಅವರೊಳಗೆ ನಂಬದೆ ಹೋದವರನ್ನು ಸಂಹಾರ ಮಾಡಿದರು.


ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳದೆ ಅದನ್ನು ಅತಿಕ್ರಮಿಸುವವರಿಗೆ ದೇವರಿಲ್ಲ. ಕ್ರಿಸ್ತ ಯೇಸುವಿನ ಬೋಧನೆಯಲ್ಲಿ ಬಾಳುವವರಿಗೆ ತಂದೆ ಮತ್ತು ಪುತ್ರ ಇಬ್ಬರೂಇರುತ್ತಾರೆ.


ಹೊಸದಾಗಿ ಹುಟ್ಟಿದ ಶಿಶುಗಳಂತಿರುವ ನೀವು ರಕ್ಷಣೆಯಲ್ಲಿ ಬೆಳೆಯುವ ಹಾಗೆ ಆತ್ಮಿಕವಾದ ಶುದ್ಧಹಾಲನ್ನು ಬಯಸಿರಿ.


ಏಕೆಂದರೆ ಜನರು ಸ್ವಸ್ಥಬೋಧನೆಯನ್ನು ಸಹಿಸಲಾರದ ಕಾಲವು ಬರುತ್ತದೆ. ಆದರೆ ಅವರು ತಮ್ಮ ಕಿವಿಗಳು ಕೇಳಲು ಆಶೆಪಡುವ ಅನೇಕ ಉಪದೇಶಕರನ್ನು ಕೂಡಿಟ್ಟುಕೊಳ್ಳುವರು.


ನೀನಾದರೋ ನನ್ನ ಎಲ್ಲಾ ಬೋಧನೆ, ನನ್ನ ನಡತೆ, ನನ್ನ ಉದ್ದೇಶ, ನಂಬಿಕೆ, ದೀರ್ಘಶಾಂತಿ, ಪ್ರೀತಿ, ಸೈರಣೆ,


ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತಗಳನ್ನು ಇಟ್ಟಿದ್ದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.


ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶುದ್ಧವಾದ ಮಾತುಗಳಿಗೂ ಭಕ್ತಿಗೆ ಅನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ,


ನಿನ್ನ ವಿಷಯದಲ್ಲಿಯೂ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಇವುಗಳಲ್ಲಿಯೇ ನಿರತನಾಗಿರು. ಹೀಗೆ ಮಾಡುವುದರಿಂದ ನೀನು ನಿನ್ನನ್ನೂ ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವೆ.


ಜಾರರಿಗೆ, ಸಲಿಂಗಕಾಮಿಗಳಿಗೆ, ನರಚೋರರಿಗೆ, ಸುಳ್ಳುಗಾರರಿಗೆ, ಸುಳ್ಳಾಣೆಯಿಡುವವರಿಗೆ, ಸ್ವಸ್ಥಬೋಧನೆಯನ್ನು ವಿರೋಧಿಸುವ ಬೇರೆ ಏನಾದರೂ ಇದ್ದರೆ ಮೋಶೆಯ ನಿಯಮವು ಇಂಥವವರಿಗಾಗಿ ಕೊಡಲಾಗಿದೆ ಎಂದು ನಮಗೆ ತಿಳಿದಿದೆ.


ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.


ಇಂಥವರು ಶಿರಸ್ಸಾಗಿರುವ ಕ್ರಿಸ್ತ ಯೇಸುವಿನನೊಂದಿಗೆ ಸಂಬಂಧ ಕಳೆದುಕೊಂಡವರಾಗಿದ್ದಾರೆ. ಏಕೆಂದರೆ, ಕ್ರಿಸ್ತನಿಂದಲೇ ದೇಹವೆಲ್ಲಾ ಕೀಲು ನರಗಳ ಮೂಲಕ ಪೋಷಣೆ ಪಡೆದು ಒಂದಾಗಿ ಜೋಡಿಸಲಾಗಿ ದೇವರು ಬೆಳೆಸುವಂತೆ ಬೆಳೆಯುತ್ತದೆ.


ಆದರೂ ಈಗಾಗಲೇ ನಾವು ಯಾವುದರಲ್ಲಿ ಮುಂದುವರೆದಿದ್ದೇವೋ ಆ ಸೂತ್ರದ ಪ್ರಕಾರ ಒಂದೇ ಮನಸ್ಸುಳ್ಳವರಾಗಿ ಬಾಳೋಣ.


ನನ್ನ ವಿಷಯವಾಗಿಯೂ ನಾನು ಮಾಡುತ್ತಿರುವುದರ ವಿಷಯವಾಗಿಯೂ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.


ಅದಕ್ಕೆ ಬದಲಾಗಿ, ಸರ್ವ ವಿಷಯಗಳಲ್ಲಿ ನಾವು ದೇವರ ಸೇವಕರಾಗಿದ್ದೇವೆಂದು ತೋರಿಸುತ್ತೇವೆ. ಕಷ್ಟ, ಸಂಕಟ ತೊಂದರೆಗಳಲ್ಲಿ ಮಹಾ ದೀರ್ಘತಾಳ್ಮೆಯನ್ನು ತೋರಿಸುತ್ತೇವೆ.


ದೇವರು ನಮಗೆ ಹೊಸ ಒಡಂಬಡಿಕೆಯ ಸೇವಕರಾಗುವಂತೆ ಸಾಮರ್ಥ್ಯವನ್ನು ನೀಡಿರುತ್ತಾರೆ. ಇದು ಲಿಖಿತ ನಿಯಮಕ್ಕೆ ಸೇರಿದ್ದಾಗಿರದೆ, ಪವಿತ್ರಾತ್ಮನ ನಿಯಮದ ಸೇವೆಯಾಗಿರುತ್ತದೆ. ಏಕೆಂದರೆ, ಲಿಖಿತವಾದದ್ದು ಮರಣವನ್ನುಂಟುಮಾಡುತ್ತದೆ. ದೇವರಾತ್ಮನಿಂದಾದದ್ದು ಜೀವವನ್ನು ಉಂಟುಮಾಡುತ್ತದೆ.


ಇದರ ನಿಮಿತ್ತವೇ ಕರ್ತ ದೇವರಲ್ಲಿ ನಂಬಿಗಸ್ತನಾಗಿರುವ ನನ್ನ ಮಗ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ಅವನು ನನಗೆ ಪ್ರಿಯನಾಗಿದ್ದಾನೆ. ನಾನು ಎಲ್ಲಾ ಕಡೆಗಳಲ್ಲಿಯೂ ಪ್ರತಿಯೊಂದು ಸಭೆಯಲ್ಲಿಯೂ ಬೋಧಿಸುವುದರ ಪ್ರಕಾರ, ಅವನು ಕ್ರಿಸ್ತ ಯೇಸುವಿನಲ್ಲಿರುವ ನನ್ನ ನಡವಳಿಕೆಯನ್ನು, ನಿಮ್ಮ ನೆನಪಿಗೆ ತರುವನು.


ನಾನು ನಿಮಗೆ ಕೆಲವು ವಿಷಯಗಳನ್ನು ಜ್ಞಾಪಕ ಪಡಿಸುವುದಕ್ಕಾಗಿ ಬಹಳ ಧೈರ್ಯದಿಂದ ಹೀಗೆ ಬರೆದಿದ್ದೇನೆ.


ಈ ರೀತಿಯ ಪರಿಶ್ರಮದ ದುಡಿಮೆಯಿಂದ ನಾವು ಬಲಹೀನರಿಗೆ ಸಹಾಯ ಮಾಡಬೇಕೆಂಬುದನ್ನು ನನ್ನ ಮಾದರಿಯಿಂದ ನಿಮಗೆ ತೋರಿಸಿಕೊಟ್ಟೆನು. ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಆಶೀರ್ವಾದ,’ ಎಂದು ಕರ್ತ ಆಗಿರುವ ಯೇಸುವೇ ಹೇಳಿದ ಮಾತುಗಳನ್ನು ನಿಮಗೆ ಜ್ಞಾಪಕಪಡಿಸುತ್ತೇನೆ,” ಎಂದನು.


ಆದ್ದರಿಂದ ನಾನು ಮೂರು ವರ್ಷಗಳ ಕಾಲ ಹಗಲುರಾತ್ರಿ ಕಣ್ಣೀರಿಡುತ್ತಾ ಎಡಬಿಡದೆ ನಿಮ್ಮನ್ನು ಎಚ್ಚರಿಸುತ್ತಾ ಇದ್ದೇನೆಂಬುದನ್ನು ಜ್ಞಾಪಕದಲ್ಲಿಟ್ಟುಕೊಂಡು ಎಚ್ಚರವಾಗಿರಿ.


ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವ ದೇವರೇ, ನಾನು ನಿನ್ನ ಹೆಸರಿನವನಲ್ಲವೇ!


ಏಕೆಂದರೆ ನಾನು ನಿಮಗೆ ಸದುಪದೇಶವನ್ನು ಮಾಡುವೆನು, ನನ್ನ ಉಪದೇಶವನ್ನು ಬಿಟ್ಟುಬಿಡಬೇಡಿರಿ.


ಯೆಹೋವ ದೇವರ ನಿಯಮವು ಸಂಪೂರ್ಣವಾಗಿದ್ದು, ಪ್ರಾಣಕ್ಕೆ ಜೀವಕರವಾಗಿದೆ; ಯೆಹೋವ ದೇವರ ಶಾಸನಗಳು ವಿಶ್ವಾಸಪಾತ್ರವಾಗಿದ್ದು, ಮುಗ್ಧನನ್ನು ಜ್ಞಾನಿಗಳನ್ನಾಗಿ ಮಾಡುತ್ತವೆ.


ಆದ್ದರಿಂದ ನಾನು ಸಹ ಮೊದಲಿನಿಂದ ಎಲ್ಲವನ್ನೂ ಸೂಕ್ಷ್ಮವಾಗಿ ಪರಿಶೋಧಿಸಿ, ಅವುಗಳನ್ನು ಕ್ರಮವಾಗಿ ನಿಮಗೆ ಬರೆಯುವುದು ಒಳ್ಳೆಯದೆಂದು ನನಗೆ ತೋಚಿತು.


ಆ ದಿನಗಳಲ್ಲಿ ಸುಮಾರು ನೂರಿಪ್ಪತ್ತು ಮಂದಿ ವಿಶ್ವಾಸಿಗಳು ಸೇರಿದ್ದರು. ಅವರ ನಡುವೆ ಪೇತ್ರನು ಎದ್ದು ನಿಂತು, ಹೀಗೆಂದನು:


ಅವರು ಕ್ರಿಸ್ತ ಯೇಸುವಿನ ಸೇವಕರೋ? ಅವರಿಗಿಂತ ಹೆಚ್ಚಾಗಿ ನಾನು ಸೇವೆ ಮಾಡಿದ್ದೇನೆ. ನಾನು ಬುದ್ಧಿಹೀನನಂತೆ ಮಾತನಾಡುತ್ತಿದ್ದೇನೆ. ನಾನು ಅತಿಯಾಗಿ ಪ್ರಯಾಸ ಪಟ್ಟಿರುತ್ತೇನೆ. ಅನೇಕಬಾರಿ ಸೆರೆಮನೆಗೆ ಹಾಕಲಾದೆನು. ಬಹು ಕ್ರೂರವಾದ ರೀತಿಯಲ್ಲಿ ಪೆಟ್ಟುಗಳನ್ನು ತಿಂದೆನು. ಅನೇಕಬಾರಿ ಮರಣವನ್ನು ಎದುರಿಸಿದೆನು.


ಅವನ ಹಾಗೆ ನಿಮ್ಮ ಯೋಗಕ್ಷೇಮವನ್ನು ಕುರಿತು ಯಥಾರ್ಥವಾಗಿ ಚಿಂತಿಸುವವರು, ನನ್ನ ಬಳಿ ಬೇರೆ ಯಾರೂ ಇಲ್ಲ.


ಆದರೆ ತಿಮೊಥೆಯನ ಗುಣಸ್ವಭಾವವನ್ನು ನೀವು ಬಲ್ಲಿರಿ. ಮಗನು ತಂದೆಗೆ ಹೇಗೋ ಹಾಗೆಯೇ ಅವನು ಸುವಾರ್ತೆಯಲ್ಲಿ ನನ್ನೊಂದಿಗೆ ಶ್ರಮಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು