Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:4 - ಕನ್ನಡ ಸಮಕಾಲಿಕ ಅನುವಾದ

4 ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಅಹಂಭಾವಿಯೂ ಅಜ್ಞಾನಿಯೂ ಆಗಿದ್ದು, ನಿಂದನೆ ವಾಗ್ವಾದಗಳನ್ನುಂಟು ಮಾಡುವ ಭ್ರಾಂತಿಯಲ್ಲಿದ್ದಾನೆ. ಇವುಗಳಿಂದ ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯ ಮುಂತಾದವುಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅಂಥವನಿಗೆ ಒಣ ವಾಗ್ವಾದಗಳಲ್ಲಿ ಮತ್ತು ಬರಡು ಮಾತುಗಳಲ್ಲಿ ಬಲು ಹಂಬಲ. ಇವುಗಳು ಅಸೂಯೆ, ಕಲಹ, ದೂಷಣೆ, ಅನುಮಾನ ಮತ್ತು ಕಚ್ಚಾಟಗಳಿಗೆ ಎಡೆಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಒಂದನ್ನೂ ತಿಳಿಯದೆ ಕುತರ್ಕ ವಾಗ್ವಾದಗಳನ್ನು ಮಾಡುವ ಭ್ರಾಂತಿಯಲ್ಲಿದ್ದು ಮದದಿಂದ ಕಣ್ಣುಗಾಣದವನಾಗಿದ್ದಾನೆ. ಇವುಗಳಿಂದ ಹೊಟ್ಟೇಕಿಚ್ಚು ಜಗಳ ದೂಷಣೆ ದುಸ್ಸಂಶಯ ಇವುಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದುರ್ಬೋಧಕನು ಗರ್ವದಿಂದ ತುಂಬಿದವನಾಗಿರುತ್ತಾನೆ ಮತ್ತು ಅವನಿಗೆ ಏನೂ ಅರ್ಥವಾಗುವುದಿಲ್ಲ. ಅವನು ಕುತರ್ಕ ವಾಗ್ವಾದ ಮಾಡುವುದರಲ್ಲಿ ಆಸಕ್ತನಾಗಿದ್ದಾನೆ. ಇದರಿಂದ ಹೊಟ್ಟೆಕಿಚ್ಚು, ಜಗಳ, ನಿಂದನೆ ಮತ್ತು ದುಸ್ಸಂಶಯಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೊ ಗರುಕಿನ್ ಫುಗ್ಲಾ ಅನಿ ತೆಕಾ ಕಾಯ್ಬಿ ಕಳಿನಾ. ತೊ ಪಾಯ್ದ್ಯಾಕ್ ಪಡಿನಸಲ್ಯಾ ಆಶ್ಯಾನಿ ಖರ್‍ಯಾ ಗೊಸ್ಟಿಯಾಂಚ್ಯಾ ವಿಶಯಾತ್ ವಾದಿಕ್‍ ವಾದ್ ಕರ್‍ತಾ ಅನಿ ಗೊಸ್ಟಿಯಾಂಚೊ ಝಗ್ಡೊ ಕರ್‍ತಾ. ಹೆಚ್ಯಾ ವೈನಾ ಖುದ್ಗೆಪಾನ್, ಎಕಾಮೆಕಾತ್ನಿ ಪಡುನ್‍ ಯೆಯ್‍ನಸಲ್ಲೆ, ನಿಂದಾ ಅನಿ ಬುರ್ಶಿ ಗಾಳಿಯಾ ದಿತಲೆ ಯೆತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:4
44 ತಿಳಿವುಗಳ ಹೋಲಿಕೆ  

ಬುದ್ಧಿಯಿಲ್ಲದ ಅಯುಕ್ತ ವಾಗ್ವಾದಗಳು ಜಗಳಗಳನ್ನು ಹುಟ್ಟಿಸುತ್ತವೆ ಎಂದು ತಿಳಿದು ಅವುಗಳನ್ನು ನಿರಾಕರಿಸು.


ದ್ರೋಹಿಗಳೂ ದುಡುಕುವವರೂ ಉಬ್ಬಿಕೊಂಡವರೂ ದೇವರನ್ನು ಪ್ರೀತಿಸುವುದಕ್ಕಿಂತಲೂ ಭೋಗಗಳನ್ನೇ ಪ್ರೀತಿಸುವವರೂ


ಅವನು ಹೊಸದಾಗಿ ವಿಶ್ವಾಸಕ್ಕೆ ಬಂದವನಾಗಿರಬಾರದು. ಅಂಥವನಾದರೆ ಉಬ್ಬಿಕೊಂಡು ಸೈತಾನನ ಶಿಕ್ಷಾವಿಧಿಗೆ ಬಲಿಬೀಳುವನು.


ಆದರೆ ಈ ಜನರು ತಮಗೆ ಗೊತ್ತಿಲ್ಲದವುಗಳ ವಿಷಯವಾಗಿ ಕೆಟ್ಟದ್ದಾಗಿ ಮಾತನಾಡುತ್ತಾರೆ. ತಾವು ವಿವೇಕಶೂನ್ಯ ಮೃಗಗಳಂತೆ ಸ್ವಾಭಾವಿಕವಾಗಿ ಏನೇನನ್ನು ತಿಳಿದುಕೊಳ್ಳುತ್ತಾರೋ ಅವುಗಳಲ್ಲಿ ತಮ್ಮನ್ನು ಕೆಡಿಸಿಕೊಳ್ಳುತ್ತಾರೆ.


ಆದರೆ ಬೇಟೆಗಾಗಿ ಹುಟ್ಟಿರುವ ವಿವೇಕಹೀನ ಮೃಗಗಳಂತಿರುವ ಈ ದುರ್ಬೋಧಕರು ತಮಗೆ ತಿಳಿಯದವುಗಳ ವಿಷಯವಾಗಿ ದೂಷಣೆ ಮಾಡುವವರಾಗಿದ್ದಾರೆ. ಇವರು ತಮ್ಮ ಕೆಟ್ಟತನದಿಂದ ಮೃಗಗಳಂತೆ ಸಂಪೂರ್ಣ ನಾಶವಾಗುವರು.


ಈ ವಿಷಯಗಳನ್ನು ದೇವಜನರ ನೆನಪಿಗೆ ತರಬೇಕು. ಕೇಳುವವರಿಗೆ ಯಾವ ಪ್ರಯೋಜನವನ್ನೂ ಉಂಟು ಮಾಡದೆ ಕೆಡವಿ ಹಾಕುವ ವಾಗ್ವಾದಗಳನ್ನು ಮಾಡಬಾರದೆಂದು ಅವರಿಗೆ ದೇವರ ಮುಂದೆ ಎಚ್ಚರಿಸು.


ಇವರು ಗೊಣಗುಟ್ಟುವವರೂ ದೂರುವವರೂ ತಮ್ಮ ದುರಾಶೆಗಳನ್ನು ಅನುಸರಿಸಿ ನಡೆಯುವವರೂ ಆಗಿದ್ದಾರೆ. ಇವರ ಬಾಯಿಂದ ದೊಡ್ಡ ದೊಡ್ಡ ಮಾತುಗಳು ಉದುರುತ್ತವೆ. ಇವರು ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುತ್ತಾರೆ.


ತಪ್ಪಾದ ಮಾರ್ಗದಲ್ಲಿ ಬಾಳುವವರಿಂದ ತಪ್ಪಿಸಿಕೊಂಡವರನ್ನು ಇವರು ಹುರುಳಿಲ್ಲದ ದೊಡ್ಡ ದೊಡ್ಡ ಮಾತುಗಳನ್ನಾಡಿ ಶರೀರದ ದುರಾಶೆಗಳನ್ನು ಹುಟ್ಟಿಸಿ ಅವರನ್ನು ಮರುಳುಗೊಳಿಸುತ್ತಾರೆ.


ಅವರು ನಿಯಮದ ಬೋಧಕರಾಗಿರಲು ಬಯಸಿದರೂ ತಾವು ಹೇಳುವುದನ್ನಾಗಲಿ, ತಾವು ಸ್ಥಾಪಿಸುವುದನ್ನಾಗಲಿ ಏನೆಂದು ದೃಢನಿಶ್ಚಯವಿಲ್ಲದವರಾಗಿದ್ದಾರೆ.


ಕಟ್ಟುಕಥೆಗಳಿಗೂ ಕೊನೆಯಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ ಕೆಲವರಿಗೆ ಆಜ್ಞಾಪಿಸಬೇಕೆಂದು ನಾನು ನಿನಗೆ ಖಂಡಿತವಾಗಿ ಹೇಳಿದಂತೆ ಈಗಲೂ ಹೇಳುತ್ತೇನೆ. ಅಂಥ ಕಥೆಗಳೂ ವಂಶಾವಳಿಗಳೂ ವಿವಾದಕ್ಕೆ ಆಸ್ಪದವಾಗಿವೆಯೇ ಹೊರತು ನಂಬಿಕೆಯಿಂದುಂಟಾಗುವ ದೇವರ ಕಾರ್ಯಭಾರವನ್ನು ವೃದ್ಧಿ ಮಾಡುವುದೇ ಇಲ್ಲ.


ನನ್ನ ಪ್ರಿಯರೇ ಇದನ್ನು ತಿಳಿಯಿರಿ, ಪ್ರತಿಯೊಬ್ಬನು ಕಿವಿಗೊಡುವುದರಲ್ಲಿ ತೀವ್ರವಾಗಿಯೂ ಮಾತನಾಡುವುದರಲ್ಲಿ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.


ಆದರೆ ಬುದ್ಧಿಯಿಲ್ಲದ ವಿತರ್ಕಗಳಿಗೂ ವಂಶಾವಳಿಗಳಿಗೂ ಜಗಳಗಳಿಗೂ ನಿಯಮದ ವಿಷಯವಾಗಿರುವ ವಾಗ್ವಾದಗಳಿಗೂ ದೂರವಾಗಿರು. ಏಕೆಂದರೆ ಅವು ನಿಷ್ಪ್ರಯೋಜನವಾದವುಗಳೂ ವ್ಯರ್ಥವಾದವುಗಳೂ ಆಗಿವೆ.


ಇದರಿಂದ ಪೌಲ, ಬಾರ್ನಬರು ಅವರೊಂದಿಗೆ ಭಿನ್ನಾಭಿಪ್ರಾಯವುಳ್ಳವರಾಗಿ ತೀವ್ರ ವಿವಾದವುಂಟಾಯಿತು. ಈ ಪ್ರಶ್ನೆಯ ವಿಷಯದಲ್ಲಿ ಅಪೊಸ್ತಲರನ್ನೂ ಹಿರಿಯರನ್ನೂ ಭೇಟಿಯಾಗಲು, ತಮ್ಮಲ್ಲಿ ಬೇರೆ ಕೆಲವರು ಪೌಲ, ಬಾರ್ನಬರೊಂದಿಗೆ ಯೆರೂಸಲೇಮಿಗೆ ಹೋಗಬೇಕೆಂದು ನಿರ್ಣಯಿಸಲಾಯಿತು.


ಏಕೆಂದರೆ ನೀನು ನಿನ್ನ ವಿಷಯದಲ್ಲಿ, ‘ನಾನು ಐಶ್ವರ್ಯವಂತನು, ನಾನು ಸಂಪಾದಕನಾಗಿದ್ದೇನೆ ಮತ್ತು ಕೊರತೆ ನನಗಿಲ್ಲ,’ ಎಂದು ಹೇಳಿಕೊಳ್ಳುತ್ತಿ. ಆದರೆ ನೀನು ಕೇವಲ ದುರವಸ್ಥೆಯುಳ್ಳವನು, ದೌರ್ಭಾಗ್ಯನು, ದರಿದ್ರನು, ಕುರುಡನು, ಬೆತ್ತಲೆಯಾದವನು ಎಂಬುದನ್ನು ತಿಳಿಯದೆ ಇದ್ದೀ.


ದೇವರೆಣಿಸಿಕೊಳ್ಳುವ ಎಲ್ಲವನ್ನೂ ಆರಾಧಿಸಲಾಗುವ ಪ್ರತಿಯೊಂದನ್ನೂ ಅವನು ವಿರೋಧಿಸಿ ನಿಲ್ಲುವನು. ದೇವರಿಗೆ ಸಂಬಂಧಿಸಿದ ಇವೆಲ್ಲವುಗಳ ಮೇಲೆ ತನ್ನನ್ನು ಹೆಚ್ಚಿಸಿಕೊಳ್ಳುವನು. ತಾನೇ ದೇವರೆಂದು ಘೋಷಿಸಿ ದೇವರ ಆಲಯದಲ್ಲಿ ಕೂತುಕೊಳ್ಳುವನು.


ಕೆಲವರು ತಾವು ದರ್ಶನ ಕಂಡದ್ದರ ಬಗ್ಗೆ ಬಹಳ ಮಾತನಾಡಿ, ತಮ್ಮ ನಿರರ್ಥಕವಾದ ಪ್ರಾಪಂಚಿಕ ಬುದ್ಧಿಯಿಂದ ಉಬ್ಬಿಕೊಳ್ಳುತ್ತಾರೆ. ಇಂಥವರು ಕಪಟ ದೀನತೆಯಲ್ಲಿಯೂ ದೂತರ ಆರಾಧನೆಯಲ್ಲಿಯೂ ಆನಂದಿಸುವವರಾಗಿರುತ್ತಾರೆ. ಇವರು ನಿಮ್ಮ ಬಳಿಗೆ, ನೀವು ಪ್ರತಿಫಲಹೊಂದದೆ ಇರುವಂತೆ ಅಡ್ಡಿಮಾಡಲು ಅವಕಾಶಕೊಡಬೇಡಿರಿ.


ಗೊಣಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನೂ ಮಾಡಿರಿ.


ಸ್ವಾರ್ಥ ಉದ್ದೇಶದಿಂದಾಗಲಿ, ವ್ಯರ್ಥ ಹೆಮ್ಮೆಯಿಂದಾಗಲಿ ಯಾವುದನ್ನೂ ಮಾಡದೆ ಪ್ರತಿಯೊಬ್ಬನೂ ದೀನತ್ವದಿಂದ ಮತ್ತೊಬ್ಬನನ್ನು ತನಗಿಂತಲೂ ಶ್ರೇಷ್ಠನೆಂದು ಎಣಿಸಲಿ.


ಕೆಲವರು ಅಸೂಯೆಯಿಂದಲೂ ಸ್ಪರ್ಧೆಯ ಮನೋಭಾವನೆಯಿಂದಲೂ ಕ್ರಿಸ್ತನನ್ನು ಸಾರುವುದು ನಿಜ. ಆದರೆ ಇತರರು ಒಳ್ಳೆಯ ಮನೋಭಾವದಿಂದ ಕ್ರಿಸ್ತ ಯೇಸುವನ್ನು ಸಾರುತ್ತಿದ್ದಾರೆ.


ಏನೂ ಅಲ್ಲದವನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿಕೊಂಡರೆ, ತನ್ನನ್ನು ತಾನೇ ವಂಚಿಸಿಕೊಳ್ಳುತ್ತಾನೆ.


ನಾವು ಅಹಂಕಾರಿಗಳಾಗಿರಬಾರದು. ಒಬ್ಬರನ್ನೊಬ್ಬರು ಕೆಣಕದೆಯೂ ಒಬ್ಬರ ಮೇಲೊಬ್ಬರು ಮತ್ಸರಗೊಳ್ಳದೆಯೂ ಇರೋಣ.


ಆದರೆ ನೀವು ಒಬ್ಬರನ್ನೊಬ್ಬರು ಕಚ್ಚಿ ನುಂಗುವವರಾದರೆ ಒಬ್ಬರಿಂದೊಬ್ಬರು ನಾಶವಾದೀರಿ, ಎಚ್ಚರಿಕೆ.


ನಿಜವಾಗಿ ಹೇಳಬೇಕಾದರೆ, ಯಾರಾದರೂ ನಿಮ್ಮನ್ನು ಗುಲಾಮರನ್ನಾಗಿ ಮಾಡಿಕೊಂಡರೂ, ನಿಮ್ಮನ್ನು ಮರುಳುಗೊಳಿಸಿದರೂ, ತಮ್ಮ ಸ್ವಂತ ಪ್ರಯೋಜನಕ್ಕಾಗಿ ಬಳಸಿಕೊಂಡರೂ, ನಿಮ್ಮ ಕೆನ್ನೆಗೆ ಬಾರಿಸಿದರೂ, ನೀವು ಸಹಿಸಿಕೊಳ್ಳುತ್ತೀರಲ್ಲಾ.


ಹೇಗೆಂದರೆ, ಮೊದಲನೆಯದು: ನೀವು ಸಭೆಯಾಗಿ ಕೂಡಿಬರುವಾಗ ನಿಮ್ಮೊಳಗೆ ಭೇದಗಳಿವೆ ಎಂದು ಕೇಳುತ್ತೇನೆ. ಇದನ್ನು ಸ್ವಲ್ಪಮಟ್ಟಿಗೆ ನಂಬುತ್ತೇನೆ.


ಇದರ ಬಗ್ಗೆ ಯಾರಿಗಾದರೂ ವಾಗ್ವಾದ ಮಾಡಬಯಸಿದರೆ, ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ.


ನಿಮ್ಮನ್ನು ನೀವೇ ಮೋಸಪಡಿಸಿಕೊಳ್ಳಬೇಡಿರಿ. ನಿಮ್ಮಲ್ಲಿ ಯಾರಾದರೂ ಇಹಲೋಕ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸಿಕೊಂಡರೆ, ಅಂಥವನು ಜ್ಞಾನಿಯಾಗುವಂತೆ ಮೂರ್ಖನಾಗಲಿ.


ಏಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ಹೇಗೆಂದರೆ, ನಿಮ್ಮೊಳಗೆ ಅಸೂಯೆ, ಜಗಳಗಳು ಇರುವಲ್ಲಿ ನೀವು ಪ್ರಾಪಂಚಿಕರಾಗಿದ್ದೀರಲ್ಲದೆ ಕೇವಲ ಮಾನವರಂತೆ ನಡೆಯುತ್ತೀರಲ್ಲವೇ?


ಅಂಥವನ ಅಭಿಪ್ರಾಯಗಳ ಬಗ್ಗೆ ವಾಗ್ವಾದ ಮಾಡಬೇಡಿರಿ. ವಿಶ್ವಾಸದಲ್ಲಿ ಬಲಹೀನನಾಗಿರುವವನನ್ನು ಸ್ವೀಕರಿಸಿಕೊಳ್ಳಿರಿ.


ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ.


ಒಬ್ಬರಿಗೊಬ್ಬರು ಒಂದೇ ಮನಸ್ಸುಳ್ಳವರಾಗಿರಿ. ನೀವು ಮನಸ್ಸಿನಲ್ಲಿ ಅಹಂಕಾರಿಗಳಾಗಿರದೆ, ದೀನರೊಂದಿಗೆ ಸಂತೋಷದಿಂದ ಸಹಭಾಗಿಗಳಾಗಿರಿ. ನಿಮ್ಮನ್ನು ನೀವೇ ಬುದ್ಧಿವಂತರೆಂದು ಭಾವಿಸಿಕೊಳ್ಳಬೇಡಿರಿ.


ಯಾರು ಸ್ವಾರ್ಥಿಗಳಾಗಿದ್ದು ಸತ್ಯವನ್ನು ಅನುಸರಿಸದೆ ಅನೀತಿಯನ್ನು ಅನುಸರಿಸುತ್ತಾರೋ ಅವರ ವಿರುದ್ಧ ದೇವರಿಗೆ ಕೋಪವೂ ಆಕ್ರೋಶವೂ ಬರುತ್ತವೆ.


ಆದರೆ ವಾಕ್ಯ, ಹೆಸರುಗಳ ಮತ್ತು ನಿಮ್ಮ ನಿಯಮದ ವಿಷಯವಾಗಿರುವ ಪ್ರಶ್ನೆಗಳಾಗಿದ್ದರೆ, ಈ ಸಂಗತಿಯನ್ನು ನೀವೇ ಬಗೆಹರಿಸಿಕೊಳ್ಳಿ, ಅಂಥ ವಿಷಯಗಳಿಗೆ ನಾನು ನ್ಯಾಯಾಧೀಶನಾಗಿರಲಾರೆ,” ಎಂದನು.


ಆ ಪಟ್ಟಣದಲ್ಲಿ ಕೆಲ ಸಮಯದಿಂದ ಸೀಮೋನ ಎಂಬ ಹೆಸರಿನ ಒಬ್ಬನು ಮಂತ್ರ ವಿದ್ಯೆ ಉಪಯೋಗಿಸಿ ಸಮಾರ್ಯದ ಜನರನ್ನು ಆಶ್ಚರ್ಯಗೊಳಿಸಿದ್ದನು. ತಾನೊಬ್ಬ ಮಹಾವ್ಯಕ್ತಿ ಎಂದು ಕೊಚ್ಚಿಕೊಳ್ಳುತ್ತಿದ್ದನು,


ನಿಮ್ಮ ಉಪವಾಸದ ಪರಿಣಾಮಗಳು ಇಷ್ಟೆ: ವ್ಯಾಜ್ಯ, ಕಲಹ, ಹೊಡೆದಾಟ. ಇಲ್ಲಿಯವರೆಗೆ ನೀವು ಮಾಡಿದಂತೆ ಉಪವಾಸ ಮಾಡಿದರೆ, ನಿಮ್ಮ ಪ್ರಾರ್ಥನೆ ಪರಲೋಕವನ್ನು ಮುಟ್ಟುವುದಿಲ್ಲ.


ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ? ಅವನಿಗಿಂತ ಮೂಢನ ವಿಷಯದಲ್ಲಿ ಹೆಚ್ಚು ನಿರೀಕ್ಷೆಯು ಇರುತ್ತದೆ.


ದಾನ ಕೊಡದೆ ಕೊಟ್ಟಿದ್ದೇನೆಂದು ಹೊಗಳಿಕೊಳ್ಳುವವನು, ಮಳೆ ಇಲ್ಲದ ಮೋಡಗಳ ಮತ್ತು ಗಾಳಿಯ ಹಾಗೆ ಇದ್ದಾನೆ.


ಬಡವನಾಗಿದ್ದರೂ ಐಶ್ವರ್ಯವಂತನಾಗಿ ನಟಿಸುವವನು ಇದ್ದಾನೆ; ಮತ್ತೊಬ್ಬನು ದರಿದ್ರನಾಗಿ ಕಾಣಿಸಿದರೂ ಬಹು ಸಿರಿವಂತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು