Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:13 - ಕನ್ನಡ ಸಮಕಾಲಿಕ ಅನುವಾದ

13 ಎಲ್ಲಕ್ಕೂ ಜೀವ ನೀಡುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಒಳ್ಳೆಯ ಅರಿಕೆಯನ್ನು ಸಾಕ್ಷಿಯಾಗಿ ನೀಡಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸರ್ವ ಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ, ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠ ಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಸರ್ವಸೃಷ್ಟಿಗೆ ಜೀವಾಧಾರಕನಾದ ದೇವರ ಮುಂದೆಯೂ ಪೊಂತ್ಯ ಪಿಲಾತನ ಕಾಲದಲ್ಲಿ ಶ್ರೇಷ್ಠಪ್ರತಿಜ್ಞೆಯನ್ನು ತಾನೇ ಸಾಕ್ಷಿಯಾಗಿದ್ದು ಸ್ಥಾಪಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪೊಂತ್ಯ ಪಿಲಾತನ ಮುಂದೆ ಸಾಕ್ಷಿ ನೀಡಿದ ಕ್ರಿಸ್ತ ಯೇಸುವಿನ ಸನ್ನಿಧಿಯಲ್ಲಿಯೂ ಸರ್ವಸೃಷ್ಟಿಗೆ ಜೀವದಾಯಕನಾದ ದೇವರ ಸನ್ನಿಧಿಯಲ್ಲಿಯೂ ನಾನು ನಿನಗೆ ಆಜ್ಞಾಪಿಸುವುದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ದೆವಾಚ್ಯಾ ಇದ್ರಾಕ್ ತೊ ಸಗ್ಳ್ಯಾಕಿ ಜಿವ್ ದಿತಾ ಅನಿ ಕ್ರಿಸ್ತ್ ಜೆಜುನ್ ಪೊಂತ್ ಪಿಲಾತಾಕ್ ಬರಿ ಸಾಕ್ಷಿ ದಿಲ್ಯಾನ್. ಮಿಯಾ ತುಕಾ ಹುಕುಮ್ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:13
22 ತಿಳಿವುಗಳ ಹೋಲಿಕೆ  

ಯೇಸು ರಾಜ್ಯಪಾಲನ ಮುಂದೆ ನಿಂತಿದ್ದರು. ಆಗ ಅವನು ಯೇಸುವಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಅದಕ್ಕೆ ಯೇಸು ಅವನಿಗೆ, “ನೀನೇ ಹೇಳುತ್ತಿದ್ದಿ,” ಎಂದರು.


ನೀನು ವಿಚಾರಿಸುವುದಕ್ಕೆ ಮೊದಲೇ ತೀರ್ಮಾನಿಸದೆಯೂ ಪಕ್ಷಪಾತದಿಂದ ಏನೂ ಮಾಡದೆಯೂ ಇವುಗಳನ್ನು ಕೈಗೊಳ್ಳಬೇಕೆಂದು ದೇವರ ಮುಂದೆಯೂ ಕ್ರಿಸ್ತ ಯೇಸುವಿನ ಮುಂದೆಯೂ ಆಯ್ಕೆಯಾದ ದೂತರ ಮುಂದೆಯೂ ಖಂಡಿತವಾಗಿ ನಾನು ಹೇಳುತ್ತೇನೆ.


“ಲವೊದಿಕೀಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಆಮೆನ್ ಎಂಬವರೂ ನಂಬಿಗಸ್ತರೂ ಸತ್ಯಸಾಕ್ಷಿಯೂ ದೇವರಿಂದಾದ ಸೃಷ್ಟಿಗೆ ಒಡೆಯರೂ ಆಗಿರುವವರು ಹೇಳುವುದೇನೆಂದರೆ:


ನಂಬಿಗಸ್ತ ಸಾಕ್ಷಿಯೂ ಸತ್ತವರೊಳಗಿಂದ ಪ್ರಥಮವಾಗಿ ಜೀವಂತವಾಗಿ ಎದ್ದು ಬಂದವರೂ ಭೂರಾಜರಿಗೆ ಒಡೆಯರೂ ಆಗಿರುವ ಕ್ರಿಸ್ತ ಯೇಸುವಿನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ಅವರೇ ನಮ್ಮನ್ನು ಪ್ರೀತಿಸುವವರೂ ತಮ್ಮ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವರೂ ಆಗಿದ್ದಾರೆ.


ತಂದೆ ಸತ್ತವರನ್ನು ಎಬ್ಬಿಸಿ ಬದುಕಿಸುವಂತೆಯೇ ಪುತ್ರನೂ ತನಗಿಷ್ಟ ಬಂದವರನ್ನು ಬದುಕಿಸುತ್ತಾರೆ.


ಆಮೇಲೆ ದೂತನು ಸ್ಪಟಿಕದಂತೆ ಹೊಳೆಯುವ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಕುರಿಮರಿಯಾದವರ ಸಿಂಹಾಸನದಿಂದ ಹೊರಟು,


ಆಗ ಸಿಂಹಾಸನದ ಮೇಲೆ ಕುಳಿತಿದ್ದವರು, “ಎಲ್ಲಾ ನೆರವೇರಿತು, ನಾನು ಆದಿಯೂ ಅಂತ್ಯವೂ ಆರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಿಂದ ಉಚಿತವಾಗಿ ಕೊಡುವೆನು.


ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?


ದೇವರು ಒಬ್ಬರೇ, ದೇವರಿಗೂ ಮನುಷ್ಯರಿಗೂ ಮಧ್ಯಸ್ಥ ಒಬ್ಬರೇ. ಅವರು ಮನುಷ್ಯರಾಗಿ ಬಂದ ಕ್ರಿಸ್ತ ಯೇಸುವೇ.


ದೇವರಿಗೆ ಏನಾದರೂ ಅವಶ್ಯಕತೆಯಿರುವಂತೆ ಮಾನವ ಹಸ್ತಗಳ ಸೇವೆಯು ಅಗತ್ಯವಿರುವುದಿಲ್ಲ. ದೇವರೇ ಎಲ್ಲರಿಗೂ ಜೀವವನ್ನೂ ಉಸಿರನ್ನೂ ಪ್ರತಿಯೊಂದನ್ನೂ ದಯಪಾಲಿಸಿರುವುದರಿಂದ,


ಅದಕ್ಕೆ ಯೇಸು, “ಪರಲೋಕದಿಂದ ನಿನಗೆ ಕೊಟ್ಟ ಹೊರತು ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪವಿದೆ,” ಎಂದು ಉತ್ತರಕೊಟ್ಟರು.


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ತಂದೆಯು ಸ್ವತಃ ಜೀವವುಳ್ಳವರಾಗಿರುವಂತೆಯೇ ಪುತ್ರನೂ ಸಹ ಸ್ವತಃ ಜೀವವುಳ್ಳವನಾಗಿರುವಂತೆ ಅನುಗ್ರಹ ಮಾಡಿದ್ದಾರೆ.


“ಯೆಹೋವ ದೇವರು ಮರಣ ತರುವವರೂ, ಬದುಕಿಸುವವರೂ ಆಗಿದ್ದಾರೆ. ಪಾತಾಳಕ್ಕೆ ಇಳಿಯುವಂತೆ ಮಾಡುತ್ತಾರೆ, ಮೇಲಕ್ಕೆ ತರುತ್ತಾರೆ.


“ನಾನು ಇರುವಾತನೇ ಆಗಿದ್ದೇನೆ! ನನ್ನ ಹಾಗೆ ಬೇರೆ ದೇವರು ಇಲ್ಲವೆಂದು ಈಗ ನೋಡಿರಿ. ನಾನೇ ಸಾಯಿಸುತ್ತೇನೆ, ಬದುಕಿಸುತ್ತೇನೆ, ಗಾಯಮಾಡುತ್ತೇನೆ, ನಾನೇ ಗುಣಪಡಿಸುತ್ತೇನೆ. ನನ್ನ ಕೈಯಿಂದ ತಪ್ಪಿಸುವವನು ಯಾರೂ ಇಲ್ಲ.


ಅವರು ಯೇಸುವನ್ನು ಕಟ್ಟಿ, ಕರೆದುಕೊಂಡು ಹೋಗಿ ರಾಜ್ಯಪಾಲ ಪಿಲಾತನಿಗೆ ಒಪ್ಪಿಸಿದರು.


ನಿಮ್ಮ ಸ್ವಭಾವವನ್ನು ರುಜುಪಡಿಸಿದ ಈ ಸೇವೆಯ ನಿಮಿತ್ತವಾಗಿಯೂ, ಕ್ರಿಸ್ತ ಯೇಸುವಿನ ಸುವಾರ್ತೆಯ ಅರಿಕೆಯನ್ನು ಅನುಸರಿಸುವ ನಿಮ್ಮ ವಿಧೇಯತೆಗಾಗಿಯೂ ಇತರರು ದೇವರನ್ನು ಸ್ತುತಿಸುವರು. ಹೀಗೆ, ನೀವು ಅವರಿಗೂ ಪ್ರತಿಯೊಬ್ಬರಿಗೂ ಎಷ್ಟು ಉದಾರಿಗಳಾಗಿದ್ದೀರಿ ಎಂಬುದನ್ನು ತಿಳಿದುಕೊಳ್ಳುವರು.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.


ನನ್ನನ್ನು ಬಲಪಡಿಸುವ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವು ನನ್ನನ್ನು ನಂಬಿಗಸ್ತನೆಂದು ಎಣಿಸಿ ಸೇವೆಗೆ ನೇಮಿಸಿದ್ದಕ್ಕಾಗಿ ನಾನು ಅವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವುದಕ್ಕೋಸ್ಕರ ಈ ಲೋಕಕ್ಕೆ ಬಂದರು, ಎಂಬ ವಾಕ್ಯವು ನಂಬತಕ್ಕದ್ದೂ ಪೂರ್ಣ ಅಂಗೀಕಾರಕ್ಕೆ ಯೋಗ್ಯವಾದದ್ದೂ ಆಗಿದೆ. ಆ ಪಾಪಿಗಳಲ್ಲಿ ನಾನೇ ಮುಖ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು