Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:1 - ಕನ್ನಡ ಸಮಕಾಲಿಕ ಅನುವಾದ

1 ತಂದೆ ದೇವರಲ್ಲಿಯೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ, ಪೌಲ, ಸಿಲ್ವಾನ ಹಾಗೂ ತಿಮೊಥೆ ಇವರು ಬರೆಯುವ ಪತ್ರ: ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದ ಸಭೆಗೆ ಪೌಲ ಸಿಲ್ವಾನ, ತಿಮೊಥೆಯ ಎಂಬ ನಾವು ಬರೆಯುವುದೇನಂದರೆ, ನಿಮಗೆ ಕೃಪೆಯೂ ಶಾಂತಿಯೂ ಉಂಟಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಪಿತನಾದ ದೇವರ ಹಾಗೂ ಪ್ರಭುವಾದ ಯೇಸುಕ್ರಿಸ್ತರ ಅನ್ಯೋನ್ಯತೆಯಲ್ಲಿರುವ ಥೆಸಲೋನಿಕದ ಸಭೆಯವರಿಗೆ - ಪೌಲ, ಸಿಲ್ವಾನ ಹಾಗೂ ತಿಮೊಥೇಯ ಇವರು ಬರೆಯುವ ಪತ್ರ. ದೈವಾನುಗ್ರಹವೂ ಶಾಂತಿಸಮಾಧಾನವೂ ನಿಮಗೆ ಲಭಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ತಂದೆಯಾದ ದೇವರಲ್ಲಿಯೂ ಕರ್ತನಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ ಸಿಲ್ವಾನ ತಿಮೊಥೆಯ ಎಂಬ ನಾವು ಬರೆಯುವದೇನಂದರೆ - ನಿಮಗೆ ಕೃಪೆಯೂ ಶಾಂತಿಯೂ ಆಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ತಂದೆಯಾದ ದೇವರಲ್ಲಿಯೂ ಮತ್ತು ಪ್ರಭುವಾದ ಯೇಸು ಕ್ರಿಸ್ತನಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ ಮತ್ತು ತಿಮೊಥೆ ಬರೆಯುವ ಪತ್ರ. ದೇವರ ಕೃಪೆಯೂ ಶಾಂತಿಯೂ ನಿಮಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಿಯಾ ಪಾವ್ಲು, ಸಿಲಾಸ್ ಅನಿ ತಿಮೊತಿ, ದೆವಾ ಬಾಬಾಕ್ ಅನಿ ಧನಿಯಾ ಜೆಜು ಕ್ರಿಸ್ತಾಕ್ ಸಮಂದ್‍ ಪಡಲ್ಲ್ಯಾ ಥೆಸಾಲೊನಿಕಾ ಮನ್ತಲ್ಯಾ ಗಾಂವಾತ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಲಿವ್ತಲೆ ಕಾಯ್ ಮಟ್ಲ್ಯಾರ್. ತುಮ್ಕಾ ಕುರ್ಪಾ ಅನಿ ಶಾಂತಿ ಗಾವುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:1
30 ತಿಳಿವುಗಳ ಹೋಲಿಕೆ  

ರೋಮ್ ನಗರದಲ್ಲಿ ದೇವರಿಗೆ ಪ್ರಿಯರೂ ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲಾದವರೂ ಆಗಿರುವವರೆಲ್ಲರಿಗೂ: ನಮ್ಮ ತಂದೆಯಾದ ದೇವರಿಂದಲೂ ಕರ್ತ ಯೇಸು ಕ್ರಿಸ್ತರಿಂದಲೂ ಕೃಪೆಯೂ ಶಾಂತಿಯೂ ಆಗಲಿ.


ನಮ್ಮ ತಂದೆ ದೇವರಲ್ಲಿಯೂ, ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ತಿಮೊಥೆಯರು ಬರೆಯುವುದು:


ಬೆರೋಯದ ಪುರ್ರನ ಮಗ ಸೋಪತ್ರನು, ಥೆಸಲೋನಿಕದ ಅರಿಸ್ತಾರ್ಕ ಮತ್ತು ಸೆಕುಂದ, ದೆರ್ಬೆಯ ಗಾಯ, ತಿಮೊಥೆ ಅಲ್ಲದೆ ಏಷ್ಯಾ ಪ್ರಾಂತದ ತುಖಿಕ ಹಾಗೂ ತ್ರೊಫಿಮ ಅವನೊಂದಿಗೆ ಹೋದರು.


ಮಕೆದೋನ್ಯದಿಂದ ಸೀಲ ಮತ್ತು ತಿಮೊಥೆ ಬಂದ ತರುವಾಯ, ಪೌಲನು ವಾಕ್ಯವನ್ನು ಬೋಧಿಸುವುದರಲ್ಲಿಯೇ ಸಮರ್ಪಿಸಿಕೊಂಡವನಾಗಿ ಯೇಸುವೇ ಕ್ರಿಸ್ತ ಎಂದು ಯೆಹೂದ್ಯರಿಗೆ ಖಚಿತವಾಗಿ ಸಾಕ್ಷಿಕೊಟ್ಟನು.


ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:


ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಿಮಗೆ ನಂಬಿಗಸ್ತ ಆಗಿರುವ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಸಹಾಯದಿಂದ ಸಂಕ್ಷೇಪವಾಗಿ ಇದನ್ನು ಬರೆದಿದ್ದೇನೆ. ನಿಜವಾದ ಕೃಪೆಯಲ್ಲಿ ನೀವು ನಿಂತವರಾಗಿದ್ದೀರಿ.


ನಾನು, ಸಿಲ್ವಾನ ಮತ್ತು ತಿಮೊಥೆಯನು ನಿಮ್ಮಲ್ಲಿ ಬೋಧಿಸಿದ ದೇವರ ಪುತ್ರನಾದ ಯೇಸು ಕ್ರಿಸ್ತನು ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ. ಯಾವಾಗಲೂ ಅದು ಕ್ರಿಸ್ತನಲ್ಲಿ ಹೌದು ಎಂದೇ ಆಗಿರುತ್ತಾನೆ.


ತನ್ನ ಇಬ್ಬರು ಸಹಾಯಕರಾದ ತಿಮೊಥೆ ಮತ್ತು ಎರಸ್ತನನ್ನು ಮಕೆದೋನ್ಯಕ್ಕೆ ಕಳುಹಿಸಿ ತಾನು ಇನ್ನೂ ಸ್ವಲ್ಪಕಾಲ ಏಷ್ಯಾ ಪ್ರಾಂತದಲ್ಲಿ ಇದ್ದನು.


ಬೆರೋಯದಲ್ಲಿದ್ದವರು ಥೆಸಲೋನಿಕದವರಿಗಿಂತ ಹೆಚ್ಚು ಸದ್ಗುಣವುಳ್ಳವರು; ಅವರು ವಾಕ್ಯವನ್ನು ಅತ್ಯಾಸಕ್ತಿಯಿಂದ ಸ್ವೀಕರಿಸಿ, ಇವರು ಹೇಳಿದ್ದು ಸರಿಯಾದದ್ದೋ ಏನೋ ಎಂದು ಅವರು ಪ್ರತಿದಿನವೂ ಪವಿತ್ರ ವೇದಗಳನ್ನು ಪರೀಕ್ಷಿಸುತ್ತಿದ್ದರು.


ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.


ನನ್ನ ಪ್ರಿಯ ಪುತ್ರನಾದ ತಿಮೊಥೆಯನಿಗೆ ಬರೆಯುವುದು: ತಂದೆ ದೇವರಿಂದಲೂ ನಮಗೆ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ಕೃಪೆಯೂ ಕರುಣೆಯೂ ಶಾಂತಿಯೂ ಆಗಲಿ.


ನಂಬಿಕೆಯಲ್ಲಿ ನನ್ನ ನಿಜ ಪುತ್ರನಾಗಿರುವ ತಿಮೊಥೆಯನಿಗೆ ಬರೆಯುವುದು: ನಮ್ಮ ತಂದೆ ದೇವರಿಂದಲೂ, ನಮ್ಮ ಕರ್ತ ಆಗಿರುವ ಕ್ರಿಸ್ತ ಯೇಸುವಿನಿಂದಲೂ ನಿನಗೆ ಕೃಪೆಯೂ ಕರುಣೆಯೂ ಶಾಂತಿಯೂ ದೊರೆಯಲಿ.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ,


ಕ್ರಿಸ್ತ ಯೇಸುವಿನ ದಾಸರಾದ ಪೌಲ ತಿಮೊಥೆಯರು, ಕ್ರಿಸ್ತ ಯೇಸುವಿನಲ್ಲಿರುವ ಫಿಲಿಪ್ಪಿಯ ದೇವರ ಪರಿಶುದ್ಧರೆಲ್ಲರಿಗೂ, ಅವರೊಂದಿಗಿರುವ ಮೇಲ್ವಿಚಾರಕರಿಗೂ ಸಭಾಸೇವಕರಿಗೂ ಬರೆಯುವ ಪತ್ರ:


ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಆಗ ಕ್ರಿಸ್ತ ಯೇಸುವಿನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.


ನನ್ನ ಜೊತೆಯಲ್ಲಿರುವ ಎಲ್ಲಾ ಪ್ರಿಯರೂ, ಗಲಾತ್ಯದಲ್ಲಿರುವ ಸಭೆಗಳಿಗೆ ಬರೆಯುವುದು:


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ಕೊರಿಂಥದಲ್ಲಿರುವ ದೇವರ ಸಭೆಗೆ ಮತ್ತು ಅಖಾಯ ಪ್ರಾಂತದಲ್ಲಿರುವ ಎಲ್ಲಾ ಪವಿತ್ರ ಜನರಿಗೆ ಬರೆಯುವ ಪತ್ರ:


ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ:


ಅವನು ದೀಪ ತರಬೇಕೆಂದು ಹೇಳಿ ಓಡಿಹೋಗಿ ಭಯದಿಂದ ನಡುಗುತ್ತಾ ಪೌಲ, ಸೀಲರ ಮುಂದೆ ಅಡ್ಡಬಿದ್ದನು.


ಸುಮಾರು ಮಧ್ಯರಾತ್ರಿಯಲ್ಲಿ ಪೌಲ, ಸೀಲರು ಪ್ರಾರ್ಥನೆ ಮಾಡುವವರಾಗಿ ಸ್ತುತಿಗೀತೆಯಿಂದ ದೇವರಿಗೆ ಸ್ತೋತ್ರ ಮಾಡುತ್ತಿದ್ದರು. ಸೆರೆಮನೆಯಲ್ಲಿ ಇತರ ಕೈದಿಗಳು ಅದನ್ನು ಆಲಿಸುತ್ತಿದ್ದರು.


ಅವಳ ಯಜಮಾನರು ತಾವು ಹಣ ಸಂಪಾದಿಸುವ ನಿರೀಕ್ಷೆಯೇ ಹೋಯಿತೆಂದು ತಿಳಿದು, ಪೌಲ ಸೀಲರನ್ನು ಹಿಡಿದು ಸಂತೆಸ್ಥಳದಲ್ಲಿದ್ದ ಅಧಿಕಾರಿಗಳ ಮುಂದೆ ವಿಚಾರಣೆಗಾಗಿ ಎಳೆದುಕೊಂಡು ಹೋದರು.


ಆದರೆ ಪೌಲನು ಸೀಲನನ್ನು ಆರಿಸಿಕೊಂಡು ಹೋದನು. ವಿಶ್ವಾಸಿಗಳಿಂದ ಅವನನ್ನು ಕರ್ತ ಯೇಸುವಿನ ಕೃಪೆಗೆ ಒಪ್ಪಿಸಿ, ಕಳುಹಿಸಿಕೊಟ್ಟುರು.


ಆದ್ದರಿಂದ ನಾವು ಈ ಸಂಗತಿಗಳನ್ನು ಬಾಯಿಮಾತುಗಳಿಂದ ಪ್ರಕಟಿಸುವುದಕ್ಕಾಗಿ ಯೂದ ಮತ್ತು ಸೀಲರನ್ನು ಕಳುಹಿಸುತ್ತಿದ್ದೇವೆ.


ನಮಗಿರುವ ಅನ್ಯೋನ್ಯತೆಯಲ್ಲಿ ನೀವೂ ಇರಬೇಕೆಂದು, ನಾವು ಕಂಡು ಕೇಳಿದ್ದನ್ನು ನಿಮಗೆ ಪ್ರಸಿದ್ಧಿಪಡಿಸುತ್ತೇವೆ. ನಿಜವಾಗಿಯೂ ನಮಗಿರುವ ಅನ್ಯೋನ್ಯತೆಯು ತಂದೆಯ ಸಂಗಡವೂ ಅವರ ಮಗನಾದ ಕ್ರಿಸ್ತ ಯೇಸುವಿನ ಸಂಗಡವೂ ಇರುವಂಥದ್ದು.


ಆಗ ಅಪೊಸ್ತಲರು ಮತ್ತು ಹಿರಿಯರು ಇಡೀ ಸಭೆಯ ಸಮ್ಮತಿ ಪಡೆದು, ಸಹೋದರರಲ್ಲಿ ನಾಯಕರಾಗಿದ್ದ ಬಾರ್ಸಬನೆಂದು ಕರೆಯಲಾದ ಯೂದ ಮತ್ತು ಸೀಲ ಎಂಬಿಬ್ಬರನ್ನು ಆಯ್ದುಕೊಂಡರು. ಅವರನ್ನು ಪೌಲ ಮತ್ತು ಬಾರ್ನಬರೊಂದಿಗೆ ಅಂತಿಯೋಕ್ಯಕ್ಕೆ ಕಳುಹಿಸಲು ನಿರ್ಧರಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು