Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:14 - ಕನ್ನಡ ಸಮಕಾಲಿಕ ಅನುವಾದ

14 ಪ್ರಿಯರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನೇ ನೀವೂ ಸಹ ನಿಮ್ಮ ಸ್ವದೇಶಿಯರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಸಹೋದರರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳನ್ನು ಅನುಸರಿಸಿದಿರಿ. ಕ್ರಿಸ್ತಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಯೆಹೂದ್ಯರಿಂದ ಅನುಭವಿಸಿದಂಥ ಹಿಂಸೆಯನ್ನು, ನೀವೂ ಸ್ವಜನರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಸಹೋದರ ಸಹೋದರಿಯರೇ, ನೀವು ಜುದೇಯದಲ್ಲಿರುವ ದೇವರ ಸಭೆಗಳಂತಿದ್ದೀರಿ. ಕ್ರಿಸ್ತ ಯೇಸುವಿನಲ್ಲಿ ವಿಶ್ವಾಸವಿಟ್ಟಿರುವ ಅವರು ಇತರ ಯೆಹೂದ್ಯರಿಂದ ಹಿಂಸಿಸಲ್ಪಟ್ಟರು. ಅದೇ ರೀತಿಯಲ್ಲಿ ನೀವೂ ನಿಮ್ಮ ದೇಶದ ಇತರ ಜನರಿಂದ ಹಿಂಸಿಸಲ್ಪಟ್ಟವರಾಗಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮ್ಚ್ಯಾ ಭಾವಾನು ಅನಿ ಭೆನಿಯಾನು, ಕಶೆ ಜುದೆಯಾತ್ಲ್ಯಾ ಕ್ರಿಸ್ತಾ ಜೆಜು ವರ್ತಿ ವಿಶ್ವಾಸ್ ಕರಲ್ಲ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಜುದೆವಾನಿ ತರಾಸ್ ದಿಲ್ಯಾನಿ ಅನಿ ತೆನಿ ಕಸ್ಟ್ ಸೊಸ್ಲ್ಯಾನಿ, ತಸೆ ತುಮಿಬಿ ತುಮ್ಚ್ಯಾಚ್ ಲೊಕಾನಿಕ್ನಾ ತರಾಸ್ ಸೊಸ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:14
26 ತಿಳಿವುಗಳ ಹೋಲಿಕೆ  

ನಾವು ನಿಮ್ಮ ಬಳಿಯಲ್ಲಿದ್ದಾಗ ಸಂಕಟವನ್ನು ಅನುಭವಿಸಲೇಬೇಕೆಂದು ಮುಂದಾಗಿ ಹೇಳಿದೆವಲ್ಲಾ. ಹಾಗೆ ಆಯಿತೆಂದು ನೀವೂ ಚೆನ್ನಾಗಿ ಬಲ್ಲಿರಿ.


ಹೀಗಿರುವುದರಿಂದ, ನೀವು ಸಹಿಸುತ್ತಿರುವ ನಿಮ್ಮ ಎಲ್ಲಾ ಹಿಂಸೆಗಳಲ್ಲಿಯೂ ಸಂಕಟಗಳಲ್ಲಿಯೂ ನಿಮಗೆ ತೋರಿ ಬಂದ ನಿಮ್ಮ ತಾಳ್ಮೆ, ನಂಬಿಕೆಗಳನ್ನು ನೆನೆಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಮ್ಮೆಪಡುತ್ತೇವೆ.


ಆಗ ಕ್ರಿಸ್ತ ಯೇಸುವಿನಲ್ಲಿರುವ ಯೂದಾಯದ ಸಭೆಗಳಿಗೆ ನನ್ನ ಪರಿಚಯವಿರಲಿಲ್ಲ.


ನೀವು ಬಹು ಹಿಂಸೆಯಿಂದಲೂ ಪವಿತ್ರಾತ್ಮ ಪ್ರೇರಿತ ಆನಂದದಿಂದಲೂ ವಾಕ್ಯವನ್ನು ಅಂಗೀಕರಿಸಿ ನಮ್ಮನ್ನೂ ಕರ್ತ ಯೇಸುವನ್ನೂ ಅನುಸರಿಸುವವರಾಗಿದ್ದೀರಿ.


ನಮ್ಮ ತಂದೆ ದೇವರಲ್ಲಿಯೂ, ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ ಪೌಲ, ಸಿಲ್ವಾನ, ತಿಮೊಥೆಯರು ಬರೆಯುವುದು:


ತಂದೆ ದೇವರಲ್ಲಿಯೂ ನಮಗೆ ಕರ್ತ ಆಗಿರುವ ಯೇಸು ಕ್ರಿಸ್ತರಲ್ಲಿಯೂ ಇರುವ ಥೆಸಲೋನಿಕದವರ ಸಭೆಗೆ, ಪೌಲ, ಸಿಲ್ವಾನ ಹಾಗೂ ತಿಮೊಥೆ ಇವರು ಬರೆಯುವ ಪತ್ರ: ನಿಮಗೆ ಕೃಪೆಯೂ ಶಾಂತಿಯೂ ಆಗಲಿ.


ಆದರೂ ಕರ್ತದೇವರು ಪ್ರತಿಯೊಬ್ಬನಿಗೆ ನೇಮಿಸಿದಂತೆಯೂ ದೇವರು ಪ್ರತಿಯೊಬ್ಬನನ್ನು ಕರೆದಂತೆಯೂ ನಡೆದುಕೊಳ್ಳಲಿ. ಎಲ್ಲಾ ಸಭೆಗಳಲ್ಲಿಯೂ ಇರಬೇಕೆಂದು ನಾನು ಕೊಡುವ ನಿಯಮವು ಇದೇ.


ಆದರೆ ಪೌಲನು ದೇವರ ವಾಕ್ಯವನ್ನು ಬೆರೋಯದಲ್ಲಿ ಬೋಧಿಸುತ್ತಿದ್ದಾನೆಂಬುದು ಥೆಸಲೋನಿಕದಲ್ಲಿದ್ದ ಯೆಹೂದ್ಯರಿಗೆ ತಿಳಿದುಬಂದಾಗ ಅವರು ಅಲ್ಲಿಗೂ ಬಂದು, ಜನಸಮೂಹವನ್ನು ಪ್ರಚೋದಿಸಿ ಗಲಭೆ ಎಬ್ಬಿಸಿದರು.


ಸ್ತೆಫನನ ಮರಣದ ನಂತರ ಸಂಭವಿಸಿದ ಹಿಂಸೆಯ ನಿಮಿತ್ತ ಚದರಿಹೋದವರು ಫೊಯಿನಿಕೆ, ಸೈಪ್ರಸ್ ಮತ್ತು ಅಂತಿಯೋಕ್ಯದವರೆಗೆ ಪ್ರಯಾಣಮಾಡಿದರು. ಹೀಗೆ ಅವರು ಯೆಹೂದ್ಯರಿಗೆ ಮಾತ್ರವೇ ವಾಕ್ಯವನ್ನು ಸಾರಿದರು.


ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.


ಆಗ ಅನನೀಯನು, “ಸ್ವಾಮಿ, ಈ ಮನುಷ್ಯನ ಬಗ್ಗೆ ಬಹಳ ಕೇಳಿದ್ದೇನೆ. ಯೆರೂಸಲೇಮಿನಲ್ಲಿ ನಿಮ್ಮ ಭಕ್ತರಿಗೆ ಬಹಳ ಕೇಡು ಮಾಡಿದ್ದಾನೆ.


ಇಷ್ಟರಲ್ಲಿ, ಸೌಲನು ಕರ್ತ ಯೇಸುವಿನ ಶಿಷ್ಯರನ್ನು ಕೊಲೆಮಾಡುವ ಬೆದರಿಕೆಯನ್ನು ಹಾಕುತ್ತಲೇ ಇನ್ನೂ ಮುಂದುವರೆದನು. ಮಹಾಯಾಜಕನ ಬಳಿಗೆ ಹೋಗಿ,


ಸೌಲನು ಸ್ತೆಫನನ ಕೊಲೆಗೆ ಸಮ್ಮತಿಸಿದ್ದನು. ಆ ದಿನವೇ ಯೆರೂಸಲೇಮಿನ ಸಭೆಗೆ ವಿರೋಧವಾಗಿ ಮಹಾಹಿಂಸೆ ಪ್ರಾರಂಭವಾಯಿತು, ಅಪೊಸ್ತಲರನ್ನು ಬಿಟ್ಟು ಉಳಿದವರೆಲ್ಲರೂ ಯೂದಾಯ ಮತ್ತು ಸಮಾರ್ಯ ಪ್ರಾಂತಗಳಿಗೆ ಚದರಿಹೋದರು.


ಆದರೆ ಸೌಲನು ಸಭೆಯನ್ನು ಹಾಳುಮಾಡಲು ಪ್ರಾರಂಭಿಸಿದನು. ಅವನು ಮನೆಮನೆಗಳಿಗೆ ಹೋಗಿ ಸ್ತ್ರೀಪುರುಷರನ್ನು ಹೊರಗೆಳೆದು ಅವರನ್ನು ಸೆರೆಮನೆಯಲ್ಲಿ ಹಾಕಿಸಿದನು.


ಆದರೆ ಯೆಹೂದ್ಯರು, ಆರಾಧಕರಾಗಿದ್ದ ಮಾನ್ಯರಾದ ಸ್ತ್ರೀಯರನ್ನೂ ನಗರದ ಗಣ್ಯ ನಾಯಕರನ್ನೂ ಪ್ರೇರೇಪಿಸಿ, ಪೌಲ, ಬಾರ್ನಬರ ಮೇಲೆ ಹಿಂಸೆಯನ್ನು ಎಬ್ಬಿಸಿ ತಮ್ಮ ಪ್ರದೇಶದಿಂದ ಹೊರಗೋಡಿಸಿದರು.


ಆದರೆ ನಂಬಲು ನಿರಾಕರಿಸಿದ ಯೆಹೂದ್ಯರು ಯೆಹೂದ್ಯರಲ್ಲದವರ ಮನಸ್ಸನ್ನು ಕೆಡಿಸಿ, ಸಹೋದರರ ಮೇಲೆ ವಿರೋಧ ಭಾವನೆ ಹುಟ್ಟಿಸಿದರು.


ಆದರೆ ಪಟ್ಟಣದ ಜನರಲ್ಲಿ ಭಿನ್ನಾಭಿಪ್ರಾಯಗಳಾದವು. ಕೆಲವರು ಯೆಹೂದ್ಯರ ಪರವಾದರು, ಇನ್ನೂ ಕೆಲವರು ಅಪೊಸ್ತಲರ ಪರವಾದರು.


ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ನಾಯಕರನ್ನು ಕೂಡಿಕೊಂಡು ಪೌಲ, ಬಾರ್ನಬರನ್ನು ಅವಮಾನ ಮಾಡಿ ಅವರ ಮೇಲೆ ಕಲ್ಲೆಸೆಯಬೇಕೆಂದು ನುಗ್ಗಿದಾಗ,


ಅದೇ ಸಮಯದಲ್ಲಿ ಅಂತಿಯೋಕ್ಯ ಮತ್ತು ಇಕೋನ್ಯದಿಂದ ಕೆಲವು ಜನ ಯೆಹೂದ್ಯರು ಬಂದು ಜನಸಮೂಹವನ್ನು ತಮ್ಮ ಕಡೆಗೆ ಒಲಿಸಿಕೊಂಡು, ಪೌಲನ ಮೇಲೆ ಕಲ್ಲೆಸೆಯಲು, ಅವನು ಸತ್ತನೆಂದು ಭಾವಿಸಿ ಅವನನ್ನು ಊರ ಹೊರಗೆ ಎಳೆದು ಹಾಕಿದರು.


ಗಲ್ಲಿಯೋನ ಎಂಬುವನು ಅಖಾಯದ ರಾಜ್ಯಪಾಲನಾಗಿದ್ದನು. ಯೆಹೂದ್ಯರು ಒಟ್ಟುಗೂಡಿ ಪೌಲನನ್ನು ವಿರೋಧಿಸಿ, ಅವನನ್ನು ನ್ಯಾಯಸ್ಥಾನಕ್ಕೆ ಕರೆದುಕೊಂಡು ಬಂದು,


ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ, ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು