Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ತಿಮೊಥೆಯನಿಗೆ 6:5 - ಕನ್ನಡ ಸಮಕಾಲಿಕ ಅನುವಾದ

5 ಹೀಗೆ ಅನಾರೋಗ್ಯಕರವಾದ ವಿವಾದಗಳನ್ನೂ ಕೆಲವು ಮಾತುಗಳ ಕುರಿತಾಗಿರುವ ತರ್ಕಗಳನ್ನೂ ಸೃಷ್ಟಿಸುವ ಪ್ರಸಿದ್ಧರಾಗಿದ್ದಾರೆ. ಅಂಥವರು ದೇವಭಕ್ತಿಯನ್ನು ಆರ್ಥಿಕ ಲಾಭವನ್ನಾಗಿ ಭಾವಿಸುವವರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಬುದ್ಧಿಗೆಟ್ಟು ಸತ್ಯವಿಹೀನರಾಗಿದ್ದು ದೇವ ಭಕ್ತಿಯನ್ನು ಲಾಭಸಾಧನವೆಂದೆಣಿಸುವ ಈ ಮನುಷ್ಯರಲ್ಲಿ ನಿತ್ಯವಾದ ಕಚ್ಚಾಟಗಳು ಉಂಟಾಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇದಲ್ಲದೆ ಕೆಡುಕರಲ್ಲಿ ವಾದವಿವಾದಗಳು ಹುಟ್ಟುತ್ತವೆ. ಆ ಜನರು ಸತ್ಯವನ್ನು ತೊರೆದವರಾಗಿದ್ದಾರೆ. ದೇವರ ಸೇವೆಯು ಐಶ್ವರ್ಯವನ್ನು ಗಳಿಸುವ ಮಾರ್ಗವೆಂಬುದು ಅವರ ಆಲೋಚನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಅನಿ ಚುಕಿನಸ್ತಾನಾ ಝಗಡ್ತಲೆ ಹೆ ಸಗ್ಳೆ ಟಕ್ಲೆ ಸಮಾ ಕಾಮ್ ಕರಿನಸಲ್ಲ್ಯಾ, ಖರೆ ಕಾಯ್ ಮನುನ್ ಗೊತ್ತ್ ನಸಲ್ಲ್ಯಾ ಲೊಕಾತ್ನಿ ಘಡುನ್ಗೆತ್ ರ್‍ಹಾತಾ. ತೆನಿ ಧರಮ್ ಮಟ್ಲ್ಯಾರ್ ಸಾವ್ಕಾರ್ ಹೊತಲಿ ಎಕ್ ವಾಟ್ ಮನುನ್ ಚಿಂತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ತಿಮೊಥೆಯನಿಗೆ 6:5
34 ತಿಳಿವುಗಳ ಹೋಲಿಕೆ  

ಭಕ್ತಿಯ ವೇಷವಿದ್ದು ಅದರ ಬಲವನ್ನು ಅಲ್ಲಗಳೆಯುವವರೂ ಆಗಿರುವರು. ಇಂಥವರನ್ನು ಬಿಟ್ಟು ಪ್ರತ್ಯೇಕವಾಗಿರು.


ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪನೆಯ ಮಾತುಗಳನ್ನು ಹೇಳುತ್ತಾ ನಿಮ್ಮಿಂದ ಲಾಭವನ್ನು ಸಂಪಾದಿಸಬೇಕೆಂದಿರುವರು. ಅಂಥವರಿಗೆ ಬಹುಕಾಲದ ಹಿಂದೆಯೇ ದೇವರ ತೀರ್ಪು ಸಿದ್ಧಪಡಿಸಲಾಗಿದೆ. ಅವರಿಗಾಗುವ ವಿನಾಶವು ತೂಕಡಿಸುವುದಿಲ್ಲ.


ಅವರು ನೀಚಲಾಭವನ್ನು ಹೊಂದುವುದಕ್ಕಾಗಿ ಮಾಡಬಾರದ ಬೋಧನೆಯನ್ನು ಮಾಡಿ ಇಡೀ ಕುಟುಂಬಗಳನ್ನೇ ಹಾಳು ಮಾಡುತ್ತಿದ್ದಾರೆ. ಆದ್ದರಿಂದ ಅವರ ಬಾಯಿಗಳನ್ನು ಮುಚ್ಚಿಸಬೇಕಾಗಿದೆ.


ಯನ್ನ, ಯಂಬ್ರ ಎಂಬವರು ಮೋಶೆಯನ್ನು ವಿರೋಧಿಸಿದಂತೆಯೇ, ಈ ಸುಳ್ಳು ಬೋಧಕರು ಸಹ ಸತ್ಯವನ್ನು ವಿರೋಧಿಸುತ್ತಾರೆ. ಇದಲ್ಲದೆ ಇವರು ಬುದ್ಧಿಗೆಟ್ಟವರೂ ವಿಶ್ವಾಸದ ವಿಷಯದಲ್ಲಿ ಭ್ರಷ್ಠರೂ ಆಗಿ, ತಿರಸ್ಕಾರ ಹೊಂದಿರುತ್ತಾರೆ.


ಸಂತೃಪ್ತಿಯೊಂದಿಗಿರುವ ದೇವಭಕ್ತಿಯೇ ದೊಡ್ಡ ಲಾಭವು.


ಅವನು ಮದ್ಯಪಾನ ಮಾಡುವವನಾಗಿರಬಾರದು, ಹೊಡೆದಾಡುವವನಾಗಿರಬಾರದು. ಆದರೆ ಸಾತ್ವಿಕನೂ ಕುತರ್ಕ ಮಾಡದವನೂ ಹಣದಾಶೆಯಿಲ್ಲದವನೂ ಆಗಿರಬೇಕು.


“ಆದರೆ ಕಪಟಿಗಳಾದ ನಿಯಮ ಬೋಧಕರೇ, ಫರಿಸಾಯರೇ, ನಿಮಗೆ ಕಷ್ಟ! ಏಕೆಂದರೆ ನೀವು ಮನುಷ್ಯರ ಮುಂದೆ ಪರಲೋಕ ರಾಜ್ಯವನ್ನು ಮುಚ್ಚುತ್ತೀರಿ. ನೀವೂ ಪ್ರವೇಶಿಸುವುದಿಲ್ಲ, ಪ್ರವೇಶಿಸುವವರನ್ನೂ ನೀವು ಒಳಗೆ ಬಿಡುವುದಿಲ್ಲ.


“ಮರವು ಒಳ್ಳೆಯದಾಗಿದ್ದರೆ, ಅದರ ಫಲವು ಒಳ್ಳೆಯದಾಗಿರುವುದು; ಮರವು ಕೆಟ್ಟದ್ದಾಗಿದ್ದರೆ, ಅದರ ಫಲವು ಕೆಟ್ಟದ್ದಾಗಿರುವುದು. ಏಕೆಂದರೆ ಮರವನ್ನು ಅದರ ಫಲದಿಂದಲೇ ಗುರುತಿಸಲಾಗುವುದು.


ಕೆಲವರು ಇವುಗಳನ್ನು ಬಿಟ್ಟುಬಿಟ್ಟು ವ್ಯರ್ಥವಾದ ಮಾತುಗಳಿಗೆ ತಿರುಗಿಕೊಂಡಿದ್ದಾರೆ.


ಏಕೆಂದರೆ ಎಲ್ಲಾ ದೇಶಗಳೂ ಆಕೆಯ ಜಾರತ್ವಗಳೆಂಬ ಅತ್ಯಾಸಕ್ತಿಯ ದ್ರಾಕ್ಷಾರಸವನ್ನು ಕುಡಿದಿವೆ. ಭೂಲೋಕದ ಅರಸರು ಆಕೆಯೊಂದಿಗೆ ವ್ಯಭಿಚಾರ ಮಾಡಿದರು, ಭೂಲೋಕದ ವರ್ತಕರು ಆಕೆಯ ಭೋಗ ವಸ್ತುಗಳಿಂದ ಸಿರಿವಂತರಾದರು,” ಎಂದು ಕೂಗಿದನು.


ಅವರು ಕಾಯಿನನ ಮಾರ್ಗ ಹಿಡಿದವರೂ ಪ್ರತೀಕಾರ ಹೊಂದುವುದಕ್ಕಾಗಿ ಬಿಳಾಮನ ದೋಷವನ್ನು ಮಾಡುವುದಕ್ಕೆ ದುರಾಶೆಯಿಂದ ಓಡುವವರಾಗಿದ್ದಾರೆ. ಅವರು ಕೋರಹನಂತೆ ಎದುರು ಮಾತನಾಡಿ ನಾಶವಾಗುವವರಾಗಿದ್ದಾರೆ. ಆದ್ದರಿಂದ ಅವರ ಗತಿ ಏನೆಂದು ಹೇಳಲಿ!


ಇವರು ನೇರವಾದ ಮಾರ್ಗವನ್ನು ಬಿಟ್ಟು ಬೆಯೋರನ ಮಗನಾದ ಬಿಳಾಮನ ಮಾರ್ಗವನ್ನು ಹಿಡಿದು ತಪ್ಪಿಹೋಗಿದ್ದಾರೆ. ಈ ಬಿಳಾಮನು ಅನೀತಿಯಿಂದ ದೊರಕುವ ಸಂಬಳವನ್ನು ಪ್ರೀತಿಸಿದನು.


ಅದೇ ರೀತಿಯಾಗಿ ಸಭಾಸೇವಕರು ಗೌರವವುಳ್ಳವರಾಗಿರಬೇಕು. ಅವರು ಎರಡು ನಾಲಿಗೆಯುಳ್ಳವರಾಗಿರಬಾರದು. ಮದ್ಯಾಸಕ್ತರೂ ನೀಚಲಾಭವನ್ನು ಅಪೇಕ್ಷಿಸುವವರೂ ಆಗಿರದೆ


ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ, ನಮ್ಮಿಂದ ಸ್ವೀಕರಿಸಿದ ಬೋಧನೆಯನ್ನು ಅನುಸರಿಸದೆ, ಸೋಮಾರಿಯಾಗಿ ಅಶಿಸ್ತಿನಿಂದ ನಡೆಯುವ ಪ್ರತಿ ವಿಶ್ವಾಸಿಗೆ ನೀವು ದೂರವಾಗಿರಬೇಕು.


ಯೇಸು ಅವರಿಗೆ, “ ‘ನನ್ನ ಮನೆಯು ಪ್ರಾರ್ಥನೆಯ ಮನೆಯಾಗಿದೆ,’ ಎಂದು ಬರೆದದೆ. ಆದರೆ ನೀವಾದರೋ ಅದನ್ನು, ‘ಕಳ್ಳರ ಗವಿಯನ್ನಾಗಿ’ ಮಾಡಿದ್ದೀರಿ,” ಎಂದು ಹೇಳಿದರು.


ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು. ಅವರು ನಿನ್ನ ವಾಕ್ಯಗಳನ್ನು ಕೇಳುವರು. ಆದರೆ ಅವರು ಅವುಗಳನ್ನು ಪಾಲಿಸುವುದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು. ಆದರೆ ಅವರ ಹೃದಯವು ಅನ್ಯಾಯದ ಲಾಭದ ಕಡೆಗೆ ಹೋಗುವುದು.


ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ, ಅವರ ಹೊಲಗಳನ್ನು ಹೊಸ ಮಾಲಿಕನಿಗೆ ನಾನು ಕೊಟ್ಟುಬಿಡುವೆನು. ಏಕೆಂದರೆ, ಚಿಕ್ಕವನು ಮೊದಲುಗೊಂಡು ದೊಡ್ಡವರತನಕ ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


“ಏಕೆಂದರೆ, ಅವರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರತನಕ, ಅವರೆಲ್ಲರೂ ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರವರೆಗೆ ಪ್ರತಿಯೊಬ್ಬನೂ ಮೋಸದಿಂದ ನಡೆದುಕೊಳ್ಳುತ್ತಾನೆ.


ಹೌದು, ಎಂದಿಗೂ ಸಾಕೆನ್ನದ ಹೊಟ್ಟೆಬಾಕ ನಾಯಿಗಳು ಮತ್ತು ಅವರು ಗ್ರಹಿಕೆ ಇಲ್ಲದ ಕುರುಬರು, ಅವರೆಲ್ಲರೂ ತಮ್ಮ ತಮ್ಮ ಸ್ವಂತ ಮಾರ್ಗಕ್ಕೂ, ಪ್ರತಿಯೊಬ್ಬನೂ ತನ್ನ ಲಾಭ ಸಿಕ್ಕುವ ಕಡೆಗೂ ತಿರುಗಿಕೊಳ್ಳುವನು.


ಸರಕುಗಳಾದ ದಾಲ್ಚಿನ್ನಿ ಮತ್ತು ಮಸಾಲೆ, ಧೂಪ, ಸುಗಂಧ ತೈಲ, ರಕ್ತಬೋಳ, ದ್ರಾಕ್ಷಾರಸ ಮತ್ತು ಓಲಿವ್ ಎಣ್ಣೆ, ನಯವಾದ ಹಿಟ್ಟು, ಗೋಧಿ, ದನಕರು ಮತ್ತು ಕುರಿಗಳು, ಕುದುರೆಗಳು, ವಾಹನಗಳು, ಗುಲಾಮರು ಹಾಗೂ ಮನುಷ್ಯರು ಇವುಗಳನ್ನೆಲ್ಲಾ ಆ ವರ್ತಕರು ಅವಳಿಗೆ ಮಾರುತ್ತಿದ್ದರು.


ಇದರ ಬಗ್ಗೆ ಯಾರಿಗಾದರೂ ವಾಗ್ವಾದ ಮಾಡಬಯಸಿದರೆ, ಇಂಥ ಪದ್ಧತಿ ನಮ್ಮಲ್ಲಿಲ್ಲ, ದೇವರ ಸಭೆಗಳಲ್ಲಿಯೂ ಇಲ್ಲ.


ಪ್ರಾಪಂಚಿಕ ಹಾಗೂ ಅಜ್ಜಿ ಕಥೆಗಳನ್ನು ನಿರಾಕರಿಸಿ ನೀನು ದೇವಭಕ್ತಿಯನ್ನು ಅಭ್ಯಾಸ ಮಾಡಿಕೋ.


ದೇಹ ಸಾಧನೆಯೂ ಸ್ವಲ್ಪಮಟ್ಟಿಗೆ ಲಾಭಕರವಾಗಿದೆ. ಭಕ್ತಿಯಾದರೋ ಎಲ್ಲಾ ವಿಧದಲ್ಲಿಯೂ ಲಾಭಕರವಾದದ್ದು. ಅದಕ್ಕೆ ಈಗಲೂ ಮುಂದೆಯೂ ಜೀವ ವಾಗ್ದಾನ ಉಂಟು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು