Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:20 - ಕನ್ನಡ ಸಮಕಾಲಿಕ ಅನುವಾದ

20 ತಿಮೊಥೆಯನೇ, ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡು. ದೇವಭಕ್ತಿಗೆ ಅನುಗುಣವಾಗದ ಹರಟೆ ಮಾತುಗಳಿಗೂ ಜ್ಞಾನದಿಂದ ವಿಚಾರಪಡಿಸುವ ಸುಳ್ಳು ತರ್ಕಗಳಿಗೂ ಒಳಪಡದಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪ್ರಿಯ ತಿಮೊಥೇಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡಿಕೋ. ಪ್ರಾಪಂಚಿಕ ವ್ಯರ್ಥ ಸಂಭಾಷಣೆಗಳಿಂದಲೂ ‘ಜ್ಞಾನಿ'ಗಳೆಂದು ತಪ್ಪಾಗಿ ಕೊಚ್ಚಿಕೊಳ್ಳುವವರ ವಾಗ್ವಾದಗಳಿಂದಲೂ ದೂರವಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವದನ್ನೇ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ತಿಮೊಥೆಯನೇ, ನಿನ್ನ ವಶಕ್ಕೆ ಕೊಡಲಾಗಿರುವ ಸದ್ಬೋಧನೆಯನ್ನು ಸುರಕ್ಷಿತವಾಗಿ ಕಾಪಾಡು. ಪ್ರಾಪಂಚಿಕವಾದ ಮೂರ್ಖ ಸಂಗತಿಗಳನ್ನು ಹೇಳುವ ಜನರಿಂದಲೂ ಸತ್ಯದ ವಿರುದ್ಧವಾಗಿ ವಾದ ಮಾಡುವ ಜನರಿಂದಲೂ ದೂರವಾಗಿರು. ಅವರು ಅದನ್ನು ಜ್ಞಾನವೆಂದು ಕರೆದರೂ ಅದು ನಿಜವಾದ ಜ್ಞಾನವಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತಿಮೊತಿ, ತುಜ್ಯಾ ಬರೆಪಾನಾಸಾಟಿ ಮನುನ್ ತುಕಾ ದಿವ್ನ್ ಹೊಲ್ಲ್ಯಾ ಗೊಸ್ಟಿಯಾ ಬರೆ ಕರುನ್ ಸಂಬಾಳ್. ಹ್ಯಾ ಜಗಾತ್ ಉಲ್ಲಿ ಲೊಕಾ “ಶಾನ್‍ಪಾನ್” ಮನುನ್ ಬಲ್ವುತಲ್ಯಾ ದೆವಸ್ಪಾನ್ ನಸಲ್ಲ್ಯಾ ಗೊಸ್ಟಿಯಾನಿತ್ನಾ ಅನಿ ವಿರೊದ್ ಕರ್‍ತಲ್ಯಾಂಚ್ಯಾ ಝುಟ್ಯಾ ಬೊಲ್ನ್ಯಾತ್ನಾ ಧುರ್ ರ್‍ಹಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:20
30 ತಿಳಿವುಗಳ ಹೋಲಿಕೆ  

ತತ್ವಜ್ಞಾನವೂ ನಿರರ್ಥಕವೂ ವಂಚನೆಯೂ ಆಗಿರುವ ಮನುಷ್ಯರ ಸಂಪ್ರದಾಯದಿಂದ ನಿಮ್ಮಲ್ಲಿ ಯಾರಾದರೂ ಬಂದು ನಿಮ್ಮನ್ನು ವಶಪಡಿಸಿಕೊಳ್ಳದಂತೆ ಎಚ್ಚರಿಕೆಯಿಂದಿರಿ. ಅಂಥವರು ಕ್ರಿಸ್ತ ಯೇಸುವನ್ನು ಅನುಸರಿಸದೆ, ಪ್ರಾಪಂಚಿಕ ಬಾಲಬೋಧನೆಗಳನ್ನೂ ಅನುಸರಿಸುವವರಾಗಿದ್ದಾರೆ.


ಆದರೆ ಭಕ್ತಿಗೆ ವಿರುದ್ಧವಾದ ಹರಟೆ ಮಾತುಗಳಿಂದ ತೊಲಗಿರು. ಅವುಗಳಿಗೆ ಮನಸ್ಸು ಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.


ಕೆಲವರು ತಾವು ದರ್ಶನ ಕಂಡದ್ದರ ಬಗ್ಗೆ ಬಹಳ ಮಾತನಾಡಿ, ತಮ್ಮ ನಿರರ್ಥಕವಾದ ಪ್ರಾಪಂಚಿಕ ಬುದ್ಧಿಯಿಂದ ಉಬ್ಬಿಕೊಳ್ಳುತ್ತಾರೆ. ಇಂಥವರು ಕಪಟ ದೀನತೆಯಲ್ಲಿಯೂ ದೂತರ ಆರಾಧನೆಯಲ್ಲಿಯೂ ಆನಂದಿಸುವವರಾಗಿರುತ್ತಾರೆ. ಇವರು ನಿಮ್ಮ ಬಳಿಗೆ, ನೀವು ಪ್ರತಿಫಲಹೊಂದದೆ ಇರುವಂತೆ ಅಡ್ಡಿಮಾಡಲು ಅವಕಾಶಕೊಡಬೇಡಿರಿ.


ಎಲ್ಲಾ ವಿಷಯಗಳಲ್ಲಿಯೂ ಬಹಳ ಪ್ರಯೋಜನವಿದೆ. ಮೊದಲನೆಯದಾಗಿ ದೇವರ ವಾಕ್ಯಗಳು ಯೆಹೂದ್ಯರ ವಶಕ್ಕೆ ಒಪ್ಪಿಸಲಾಗಿವೆ.


ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಈ ಆಜ್ಞೆಯನ್ನು ನಿಷ್ಕಳಂಕವಾಗಿಯೂ ನಿಂದಾರಹಿತವಾಗಿಯೂ ನೀನು ಕಾಪಾಡಬೇಕು.


ಹೀಗಿರುವುದರಿಂದ ಪ್ರಿಯರೇ, ದೃಢವಾಗಿ ನಿಲ್ಲಿರಿ. ನಾವು ಮಾತಿನಿಂದಾಗಲಿ, ಪತ್ರದಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಪಾಲಿಸಿರಿ.


ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.


ಆದ್ದರಿಂದ ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಲ್ಲಿ ಬಲಗೊಂಡವನಾಗಿರು.


ಈ ಬೋಧನೆಯು ಭಾಗ್ಯವಂತರಾದ ದೇವರ ಮಹಿಮೆಯ ಸುವಾರ್ತೆಗೆ ಅನುರೂಪವಾಗಿದೆ. ಈ ಸುವಾರ್ತೆಯು ನನ್ನ ವಶಕ್ಕೆ ಕೊಡಲಾಗಿದೆ.


ಹೀಗಿರುವುದರಿಂದ, ನೀವು ಸಹಿಸುತ್ತಿರುವ ನಿಮ್ಮ ಎಲ್ಲಾ ಹಿಂಸೆಗಳಲ್ಲಿಯೂ ಸಂಕಟಗಳಲ್ಲಿಯೂ ನಿಮಗೆ ತೋರಿ ಬಂದ ನಿಮ್ಮ ತಾಳ್ಮೆ, ನಂಬಿಕೆಗಳನ್ನು ನೆನೆಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಮ್ಮೆಪಡುತ್ತೇವೆ.


ಅವರು ಯೆಹೂದ್ಯರ ಕಟ್ಟುಕಥೆಗಳಿಗೂ ಸತ್ಯದಿಂದ ದೂರಮಾಡುವ ಮಾನವರ ಆಜ್ಞೆಗಳಿಗೂ ಲಕ್ಷ್ಯಕೊಡಬಾರದು.


ಇತರರನ್ನು ಸ್ವಸ್ಥಬೋಧನೆಯಿಂದ ಪ್ರೋತ್ಸಾಹಿಸುವುದಕ್ಕೂ ಎದುರಿಸುವವರನ್ನು ಖಂಡಿಸುವಂತೆ ಮಾತನಾಡುವುದಕ್ಕೂ ಶಕ್ತನಾಗಿರಲು ಅವನು ಬೋಧಿಸಿದ ಪ್ರಕಾರ ನಂಬತಕ್ಕ ವಾಕ್ಯವನ್ನು ದೃಢವಾಗಿ ಹಿಡಿದುಕೊಂಡವನಾಗಿರಬೇಕು.


ದೇವರ ಮನುಷ್ಯನೇ, ನೀನಾದರೋ ಇವುಗಳಿಂದ ಓಡಿಹೋಗು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ತಾಳ್ಮೆ, ಸಾತ್ವಿಕತ್ವ ಇವುಗಳನ್ನು ಹಿಂಬಾಲಿಸು.


ಪ್ರಾಪಂಚಿಕ ಹಾಗೂ ಅಜ್ಜಿ ಕಥೆಗಳನ್ನು ನಿರಾಕರಿಸಿ ನೀನು ದೇವಭಕ್ತಿಯನ್ನು ಅಭ್ಯಾಸ ಮಾಡಿಕೋ.


ಕೆಲವರು ಇವುಗಳನ್ನು ಬಿಟ್ಟುಬಿಟ್ಟು ವ್ಯರ್ಥವಾದ ಮಾತುಗಳಿಗೆ ತಿರುಗಿಕೊಂಡಿದ್ದಾರೆ.


ಕಟ್ಟುಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಕೆಲವರಿಗೆ ಆಜ್ಞಾಪಿಸಬೇಕೆಂದು ನಾನು ನಿನಗೆ ಖಂಡಿತವಾಗಿ ಹೇಳಿದಂತೆ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆಯಿಂದುಂಟಾಗುವ ದೇವರ ಕಾರ್ಯಭಾರವನ್ನು ವೃದ್ಧಿ ಮಾಡುವುದೇ ಇಲ್ಲ.


ಏಕೆಂದರೆ ಇಹಲೋಕ ಜ್ಞಾನವು ದೇವರ ದೃಷ್ಟಿಯಲ್ಲಿ ಮೂರ್ಖತನವಾಗಿದೆ, ಪವಿತ್ರ ವೇದದಲ್ಲಿ ಬರೆದಿರುವ ಪ್ರಕಾರ, “ದೇವರು ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿಯೇ ಹಿಡಿಯುವರು,” ಎಂದೂ


ಅಲ್ಲಿ ನೆಲೆಸಿದ್ದ ಅಥೇನೆಯ ನಿವಾಸಿಗಳೂ ವಿದೇಶಿಯರೂ ಹೊಸ ಹೊಸ ವಿಷಯಗಳನ್ನು ಹೇಳುವುದಕ್ಕೂ ಕೇಳುವುದಕ್ಕೂ ಹೊರತು ಇತರ ವಿಷಯಗಳಲ್ಲಿ ಸಮಯ ಕಳೆಯುತ್ತಿರಲಿಲ್ಲ.


ಆದರೆ ಎಪಿಕೂರಿಯರು ಹಾಗೂ ಸ್ತೋಯಿಕರು ಎಂಬ ತತ್ವಜ್ಞಾನಿಗಳಲ್ಲಿ ಸಹ ಕೆಲವರು ಅವನೊಂದಿಗೆ ವಾಗ್ವಾದ ಮಾಡಲು ಪ್ರಾರಂಭಿಸಿ, “ಈ ಬಾಯಿಬಡುಕ ಏನು ಹೇಳಬೇಕೆಂದಿದ್ದಾನೆ?” ಎಂದರು. ಇನ್ನೂ ಕೆಲವರು, “ಅವನು ವಿದೇಶದ ದೇವರುಗಳ ಬಗ್ಗೆ ಪ್ರಸ್ತಾಪಿಸುವಂತೆ ತೋರುತ್ತದೆ,” ಎಂದರು. ಏಕೆಂದರೆ ಅವನು ಯೇಸುವನ್ನು ಮತ್ತು ಪುನರುತ್ಥಾನವನ್ನು ಕುರಿತ ಸುವಾರ್ತೆ ಸಾರುತ್ತಿದ್ದನು.


ಆದ್ದರಿಂದ ನೀನು ಹೊಂದಿದ ಉಪದೇಶವನ್ನೂ ಕೇಳಿದ ರೀತಿಯನ್ನೂ ಜ್ಞಾಪಿಸಿಕೊಂಡು, ಅದನ್ನು ಕೈಕೊಳ್ಳುವವನಾಗಿ ಪಶ್ಚಾತ್ತಾಪಪಡು, ನೀನು ಎಚ್ಚರವಾಗಿರದಿದ್ದರೆ, ಕಳ್ಳನು ಬರುವಂತೆ ಬರುವೆನು. ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಎಂದು ನಿನಗೆ ಯಾವ ರೀತಿಯಲ್ಲಿಯೂ ತಿಳಿಯದು.


ನಮ್ಮಲ್ಲಿ ಹುದುವಾಗಿರುವ ವಿಶ್ವಾಸಕ್ಕೆ ಅನುಸಾರವಾಗಿ ನನ್ನ ನಿಜಕುಮಾರನಾದ ತೀತನಿಗೆ ಬರೆಯುವುದು: ತಂದೆಯಾದ ದೇವರಿಂದಲೂ ನಮಗೆ ರಕ್ಷಕ ಹಾಗೂ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ಹೀಗಿದ್ದರೂ ಪರಿಪೂರ್ಣರಲ್ಲಿ ಜ್ಞಾನದ ಬಗ್ಗೆ ಮಾತನಾಡುತ್ತೇವೆ. ಅದು ಇಹಲೋಕದ ಜ್ಞಾನವಲ್ಲ. ಅಳಿದು ಹೋಗುವ ಇಹಲೋಕದ ಅಧಿಕಾರಿಗಳ ಜ್ಞಾನವೂ ಅಲ್ಲ.


ತಾವು ಜ್ಞಾನಿಗಳೆಂದು ಹೇಳಿಕೊಂಡರೂ ಮೂಢರಾಗಿದ್ದಾರೆ.


ಪೌಲನು ದೆರ್ಬೆಗೂ ಲುಸ್ತ್ರಕ್ಕೂ ಬಂದನು. ಅಲ್ಲಿ, ತಿಮೊಥೆಯನೆಂಬ ಹೆಸರಿನ ಒಬ್ಬ ಶಿಷ್ಯನಿದ್ದನು. ಅವನ ತಾಯಿ ವಿಶ್ವಾಸಿಯಾಗಿದ್ದ ಯೆಹೂದ್ಯ ಸ್ತ್ರೀ. ಆದರೆ ಅವನ ತಂದೆ ಒಬ್ಬ ಗ್ರೀಕನಾಗಿದ್ದನು.


ನಂಬಿಕೆಯಲ್ಲಿ ನನ್ನ ನಿಜ ಪುತ್ರನಾಗಿರುವ ತಿಮೊಥೆಯನಿಗೆ ಬರೆಯುವುದು: ನಮ್ಮ ತಂದೆ ದೇವರಿಂದಲೂ, ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ದೊರೆಯಲಿ.


ನಿಯಮವು ನೀತಿವಂತರಿಗೋಸ್ಕರ ಅಲ್ಲ. ಬದಲಿಗೆ ಅದು ಅವಿಧೇಯರಿಗೆ, ಅಕ್ರಮಗಾರರಿಗೆ, ಭಕ್ತಿಹೀನರಿಗೆ, ಪಾಪಿಗಳಿಗೆ, ಅಶುದ್ಧರಿಗೆ, ಅಪವಿತ್ರರಿಗೆ, ತಂದೆತಾಯಿಗಳನ್ನು ಕೊಲ್ಲುವವರಿಗೆ, ಕೊಲೆಗಾರರಿಗೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು