Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:13 - ಕನ್ನಡ ಸಮಕಾಲಿಕ ಅನುವಾದ

13 ನಮಗೆ ಕರ್ತ ಆಗಿರುವ ಯೇಸುವು ತಮ್ಮ ಎಲ್ಲಾ ಪರಿಶುದ್ಧರೊಂದಿಗೆ ಬರುವಾಗ, ನೀವು ತಂದೆ ದೇವರ ಮುಂದೆ ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ಬಲಪಡಿಸಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನಮ್ಮ ಕರ್ತನಾದ ಯೇಸು ತನ್ನ ಪರಿಶುದ್ಧ ಪರಿವಾರ ಸಮೇತ ಪುನರಾಗಮಿಸುವಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ, ನಿರ್ದೋಷಿಗಳೂ ಆಗಿರುವಂತೆ ನಿಮ್ಮ ಹೃದಯಗಳನ್ನು ದೃಢಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನಮ್ಮ ಪ್ರಭು ಯೇಸು ನಿಮ್ಮನ್ನು ದೃಢಪಡಿಸಲಿ; ತಮ್ಮ ಪರಿಶುದ್ಧ ಪರಿವಾರದ ಸಮೇತ ಯೇಸು ಪುನರಾಗಮಿಸುವಾಗ, ನಮ್ಮ ಪಿತನಾದ ದೇವರ ಸನ್ನಿಧಾನದಲ್ಲಿ ನೀವೂ ಸಹ ಪರಿಶುದ್ಧರೂ ನಿಷ್ಕಳಂಕರೂ ಆಗಿ ಕಾಣಿಸಿಕೊಳ್ಳುವಂತೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನಮ್ಮ ಕರ್ತನಾದ ಯೇಸು ನಿಮ್ಮ ಹೃದಯಗಳನ್ನು ದೃಢಪಡಿಸಿ ತನ್ನ ಎಲ್ಲಾ ಪರಿಶುದ್ಧ ಪರಿವಾರ ಸಮೇತ ಪ್ರತ್ಯಕ್ಷನಾದಾಗ ತಂದೆಯಾದ ದೇವರ ಸಮಕ್ಷಮದಲ್ಲಿ ನೀವು ಪರಿಶುದ್ಧರೂ ನಿರ್ದೋಷಿಗಳೂ ಆಗಿರುವಂತೆ ಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನಿಮ್ಮ ಹೃದಯಗಳು ಬಲಗೊಳ್ಳಲೆಂದು ಹೀಗೆ ಪ್ರಾರ್ಥಿಸುತ್ತೇವೆ. ನಮ್ಮ ಪ್ರಭುವಾದ ಯೇಸುವು ತನ್ನ ಪವಿತ್ರ ಜನರೊಂದಿಗೆ ಪ್ರತ್ಯಕ್ಷನಾದಾಗ ನೀವು ತಂದೆಯಾದ ದೇವರ ಸನ್ನಿಧಿಯಲ್ಲಿ ಪರಿಶುದ್ಧರೂ ತಪ್ಪಿಲ್ಲದವರೂ ಆಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಅಸೆ, ಅಮ್ಚೊ ಧನಿ ಜೆಜು ಕ್ರಿಸ್ತ್ ಅಪ್ನಾಚ್ಯಾ ಸಗ್ಳ್ಯಾ ಭಕ್ತಾಂಚ್ಯಾ ವಾಂಗ್ಡಾ ದಿಸ್ತಾನಾ, ದೆವಾ ಅಮ್ಚ್ಯಾ ಬಾಬಾಚ್ಯಾ ಇದ್ರಾಕ್ ತುಮಿ ಪವಿತ್ರ್ ಅನಿ ಪರಿಪುರ್ನ್ ಹೊವ್ನ್ ಇಬೆ ರ್‍ಹಾವ್ಕ್ ತೊಚ್ ತುಮ್ಚಿ ಮನಾ ವಿಶ್ವಾಸಾತ್ ಘಟ್ ಕರುಂದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:13
28 ತಿಳಿವುಗಳ ಹೋಲಿಕೆ  

ಸಮಾಧಾನದ ದೇವರು ತಾವಾಗಿಯೇ ನಿಮ್ಮನ್ನು ಪರಿಪೂರ್ಣವಾಗಿ ಪವಿತ್ರ ಮಾಡಲಿ. ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಪುನರಾಗಮನದಲ್ಲಿ ನಿಮ್ಮ ಆತ್ಮ, ಪ್ರಾಣ, ಶರೀರಗಳು ದೋಷವಿಲ್ಲದೆ ಸಂಪೂರ್ಣವಾಗಿ ಸುರಕ್ಷಿತವಾಗಿರಲಿ.


ಈಗಲಾದರೋ ದೇವರು ನಿಮ್ಮನ್ನು ಪರಿಶುದ್ಧರನ್ನಾಗಿಯೂ ನಿರ್ದೋಷಿಗಳನ್ನಾಗಿಯೂ ನಿಂದಾರಹಿತರನ್ನಾಗಿಯೂ ತಮ್ಮ ಸನ್ನಿಧಿಯಲ್ಲಿ ನಿಲ್ಲಿಸಿಕೊಳ್ಳುವಂತೆ, ಕ್ರಿಸ್ತನ ಮಾಂಸದೇಹದ ಮರಣದಿಂದ ಈಗ ನಿಮ್ಮನ್ನು ಸಂಧಾನಪಡಿಸಿಕೊಂಡಿದ್ದಾರೆ.


ಅದನ್ನು ಕಳಂಕ, ಸುಕ್ಕು ಇಂಥದ್ದು ಯಾವುದೂ ಇಲ್ಲದೆ ಪರಿಶುದ್ಧವೂ ದೋಷವಿಲ್ಲದ್ದೂ ಆಗಿರುವ ಮಹಿಮೆಯುಳ್ಳ ಸಭೆಯನ್ನಾಗಿ ತಮ್ಮ ಮುಂದೆ ನಿಲ್ಲಿಸಿಕೊಳ್ಳಬೇಕೆಂದು ತಮ್ಮನ್ನೇ ಒಪ್ಪಿಸಿಕೊಟ್ಟರು.


ನಮಗೆ ಕರ್ತ ಆಗಿರುವ ಯೇಸು ಬರುವಾಗ ಅವರ ಮುಂದೆ ನಮ್ಮ ನಿರೀಕ್ಷೆಯೂ ಆನಂದವೂ ಅಭಿಮಾನದ ಕಿರೀಟವೂ ಯಾರು? ನೀವೇ ಅಲ್ಲವೇ?


ಇಂಥವರ ವಿಷಯದಲ್ಲಿಯೇ ಆದಾಮನಿಂದ ಏಳನೆಯವನಾದ ಹನೋಕನು ಸಹ, “ಇಗೋ, ಕರ್ತದೇವರು ತಮ್ಮ ಅಸಂಖ್ಯಾತ ಪರಿಶುದ್ಧರನ್ನು ಕೂಡಿಕೊಂಡು


ಎಡವಿಬೀಳದಂತೆ ನಿಮ್ಮನ್ನು ಕಾಪಾಡುವುದಕ್ಕೂ ತಮ್ಮ ಪ್ರಭಾವದ ಸಮಕ್ಷಮದಲ್ಲಿ ನಿಮ್ಮನ್ನು ಅತ್ಯಂತ ಹರ್ಷದೊಡನೆ ನಿರ್ದೋಷಿಗಳನ್ನಾಗಿ ನಿಲ್ಲಿಸುವುದಕ್ಕೂ ಶಕ್ತರಾಗಿರುವ


ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗುವಿರಿ. ಏಕೆಂದರೆ ಬೆಟ್ಟಗಳ ತಗ್ಗು ಆಚೆಲಿನವರೆಗೂ ಮುಟ್ಟುವುದು. ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ, ನೀವು ಭೂಕಂಪಕ್ಕೆ ಓಡಿ ಹೋದ ಹಾಗೆ, ಓಡಿಹೋಗುವಿರಿ. ನನ್ನ ದೇವರಾದ ಯೆಹೋವ ದೇವರು ಬರುವರು. ನಿಮ್ಮ ಸಂಗಡ ಪರಿಶುದ್ಧರೆಲ್ಲರು ಸಹ ಬರುವರು.


ಕರ್ತ ಯೇಸುವಿನ ಪುನರಾಗಮನದವರೆಗೆ ಇನ್ನೂ ಜೀವದಿಂದ ಉಳಿದಿರುವ ನಾವು ಮರಣಹೊಂದಿದವರಿಗಿಂತ ಮುಂದಾಗಿ ಪುನರುತ್ಥಾನವಾಗುವುದಿಲ್ಲ ಎಂದು, ನಾವು ಕರ್ತ ಯೇಸುವಿನ ವಾಕ್ಯದ ಆಧಾರದಿಂದ ನಿಮಗೆ ಹೇಳುತ್ತಿದ್ದೇವೆ.


ನಮ್ಮ ತಂದೆಯಾದ ದೇವರೂ ನಮಗೆ ಕರ್ತ ಆಗಿರುವ ಯೇಸುವೂ ನಾವು ನಿಮ್ಮಲ್ಲಿಗೆ ಬರುವಂತೆ ಮಾರ್ಗವನ್ನು ಸುಗಮಗೊಳಿಸಲಿ.


ಆಗ, ಅತ್ಯುತ್ತಮ ಕಾರ್ಯಗಳನ್ನು ನೀವು ವಿವೇಚಿಸಿಕೊಳ್ಳುವಿರಿ. ಕ್ರಿಸ್ತನ ಪುನರಾಗಮನ ದಿನದವರೆಗೆ ನೀವು ಪರಿಶುದ್ಧರಾಗಿಯೂ ನಿರ್ದೋಷಿಗಳಾಗಿಯೂ ಇರಬೇಕೆಂತಲೂ


“ಯೆಹೋವ ದೇವರು ಸೀನಾಯಿ ಬೆಟ್ಟದಿಂದ ಬಂದು, ಸೇಯೀರಿನಿಂದ ಅವರ ಮೇಲೆ ಉದಯಿಸಿದರು. ಪಾರಾನ್ ಬೆಟ್ಟದಿಂದ ಪ್ರಕಾಶಿಸಿದರು. ದೇವರು ದಕ್ಷಿಣದ ತಮ್ಮ ಪರ್ವತ ಶ್ರೇಣಿಯಿಂದ ಲಕ್ಷಾಂತರ ಪರಿಶುದ್ಧರ ಸಂಗಡ ಬಂದರು.


ಪ್ರಿಯರೇ, ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಬರುವಿಕೆಯನ್ನೂ ನಾವು ಅವರ ಸನ್ನಿಧಿಯಲ್ಲಿ ಒಂದಾಗಿ ಸೇರುವ ವಿಷಯವನ್ನೂ ಕುರಿತು ನಾವು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ಆ ದಿನದಲ್ಲಿ ಕರ್ತ ಯೇಸು ತಮ್ಮ ಪರಿಶುದ್ಧ ಜನರಲ್ಲಿ ಮಹಿಮೆ ಹೊಂದುವವರಾಗಿಯೂ ನಂಬುವವರೆಲ್ಲರನ್ನು ಆಶ್ಚರ್ಯಪಡಿಸುವವರಾಗಿಯೂ ಬರುವರು. ನಮ್ಮ ಸಾಕ್ಷಿಯನ್ನು ನಂಬಿದ್ದರಿಂದ ನಿಮಗೂ ಇವು ಸಂಭವಿಸುವುವು.


ನನ್ನ ಸುವಾರ್ತೆಯು ಹೇಳುವಂತೆಯೇ ನಿಮ್ಮನ್ನು ಬಲಪಡಿಸುವ ದೇವರಿಗೆ ಈಗ ಎಲ್ಲಾ ಮಹಿಮೆಯಾಗಲಿ. ಕ್ರಿಸ್ತ ಯೇಸುವಿನ ಕುರಿತಾಗಿರುವ ಈ ಸಂದೇಶವು ಆದಿಯಿಂದಲೂ ಗುಪ್ತವಾಗಿರುವ ರಹಸ್ಯದ ದೇವರ ಯೋಜನೆಯು ಯೆಹೂದ್ಯರಲ್ಲದವರಾದ ನಿಮಗಾಗಿ ಈಗ ಪ್ರಕಟವಾಗಿದೆ.


ಬೇರೊಬ್ಬನ ಮನೆಗೆಲಸದವನನ್ನು ತೀರ್ಪುಮಾಡಲು ನೀನು ಯಾರು? ಅವನು ನಿಂತರೂ ಬಿದ್ದರೂ ಅದು ಅವನ ಯಜಮಾನನಿಗೆ ಸೇರಿದ್ದು. ಅವನನ್ನು ನಿಲ್ಲುವಂತೆ ಮಾಡಲು ಕರ್ತನು ಶಕ್ತನಾಗಿರುವುದರಿಂದ ಅವನು ಎದ್ದು ನಿಲ್ಲುವನು.


ಕ್ರಿಸ್ತ ಯೇಸುವಿನ ಮೂಲಕ ನಿಮ್ಮನ್ನು ತಮ್ಮ ನಿತ್ಯ ಪ್ರಭಾವಕ್ಕೆ ಕರೆದ ಕೃಪಾಪೂರ್ಣ ಆಗಿರುವ ದೇವರು ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ತಾವೇ ನಿಮ್ಮನ್ನು ಪರಿಪೂರ್ಣಮಾಡಿ, ಸ್ಥಿರಪಡಿಸಿ, ಬಲಪಡಿಸಿ ನೆಲೆಗೊಳಿಸುವರು.


ಆದರೆ ಒಬ್ಬೊಬ್ಬರು ತಮ್ಮ ತಮ್ಮ ಕ್ರಮದ ಅನುಸಾರವಾಗಿ ಎದ್ದು ಬರುವರು. ಪ್ರಥಮಫಲವಾಗಿ ಕ್ರಿಸ್ತನು, ತರುವಾಯ ಕ್ರಿಸ್ತನ ಪುನರಾಗಮನದಲ್ಲಿ ಕ್ರಿಸ್ತನಿಗೆ ಸೇರಿದವರು ಎದ್ದು ಬರುವರು.


“ಮನುಷ್ಯಪುತ್ರನಾದ ನಾನು ಮಹಿಮೆಯಲ್ಲಿ ಎಲ್ಲಾ ಪರಿಶುದ್ಧ ದೂತರೊಂದಿಗೆ ಬರುವಾಗ, ನನ್ನ ಮಹಿಮೆಯ ಸಿಂಹಾಸನದ ಮೇಲೆ ಕುಳಿತುಕೊಳ್ಳುವೆನು.


ಯಾರಾದರೂ ವ್ಯಭಿಚಾರದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯವಾಗಿ ನಾಚಿಕೊಳ್ಳುವರೋ ಅವರ ವಿಷಯದಲ್ಲಿ ಮನುಷ್ಯಪುತ್ರನಾದ ನಾನು ಸಹ ನನ್ನ ತಂದೆಯ ಮಹಿಮೆಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿಕೊಳ್ಳುವೆನು,” ಎಂದು ಹೇಳಿದರು.


ಇವರಿಬ್ಬರೂ ಕರ್ತದೇವರ ಎಲ್ಲಾ ಆಜ್ಞೆಗಳನ್ನೂ ತೀರ್ಪುಗಳನ್ನೂ ತಪ್ಪಿಲ್ಲದೆ ಕೈಕೊಂಡು, ದೇವರ ಮುಂದೆ ನೀತಿವಂತರಾಗಿದ್ದರು.


ಈ ಯೇಸುವೇ ನಮ್ಮನ್ನು ಈಗಿನ ದುಷ್ಟ ಯುಗದೊಳಗಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ ನಮ್ಮ ಪಾಪಗಳಿಗಾಗಿ ತಮ್ಮನ್ನೇ ಬಲಿಯಾಗಿ ಒಪ್ಪಿಸಿದರು.


ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.


ಆಮೇಲೆ, ಜೀವದಿಂದ ಉಳಿದಿರುವ ನಾವು ಅವರೊಂದಿಗೆ ಅಂತರಿಕ್ಷದಲ್ಲಿ ಕರ್ತ ಯೇಸುವನ್ನು ಎದುರುಗೊಳ್ಳುವುದಕ್ಕಾಗಿ ಮೇಘಗಳಲ್ಲಿ ಒಯ್ಯಲಾಗುವೆವು. ಹೀಗೆ ನಾವು ಸದಾಕಾಲವೂ ಕರ್ತ ಯೇಸುವಿನ ಜೊತೆಯಲ್ಲಿಯೇ ಇರುವೆವು.


ಸಂಕಟ ಪಡುವವರಾದ ನಿಮಗೆ ನಮ್ಮೊಡನೆ ಉಪಶಮನವನ್ನೂ ಕೊಡುವುದು ದೇವರಿಗೆ ನ್ಯಾಯವಾಗಿದೆ. ನಮಗೆ ಕರ್ತ ಆಗಿರುವ ಯೇಸು ತಮ್ಮ ಶಕ್ತಿಯುತವಾದ ದೂತರೊಂದಿಗೆ ಪರಲೋಕದಿಂದ ಪ್ರಜ್ವಲಿಸುವ ಜ್ವಾಲೆಯಲ್ಲಿ ಪ್ರತ್ಯಕ್ಷರಾಗುವಾಗ ಇದಾಗುವುದು.


ನೀವೂ ದೀರ್ಘಶಾಂತಿಯಿಂದಿರಿ. ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ. ಏಕೆಂದರೆ ಕರ್ತ ಯೇಸುವಿನ ಪುನರಾಗಮನ ಹತ್ತಿರವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು