Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:1 - ಕನ್ನಡ ಸಮಕಾಲಿಕ ಅನುವಾದ

1 ಪ್ರಿಯರೇ, ನಾವು ನಿಮ್ಮ ಬಳಿಗೆ ಬಂದದ್ದು ವ್ಯರ್ಥವಾಗಲಿಲ್ಲವೆಂಬುದನ್ನು ನೀವು ತಿಳಿದಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಹೋದರರೇ, ನಾವು ವ್ಯರ್ಥವಾಗಿ ನಿಮ್ಮಲ್ಲಿಗೆ ಬರಲಿಲ್ಲವೆಂಬುದು ನಿಮಗೆ ತಿಳಿದಿರುವ ಪ್ರಕಾರವೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸಹೋದರರೇ, ನಾವು ನಿಮ್ಮಲ್ಲಿಗೆ ಬಂದುದು ವ್ಯರ್ಥವಾಗಲಿಲ್ಲವೆಂಬುದು ನಿಮಗೆ ಗೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಹೋದರರೇ, ನಾವು ಸುಮ್ಮಸುಮ್ಮಗೆ ನಿಮ್ಮಲ್ಲಿಗೆ ಬರಲಿಲ್ಲವೆಂಬದನ್ನೂ ನಿಮಗೆ ತಿಳಿದಿರುವ ಪ್ರಕಾರ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸಹೋದರ ಸಹೋದರಿಯರೇ, ನಾವು ನಿಮ್ಮಲ್ಲಿಗೆ ಬಂದದ್ದು ವ್ಯರ್ಥವಾಗಲಿಲ್ಲ ಎಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಅಮಿ ತುಮ್ಚ್ಯಾ ಮದ್ದಿ ಯೆಲ್ಲೆ ಕವ್ಡೆ ಫಾಯ್ದ್ಯಾಕ್ ಪಡ್ಲೆ ಮನ್ತಲೆ ತುಮ್ಕಾಚ್ ಬರೆ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:1
18 ತಿಳಿವುಗಳ ಹೋಲಿಕೆ  

ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ.


ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ನೀವು ಜೀವವಾಕ್ಯವನ್ನು ಹಿಡಿದವರಾಗಿದ್ದರೆ, ಹೀಗೆ ನಾನು ಓಡಿದ ಓಟವೂ ಪ್ರಯಾಸವೂ ವ್ಯರ್ಥವಾಗಲಿಲ್ಲವೆಂದು ತಿಳಿದು ಕ್ರಿಸ್ತನ ಪುನರಾಗಮನ ದಿನದಲ್ಲಿ ಅಭಿಮಾನ ಪಡುವೆನು.


ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ನಾನು ಸಾರಿದ ಈ ಸುವಾರ್ತೆಯ ವಾಕ್ಯವನ್ನು ನೀವು ಬಿಗಿಯಾಗಿ ಹಿಡಿದುಕೊಂಡರೆ, ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ, ನಿಮ್ಮ ನಂಬಿಕೆ ವ್ಯರ್ಥವಾಗಿ ಹೋಗುತ್ತದೆ.


ಜನರ ಶ್ರಮೆಯು ಬೆಂಕಿಗೆ ತುತ್ತಾಗುವುದು. ಜನಾಂಗಗಳು ವ್ಯರ್ಥವಾಗಿ ದಣಿದುಕೊಳ್ಳುತ್ತವೆ. ಇದು ಸೇನಾಧೀಶ್ವರ ಯೆಹೋವ ದೇವರ ಚಿತ್ತವಷ್ಟೆ.


ಯೆಹೋವ ದೇವರು ಮನೆಯನ್ನು ಕಟ್ಟದೆ ಇದ್ದರೆ, ಅದನ್ನು ಕಟ್ಟುವವರು ವ್ಯರ್ಥವಾಗಿ ಪ್ರಯಾಸಪಡುತ್ತಾರೆ; ಯೆಹೋವ ದೇವರು ಪಟ್ಟಣವನ್ನು ಕಾಯದೆ ಇದ್ದರೆ, ಅದನ್ನು ಕಾಯುವವರು ವ್ಯರ್ಥವಾಗಿ ಕಾಯುತ್ತಾರೆ.


ಈ ಕಾರಣದಿಂದ, ನಮ್ಮ ಪ್ರಯಾಸವು ವ್ಯರ್ಥವಾಗುವಂತೆ ಶೋಧಕನು ನಿಮ್ಮನ್ನು ಶೋಧಿಸುವನೋ ಎಂಬ ಭಯದ ದೆಸೆಯಿಂದ, ನಾನು ಸಹ ಸಹಿಸಲಾರದೆ ನಿಮ್ಮ ನಂಬಿಕೆಯ ವಿಷಯದಲ್ಲಿ ತಿಳಿದುಕೊಳ್ಳುವುದಕ್ಕೆ ತಿಮೊಥೆಯನನ್ನು ಕಳುಹಿಸಿದೆನು.


ನಾವು ನಿಮ್ಮ ಮಧ್ಯದಲ್ಲಿ ಪ್ರಯಾಸಪಟ್ಟದ್ದು ವ್ಯರ್ಥವಾಯಿತೇನೋ ಎಂದು ನಿಮ್ಮ ವಿಷಯದಲ್ಲಿ ನಾನು ಭಯಪಡುತ್ತೇನೆ.


ನಾನು ನನಗೆ ದೊರೆತ ಪ್ರಕಟನೆಗೆ ಅನುಸಾರವಾಗಿ ಅಲ್ಲಿಗೆ ಹೋದೆನು. ಅಲ್ಲಿ ಇರುವ ಸಭೆಗೆ ಹೋಗಿ ಯೆಹೂದ್ಯರಲ್ಲದ ಜನರಿಗೆ ನಾನು ಸಾರುವ ಸುವಾರ್ತೆಯ ಬಗ್ಗೆ ವಿವರಿಸಿದೆನು. ಅಲ್ಲಿರುವ ಗಣ್ಯನಾಯಕರಿಗೆ ವೈಯಕ್ತಿಕವಾಗಿ ಅದರ ಬಗ್ಗೆ ವರದಿಮಾಡಿದೆನು. ಏಕೆಂದರೆ ನಾನು ಮಾಡಿದ ಸೇವೆ ಮತ್ತು ಮುಂದೆ ಮಾಡಲಿರುವ ಸೇವೆಯು ನಿಷ್ಫಲವಾಗಬಾರದೆಂಬ ಕಾರಣಕ್ಕಾಗಿ ಹೀಗೆ ಮಾಡಿದೆ.


ನೀವು ಹೊಂದಿರುವ ದೇವರ ಕೃಪೆಯನ್ನು ವ್ಯರ್ಥಮಾಡಿಕೊಳ್ಳಬೇಡಿರೆಂದು ದೇವರ ಜೊತೆಕೆಲಸದವರಾದ ನಾವು ನಿಮ್ಮಲ್ಲಿ ಬೇಡಿಕೊಳ್ಳುತ್ತೇವೆ,


ಆದರೆ ನಾನು ಎಂಥವನಾಗಿದ್ದೇನೋ, ಅದು ದೇವರ ಕೃಪೆಯಿಂದಲೇ ಆಗಿರುತ್ತದೆ. ನನಗುಂಟಾದ ದೇವರ ಕೃಪೆಯು ನಿಷ್ಫಲವಾಗಲಿಲ್ಲ. ನಾನು ಅವರೆಲ್ಲರಿಗಿಂತಲೂ ಎಷ್ಟೋ ಹೆಚ್ಚಾಗಿ ಪ್ರಯಾಸಪಟ್ಟೆನು. ಆದರೆ ಪ್ರಯಾಸಪಟ್ಟವನು ನಾನಲ್ಲ, ನನ್ನೊಂದಿಗಿದ್ದ ದೇವರ ಕೃಪೆಯೇ.


ಅವರು ವ್ಯರ್ಥವಾಗಿ ದುಡಿಯರು. ಕಷ್ಟವನ್ನು ಎದುರುಗೊಳ್ಳುವುದಿಲ್ಲ. ಏಕೆಂದರೆ ಅವರು ಯೆಹೋವ ದೇವರ ಆಶೀರ್ವಾದ ಹೊಂದಿದವರ ಸಂತಾನವಾಗಿದ್ದಾರೆ. ಅವರ ಸಂಗಡ ಅವರ ಸಂತತಿಯು ಸಹ ಆಶೀರ್ವಾದ ಹೊಂದುವುದು.


ಅದಕ್ಕೆ ನಾನು, “ನಾನು ಪಡುವ ಪ್ರಯಾಸವು ವ್ಯರ್ಥ. ನನ್ನ ಶಕ್ತಿಯೆಲ್ಲ ಶೂನ್ಯವಾಯಿತು, ನನ್ನ ಸಾಮರ್ಥ್ಯವೆಲ್ಲ ವ್ಯರ್ಥವಾಯಿತು,” ಎಂದು ಹೇಳಿದೆನು. ಆದರೂ ನಿಶ್ಚಯವಾಗಿ ನನ್ನ ನ್ಯಾಯವು ಯೆಹೋವ ದೇವರ ಬಳಿಯಲ್ಲಿಯೂ, ನನ್ನ ಪ್ರತಿಫಲವು ನನ್ನ ದೇವರಲ್ಲಿಯೂ ಉಂಟು.


ತನ್ನ ಮರಿಗಳನ್ನು ತನ್ನವುಗಳಲ್ಲ ಎಂಬಂತೆ ಕ್ರೂರವಾಗಿ ನಡೆಸುತ್ತದೆ; ಉಷ್ಟ್ರಪಕ್ಷಿಯು ತನ್ನ ಹೆರಿಗೆ ವ್ಯರ್ಥವಾದರೂ ಅದಕ್ಕೆ ಚಿಂತೆ ಇಲ್ಲ.


ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು.


ನನ್ನ ಹೃದಯವನ್ನು ಶುದ್ಧ ಮಾಡಿಕೊಂಡಿದ್ದು ವ್ಯರ್ಥವೋ? ನನ್ನ ಅಂಗೈಗಳನ್ನು ನಿರಪರಾಧದಲ್ಲಿ ತೊಳೆದಿದ್ದೂ ವ್ಯರ್ಥವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು