Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:18 - ಕನ್ನಡ ಸಮಕಾಲಿಕ ಅನುವಾದ

18 ಏಕೆಂದರೆ, “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು!” ಎಂತಲೂ, “ಕೆಲಸದವನು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ!” ಎಂತಲೂ ಪವಿತ್ರ ವೇದದಲ್ಲಿ ಹೇಳಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದು,” ಮತ್ತು “ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆ” ಎಂದು ಶಾಸ್ತ್ರದಲ್ಲಿ ಹೇಳಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ‘ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬೇಡ’ ಎಂದೂ, ‘ಕಾರ್ಮಿಕನು ಕೂಲಿಗೆ ಅರ್ಹನು’ ಎಂದೂ ಧರ್ಮಶಾಸ್ತ್ರ ಹೇಳುತ್ತದೆಯಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಕಣತುಳಿಯುವ ಎತ್ತಿನ ಬಾಯಿ ಕಟ್ಟಬಾರದೆಂತಲೂ ಆಳು ತನ್ನ ಕೂಲಿಗೆ ಯೋಗ್ಯನಾಗಿದ್ದಾನೆಂತಲೂ ಶಾಸ್ತ್ರದಲ್ಲಿ ಹೇಳಿದೆಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಏಕೆಂದರೆ “ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು” ಎಂಬುದಾಗಿಯೂ “ದುಡಿಯುವ ಆಳಿಗೆ ತಕ್ಕ ಕೂಲಿ ದೊರೆಯಬೇಕು” ಎಂಬುದಾಗಿಯೂ ಪವಿತ್ರ ಗ್ರಂಥವು ಹೇಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಖರೆ ಪವಿತ್ರ್ ಪುಸ್ತಕ್ ಮನ್ತಾ “ತುಮ್ಚೆ ಭಾತ್ ಮಳ್ತಾನಾ ಬೈಲಾಚೆ ತೊಂಡ್ ಮುಸ್ಕೆ ಘಾಲುನ್ ಭಾಂದುನಕಾಸಿ” ಅನಿ ರಾಬಲ್ಲ್ಯಾಕ್ ತೆಚಿ ಮಜುರಿ ಗಾವುಕುಚ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:18
13 ತಿಳಿವುಗಳ ಹೋಲಿಕೆ  

ಕಣ ತುಳಿಯುವ ಎತ್ತಿನ ಬಾಯನ್ನು ಕಟ್ಟಬಾರದು.


ಅದೇ ರೀತಿಯಾಗಿ ಸುವಾರ್ತೆಯನ್ನು ಸಾರುವವರು, ಸುವಾರ್ತೆಯಿಂದಲೇ ಜೀವನ ಮಾಡಬೇಕೆಂದು ಕರ್ತದೇವರು ಸಹ ಆಜ್ಞಾಪಿಸಿದ್ದಾರೆ.


ಮನೆಯಿಂದ ಮನೆಗೆ ಹೋಗದೆ, ಅದೇ ಮನೆಯಲ್ಲಿದ್ದು, ಅವರು ಕೊಟ್ಟದ್ದನ್ನು ತಿಂದು ಕುಡಿಯಿರಿ. ಕೆಲಸದವನು ತನ್ನ ಕೂಲಿಗೆ ಯೋಗ್ಯನು.


ಪ್ರಯಾಣಕ್ಕೆ ಚೀಲವನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಪಾದರಕ್ಷೆಗಳನ್ನಾಗಲಿ, ಕೋಲುಗಳನ್ನಾಗಲಿ ತೆಗೆದುಕೊಳ್ಳಬೇಡಿರಿ. ಏಕೆಂದರೆ ಕೆಲಸದವನು ತನ್ನ ಜೀವನಾಧಾರಕ್ಕೆ ಅರ್ಹನು.


“ ‘ನಿಮ್ಮ ನೆರೆಯವನನ್ನು ವಂಚಿಸಬಾರದು. “ ‘ಇಲ್ಲವೆ ಅವನನ್ನು ಸುಲಿದುಕೊಳ್ಳಬಾರದು. ಕೂಲಿಯಾಳಿನ ಕೂಲಿಯು ನಿಮ್ಮ ಬಳಿಯಲ್ಲಿ ರಾತ್ರಿಯೆಲ್ಲಾ ಮತ್ತು ಮುಂಜಾನೆಯವರೆಗೆ ಇರಬಾರದು.


ಅಥವಾ ದೇವರು ನಮ್ಮಲ್ಲಿ ವಾಸವಾಗಿರಲು ನಮಗೆ ಕೊಟ್ಟಿರುವ ಪವಿತ್ರಾತ್ಮ ದೇವರು, ನಾವು ಅವರಿಗೆ ಮಾತ್ರ ಸೇರಿದವರಾಗಿರಬೇಕೆಂದು ಬಲವಾದ ಬಯಕೆ ಉಳ್ಳವರಾಗಿದ್ದಾರೆಂದು ಪವಿತ್ರ ವೇದವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸುತ್ತೀರೋ?


ಪವಿತ್ರ ವೇದದಲ್ಲಿ ಹೇಳಿರುವಂತೆ, “ಅವರ ಮೇಲೆ ನಂಬಿಕೆಯಿಡುವ ಯಾವನಾದರೂ ಆಶಾಭಂಗಪಡುವದೇ ಇಲ್ಲ.”


ಏಕೆಂದರೆ, “ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಭೂಮಿಯ ಮೇಲೆಲ್ಲಾ ಪ್ರಸಿದ್ಧಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ಏರಿಸಿದೆನು,” ಎಂದು ಪವಿತ್ರ ವೇದದಲ್ಲಿ ದೇವರು ಫರೋಹನಿಗೆ ಹೇಳುತ್ತಾರೆ.


ಯೆಹೂದ್ಯರಲ್ಲದವರನ್ನು ನಂಬಿಕೆಯಿಂದಲೇ ದೇವರು ನೀತಿವಂತರನ್ನಾಗಿ ಮಾಡುವರು ಎಂದು ಪವಿತ್ರ ವೇದವು ಮೊದಲೇ ಕಂಡು, “ನಿನ್ನ ಮೂಲಕ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವುದು,” ಎಂಬ ಸುವಾರ್ತೆಯನ್ನು ಅಬ್ರಹಾಮನಿಗೆ, ಮುಂಚಿತವಾಗಿಯೇ ಸಾರಿತು.


ದೇವರು ತಾವು ಮುಂದಾಗಿ ತಿಳಿದುಕೊಂಡ ತಮ್ಮ ಜನರನ್ನು ತ್ಯಜಿಸಲಿಲ್ಲ. ದೇವರ ವಾಕ್ಯವು ಎಲೀಯನನ್ನು ಕುರಿತು ಏನು ಹೇಳುತ್ತದೆಂದು ನಿಮಗೆ ಗೊತ್ತಿಲ್ಲವೋ?


ಏಕೆಂದರೆ ಪವಿತ್ರ ವೇದವು: “ಅಬ್ರಹಾಮನು ದೇವರನ್ನು ನಂಬಿದನು, ಆ ನಂಬಿಕೆಯು ಅವನ ಲೆಕ್ಕಕ್ಕೆ ನೀತಿ ಎಂದು ಎಣಿಸಲಾಯಿತು,” ಎಂದು ಹೇಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು