Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 2:17 - ಕನ್ನಡ ಸಮಕಾಲಿಕ ಅನುವಾದ

17 ಪ್ರಿಯರೇ, ನಾವು ದೈಹಿಕವಾಗಿ ನಿಮ್ಮನ್ನು ಬಿಟ್ಟು ಸ್ವಲ್ಪಕಾಲ ಅಗಲಿದರೂ ಹೃದಯದಲ್ಲಿ ಅಗಲದೆ, ನಿಮ್ಮ ಮುಖವನ್ನು ಕಾಣಲು ಅತ್ಯಾಶೆಯಿಂದ ಬಹಳ ಪ್ರಯತ್ನ ಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸಹೋದರರೇ, ನಾವಂತೂ ಸ್ವಲ್ಪಕಾಲ ಮಾತ್ರ ನಿಮ್ಮಿಂದ ದೂರವಾಗಿದ್ದರೂ ಹೃದಯದಲ್ಲಿ ಅಗಲದೆ ನಿಮ್ಮನ್ನು ಮುಖಾಮುಖಿಯಾಗಿ ನೋಡುವುದಕ್ಕೆ ಅತಿಯಾದ ಆಸೆಯಿಂದ ಬಹಳ ಪ್ರಯತ್ನಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸಹೋದರರೇ, ನಾವು ದೈಹಿಕವಾಗಿ ನಿಮ್ಮಿಂದ ಸ್ವಲ್ಪಕಾಲ ದೂರವಿದ್ದರೂ ಅಂತರಂಗದಲ್ಲಿ ನಿಮ್ಮೊಡನೆಯೇ ಇದ್ದೆವು; ನಿಮ್ಮನ್ನು ಮುಖಾಮುಖಿಯಾಗಿ ಕಾಣಲು ಪ್ರಯತ್ನಿಸಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸಹೋದರರೇ, ನಾವಂತೂ ದೇಹದಲ್ಲಿ ಮಾತ್ರ ನಿಮ್ಮನ್ನು ಸ್ವಲ್ಪಕಾಲ ಅಗಲಿದರೂ ಹೃದಯದಲ್ಲಿ ಅಗಲದೆ ನಿಮ್ಮ ಮುಖವನ್ನು ನೋಡುವದಕ್ಕೆ ಅತ್ಯಾಶೆಯಿಂದ ಬಹಳ ಪ್ರಯತ್ನಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸಹೋದರ ಸಹೋದರಿಯರೇ, ನಿಮ್ಮಿಂದ ಸ್ವಲ್ಪಕಾಲ ಅಗಲಿ ಹೋಗಿದ್ದೆವು. (ನಾವು ನಿಮ್ಮೊಡನೆ ಇರಲಿಲ್ಲ. ಆದರೆ ನಮ್ಮ ಆಲೋಚನೆಗಳು ನಿಮ್ಮೊಡನೆ ಇನ್ನೂ ಇವೆ.) ನಿಮ್ಮನ್ನು ನೋಡಲು ಅತ್ಯಾಸೆಯಿಂದ ಬಹಳ ಪ್ರಯತ್ನಪಟ್ಟೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅಮ್ಕಾ ತರ್, ಭಾವಾನು ಅನಿ ಭೆನಿಯಾನು, ಎಕ್ ಉಲ್ಲೊ ಎಳ್ ಅಮಿ ತುಮ್ಚ್ಯಾಕ್ನಾ ಧುರ್ ಹೊಲಾಂವ್ ಹೊಯ್, ತಸೆ ಮಟ್ಲ್ಯಾರ್, ದೊಳ್ಯಾಂಚ್ಯಾ ಇದ್ರಾಕ್ ನಾವ್ ತವ್ಡೆಚ್, ಅಮ್ಚಿ ಮನಾ ಕನ್ನಾಬಿ ತುಮ್ಚ್ಯಾ ವಾಂಗ್ಡಾಚ್ ಹಾತ್. ಅಶೆ ಅಮಿ ಧುರ್ ಹಾವ್, ಖರೆ ಅನಿ ಎಗ್ದಾ ತುಮ್ಕಾ ಭೆಟುಚೆ ಮನ್ತಲಿ ಆಶಾ ಲೈ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 2:17
16 ತಿಳಿವುಗಳ ಹೋಲಿಕೆ  

ನಾನು ಶಾರೀರಿಕವಾಗಿ ನಿಮ್ಮಿಂದ ದೂರವಾಗಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದು ನೀವು ಎಷ್ಟು ಕ್ರಮವುಳ್ಳವರೆಂಬುದನ್ನೂ, ಕ್ರಿಸ್ತ ಯೇಸುವಿನಲ್ಲಿ ನಿಮ್ಮ ವಿಶ್ವಾಸ ಎಷ್ಟು ದೃಢವಾಗಿದೆ ಎಂಬುದನ್ನೂ, ನೋಡಿ ನನಗೆ ಆನಂದವಾಗುತ್ತದೆ.


ನಾನು ಸ್ವತಃ ನಿಮ್ಮ ಮಧ್ಯದಲ್ಲಿ ಇರದಿದ್ದರೂ ಆತ್ಮದಲ್ಲಿ ನಿಮ್ಮೊಂದಿಗಿದ್ದೇನೆ. ಈ ಕಾರ್ಯಮಾಡಿದವನ ಮೇಲೆ ಆಗಲೇ ಹತ್ತಿರವಿದ್ದವನಂತೆ ನಮಗೆ ಕರ್ತ ಆಗಿರುವ ಯೇಸುವಿನ ಹೆಸರಿನಲ್ಲಿ ತೀರ್ಪುಮಾಡಿದ್ದೇನೆ.


ತಿಮೊಥೆಯನು ಈಗಲೇ ನಿಮ್ಮಿಂದ ನಮ್ಮ ಬಳಿಗೆ ಬಂದು ನಿಮ್ಮ ವಿಶ್ವಾಸ ಹಾಗೂ ಪ್ರೀತಿಯ ವಿಷಯವಾಗಿ ಒಳ್ಳೆಯ ವರ್ತಮಾನವನ್ನು ತಂದಿದ್ದಾನೆ. ನೀವು ನಮ್ಮನ್ನು ಯಾವಾಗಲೂ ಚೆನ್ನಾಗಿ ನೆನಪಿಸಿಕೊಂಡು, ನಾವು ನಿಮ್ಮನ್ನು ಹೇಗೋ ಹಾಗೆಯೇ ನೀವೂ ನಮ್ಮನ್ನು ನೋಡುವುದಕ್ಕೆ ಹಾರೈಸುತ್ತೀರೆಂಬುದನ್ನು ತಿಳಿಸಿದ್ದಾನೆ.


ಪ್ರಿಯರೇ, ನನ್ನ ಸೇವೆಯು ಯೆಹೂದ್ಯರಲ್ಲದವರಲ್ಲಿ ಫಲಉಂಟಾದಂತೆ ನಿಮ್ಮಲ್ಲಿಯೂ ಫಲಉಂಟಾಗಬೇಕೆಂದು ನಿಮ್ಮ ಬಳಿಗೆ ಬರುವುದಕ್ಕೆ ಅನೇಕಾವರ್ತಿ ಉದ್ದೇಶಿಸಿದೆನು. ಆದರೆ ಅದಕ್ಕೆ ಇಂದಿನವರೆಗೂ ಅಡ್ಡಿಯಾಯಿತೆಂದು ನಿಮಗೆ ತಿಳಿದಿರಬೇಕೆಂಬುದು ನನ್ನ ಅಪೇಕ್ಷೆ.


ಈಗಲಾದರೋ ಈ ಪ್ರದೇಶದಲ್ಲಿ ನನಗೆ ಅವಕಾಶವಿಲ್ಲದಿರುವುದರಿಂದಲೂ ಅನೇಕ ವರ್ಷಗಳಿಂದ ನಿಮ್ಮನ್ನು ಸಂದರ್ಶಿಸಬೇಕೆಂಬ ಹಂಬಲವಿರುವುದರಿಂದಲೂ


ಆಗ ಯೇಸು ಅವರಿಗೆ, “ನಾನು ಬಾಧೆಯನ್ನು ಅನುಭವಿಸುವುದಕ್ಕಿಂತ ಮುಂಚೆ ನಿಮ್ಮ ಸಂಗಡ ಈ ಪಸ್ಕಭೋಜನ ಮಾಡುವುದಕ್ಕೆ ಕುತೂಹಲದಿಂದ ಅಪೇಕ್ಷಿಸಿದ್ದೇನೆ.


ದೇವರೇ, ನನ್ನ ದೇವರು ನೀವೇ, ನಿಮ್ಮನ್ನು ಕುತೂಹಲದಿಂದ ಹುಡುಕುತ್ತಿದ್ದೇನೆ. ನಾನು ನಿಮಗಾಗಿ ದಾಹಗೊಂಡಿದ್ದೇನೆ. ನೀರಿಲ್ಲದೆ ಭೂಮಿಯಲ್ಲಿದ್ದವನು ಹೇಗೆ ನೀರಿಗಾಗಿ ಹಾತೊರೆವಂತೆ ನನ್ನ ಇಡೀ ಸರ್ವಸ್ವವೂ ನಿಮಗಾಗಿ ದಾಹಗೊಂಡಿರುತ್ತದೆ. ನಾನು ನಿಮ್ಮನ್ನೇ ಅಪೇಕ್ಷಿಸುತ್ತಿದ್ದೇನೆ.


ರಾತ್ರಿಯಾದ ಕೂಡಲೇ, ಸಹೋದರರು ಪೌಲ, ಸೀಲರನ್ನು ಬೆರೋಯಕ್ಕೆ ಕಳುಹಿಸಿದರು. ಅಲ್ಲಿಗೆ ಅವರು ತಲುಪಿದಾಗ ಅಲ್ಲಿಯೂ ಯೆಹೂದ್ಯರ ಸಭಾಮಂದಿರಕ್ಕೆ ಹೋದರು.


ಆದರೆ ಎಲೀಷನು ಅವನಿಗೆ, “ಆ ಮನುಷ್ಯನು ನಿನ್ನನ್ನು ಎದುರುಗೊಳ್ಳಲು ತನ್ನ ರಥದಿಂದ ಇಳಿದು ನಿನ್ನ ಬಳಿಗೆ ಬಂದಾಗ, ನನ್ನ ಹೃದಯವು ನಿನ್ನ ಸಂಗಡ ಹೋಗಲಿಲ್ಲವೋ? ಹಣವನ್ನೂ, ವಸ್ತ್ರಗಳನ್ನೂ, ದ್ರವ್ಯವನ್ನೂ, ಹಿಪ್ಪೆಯ ತೋಪುಗಳನ್ನೂ, ದ್ರಾಕ್ಷಿಯ ತೋಟಗಳನ್ನೂ, ಕುರಿದನಗಳನ್ನೂ, ದಾಸದಾಸಿಯರನ್ನೂ ಪಡೆದುಕೊಳ್ಳುವುದಕ್ಕೆ ಇದು ಸಮಯವೋ?


ಆದರೆ ಅರಸನಾದ ದಾವೀದನು ಅಮ್ನೋನನ ಸಾವಿನ ದುಃಖ ಶಮನವಾದ ಮೇಲೆ ಅಬ್ಷಾಲೋಮನ ಬಳಿಗೆ ಹೋಗಲು ಬಯಸಿದನು.


ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಮುಖವನ್ನು ಕಾಣುವೆನೆಂದು ನಾನು ನೆನಸಿರಲಿಲ್ಲ. ಆದರೆ ನಿನ್ನ ಸಂತಾನವನ್ನು ಸಹ ದೇವರು ನನಗೆ ಕಾಣುವಂತೆ ಅನುಗ್ರಹಿಸಿದ್ದಾನೆ,” ಎಂದನು.


ಕೊನೆಗೆ ಇಸ್ರಾಯೇಲನು, “ನನ್ನ ಮಗ ಯೋಸೇಫನು ಇನ್ನೂ ಜೀವಂತವಾಗಿದ್ದಾನೆ, ಅಷ್ಟೇ ಸಾಕು! ನಾನು ಸಾಯುವುದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು.


ಈಗ ನೀನು ನಿನ್ನ ತಂದೆಯ ಮನೆಯನ್ನು ಬಹಳವಾಗಿ ಹಾರೈಸಿದ್ದರಿಂದ ಹೋಗಬೇಕಾಯಿತು. ಆದರೆ ನೀನು ನನ್ನ ದೇವರುಗಳನ್ನು ಕದ್ದದ್ದು ಯಾಕೆ?” ಎಂದನು.


ನೀನು ನಿನ್ನ ವಿರೋಧಿಯ ಸಂಗಡ ನ್ಯಾಯಾಧಿಪತಿಯ ಎದುರಿಗೆ ಹೋಗುವಾಗ, ಮಾರ್ಗದಲ್ಲಿಯೇ ಅವನಿಂದ ವ್ಯಾಜ್ಯ ಬಗೆಹರಿಸಿಕೊಳ್ಳಲು ಪ್ರಯತ್ನ ಮಾಡು, ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಬಲವಂತವಾಗಿ ಎಳೆಯಬಹುದು, ಆಗ ನ್ಯಾಯಾಧಿಪತಿಯು ನಿನ್ನನ್ನು ಸೆರೆಮನೆಯ ಅಧಿಕಾರಿಗೆ ಒಪ್ಪಿಸಬಹುದು ಮತ್ತು ಅಧಿಕಾರಿಯು ನಿನ್ನನ್ನು ಸೆರೆಯಲ್ಲಿ ಹಾಕಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು