Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 1:8 - ಕನ್ನಡ ಸಮಕಾಲಿಕ ಅನುವಾದ

8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯ ಹಾಗೂ ಅಖಾಯದಲ್ಲಿ ಘೋಷಿತವಾದದ್ದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಹರಡಿತು. ಆದ್ದರಿಂದ ಇದನ್ನು ಕುರಿತು ನಾವು ಹೇಳಬೇಕಾದ ಅವಶ್ಯ ಏನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದಲ್ಲದೆ, ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದುದರಿಂದ ಆ ವಿಷಯದಲ್ಲಿ ನಾವು ಏನನ್ನೂ ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಪ್ರಭುವಿನ ಶುಭಸಂದೇಶ ನಿಮ್ಮಿಂದಲೇ ಘೋಷಿತವಾಯಿತು. ದೇವರಲ್ಲಿ ನೀವಿಟ್ಟಿರುವ ವಿಶ್ವಾಸ ಮಕೆದೋನಿಯ ಮತ್ತು ಅಖಾಯದಲ್ಲಿ ಮಾತ್ರವಲ್ಲದೆ ಎಲ್ಲೆಡೆಯಲ್ಲೂ ಪ್ರಸರಿಸಿತು. ಈ ನಿಮ್ಮ ವಿಶ್ವಾಸವನ್ನು ಕುರಿತು ನಾವು ಹೇಳಬೇಕಾದುದು ಏನೂ ಇಲ್ಲ; ಅಲ್ಲಿಯ ಜನರೇ ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಕರ್ತನ ವಾಕ್ಯವು ನಿಮ್ಮಿಂದಲೇ ಮಕೆದೋನ್ಯದಲ್ಲಿಯೂ ಅಖಾಯದಲ್ಲಿಯೂ ಘೋಷಿತವಾದದ್ದಲ್ಲದೆ ದೇವರ ಮೇಲೆ ನೀವು ಇಟ್ಟಿರುವ ನಂಬಿಕೆಯು ಎಲ್ಲಾ ಸ್ಥಳಗಳಲ್ಲಿಯೂ ಪ್ರಸಿದ್ಧವಾಯಿತು. ಆದದರಿಂದ ಆ ವಿಷಯದಲ್ಲಿ ನಾವು ಏನೂ ಹೇಳಬೇಕಾದದ್ದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರಭುವಿನ ಉಪದೇಶವು ಮಕೆದೋನಿಯ ಮತ್ತು ಅಖಾಯದಲ್ಲಿ ನಿಮ್ಮಿಂದ ಪ್ರಚಾರವಾಯಿತು. ಇದಲ್ಲದೆ ದೇವರ ಮೇಲಿನ ನಿಮ್ಮ ನಂಬಿಕೆಯು ಎಲ್ಲಾ ಕಡೆಗಳಲ್ಲಿಯೂ ತಿಳಿದುಬಂದಿತು. ಆದುದರಿಂದ ನಿಮ್ಮ ನಂಬಿಕೆಯ ಬಗ್ಗೆ ಏನೂ ಹೇಳಬೇಕಾಗಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಧನಿಯಾಚ್ಯಾ ವಿಶಯಾತ್ಲಿ ಬರಿ ಖಬರ್ ತುಮ್ಚ್ಯಾ ವೈನಾ ಸಗ್ಳ್ಯಾ ಮೆಸಿದೊನಿಯಾತ್ ಅನಿ ಅಖಾಯಿಯಾತ್ ಪರ್ಗಟ್ ಹೊಲ್ಲೆ ತವ್ಡೆಚ್ ನ್ಹಯ್, ದೆವಾ ವರ್‍ತಿ ತುಮಿ ಥವಲ್ಲ್ಯಾ ವಿಶ್ವಾಸಾಚಿ ಖಬರ್ ಸೈತ್ ಸಗ್ಳ್ಯಾಕ್ಡೆ ಜಾವ್ನ್ ಪಾವ್ಲಾ, ಹೆಚ್ಯಾ ವಿಶಯಾತ್ ಅಮಿ ಅನಿ ಕಾಯ್ ಜಾಸ್ತಿಚೆ ಸಾಂಗುಚೆ ಮನುನ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 1:8
20 ತಿಳಿವುಗಳ ಹೋಲಿಕೆ  

ಮೊದಲನೆಯದಾಗಿ, ನಿಮ್ಮ ನಂಬಿಕೆಯು ಲೋಕದಲ್ಲೆಲ್ಲಾ ಪ್ರಸಿದ್ಧಿಗೆ ಬಂದದ್ದರಿಂದ ನಿಮ್ಮೆಲ್ಲರ ವಿಷಯವಾಗಿ ಕ್ರಿಸ್ತ ಯೇಸುವಿನ ಮೂಲಕ ನನ್ನ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಮತ್ತೊಬ್ಬ ದೇವದೂತನು ಆಕಾಶದ ಮಧ್ಯದಲ್ಲಿ ಹಾರುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ರಾಷ್ಟ್ರ, ಹಿನ್ನಲೆ, ಭಾಷೆ ಹಾಗೂ ಪ್ರಜೆಗಳವರಿಗೂ ಸಾರಿ ಹೇಳುವುದಕ್ಕೆ ನಿತ್ಯ ಸುವಾರ್ತೆಯು ಅವನಲ್ಲಿತ್ತು.


ದೇಮೇತ್ರಿಯನನ್ನು ಕುರಿತಾಗಿ ಎಲ್ಲರೂ ಒಳ್ಳೆಯದನ್ನೇ ಮಾತನಾಡುತ್ತಾರೆ. ಅಷ್ಟೇ ಅಲ್ಲದೆ ಸತ್ಯವೇ ಅವನ ಪರವಾಗಿ ಸಾಕ್ಷಿಕೊಡುತ್ತದೆ. ನಮ್ಮ ಸಾಕ್ಷಿ ಸತ್ಯವಾದದ್ದೆಂದು ನೀವು ಬಲ್ಲಿರಿ.


ಹೀಗಿರುವುದರಿಂದ, ನೀವು ಸಹಿಸುತ್ತಿರುವ ನಿಮ್ಮ ಎಲ್ಲಾ ಹಿಂಸೆಗಳಲ್ಲಿಯೂ ಸಂಕಟಗಳಲ್ಲಿಯೂ ನಿಮಗೆ ತೋರಿ ಬಂದ ನಿಮ್ಮ ತಾಳ್ಮೆ, ನಂಬಿಕೆಗಳನ್ನು ನೆನೆಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಮ್ಮೆಪಡುತ್ತೇವೆ.


ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಒಳ್ಳೆಯ ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವವನ ಪಾದಗಳು ಪರ್ವತಗಳ ಮೇಲೆ ಎಷ್ಟೊಂದು ಅಂದವಾಗಿವೆ!


ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ.


ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.


ನಿಮ್ಮ ವಿಧೇಯತೆಯು ಎಲ್ಲಾ ಮನುಷ್ಯರಿಗೂ ಪ್ರಸಿದ್ಧವಾಯಿತು. ಆದ್ದರಿಂದ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ಆದರೆ ನೀವು ಒಳ್ಳೆಯದನ್ನು ಕುರಿತು ಜ್ಞಾನಿಗಳಾಗಿಯೂ ಕೆಟ್ಟವುಗಳನ್ನು ಕುರಿತು ನಿಷ್ಕಳಂಕರಾಗಿಯೂ ಇರಬೇಕೆಂದು ಅಪೇಕ್ಷಿಸುತ್ತೇನೆ.


ಅನೇಕ ಪ್ರಜೆಗಳು ಬಂದು ಹೀಗೆ ಹೇಳುವರು, “ಬನ್ನಿರಿ, ಯೆಹೋವ ದೇವರ ಪರ್ವತಕ್ಕೂ, ಯಾಕೋಬನ ದೇವರ ಆಲಯಕ್ಕೂ ಏರಿಹೋಗೋಣ. ದೇವರು ತಮ್ಮ ಮಾರ್ಗಗಳನ್ನು ನಮಗೆ ಬೋಧಿಸುವರು, ನಾವು ಅವರ ದಾರಿಗಳಲ್ಲಿ ನಡೆಯುವೆವು.” ಏಕೆಂದರೆ ಚೀಯೋನಿನಿಂದ ದೇವರ ನಿಯಮವೂ, ಯೆರೂಸಲೇಮಿನಿಂದ ಯೆಹೋವ ದೇವರ ವಾಕ್ಯವೂ ಹೊರಡುವುವು.


ಇದಲ್ಲದೆ ಯೆಹೋವ ದೇವರು ಇಸ್ರಾಯೇಲರಿಗೆ ಮಾಡಿದ ಎಲ್ಲಾ ಉಪಕಾರಕ್ಕಾಗಿಯೂ, ಯೆಹೋವ ದೇವರು ಅವರನ್ನು ಈಜಿಪ್ಟಿನವರ ಕೈಗಳಿಂದ ತಪ್ಪಿಸಿದ್ದಕ್ಕಾಗಿಯೂ ಇತ್ರೋವನು ಸಂತೋಷಪಟ್ಟನು.


ಕ್ರಿಸ್ತ ಯೇಸುವಿನ ಮೂಲಕ ದೇವರ ಮುಂದೆ ನಮಗೆ ಅಂಥಾ ಭರವಸೆಯು ಇರುವುದರಿಂದ ನಾವು ಹಾಗೆ ಹೇಳುತ್ತಿದ್ದೇವೆ.


ದೇವರ ವಾಕ್ಯವು ನಿಮ್ಮಿಂದ ಹೊರಟಿತೋ? ಅಥವಾ ಅದು ತಲುಪಿದ್ದು ನಿಮಗೆ ಮಾತ್ರವೋ?


“ಅವರ ಮಧ್ಯದಲ್ಲಿ ಗುರುತನ್ನಿಟ್ಟು, ಅವರಲ್ಲಿ ತಪ್ಪಿಸಿಕೊಂಡವರನ್ನು ಜನಾಂಗಗಳಿಗೂ, ತಾರ್ಷೀಷ್, ಪೂಲ್, ಬಿಲ್ಲು ಪ್ರಯೋಗಿಸುವುದರಲ್ಲಿ ಪ್ರವೀಣರಾದ ಲೂದ್, ತೂಬಲ್, ಗ್ರೀಸ್ ಎಂಬ ನಾಡುಗಳಿಗೂ ನನ್ನ ಸಮಾಚಾರವನ್ನು ಕೇಳದ ನನ್ನ ಮಹಿಮೆಯನ್ನು ಕಾಣದೆ ಇರುವ ದೂರ ದ್ವೀಪನಿವಾಸಿಗಳಿಗೂ ಕಳುಹಿಸುವೆನು. ಅವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.


ಗಲ್ಲಿಯೋನ ಎಂಬುವನು ಅಖಾಯದ ರಾಜ್ಯಪಾಲನಾಗಿದ್ದನು. ಯೆಹೂದ್ಯರು ಒಟ್ಟುಗೂಡಿ ಪೌಲನನ್ನು ವಿರೋಧಿಸಿ, ಅವನನ್ನು ನ್ಯಾಯಸ್ಥಾನಕ್ಕೆ ಕರೆದುಕೊಂಡು ಬಂದು,


ಮಕೆದೋನ್ಯ ಮತ್ತು ಅಖಾಯದವರು ಯೆರೂಸಲೇಮಿನ ಭಕ್ತರಲ್ಲಿರುವ ಬಡವರಾಗಿರುವವರಿಗೆ ಸಹಾಯ ಮಾಡುವುದು ಒಳ್ಳೆಯದೆಂದು ಭಾವಿಸಿದ್ದಾರೆ.


ಕ್ರಿಸ್ತ ಯೇಸುವಿನಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರೆಸುತ್ತಾ, ಅವರ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ಪ್ರಸಾರಗೊಳಿಸುವ ದೇವರಿಗೆ ಕೃತಜ್ಞತೆಗಳು.


ಕ್ರಿಸ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಆ ವಾಕ್ಯದಿಂದಲೇ, ನೀವು ಸಕಲ ಜ್ಞಾನದಲ್ಲಿ ಕೃತಜ್ಞತೆಯೊಂದಿಗೆ ನಿಮ್ಮ ಹೃದಯಗಳಲ್ಲಿ ಕೀರ್ತನೆಗಳಿಂದಲೂ ಸಂಗೀತಗಳಿಂದಲೂ ಆತ್ಮಿಕ ಹಾಡುಗಳಿಂದಲೂ ಕರ್ತ ಯೇಸುವನ್ನು ಕೊಂಡಾಡುತ್ತಾ ಒಬ್ಬರಿಗೊಬ್ಬರು ಉಪದೇಶಿಸುತ್ತಾ, ಬುದ್ಧಿ ಹೇಳುತ್ತಾ ಇರಿ.


ಆದ್ದರಿಂದ ಪುರುಷರು ಎಲ್ಲಾ ಸ್ಥಳಗಳಲ್ಲಿ ಕೋಪವೂ ಸಂದೇಹವೂ ಇಲ್ಲದೆ ಶುದ್ಧವಾದ ಕೈಗಳನ್ನೆತ್ತಿ ಪ್ರಾರ್ಥಿಸಬೇಕೆಂದು ನಾನು ಅಪೇಕ್ಷಿಸುತ್ತೇನೆ.


ಈ ಸುವಾರ್ತೆಗಾಗಿ ನಾನು ಕಷ್ಟವನ್ನು ಅನುಭವಿಸಿ ದುಷ್ಕರ್ಮಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯಕ್ಕೆ ಬಂಧನವಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು