Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಥೆಸಲೋನಿಕದವರಿಗೆ 3:3 - ಕನ್ನಡ ಸಮಕಾಲಿಕ ಅನುವಾದ

3 ಹೀಗಿರುವಲ್ಲಿ ಈ ಸಂಕಟಗಳಿಂದ ಒಬ್ಬರೂ ಚಂಚಲರಾಗಬೇಡಿರಿ. ಏಕೆಂದರೆ ಇವುಗಳಿಗಾಗಿಯೇ ನಾವು ನೇಮಕವಾಗಿದ್ದೇವೆ ಎಂದು ನೀವೇ ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಸಂಕಟಗಳನ್ನು ಅನುಭವಿಸುವುದಕ್ಕಾಗಿಯೇ ನಾವು ನೇಮಿಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ನಿಮಗೆ ಬಂದೊದಗಿರುವ ವಿಪತ್ತುಗಳಿಂದ ನೀವು ಯಾರೂ ಚಂಚಲರಾಗದಂತೆ ದೃಢಪಡಿಸುವನು. ಇಂಥ ವಿಪತ್ತುಗಳು ನಮ್ಮ ಪಾಲಿಗೆ ಕಟ್ಟಿಟ್ಟಬುತ್ತಿಯೆಂದು ನೀವು ಬಲ್ಲಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಸಂಕಟಗಳನ್ನು ಅನುಭವಿಸುವದಕ್ಕಾಗಿ ನಾವು ನೇವಿುಸಲ್ಪಟ್ಟವರೆಂದು ನೀವೇ ಬಲ್ಲಿರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಮಗೀಗ ಬಂದಿರುವ ಕಷ್ಟಗಳಿಂದ ನಿಮ್ಮಲ್ಲಿ ಯಾರೂ ತಳಮಳಗೊಳ್ಳಬಾರದೆಂದು ತಿಮೊಥೆಯನನ್ನು ಕಳುಹಿಸಿದ್ದೇವೆ. ನಮಗೆ ಇಂಥಾ ಕಷ್ಟಗಳು ಬರಲೇಬೇಕೆಂದು ನಿಮಗೇ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಕಸ್ಟಾತ್ನಿ ಅನಿ ತರಾಸಾನಿ ಕೊನ್‍ಬಿ, ಭಿಂವ್ನ್ ದೆವಾ ವೈಲೊ ವಿಶ್ವಾಸ್ ಸೊಡ್ತಲೆ ನಕ್ಕೊ ಮನುನ್ ಅಮಿ ಅಶೆ ಕರ್ಲಾಂವ್. ಅಮಿ ಕಸ್ಟ್ ಸೊಸ್ತಲೆ ದೆವಾಚ್ಯಾ ಮರ್ಜಿ ಪರ್ಕಾರ್ ಹಾಯ್ ಮನುನ್ ಅಮ್ಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಥೆಸಲೋನಿಕದವರಿಗೆ 3:3
29 ತಿಳಿವುಗಳ ಹೋಲಿಕೆ  

ಅಲ್ಲಿದ್ದ ಶಿಷ್ಯರು ವಿಶ್ವಾಸದಲ್ಲಿ ಮುಂದುವರಿಯಲು, “ನಾವು ಅನೇಕ ಸಂಕಟಗಳಿಂದ ದೇವರ ರಾಜ್ಯದೊಳಗೆ ಸೇರಬೇಕು,” ಎಂದು ಹೇಳಿ ದೃಢಪಡಿಸಿದರು.


ಅಷ್ಟು ಮಾತ್ರವೇ ಅಲ್ಲ, ನಮ್ಮ ಕಷ್ಟಸಂಕಟಗಳಲ್ಲಿಯೂ ಸಂತೋಷ ಪಡುವವರಾಗಿರುತ್ತೇವೆ. ಏಕೆಂದರೆ ಕಷ್ಟಸಂಕಟವು ತಾಳ್ಮೆಯನ್ನು ಉಂಟುಮಾಡುತ್ತದೆಂದೂ


ನನ್ನ ಹೆಸರಿನ ನಿಮಿತ್ತವಾಗಿ ಅವನು ಎಷ್ಟು ಕಷ್ಟಪಡಬೇಕೆಂಬುದನ್ನು ನಾನು ಅವನಿಗೆ ತೋರಿಸುವೆನು,” ಎಂದು ಹೇಳಿದರು.


“ನನ್ನಲ್ಲಿ ನಿಮಗೆ ಸಮಾಧಾನ ಇರುವಂತೆ ಇವುಗಳನ್ನು ನಾನು ನಿಮ್ಮೊಂದಿಗೆ ಮಾತನಾಡಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟವಿರುವದು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ,” ಎಂದರು.


ಆದ್ದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರವಾಗಿ ನಿಲ್ಲಿರಿ. ಯಾವುದೂ ನಿಮ್ಮನ್ನು ಕದಲಿಸದಿರಲಿ. ಕರ್ತನಲ್ಲಿ ನಿಮ್ಮ ಪ್ರಯಾಸವು ನಿಷ್ಫಲವಾಗುವುದಿಲ್ಲವೆಂದು ತಿಳಿದು, ಕರ್ತನ ಕೆಲಸಕ್ಕೆ ಯಾವಾಗಲೂ ನಿಮ್ಮನ್ನು ಸಂಪೂರ್ಣವಾಗಿ ಒಪ್ಪಿಸಿಕೊಡಿರಿ.


ಆಗ ಪೌಲನು, “ನೀವೇಕೆ ಅತ್ತು ನನ್ನ ಹೃದಯ ಒಡೆಯುತ್ತೀರಿ? ಬಂಧಿತನಾಗಲಷ್ಟೇ ಅಲ್ಲ, ನಮ್ಮ ಕರ್ತ ಯೇಸುವಿನ ಹೆಸರಿನ ನಿಮಿತ್ತ ಯೆರೂಸಲೇಮಿನಲ್ಲಿ ನಾನು ಸಾಯಲಿಕ್ಕೂ ಸಿದ್ಧನಾಗಿದ್ದೇನೆ,” ಎಂದನು.


ಏಕೆಂದರೆ ದೇವರು ನಮ್ಮನ್ನು ಕೋಪಾಗ್ನಿಗೆ ನೇಮಿಸದೆ ನಾವು ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿ ರಕ್ಷಣೆಯನ್ನು ಹೊಂದಬೇಕೆಂದೇ ನೇಮಿಸಿದರು.


ಅಪೊಸ್ತಲರಾದ ನಮ್ಮನ್ನು ಮರಣದಂಡನೆ ಹೊಂದಿದವರಂತೆ ದೇವರು ಮೆರವಣಿಗೆಯ ಕಡೆಯವರನ್ನಾಗಿ ಮಾಡಿ ತೋರಿಸಿದ್ದಾರೆಂದು ನನಗನಿಸುತ್ತದೆ. ಏಕೆಂದರೆ, ದೇವರು ನಮ್ಮನ್ನು ದೇವದೂತರಿಗೂ ಮನುಷ್ಯರಿಗೂ ಇಡೀ ಜಗತ್ತಿಗೂ ಹಾಸ್ಯಾಸ್ಪದವಾದ ನೋಟವನ್ನಾಗಿ ಮಾಡಿದ್ದಾರೆ.


ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.


ಇದಕ್ಕಾಗಿಯೇ ನಿಮ್ಮನ್ನು ಕರೆಯಲಾಯಿತು: ಕ್ರಿಸ್ತ ಯೇಸು ಸಹ ನಮಗೋಸ್ಕರ ಬಾಧೆಯನ್ನು ಅನುಭವಿಸಿ ತಮ್ಮ ಹೆಜ್ಜೆಯ ಜಾಡಿನಲ್ಲಿ ನೀವು ನಡೆಯಬೇಕೆಂದು ಆದರ್ಶವನ್ನು ಬಿಟ್ಟುಹೋದರು.


ನೀವು ನಿಮ್ಮ ನಂಬಿಕೆಯಲ್ಲಿ ಸ್ಥಿರವಾಗಿ ಮುಂದುವರೆದು ನೆಲೆಗೊಂಡು, ಸುವಾರ್ತೆಯ ನಿರೀಕ್ಷೆಯಿಂದ ತೊಲಗಿ ಹೋಗದಿರಿ. ನೀವು ಕೇಳಿದಂಥ ಮತ್ತು ಆಕಾಶದ ಕೆಳಗಿರುವ ಸರ್ವಸೃಷ್ಟಿಗೆ ಸಾರಲಾದ ಈ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾದೆನು.


ಆದ್ದರಿಂದ, ನಿಮಗಾಗಿ ನನಗುಂಟಾದ ಸಂಕಟಗಳು ನಿಮಗೆ ಮಹಿಮೆಯಾಗಿರುವುದರಿಂದ, ನೀವು ಧೈರ್ಯಗೆಡಬಾರದೆಂದು ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ.


ದಾವೀದನು ಯೇಸುಸ್ವಾಮಿಯವರ ಬಗ್ಗೆ ಹೀಗೆ ಹೇಳಿದ್ದಾನೆ: “ ‘ನಾನು ಕರ್ತದೇವರನ್ನು ಯಾವಾಗಲೂ ನನ್ನೆದುರಿನಲ್ಲಿಯೇ ಇಟ್ಟುಕೊಂಡಿದ್ದೇನೆ. ನಾನು ಕದಲದಂತೆ ಕರ್ತದೇವರು ನನ್ನ ಬಲಗಡೆಯಲ್ಲಿದ್ದಾರೆ.


ಜನರು ನಿಮ್ಮನ್ನು ಸಭಾಮಂದಿರದಿಂದ ಹೊರಗೆ ಹಾಕುವರು. ಆದರೆ ನಿಮ್ಮನ್ನು ಕೊಲ್ಲುವವರು ದೇವರಿಗೆ ಸೇವೆ ಸಲ್ಲಿಸುತ್ತಾರೆಂದು ಭಾವಿಸುವ ಸಮಯ ಬರುತ್ತದೆ.


“ಆದರೆ ಇವೆಲ್ಲವುಗಳಿಗಿಂತ ಮೊದಲು ಅವರು ನಿಮ್ಮನ್ನು ಹಿಡಿದು, ಹಿಂಸಿಸಿ ಸಭಾಮಂದಿರಗಳಿಗೂ ಸೆರೆಮನೆಗಳಿಗೂ ಒಪ್ಪಿಸಿ, ನನ್ನ ಹೆಸರಿನ ನಿಮಿತ್ತ ಅರಸುಗಳ ಮತ್ತು ಅಧಿಕಾರಿಗಳ ಮುಂದೆ ನಿಮ್ಮನ್ನು ತರುವರು.


ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.


ಹೀಗಿರುವುದರಿಂದ, ನೀವು ಸಹಿಸುತ್ತಿರುವ ನಿಮ್ಮ ಎಲ್ಲಾ ಹಿಂಸೆಗಳಲ್ಲಿಯೂ ಸಂಕಟಗಳಲ್ಲಿಯೂ ನಿಮಗೆ ತೋರಿ ಬಂದ ನಿಮ್ಮ ತಾಳ್ಮೆ, ನಂಬಿಕೆಗಳನ್ನು ನೆನೆಸಿ ನಿಮ್ಮ ವಿಷಯವಾಗಿ ದೇವರ ಸಭೆಗಳಲ್ಲಿ ನಾವೇ ಹೆಮ್ಮೆಪಡುತ್ತೇವೆ.


ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು, ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ. ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತ ಸಾಕ್ಷಿಯಾದ ಅಂತಿಪನನ್ನು ಕೊಲ್ಲಲಾದ ದಿನಗಳಲ್ಲಿಯೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಅಲ್ಲಗಳೆಯಲಿಲ್ಲ.


ನಿನಗೆ ಸಂಭವಿಸುವುದಕ್ಕಿರುವ ಬಾಧೆಗಳಿಗೆ ಭಯಪಡಬೇಡ. ಇಗೋ, ನಿಮ್ಮನ್ನು ಪರೀಕ್ಷಿಸಲು, ಸೈತಾನನು ನಿಮ್ಮಲ್ಲಿ ಕೆಲವರನ್ನು ಸೆರೆಮನೆಯೊಳಗೆ ಹಾಕುವುದಕ್ಕೆ ಇದ್ದಾನೆ. ಹತ್ತು ದಿವಸಗಳ ತನಕ ನಿಮಗೆ ಸಂಕಟವಿರುವುದು. ನೀನು ಸಾಯುವವರೆಗೆ ನಂಬಿಗಸ್ತನಾಗಿರು. ನಾನು ನಿನಗೆ ಜೀವದ ಕಿರೀಟವನ್ನು ಕೊಡುವೆನು.


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಿಯೂ ಅಂಜದೆ ಧೈರ್ಯದಿಂದಿರಿ. ನೀವು ಧೈರ್ಯದಿಂದಿರುವುದು, ಅವರ ವಿನಾಶಕ್ಕೂ, ನಿಮ್ಮ ರಕ್ಷಣೆಗೂ ದೇವರಿಂದಾದ ಸೂಚನೆಯಾಗಿದೆ.


ಅವನು ನಮ್ಮ ಬಳಿಗೆ ಬಂದು ಪೌಲನ ನಡುಪಟ್ಟಿಯನ್ನು ತೆಗೆದುಕೊಂಡು ತನ್ನ ಕೈಕಾಲುಗಳಿಗೆ ಅದನ್ನು ಕಟ್ಟಿಕೊಂಡು, “ಪವಿತ್ರಾತ್ಮರು ಇಂತೆನ್ನುತ್ತಾರೆ, ‘ಈ ನಡುಪಟ್ಟಿ ಯಾರದೋ ಆ ಮನುಷ್ಯನನ್ನು ಯೆರೂಸಲೇಮಿನ ಯೆಹೂದ್ಯರು ಈ ರೀತಿಯಲ್ಲಿ ಬಂಧಿಸಿ, ಯೆಹೂದ್ಯರಲ್ಲದವರ ಕೈಗೆ ಒಪ್ಪಿಸುವರು,’ ” ಎಂದನು.


ನನಗೆ ನೇಮಿಸಿದ್ದನ್ನು ದೇವರು ಈಡೇರಿಸುತ್ತಾರೆ. ಇಂಥ ಅನೇಕ ಯೋಜನೆಗಳು ದೇವರಲ್ಲಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು