Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 5:20 - ಕನ್ನಡ ಸಮಕಾಲಿಕ ಅನುವಾದ

20 ಪಾಪಮಾಡುವ ಹಿರಿಯರನ್ನು ಎಲ್ಲರ ಮುಂದೆಯೇ ಗದರಿಸು. ಇದರಿಂದ ಇತರರಿಗೂ ಎಚ್ಚರಿಕೆಯಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಯಾರಾದರೂ ಪಾಪದಲ್ಲಿಯೇ ಮುಂದುವರಿಯುತ್ತಾ ಇದ್ದರೆ, ಅಂಥವರನ್ನು ಬಹಿರಂಗವಾಗಿಯೇ ಖಂಡಿಸು. ಇದು ಇತರರಿಗೂ ಎಚ್ಚರಿಕೆಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು; ಇವರಿಂದ ವಿುಕ್ಕಾದವರಿಗೂ ಭಯವುಂಟಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಪಾಪ ಮಾಡುವ ಜನರನ್ನು ಸಭೆಯಲ್ಲಿ ಎಲ್ಲರ ಎದುರಿನಲ್ಲಿಯೇ ಗದರಿಸು. ಆಗ ಇತರರಿಗೂ ಎಚ್ಚರಿಕೆ ನೀಡಿದಂತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ಜೆ ಕೊನ್ ಪಾಪ್ ಕರ್‍ತಾತ್ ತೆಂಕಾ ಲೊಕಾತ್ನಿಚ್ ಜೊರ್ ಕರ್, ಅಶೆ ಅನಿ ಹುರಲ್ಲ್ಯಾ ಲೊಕಾಕ್ನಿಬಿ ಉಲ್ಲೆ ಭಿಂಯೆ ರ್‍ಹಾತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 5:20
15 ತಿಳಿವುಗಳ ಹೋಲಿಕೆ  

ವಾಕ್ಯವನ್ನು ಸಾರು; ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಸಿದ್ಧವಾಗಿರು. ಎಲ್ಲಾ ತಾಳ್ಮೆಯಿಂದ ಉಪದೇಶಿಸಿ ಖಂಡಿಸು, ಗದರಿಸು, ಪ್ರೋತ್ಸಾಹಿಸು.


ಈ ಸಾಕ್ಷಿಯು ನಿಜವೇ. ಇದರ ದೆಸೆಯಿಂದ ಅವರು ನಂಬಿಕೆಯಲ್ಲಿ ಸ್ವಸ್ಥರಾಗಿರುವಂತೆ ಅವರನ್ನು ಕಠಿಣವಾಗಿ ಖಂಡಿಸು.


ಇಡೀ ಸಭೆಗೂ ಈ ಘಟನೆಗಳ ಬಗ್ಗೆ ಕೇಳಿದವರಿಗೂ ಮಹಾ ಭಯವು ಉಂಟಾಯಿತು.


ಇಸ್ರಾಯೇಲರೆಲ್ಲಾ ಇದನ್ನು ಕೇಳಿ ಭಯಪಟ್ಟು, ಇನ್ನು ಮೇಲೆ ಕೆಟ್ಟದ್ದನ್ನು ಮಾಡದೆ ಇರುವರು.


ಹುಮೆನಾಯನೂ ಅಲೆಕ್ಸಾಂಡರನೂ ಅಂಥವರಾಗಿದ್ದಾರೆ. ಇವರು ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನಿಗೆ ಒಪ್ಪಿಸಿಬಿಟ್ಟಿದ್ದೇನೆ.


ಇದನ್ನು ಅನನೀಯನು ಕೇಳಿಸಿಕೊಂಡಾಗ, ಕೆಳಗೆ ಬಿದ್ದು ಸತ್ತುಹೋದನು. ನಡೆದ ಸಂಗತಿಯನ್ನು ಕೇಳಿದವರೆಲ್ಲರಿಗೂ ಮಹಾ ಭಯವು ಉಂಟಾಯಿತು.


ಆಗ ಅವನ ಪಟ್ಟಣದ ಜನರೆಲ್ಲರೂ ಅವನು ಸಾಯುವಂತೆ ಅವನ ಮೇಲೆ ಕಲ್ಲೆಸೆಯಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು. ಇಸ್ರಾಯೇಲರಲ್ಲಿ ಇದನ್ನು ಕೇಳಿ ಭಯಪಡುವರು.


ಆಗ ಉಳಿದವರು ಕೇಳಿ ಭಯಪಟ್ಟು, ಆ ದುಷ್ಟಕೃತ್ಯವನ್ನು ಇನ್ನು ಮುಂದೆ ನಿಮ್ಮ ಮಧ್ಯದಲ್ಲಿ ಮಾಡದಿರುವರು.


ಜನರೆಲ್ಲಾ ಕೇಳಿ ಭಯಪಟ್ಟು ಇನ್ನು ಮೇಲೆ ಅಹಂಕಾರದಿಂದ ಹಾಗೆ ಮಾಡಲಾರರು.


ಎಫೆಸದಲ್ಲಿ ವಾಸಿಸುತ್ತಿದ್ದ ಯೆಹೂದ್ಯರಿಗೂ ಗ್ರೀಕರಿಗೂ ಈ ವಿಷಯ ತಿಳಿದಾಗ, ಅವರೆಲ್ಲರೂ ಬಹಳ ಭಯಗೊಂಡರು. ಹೀಗೆ ಕರ್ತ ಯೇಸುವಿನ ಹೆಸರಿಗೆ ಅತ್ಯಂತ ಮಹಿಮೆಯಾಯಿತು.


“ ‘ನಿನ್ನ ಹೃದಯದಲ್ಲಿ ನಿನ್ನ ಸಹೋದರನನ್ನು ದ್ವೇಷಿಸಬೇಡ, ನಿನ್ನ ನೆರೆಯವನ ಪಾಪವು ನಿನ್ನ ಮೇಲೆ ಬಾರದಂತೆ ಅವನನ್ನು ತಪ್ಪದೆ ಗದರಿಸು.


ಈ ದೈವಿಕ ದುಃಖವು ನಿಮ್ಮಲ್ಲಿ ಏನು ಉಂಟುಮಾಡಿದೆ ಗಮನಿಸಿರಿ: ನಿಮ್ಮಲ್ಲಿ ಎಂಥಾ ಉತ್ಸಾಹ, ನಿರಪರಾಧಕ್ಕಾಗಿ ಎಂಥಾ ಪ್ರಯಾಸ, ಎಷ್ಟು ರೋಷ, ಎಷ್ಟು ಭಯ, ಎಷ್ಟು ಹಂಬಲ, ಎಷ್ಟು ಆಸಕ್ತಿ, ನ್ಯಾಯಕ್ಕಾಗಿ ಎಷ್ಟು ಆತುರ. ಪ್ರತಿಯೊಂದು ವಿಷಯದಲ್ಲಿಯೂ ನೀವು ನಿರ್ದೋಷಿಗಳೆಂದು ರುಜುಪಡಿಸುತ್ತೀರಿ.


ನಿಷ್ಪ್ರಯೋಜಕವಾದ ಕತ್ತಲೆಯ ಕಾರ್ಯಗಳೊಂದಿಗೆ ಪಾಲುಗಾರರಾಗಿರದೆ ಅವುಗಳನ್ನು ಬೆಳಕಿಗೆ ತನ್ನಿರಿ.


ಈ ಕಾರ್ಯಗಳ ವಿಷಯದಲ್ಲಿ, ನೀನು ಉಪದೇಶಿಸುತ್ತಾ ಇರು. ಪ್ರೋತ್ಸಾಹಮಾಡುತ್ತಾ ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದಿರಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು