Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 4:7 - ಕನ್ನಡ ಸಮಕಾಲಿಕ ಅನುವಾದ

7 ಪ್ರಾಪಂಚಿಕ ಹಾಗೂ ಅಜ್ಜಿ ಕಥೆಗಳನ್ನು ನಿರಾಕರಿಸಿ ನೀನು ದೇವಭಕ್ತಿಯನ್ನು ಅಭ್ಯಾಸ ಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಜ್ಜಿ ಕಥೆಗಳನ್ನೂ ಪ್ರಾಪಂಚಿಕವಾದ ಆ ಕಥೆಗಳನ್ನೂ ತಳ್ಳಿಬಿಟ್ಟು, ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಾಪಂಚಿಕ ಹಾಗೂ ತಿರುಳಿಲ್ಲದ ಕಟ್ಟುಕತೆಗಳನ್ನು ತಳ್ಳಿಬಿಟ್ಟು, ನಿನ್ನ ಭಕ್ತಿಯನ್ನು ವೃದ್ಧಿಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಜ್ಜೀಕಥೆಗಳಂತಿರುವ ಕೇವಲ ಪ್ರಾಪಂಚಿಕವಾದ ಕಥೆಗಳನ್ನು ತಳ್ಳಿಬಿಟ್ಟು ನೀನು ದೇವಭಕ್ತಿಯ ವಿಷಯದಲ್ಲಿ ಸಾಧನೆಮಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರ ಸತ್ಯಕ್ಕೆ ಹೊಂದಿಕೆಯಾಗದ ಕ್ಷುಲ್ಲಕ ಕಥೆಗಳನ್ನು ಜನರು ಹೇಳುತ್ತಾರೆ. ಆ ಕಥೆಗಳ ಬೋಧನೆಯನ್ನು ಅನುಸರಿಸಬೇಡ. ದೇವರಿಗೆ ನಿಜವಾದ ಸೇವೆ ಮಾಡಲು ನಿನಗೆ ನೀನೇ ಬೋಧಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಅಜ್ಜಿಯಾಂಚಿ ದೆವಸ್ಪಾನ್‍ನಸಲ್ಲ್ಯಾ ಕಲ್ಪನ್ ಕರುನ್ ಸಾಂಗ್ತಲ್ಯಾ ಕಾನಿಯಾಕ್ನಾ ಧುರ್ ರ್‍ಹಾ, ಅನಿ ದೆವಾಚಿ ಸೆವಾ ಕರುಕ್ ತಿಯಾ ಅಪ್ನಾಕುಚ್ ಶಿಕುನ್ ಘೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 4:7
20 ತಿಳಿವುಗಳ ಹೋಲಿಕೆ  

ಕಟ್ಟುಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಕೆಲವರಿಗೆ ಆಜ್ಞಾಪಿಸಬೇಕೆಂದು ನಾನು ನಿನಗೆ ಖಂಡಿತವಾಗಿ ಹೇಳಿದಂತೆ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆಯಿಂದುಂಟಾಗುವ ದೇವರ ಕಾರ್ಯಭಾರವನ್ನು ವೃದ್ಧಿ ಮಾಡುವುದೇ ಇಲ್ಲ.


ಆದರೆ ಭಕ್ತಿಗೆ ವಿರುದ್ಧವಾದ ಹರಟೆ ಮಾತುಗಳಿಂದ ತೊಲಗಿರು. ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.


ನಾವು ಭಕ್ತಿಹೀನತೆಯನ್ನೂ ಲೋಕದ ಆಶೆಗಳನ್ನೂ ತೊರೆದು, ಈಗಿನ ಲೋಕದಲ್ಲಿ ಸ್ವಶಿಸ್ತನ್ನು ಹೊಂದಿದವವರಾಗಿಯೂ ನೀತಿವಂತರಾಗಿಯೂ ಭಕ್ತಿಯುಳ್ಳವರಾಗಿಯೂ ಬದುಕಬೇಕೆಂತಲೂ ದೇವರ ಕೃಪೆಯು ನಮಗೆ ಬೋಧಿಸುತ್ತದೆ.


ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.


ಆದರೆ ಗಟ್ಟಿಯಾದ ಆಹಾರವು, ತಮ್ಮ ಜ್ಞಾನೇಂದ್ರಿಯಗಳನ್ನು ಅಭ್ಯಾಸಿಸಿ, ತರಬೇತುಗೊಂಡದ್ದರಿಂದ ಒಳ್ಳೆಯದನ್ನು ಹಾಗೂ ಕೆಟ್ಟದ್ದನ್ನು ವಿವೇಚಿಸಿ ಪೂರ್ಣ ಬೆಳವಣಿಗೆ ಹೊಂದಿದವರಿಗೆ ಸೇರಿದ್ದಾಗಿದೆ.


ಬುದ್ಧಿಯಿಲ್ಲದ ಅಯುಕ್ತ ವಾಗ್ವಾದಗಳು ಜಗಳಗಳನ್ನು ಹುಟ್ಟಿಸುತ್ತವೆ ಎಂದು ತಿಳಿದು ಅವುಗಳನ್ನು ನಿರಾಕರಿಸು.


ಅವರು ಸತ್ಯಕ್ಕೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ತಿರುಗಿಕೊಳ್ಳುವರು.


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ಆದ್ದರಿಂದ ದೇವರ ಮುಂದೆಯೂ ಜನರ ಮುಂದೆಯೂ ನನ್ನ ಮನಸ್ಸಾಕ್ಷಿಯನ್ನು ಯಾವಾಗಲೂ ಶುದ್ಧವಾಗಿಟ್ಟುಕೊಂಡಿರಲು ಪರಿಶ್ರಮಿಸುತ್ತಿದ್ದೇನೆ.


ತಿಮೊಥೆಯನೇ, ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡು. ದೇವಭಕ್ತಿಗೆ ಅನುಗುಣವಾಗದ ಹರಟೆ ಮಾತುಗಳಿಗೂ ಜ್ಞಾನದಿಂದ ವಿಚಾರಪಡಿಸುವ ಸುಳ್ಳು ತರ್ಕಗಳಿಗೂ ಒಳಪಡದಿರು.


ಅವರು ಯೆಹೂದ್ಯರ ಕಟ್ಟುಕಥೆಗಳಿಗೂ ಸತ್ಯದಿಂದ ದೂರಮಾಡುವ ಮಾನವರ ಆಜ್ಞೆಗಳಿಗೂ ಲಕ್ಷ್ಯಕೊಡಬಾರದು.


ನಿಜವಾಗಿಯೂ ಕ್ರಿಸ್ತ ಯೇಸುವಿನಲ್ಲಿ ಭಕ್ತಿಯುಳ್ಳವರಾಗಿ ಜೀವಿಸುವುದಕ್ಕೆ ಮನಸ್ಸು ಮಾಡುವವರೆಲ್ಲರೂ ಹಿಂಸೆಗೊಳಗಾಗುವರು.


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ದೇವ ಭಕ್ತೆಯರೆನಿಸಿಕೊಳ್ಳುವ ಸ್ತ್ರೀಯರಿಗೆ ತಕ್ಕಂತೆ ಸತ್ಕ್ರಿಯೆಗಳಿಂದ ತಮ್ಮನ್ನು ಅಲಂಕರಿಸಿಕೊಳ್ಳಬೇಕು.


ನಿಯಮವು ನೀತಿವಂತರಿಗೋಸ್ಕರ ಅಲ್ಲ. ಬದಲಿಗೆ ಅದು ಅವಿಧೇಯರಿಗೆ, ಅಕ್ರಮಗಾರರಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಅಪವಿತ್ರರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ, ಕೊಲೆಗಾರರಿಗೆ,


ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.


ಯಾವನಾದರೂ ಬೇರೆ ವಿಧವಾದ ಉಪದೇಶವನ್ನು ಮಾಡಿ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಶುದ್ಧವಾದ ಮಾತುಗಳಿಗೂ ಭಕ್ತಿಗೆ ಅನುಸಾರವಾದ ಬೋಧನೆಗೂ ಸಮ್ಮತಿಸದೆ ಹೋದರೆ,


ಹೀಗೆ ಅನಾರೋಗ್ಯಕರವಾದ ವಿವಾದಗಳನ್ನೂ ಕೆಲವು ಮಾತುಗಳ ಕುರಿತಾಗಿರುವ ತರ್ಕಗಳನ್ನೂ ಸೃಷ್ಟಿಸುವ ಪ್ರಸಿದ್ಧರಾಗಿದ್ದಾರೆ. ಅಂಥವರು ದೇವಭಕ್ತಿಯನ್ನು ಆರ್ಥಿಕ ಲಾಭವನ್ನಾಗಿ ಭಾವಿಸುವವರಾಗಿದ್ದಾರೆ.


ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು