Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:12 - ಕನ್ನಡ ಸಮಕಾಲಿಕ ಅನುವಾದ

12 ನಿಮಗೆ ಬುದ್ಧಿ ಹೇಳುತ್ತಾ ಸಂತೈಸುತ್ತಾ ಬಂದೆವು. ಹೀಗೆ ದೇವರ ಹಾಗೂ ಅವರ ರಾಜ್ಯದ ಮಹಿಮೆಗಾಗಿ ಕರೆದಾತನಿಗೆ ನೀವು ಯೋಗ್ಯರಾಗಿ ನಡೆಯಬೇಕೆಂದು ಸಾಕ್ಷಿ ಹೇಳಿದೆವೆಂಬುದು ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಧೈರ್ಯಪಡಿಸುತ್ತಾ ತನ್ನ ರಾಜ್ಯದಲ್ಲಿ ಮತ್ತು ಆತನ ಮಹಿಮೆಯಲ್ಲಿ ಪಾಲುಗಾರರಾಗುವುದಕ್ಕಾಗಿ ಕರೆಯುವ ದೇವರಿಗೆ ತಕ್ಕಹಾಗೆ ಯೋಗ್ಯರಾಗಿ ನೀವು ಜೀವಿಸಬೇಕೆಂದು ವಿಧಿಸಿದೆವೆಂಬುದು ನಿಮಗೇ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತಮ್ಮ ರಾಜ್ಯ ಹಾಗೂ ವೈಭವದಲ್ಲಿ ಭಾಗವಹಿಸಲು ಕರೆಯಿತ್ತ ದೇವರು ಮೆಚ್ಚುವಂತೆ ಬಾಳಬೇಕೆಂದು ನಿಮಗೆ ವಿಧಿಸಿದೆವು; ಇದೆಲ್ಲಾ ನಿಮಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತನ್ನ ರಾಜ್ಯಪ್ರಭಾವಗಳಲ್ಲಿ ಪಾಲುಗಾರರಾಗುವದಕ್ಕೆ ಕರೆಯುವ ದೇವರಿಗೆ ಯೋಗ್ಯರಾಗಿ ನೀವು ನಡೆಯಬೇಕೆಂದು ಖಂಡಿತವಾಗಿ ಹೇಳುತ್ತಾ ಇದ್ದೆವೆಂಬದು ನಿಮಗೇ ತಿಳಿದದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿಮ್ಮನ್ನು ಬಲಗೊಳಿಸಿದೆವು ಮತ್ತು ಸಂತೈಸಿದೆವು. ನಿಮ್ಮನ್ನು ತನ್ನ ರಾಜ್ಯಕ್ಕೂ ಮಹಿಮೆಗೂ ಕರೆದ ದೇವರಿಗಾಗಿ ಯೋಗ್ಯವಾದ ರೀತಿಯಲ್ಲಿ ಜೀವಿಸಿರಿ ಎಂದು ನಾವು ನಿಮಗೆ ತಿಳಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತುಮ್ಕಾ ಹರಿಎಕ್ಲ್ಯಾಕ್ನಿ ಅಮಿ ಉಮ್ಮೆದ್ ದಿಲಾಂವ್, ಅನಿ ಸಮಾದಾನ್ ಸಾಂಗ್ಲಾಂವ್ ಅನಿ ಅಪ್ನಾಚ್ಯಾ ರಾಜಾತ್ ಅನಿ ಮಹಿಮೆತ್ ಭಾಗ್ ಘೆವ್ಕ್ ಮನುನ್ ಬಲ್ವಲ್ಲ್ಯಾ ದೆವಾಕ್ ಪಸಂದ್ ಯೆಯ್ ಸಾರ್ಕೆ; ತುಮ್ಚಿ ಜಿವನಾ ಚಾಲ್ವುನ್ ಘೆವ್ನ್ ಜಾವ್ಚೆ ಮನುನ್ ಅಮಿ ತುಮ್ಚೆಕ್ಡೆ ಮಾಗ್ಲಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:12
29 ತಿಳಿವುಗಳ ಹೋಲಿಕೆ  

ಆದ್ದರಿಂದ ನೀವು ಸ್ವೀಕರಿಸಿದ ನಿಮ್ಮ ಕರೆಯುವಿಕೆಗೆ ಯೋಗ್ಯರಾಗಿ ಬಾಳಬೇಕೆಂದು ಕರ್ತನ ಸೆರೆಯಾಳಾದ ನಾನು ನಿಮ್ಮನ್ನು ಪ್ರಬೋಧಿಸುತ್ತೇನೆ.


ದೇವರಲ್ಲಿ ನೆಲೆಗೊಂಡವನಾಗಿದ್ದೇನೆಂದು ಹೇಳುವವನು ಯೇಸು ಜೀವಿಸಿದಂತೆಯೇ ತಾನೂ ಜೀವಿಸಬೇಕು.


ಹೀಗೆ ನಿಮ್ಮ ಅನುದಿನದ ಜೀವನವು ಹೊರಗಿನವರ ಮುಂದೆ ಯೋಗ್ಯವಾಗಿರುವುದು ಮತ್ತು ನೀವು ಯಾರ ಮೇಲೆಯೂ ಆತುಕೊಳ್ಳದೆ ಬಾಳುವಿರಿ.


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ನಿಮ್ಮನ್ನು ಕರೆಯುವ ದೇವರು ನಂಬಿಗಸ್ತರು, ಅವರೇ ಅದನ್ನು ಸಾಧಿಸುವವರೂ ಆಗಿದ್ದಾರೆ.


ಕರ್ತ ಯೇಸುವಿಗೆ ಯೋಗ್ಯರಾಗಿ ಜೀವಿಸಿ ಎಲ್ಲಾ ವಿಧದಲ್ಲಿ ಅವರನ್ನೇ ಮೆಚ್ಚಿಸುವವರಾಗಿರಬೇಕೆಂತಲೂ ನೀವು ಸಕಲ ಸತ್ಕಾರ್ಯದಲ್ಲಿ ಫಲಕೊಡುತ್ತಾ ದೇವರ ತಿಳುವಳಿಕೆಯಲ್ಲಿ ವೃದ್ಧಿಯಾಗುತ್ತಿರಬೇಕೆಂತಲೂ


ನೀವು ಹಿಂದೊಮ್ಮೆ ಕತ್ತಲೆಯಾಗಿದ್ದಿರಿ. ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿದ್ದೀರಿ. ಬೆಳಕಿನ ಮಕ್ಕಳಾಗಿ ಬಾಳಿರಿ.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಪ್ರಿಯರೇ, ನೀವು ಹೇಗೆ ನಡೆದುಕೊಂಡು ದೇವರನ್ನು ಮೆಚ್ಚಿಸಬೇಕೆಂದು ನಮ್ಮಿಂದ ಕೇಳಿದಂತೆಯೇ ಜೀವಿಸುತಿರುವಿರಿ. ಇದರಲ್ಲಿ ನೀವು ಹೆಚ್ಚೆಚ್ಚಾಗಿ ಮಾಡಬೇಕೆಂದು ನಾವು ಕಡೆಯದಾಗಿ ನಮಗೆ ಕರ್ತ ಆಗಿರುವ ಯೇಸುವಿನಲ್ಲಿ ನಿಮ್ಮನ್ನು ಪ್ರಬೋಧಿಸುತ್ತೇವೆ ಮತ್ತು ಉತ್ತೇಜಿಸುತ್ತೇವೆ.


ಆದ್ದರಿಂದ ನೀವು ಕ್ರಿಸ್ತ ಯೇಸುವನ್ನು ಕರ್ತ ಎಂದು ಅಂಗೀಕರಿಸಿದಂತೆಯೇ ಅವರಲ್ಲಿ ಬಾಳಿರಿ.


ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.


ನಾನು ಹೇಳುವುದೇನೆಂದರೆ, ಪವಿತ್ರಾತ್ಮರ ನಡೆಸುವಿಕೆಯಿಂದ ಬಾಳಿರಿ, ಆಗ ನೀವು ದೈಹಿಕ ಆಸೆಗಳನ್ನು ಎಂದೂ ಪೂರೈಸಲಾರಿರಿ.


ತಮ್ಮ ಪುತ್ರರೂ ನಮ್ಮ ಕರ್ತ ದೇವರೂ ಆಗಿರುವ ಕ್ರಿಸ್ತ ಯೇಸುವಿನ ಅನ್ಯೋನ್ಯತೆಗೆ ನಿಮ್ಮನ್ನು ಕರೆದ ದೇವರು ಪ್ರಾಮಾಣಿಕರು.


ಏನೇ ಸಂಭವಿಸಿದರೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿ, ದೂರದಲ್ಲಿದ್ದು ನಿಮ್ಮ ವಿಷಯವಾಗಿ ಕೇಳಿದರೂ ಸರಿ, ನೀವು ಒಂದೇ ಆತ್ಮದಲ್ಲಿ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗಾಗಿ ಒಂದೇ ಮನಸ್ಸಿನಿಂದ ಒಟ್ಟಿಗೆ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಅಪಕಾರಕ್ಕೆ ಅಪಕಾರವನ್ನೂ ನಿಂದೆಗೆ ನಿಂದೆಯನ್ನೂ ಮಾಡದೆ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದರಲ್ಲವೇ? ಹೀಗೆ ಮಾಡುವವರಾದ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರೆಂದು ನಿಮಗೆ ತಿಳಿದಿದೆಯಲ್ಲಾ.


ದೇವರು ನಮ್ಮ ಕ್ರಿಯೆಗಳಿಗನುಸಾರವಾಗಿ ಅಲ್ಲ, ತಮ್ಮ ಸ್ವಂತ ಸಂಕಲ್ಪ ಮತ್ತು ಕೃಪೆಯ ಪ್ರಕಾರ ನಮ್ಮನ್ನು ರಕ್ಷಿಸಿ ಪರಿಶುದ್ಧವಾದ ಜೀವಿತಕ್ಕೆ ನಮ್ಮನ್ನು ಕರೆದರು. ಈ ಕೃಪೆಯು ಕಾಲದ ಆರಂಭಕ್ಕೆ ಮುಂಚೆಯೇ ಕ್ರಿಸ್ತ ಯೇಸುವಿನಲ್ಲಿ ನಮಗೆ ಕೊಡಲಾಯಿತು.


ದೇವರನ್ನು ಪ್ರೀತಿಸಿ ದೇವರ ಉದ್ದೇಶಕ್ಕೆ ಅನುಸಾರವಾಗಿ ಕರೆಹೊಂದಿದವರಿಗೆ ಸಕಲವನ್ನು ಒಳ್ಳೆಯದಕ್ಕಾಗಿಯೇ ದೇವರು ಮಾಡುವರು, ಎಂದು ನಮಗೆ ಗೊತ್ತಿದೆ.


ಆದರೆ ದೇವರು ಯಾರನ್ನು ಮುಂದಾಗಿ ನೇಮಿಸಿದರೋ, ಅವರನ್ನು ಕರೆದರು; ಯಾರನ್ನು ಕರೆದರೋ, ಅವರನ್ನು ನೀತಿವಂತರೆಂದು ನಿರ್ಣಯಿಸಿದರು; ಯಾರನ್ನು ನೀತಿವಂತರೆಂದು ನಿರ್ಣಯಿಸಿದರೋ ಅವರನ್ನು ಮಹಿಮೆಪಡಿಸಿದರು.


ಮೆತೂಷೆಲಹನು ಹುಟ್ಟಿದ ತರುವಾಯ, ಹನೋಕನು ಮುನ್ನೂರು ವರ್ಷ ದೇವರೊಂದಿಗೆ ನಡೆದನು. ಅವನಿಂದ ಗಂಡು, ಹೆಣ್ಣುಮಕ್ಕಳು ಹುಟ್ಟಿದರು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು.


ದೇವರು ತಮ್ಮ ಸ್ವಂತ ಮಹಿಮೆಗಾಗಿಯೂ ಸದ್ಗುಣಕ್ಕಾಗಿಯೂ ನಮ್ಮನ್ನು ಕರೆದಿದ್ದಾರೆ. ಏಕೆಂದರೆ, ದೇವರ ತಿಳುವಳಿಕೆಯ ಮೂಲಕವಾಗಿ ಜೀವಕ್ಕೂ, ಭಕ್ತಿಗೂ ಬೇಕಾದದ್ದೆಲ್ಲವುಗಳನ್ನು ದೇವರ ಶಕ್ತಿಯು ನಮಗೆ ಕೊಡಲಾಗಿದೆ.


ಅವರು ಸಭೆಯ ಮುಂದೆ ನಿನ್ನ ಪ್ರೀತಿಗೆ ಸಾಕ್ಷಿ ಹೇಳಿದರು. ಅವರನ್ನು ನೀನು ದೇವರು ಮೆಚ್ಚುವ ರೀತಿಯಲ್ಲಿ ಸಾಗಕಳುಹಿಸಿದರೆ ನೀನು ಒಳ್ಳೆಯದನ್ನು ಮಾಡುತ್ತೀ.


ತನ್ನ ತಂದೆಯ ದೇವರನ್ನು ಹುಡುಕಿ, ಇಸ್ರಾಯೇಲಿನ ಕ್ರಿಯೆಗಳ ಪ್ರಕಾರ ನಡೆಯದೆ, ದೇವರ ಆಜ್ಞೆಗಳಲ್ಲಿ ನಡೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು